ಜನಸಂಖ್ಯೆಗೆ ಅನುಗುಣವಾಗಿ ನಗರದಲ್ಲಿ ಶೌಚಾಲಯಗಳಿಲ್ಲ


Team Udayavani, Dec 23, 2017, 12:45 PM IST

blore-2.jpg

ಬೆಂಗಳೂರು: ರಾಜಧಾನಿಯ ಜನಸಂಖ್ಯೆಗೆ ಹೋಲಿಸಿದರೆ ಸುಮಾರು 4,500ಕ್ಕೂ ಹೆಚ್ಚು ಸಾರ್ವಜನಿಕರ ಶೌಚಾಲಯಗಳ ಕೊರತೆಯಿರುವುದು ನೈರ್ಮಲ್ಯ ಕಾಪಾಡುಕೊಳ್ಳುವಲ್ಲಿ ವಿಫ‌ಲವಾದಂತಾಗಿದೆ.

ಸ್ವತ್ಛ ಭಾರತ್‌ ಮಿಷನ್‌ ಪ್ರಕಾರ ಬೆಂಗಳೂರಿನ ಜನಸಂಖ್ಯೆಗೆ ಅನುಗುಣವಾಗಿ 6,595 ಕಮೋಡ್‌ ಸಹಿತ ಶೌಚಾಲಯಗಳು ಇರಬೇಕು. ಆದರೆ ನಗರದಲ್ಲಿ 2,000 ಕಮೋಡ್‌ ಶೌಚಾಲಯಗಳು ಮಾತ್ರ ಇವೆ. ಇದರಿಂದಾಗಿ ಬಯಲು ಪ್ರದೇಶದಲ್ಲಿ ಮಲ-ಮೂತ್ರ ವಿಸರ್ಜನೆ ಮುಂದುವರಿದಿದ್ದು, ಬಯಲು ಬಹಿರ್ದೆಸೆ ಮುಕ್ತವಾಗುವ ಪ್ರಯತ್ನದಲ್ಲಿ ಹಿನ್ನಡೆಯಾದಂತಾಗಿದೆ.

ಬಿಬಿಎಂಪಿ ಹಾಗೂ ಇತರೆ ಸ್ವಯಂ ಸೇವಾ ಸಂಘಗಳಿಂದ ನಗರದ ಪ್ರಮುಖ ಭಾಗಗಳಲ್ಲಿ ಶೌಚಗೃಹಗಳನ್ನು ನಿರ್ಮಿಸಿದ್ದು, ಅದರಂತೆ ಒಟ್ಟು 2000 ಕಮೋಡ್‌ ಶೌಚಾಲಯಗಳಿವೆ ಎಂದು ಅಂದಾಜಿಸಲಾಗಿದೆ. ಆದರೆ, 2 ಸಾವಿರ ಕಮೋಡ್‌ ಶೌಚಾಲಯಗಳ ಪೈಕಿ ಅರ್ಧದಷ್ಟು ಶೌಚಾಲಯಗಳು ಸಮಪರ್ಕವಾಗಿ ನಿರ್ವಹಣೆಯಾಗದೆ ಬಳಕೆಗೆ ಯೋಗ್ಯವಾಗಿಲ್ಲ. ಜತೆಗೆ ಜನರಿಗೆ ಅಗತ್ಯವಿರುವ ಸ್ಥಳಗಳಲ್ಲಿ ಲಭ್ಯವಿಲ್ಲದ ಹಾಗೂ ಶೌಚಾಲಯಗಳು ನಿರ್ವಹಣೆ ಉತ್ತಮವಾಗಿಲ್ಲದ ಕಾರಣ ಸಾರ್ವಜನಿಕರು ಬಳಕೆಗೆ ಮುಂದಾಗುತ್ತಿಲ್ಲ ಎಂದು ಪಾಲಿಕೆಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಕೇವಲ 587 ಶೌಚಗೃಹಗಳು: ಬೆಂಗಳೂರಿನಲ್ಲಿ ಒಂದು ಕೋಟಿಗೂ ಹೆಚ್ಚಿನ ಜನಸಂಖ್ಯೆಯಿದ್ದು, ನಿತ್ಯ ರಾಜ್ಯದ ವಿವಿಧ ಭಾಗಗಳಲ್ಲಿಂದ 15 ಲಕ್ಷಕ್ಕೂ ಹೆಚ್ಚು ಜನರು ನಗರಕ್ಕೆ ಬಂದು ಹೋಗುತ್ತಾರೆ. ಆದರೆ, ನಗರದಲ್ಲಿ 587 ಕಡೆಗಳಲ್ಲಿ ಮಾತ್ರ ಶೌಚಗೃಹಗಳಿದ್ದು, ಸಾರ್ವಜನಿಕರು ಜಲಭಾದೆ ತಡೆಯಲಾಗದೆ ಖಾಲಿ ಜಾಗ, ವಿದ್ಯುತ್‌ ಟ್ರಾನ್ಸ್‌ಫಾರರ್‌ ಸೇರಿ ಸಾರ್ವಜನಿಕ ಸ್ಥಳಗಳನ್ನೇ ಶೌಚಾಗೃಹಗಳನ್ನಾಗಿ ಪರಿವರ್ತಿಸುತ್ತಿದ್ದಾರೆ.

