ನೀರು ಪೂರೈಸದೇ ಇರಲು ಕಾರಣವೇ ಇಲ್ಲ


Team Udayavani, Apr 20, 2018, 11:47 AM IST

neeru-pur.jpg

ಬೆಂಗಳೂರು: “ಜಲಮಂಡಳಿಯಿಂದ ಅಧಿಕೃತವಾಗಿ ಕೆಲವು ಪ್ರದೇಶಗಳಲ್ಲಿ ನೀರಿನ ಸಂಪರ್ಕ ಪಡೆದಿರುವುದಿಲ್ಲ, ಶುಲ್ಕ ಪಾವತಿಸಿರುವುದಿಲ್ಲ. ಹೀಗಾಗಿ ಅಂಥ ಕಡೆಗಳಲ್ಲಿ ನೀರಿಗೆ ಸಮಸ್ಯೆ ಆಗಿರಬಹುದು. ಅದು ಬಿಟ್ಟರೆ ನೀರು ಪೂರೈಸದೇ ಇರಲು ನಮಗೆ ಕಾರಣವೇ ಇಲ್ಲ. ಏಕೆಂದರೆ, ನೀರಿನ ಲಭ್ಯತೆ ಸಾಕಷ್ಟಿದೆ,’ ಎಂದು ಜಲಮಂಡಳಿ ಪ್ರಧಾನ ಮುಖ್ಯ ಎಂಜಿನಿಯರ್‌ ಕೆಂಪರಾಮಯ್ಯ ಹೇಳುತ್ತಾರೆ.

ನಗರದ ಹೃದಯಭಾಗಗಳಲ್ಲಿ ಈಗಲೂ “ಕಾವೇರಿ’ ಮರೀಚಿಕೆಯಾಗಿದೆ. ಕೆಲವೆಡೆ ಪೈಪ್‌ಲೈನ್‌ ಹಾಕಿ ಹಲವು ವರ್ಷಗಳಾದರೂ ಅದರಲ್ಲಿ ನೀರು ಹರಿದಿಲ್ಲ. ಬೇಸಿಗೆ ಇನ್ನೂ ಎರಡು ತಿಂಗಳು ಇರುವುದರಿಂದ ಈ ಸಮಸ್ಯೆ ಮತ್ತಷ್ಟು ಉಲ್ಬಣಿಸುವ ಆತಂಕ ಇದೆ.

ಈ ಹಿನ್ನೆಲೆಯಲ್ಲಿ ನೀರಿನ ಸ್ಥಿತಿಗತಿ ಕುರಿತು “ಉದಯವಾಣಿ’ಯೊಂದಿಗೆ ಮಾತನಾಡಿದ ಅವರು, ಬೇಸಿಗೆಯಲ್ಲಿ ನೀರಿನ ಸಮಸ್ಯೆ ಎದುರಾಗದಂತೆ ಕಬಿನಿ ಹಾಗೂ ಕೆಆರ್‌ಎಸ್‌ ಜಲಾಶಯಗಳಲ್ಲಿ 11 ಟಿಎಂಸಿ ನೀರು ಸಂಗ್ರಹಿಸಲು ಕೋರಲಾಗಿದೆ ಎಂದು ಹೇಳಿದ್ದಾರೆ.

