ಕಳಂಕಿತರಿಗೆ ಟಿಕೆಟ್ಇಲ್ಲ: ಬಿಎಸ್ವೈ
Team Udayavani, Apr 5, 2018, 11:42 AM IST
ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಕಳಂಕಿತರಿಗೆ ಬಿಜೆಪಿ ಟಿಕೆಟ್ ನೀಡುವ ಪ್ರಶ್ನೆಯೇ ಇಲ್ಲ ಎಂದು ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಬಾಂಬ್ ಸಿಡಿಸಿದ್ದಾರೆ. ನಗರದ ಹೊರವಲಯದಲ್ಲಿ ಅಭ್ಯರ್ಥಿಗಳ ಆಯ್ಕೆ ಸಂಬಂಧ ನಡೆಯುತ್ತಿರುವ ಸಭೆಯಲ್ಲಿ ಮಾತನಾಡಿದ ಅವರು, ಕಳಂಕಿತರಿಗೆ ಟಿಕೆಟ್ ಕೊಡಬಾರದು ಎಂಬುದು ಪಕ್ಷ ನಿಲುವು. ಇದರಲ್ಲಿ ಯಾವುದೇ ಬದಲಾವಣೆ ಇಲ್ಲ. ಆಕಾಂಕ್ಷಿಗಳ ವಿರುದ್ಧ ಕ್ರಿಮಿನಲ್ ಪ್ರಕರಣ ಇದ್ದರೆ ಆ ಬಗ್ಗೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ನಿರ್ಧಾರ ಕೈಗೊಳ್ಳಲಿದ್ದಾರೆ ಎಂದರು.
ಬಳ್ಳಾರಿಯಲ್ಲಿ ಯಾವುದೇ ಗೊಂದಲ ಇಲ್ಲ, ಶ್ರೀರಾಮುಲು ಅವರೇ ಬಳ್ಳಾರಿ ಜಿಲ್ಲೆಯನ್ನು ನೋಡಿಕೊಳ್ಳುತ್ತಾರೆ. ಬಳ್ಳಾರಿ
ಟಿಕೆಟ್ ಹಂಚಿಕೆ ಬಗ್ಗೆ ಶ್ರೀರಾಮುಲು ಜತೆ ಚರ್ಚೆ ನಡೆಸಿ ಪಟ್ಟಿ ಸಿದ್ಧಪಡಿಸಲಾಗುವುದು ಎಂದು ತಿಳಿಸಿದರು.
ಏ.7ರವರೆಗೂ ಸಭೆ ನಡೆಯಲಿದ್ದು, ಮಧ್ಯ ಕರ್ನಾಟಕ, ಕರಾವಳಿ, ಮೈಸೂರು ಭಾಗದ ಕ್ಷೇತ್ರಗಳ ಪಟ್ಟಿಯೂ ಸಿದ್ಧವಾಗಲಿದೆ. ಬಳಿಕ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರಿಗೆ ಪಟ್ಟಿ ನೀಡಲಾಗುವುದು. ಅವರು ನಡೆಸಿರುವ ಸಮೀಕ್ಷೆ ಹಾಗೂ ನಮ್ಮ ಅಭಿಪ್ರಾಯ ಆಧರಿಸಿ ಟಿಕೆಟ್ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದರು.
ಶಾಸಕ ಸಿ.ಟಿ.ರವಿ ಮಾತನಾಡಿ, ಗುರುವಾರ ಮಧ್ಯ ಕರ್ನಾಟಕ ಜಿಲ್ಲೆಗಳ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ ಎಂದರು.
ಬಿಎಸ್ವೈ ಗರಂ: ಯಲಹಂಕ ರೆಸಾರ್ಟ್ನಲ್ಲಿ ಬುಧವಾರ ನಡೆದ ಸಭೆಗೆ ಆಗಮಿಸಿದ ಯಡಿಯೂರಪ್ಪ ಅವರ ಕಾಲಿಗೆ ಚಿತ್ತಾಪುರದ ಮುಖಂಡ ಬಸವರಾಜ್ ದೀರ್ಘದಂಡ ನಮಸ್ಕಾರ ಮಾಡಿದರು. ಬಿಎಸ್ವೈ ಇದೆಲ್ಲಾ ಬೇಡ ಬಿಡಪ್ಪಾ ಎಂದು ಗರಂ ಆಗಿ ಒಳ ನಡೆದರು.
ಲಡ್ಡು ವಿತರಣೆ: ಮಾಲೂರು ಆಕಾಂಕ್ಷಿ ಕೃಷ್ಣಯ್ಯಶೆಟ್ಟಿ ಸಭೆಗೆ ತಿರುಪತಿ ಲಡ್ಡು ಸಮೇತ ಬಂದಿದ್ದರು. ನಾಯಕರಿಗೆ ಲಡ್ಡು ಕೊಟ್ಟಿದ್ದು ವಿಶೇಷ. ಆಪಾದಿತರಿಗೆ ಟಿಕೆಟ್ ಇಲ್ಲ ಎನ್ನು ವಂತಿಲ್ಲ. ನ್ಯಾಯಾಲಯ ಅಪರಾಧಿ ಎಂದು ನಿರ್ಧರಿಸಿದ್ದರೆ ಅಂತವರಿಗೆ ಟಿಕೆಟ್ ಇಲ್ಲ. ಆಪಾದನೆ ಯಾರಿಗೆ ಬೇಕಾದರೂ ಮಾಡಬಹುದು.
ಸಿ.ಟಿ.ರವಿ, ಶಾಸಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