ನಿರ್ವಹಣೆಯಿಲ್ಲದೆ ಬಳಕೆಯಾಗುತ್ತಿಲ್ಲ : ಸಾರ್ವಜನಿಕರ ಅನುಕೂಲಕ್ಕಾಗಿ ಬಿಬಿಎಂಪಿ ಹಾಗೂ ಕೆಲ ಸಂಘ-ಸಂಸ್ಥೆಗಳಿಂದ ಒಟ್ಟು 587 ಕಡೆಗಳಲ್ಲಿ ಶೌಚಗೃಹಗಳನ್ನು ನಿರ್ಮಿಸಲಾಗಿದೆ. ಆದರೆ, ಬಹುತೇಕ ಶೌಚಗೃಹಗಳು ಸೌಕರ್ಯ ವಿಲ್ಲದೆ, ನಿರ್ವಹಣೆಯಾಗದ ಹಿನ್ನೆಲೆಯಲ್ಲಿ ಸಾರ್ವಜನಿಕರು ಬಳಸುತ್ತಿಲ್ಲ. 

ವೈಯಕ್ತಿಕ ಶೌಚಾಲಯಕ್ಕೆ 4 ಸಾವಿರ ಅರ್ಜಿ ಸ್ವತ್ಛ ಭಾರತ ಅಭಿಯಾನದಡಿಯಲ್ಲಿ ಶೌಚಾಲಯಗಳ ನಿರ್ಮಾಣಕ್ಕೆ ಆರ್ಥಿಕ ನೆರವು ನೀಡಲು ಬಿಬಿಎಂಪಿ ಅರ್ಜಿ ಆಹ್ವಾನಿಸಿದ್ದು, ನಗರದ ವಿವಿಧ ವಾರ್ಡ್‌ಗಳಿಂದ ಒಟ್ಟು 3,956 ಜನರಿಂದ ವೈಯಕ್ತಿಕ ಶೌಚಾಲಯಗಳ ನಿರ್ಮಾಣಕ್ಕೆ ಆರ್ಥಿಕ ನೆರವು ಕೋರಿ ಅರ್ಜಿ ಗಳು ಸಲ್ಲಿಕೆಯಾಗಿವೆ. ಆ ಪೈಕಿ ಪಾಲಿಕೆಯ ಅಧಿಕಾರಿಗಳು 2,028 ಅರ್ಜಿಗಳನ್ನು ಪರಿಶೀಲಿಸಿ ಆರ್ಥಿಕ ನೆರವು ನೀಡಲು ಅರ್ಹತೆ ಹೊಂದಿರುವುದಾಗಿ ದೃಢಪಡಿಸಿದ್ದಾರೆ.

ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡುವ ಉದ್ದೇಶ ದಿಂದ ಈಗಾಗಲೇ ಸಾರ್ವಜನಿಕ ಶೌಚಾಲಯಗಳ ನಿರ್ಮಾಣಕ್ಕೆ ಟೆಂಡರ್‌ ಆಹ್ವಾನಿಸಲಾಗಿದ್ದು, ಕೊಳೆಗೇರಿ ಭಾಗಗಳಲ್ಲಿ ಸಮುದಾಯ ಶೌಚಾಲಯ ನಿರ್ಮಿಸಲು ಕ್ರಮಕೈಗೊಳ್ಳಲಾಗಿದೆ. 
ಸಫ್ರಾಜ್‌ ಖಾನ್‌, ಬಿಬಿಎಂಪಿ ಆರೋಗ್ಯ ವಿಭಾಗದ ಜಂಟಿ ಆಯುಕ್ತ

300 ಕಡೆ ಶೌಚಗೃಹ ನಿರ್ಮಾಣಕ್ಕೆ ಟೆಂಡರ್‌
ಶೌಚಗೃಹಗಳ ಕೊರತೆಯಿಂದ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆ ನಿವಾರಿಸಲು ಮುಂದಾಗಿರುವ ಬಿಬಿಎಂಪಿ, ನಗರದಾದ್ಯಂತ 2,212 ಕಡೆಗಳಲ್ಲಿ ನಿರ್ಮಿಸಲು ಉದ್ದೇಶಿಸಿರುವ ಬಸ್‌ಶೆಲ್ಟರ್‌ಗಳಲ್ಲಿ ಸೂಕ್ತ ಸ್ಥಳಾವಕಾಶವಿರುವ 300 ಕಡೆಗಳಲ್ಲಿ ಶೌಚಗೃಹ ನಿರ್ಮಿಸಲು ಟೆಂಡರ್‌ ಆಹ್ವಾನಿಸಿದ್ದಾರೆ. ಇದರೊಂದಿಗೆ 100 ಕಡೆಗಳಲ್ಲಿ ಇ-ಶೌಚಾಲಯ ನಿರ್ಮಿಸಲು ಸಹ ಯೋಜನೆ ರೂಪಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

6-fusion

Yugadi: ಯುಗಾದಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.