* ಬೆಂಗಳೂರಿನಲ್ಲಿ ಈ ಬಾರಿಯ ಬೇಸಿಗೆಯಲ್ಲಿ ಕುಡಿಯುವ ನೀರಿನ ಅಭಾವ ತೀವ್ರವಾಗಿರುವ ಬಗ್ಗೆ ಸಾರ್ವಜನಿಕರ ದೂರಿದೆಯಲ್ಲ?
ಹಾಗೇನಿಲ್ಲ. 2016ರಲ್ಲಿ ಹಿಂದೆಂದೂ ಕಂಡರಿಯದ ಬರ ಇತ್ತು. ಹಾಗಾಗಿ, ಕಳೆದ ವರ್ಷ ಎಲ್ಲೆಡೆ ನೀರಿನ ಸಮಸ್ಯೆ ಎದುರಾಯಿತು. ಆದರೆ, ಈ ವರ್ಷ ಪರಿಸ್ಥಿತಿ ಹಾಗಿಲ್ಲ. ಉತ್ತಮ ಮಳೆ ಆಗಿರುವುದರಿಂದ ಜಲಾಶಯಗಳಲ್ಲಿ ಅಗತ್ಯ ಪ್ರಮಾಣದಷ್ಟು ನೀರಿನ ಸಂಗ್ರಹವಿದೆ. ಲೆಕ್ಕಕ್ಕೆ ಸಿಗದ ನೀರಿನ ಪ್ರಮಾಣ ಲೆಕ್ಕಹಾಕಿ, ಸೋರಿಕೆ ತಡೆಗಟ್ಟಲಾಗಿದೆ. ಇದರಿಂದ ನಿತ್ಯ 60 ದಶಲಕ್ಷ ಲೀ. ನೀರು ಉಳಿತಾಯ ಆಗುತ್ತಿದೆ. ಆದ್ದರಿಂದ ಸಮಸ್ಯೆ ಇಲ್ಲ. ಚುನಾವಣೆ ಬಂದಿರುವುದು ಹಾಗೂ ನೀರಿನ ಸಮರ್ಪಕ ಸಂಗ್ರಹ ಇರುವುದು ಕೇವಲ ಕಾಕತಾಳೀಯ.

* ನೀರು ಇದ್ದರೂ, ಬಂಗಾರಪ್ಪನಗರ, ಶೆಟ್ಟಿಹಳ್ಳಿ, ಮಾರುತಿನಗರ ಮತ್ತಿತರ ಕಡೆ ಬರ ಯಾಕೆ?
ಕಾವೇರಿ ನೀರಿನ ಸಂಪರ್ಕ ಜಾಲ ಇರುವ ಕಡೆಗಳಲ್ಲಿ ನೀರು ಬಂದೇಬರುತ್ತದೆ. ಸಂಪರ್ಕ ಇಲ್ಲದಿರುವ ಕಡೆ ಬಿಬಿಎಂಪಿ ಕೊಳವೆಬಾವಿಗಳ ಮೂಲಕ ನೀರು ಪೂರೈಸುತ್ತದೆ.

* ದಶಕದ ಹಿಂದೆ ಪೈಪ್‌ಲೈನ್‌ಗಳು ಹಾದುಹೋಗಿದ್ದರೂ, ಇನ್ನೂ ನೀರು ಹರಿಯುತ್ತಿಲ್ಲ. ಇದು ಯಾವ ರೀತಿಯ ನೆಟ್‌ವರ್ಕ್‌?
ಈ ರೀತಿಯ ಸಮಸ್ಯೆ ಇರುವ ಕಡೆಗಳಲ್ಲಿ ಸ್ಥಳೀಯ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌ಗಳು ಸಮಸ್ಯೆ ಬಗೆಹರಿಸುತ್ತಾರೆ. ನೀರಿನ ಸಮಸ್ಯೆ ಸಂಬಂಧ ದೂರುಗಳಿದ್ದರೆ ಅಹವಾಲು ಸಲ್ಲಿಸಬಹುದು. ಆದರೆ, ಕೆಲವೆಡೆ ಜನರೇ ನೀರಿನ ಸಂಪರ್ಕ ಪಡೆದಿರುವುದಿಲ್ಲ. ಅಥವಾ ನೀರಿನ ಶುಲ್ಕ ಪಾವತಿಸಿರುವುದಿಲ್ಲ. ಹಾಗಾಗಿ, ಕೆಲವೆಡೆ ಸಮಸ್ಯೆ ಆಗಿರಬಹುದು. ಅಷ್ಟಕ್ಕೂ ನೀರು ಪೂರೈಸದೇ ಇರಲು ನಮಗೆ ಕಾರಣವೇ ಇಲ್ಲ. ಏಕೆಂದರೆ ಈ ಬಾರಿ ನೀರಿನ ಲಭ್ಯತೆ ಸಾಕಷ್ಟಿದೆ.

