ನೆರವು ಕೋರಿದ ಬಗ್ಗೆ ಮಾಹಿತಿ ಇಲ್ಲ
Team Udayavani, Jan 12, 2019, 1:15 AM IST
ಬೆಂಗಳೂರು: “ಮಲ್ಪೆ ಬಂದರಿನಿಂದ ಬೋಟ್ ಸಹಿತ ನಾಪತ್ತೆಯಾಗಿರುವ ಏಳು ಮೀನುಗಾರರ ನಾಪತ್ತೆಗೆ ಸಂಬಂಧಿಸಿದಂತೆ ನೆರವಿಗಾಗಿ ಸರ್ಕಾರ ತಮ್ಮನ್ನು ಸಂಪರ್ಕಿಸಿರುವ ಬಗ್ಗೆ ನನಗೆ ಮಾಹಿತಿ ಇಲ್ಲ’ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಅಧ್ಯಕ್ಷ ಕೆ. ಸಿವನ್ ತಿಳಿಸಿದ್ದಾರೆ.
ನಗರದ ಇಸ್ರೋ ಕೇಂದ್ರ ಕಚೇರಿಯಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಮೀನುಗಾರರ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ನೆರವು ಕೋರಿ ರಾಜ್ಯ ಸರ್ಕಾರ ತಮಗೆ ಪತ್ರ ಬರೆದಿರುವ ಬಗ್ಗೆ ನನಗೆ ಮಾಹಿತಿಯಿಲ್ಲ. ಬಹುಶಃ ಹೈದರಾಬಾದ್ನಲ್ಲಿರುವ ರಾಷ್ಟ್ರೀಯ ದೂರ ಸಂವೇದಿ ಕೇಂದ್ರ (ಎನ್ಆರ್ಎಸ್ಸಿ)ದ ಮೊರೆ ಹೋಗಿರಲೂಬಹುದು. ಈ ಕುರಿತು ಪರಿಶೀಲಿಸಲಾಗುವುದು’ ಎಂದು ಹೇಳಿದರು.
ಸರ್ಕಾರ ಬಯಸಿದರೆ, ನೆರವು ನೀಡಲು ಸಿದ್ಧ. ಅಷ್ಟಕ್ಕೂ ಇಸ್ರೋ ನ್ಯಾವಿಗೇಷನ್ ಹಾಗೂ ಅಲರ್ಟ್ ಎಂಬ ಎರಡು ಅಪ್ಲಿಕೇಷನ್ಗಳನ್ನು ಹೊಂದಿದೆ. ಈ ವ್ಯವಸ್ಥೆಗಳನ್ನು ಮೀನುಗಾರರು ಅಳವಡಿಸಿಕೊಂಡಿದ್ದರೆ, ಅದರ ಮೂಲಕ ಪತ್ತೆ ಮಾಡಲು ಸಾಧ್ಯವಿದೆ ಎಂದು ಸ್ಪಷ್ಟಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್ ತೀರ್ಪು