* ನಿತ್ಯ 1350 ಎಂಎಲ್‌ಡಿ ನೀರು ಪಂಪ್‌ ನಿಜಕ್ಕೂ ನೀರಿನ ಸ್ಥಿತಿಗತಿ ಹೇಗಿದೆ?
ಬೇಸಿಗೆಯಲ್ಲಿ ನೀರಿನ ಸಮಸ್ಯೆ ಎದುರಾಗದಂತೆ ಕಬಿನಿ ಹಾಗೂ ಕೆಆರ್‌ಎಸ್‌ ಜಲಾಶಯಗಳಲ್ಲಿ 11 ಟಿಎಂಸಿ ನೀರು ಸಂಗ್ರಹಿಸಲು ಕೋರಲಾಗಿದೆ. ಎರಡೂ ಜಲಾಶಯಗಳಿಂದ ಸದ್ಯ ನಿತ್ಯ 1,350 ಎಂಎಲ್‌ಡಿ ನೀರು ಪಂಪ್‌ ಮಾಡಲಾಗುತ್ತಿದ್ದು, ಹೆಚ್ಚುವರಿಯಾಗಿ 10ರಿಂದ 15 ಎಂಎಲ್‌ಡಿ ನೀರು ಪಂಪ್‌ ಮಾಡಲಾಗುತ್ತಿದೆ. ಮಂಡಳಿ ವ್ಯಾಪ್ತಿಯಲ್ಲಿರುವ ಕೊಳವೆ ಬಾವಿಗಳಿಗೆ ಹೆಚ್ಚುವರಿ ಪೈಪ್‌ ಅಳವಡಿಕೆ, ದುರಸ್ತಿಗೆ ಕಾರ್ಯಗಳಿಗೆ ಒತ್ತು ನೀಡಲಾಗಿದೆ. ನಗರದಲ್ಲಿರುವ 25 ನೆಲಮಟ್ಟದ ಜಲಾಗಾರಗಳಿಂದ ಟ್ಯಾಂಕರ್‌ಗಳಿಗೆ ನೀರು ತುಂಬಿಸಿ ಸಾರ್ವಜನಿಕರಿಗೆ ಸರಬರಾಜು ಮಾಡಲು ಕ್ರಮ ಕೈಗೊಳ್ಳಲಾಗಿದೆ.

* ವಿಜಯಕುಮಾರ ಚಂದರಗಿ 

ಟಾಪ್ ನ್ಯೂಸ್

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಕೊಲೆಗೈದ

Crime: ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಕೊಲೆಗೈದ

Bengaluru: ಖೋಖೋ ತೀರ್ಪು ವಿವಾದ: ಫೀಲ್ಡ್‌ನಲ್ಲೇ ಚಾಕು, ಡ್ಯಾಗರ್‌ ಹಿಡಿದು ಹೊಡೆದಾಟ!

Bengaluru: ಖೋಖೋ ತೀರ್ಪು ವಿವಾದ: ಫೀಲ್ಡ್‌ನಲ್ಲೇ ಚಾಕು, ಡ್ಯಾಗರ್‌ ಹಿಡಿದು ಹೊಡೆದಾಟ!

ಸ್ನೇಹಿತನ ಪತ್ನಿಯ ಕ್ಯಾನ್ಸರ್‌ ಚಿಕಿತ್ಸೆಗಾಗಿ ಬೈಕ್‌ ಕಳ್ಳತನಕ್ಕಿಳಿದ ಕುಚುಕು ಗೆಳೆಯ! 

ಸ್ನೇಹಿತನ ಪತ್ನಿಯ ಕ್ಯಾನ್ಸರ್‌ ಚಿಕಿತ್ಸೆಗಾಗಿ ಬೈಕ್‌ ಕಳ್ಳತನಕ್ಕಿಳಿದ ಕುಚುಕು ಗೆಳೆಯ! 

Shivakumar

Bengaluru: ಅಧಿವೇಶನದ ಬಳಿಕ ಕಾವೇರಿ ನೀರಿನ ದರ ಪರಿಷ್ಕರಣೆ: ಡಿ.ಕೆ.ಶಿವಕುಮಾರ್‌

Bengaluru: ಕೋರ್ಟ್‌ನಲ್ಲೇ ವಕೀಲೆಗೆ ಚಾಕು ಇರಿದ ಆರೋಪಿ ಸೆರೆ

Bengaluru: ಕೋರ್ಟ್‌ನಲ್ಲೇ ವಕೀಲೆಗೆ ಚಾಕು ಇರಿದ ಆರೋಪಿ ಸೆರೆ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.