ನಾಡಧ್ವಜ ಇರಲೇಬೇಕು: ಸಿಎಂ ಸಮರ್ಥನೆ
Team Udayavani, Oct 15, 2017, 10:30 AM IST
ಬೆಂಗಳೂರು: “ಈ ನಾಡಿನ ಮುಖ್ಯಮಂತ್ರಿಯಾಗಿ, ಆರು ಕೋಟಿ ಕನ್ನಡಿಗರ ಪ್ರತಿನಿಧಿಯಾಗಿ ಹೇಳುತ್ತಿದ್ದೇನೆ. ಕನ್ನಡ ನಾಡಿಗೊಂದು ಬಾವುಟ ಇರಲೇಬೇಕು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಕರ್ನಾಟಕ ರಕ್ಷಣಾವೇದಿಕೆ ಶನಿವಾರ ಅರಮನೆ ಮೈದಾನದಲ್ಲಿ ಹಮ್ಮಿಕೊಂಡಿದ್ದ “ಕನ್ನಡಿಗರ ಸಮಾವೇಶ ಜಾನಪದ ಸಂಭ್ರಮ’ ಉದ್ಘಾಟಿಸಿ ಮಾತನಾಡಿ, ಪ್ರತ್ಯೇಕ ಬಾವುಟ ಇರುವಂತಿಲ್ಲ ಎಂದು ಸಂವಿಧಾನದಲ್ಲಿ ಹೇಳಿಲ್ಲ. ನಾಡಧ್ವಜ ಇದ್ದರೆ, ರಾಷ್ಟ್ರಧ್ವಜದ ಮೇಲಿನ ಗೌರವ ಕಡಿಮೆ ಆಗುವುದಿಲ್ಲ. ರಾಷ್ಟ್ರಧ್ವಜ ಎಂದೆಂದೂ ಮೇಲೆಯೇ ಹಾರುತ್ತದೆ ಎಂದರು.
“ನಮ್ಮ ಸರ್ಕಾರ ಕನ್ನಡದ ನೆಲ, ಜಲ, ಭಾಷೆ ಹಾಗೂ ಕನ್ನಡಿಗರ ರಕ್ಷಣೆಗೆ ಬದ್ಧವಾಗಿದೆ. ನಾಡಿನ ಹಿತದ ವಿಚಾರದಲ್ಲಿ ರಾಜಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ. ಕರ್ನಾಟಕದಲ್ಲಿ ವಾಸಿಸುತ್ತಿರುವ ಯಾವುದೇ ಭಾಷಿಗರು ಮೊದಲು ಕನ್ನಡಿಗರು. ಇಲ್ಲಿ ವಾಸಿಸುವ ಪ್ರತಿಯೊಬ್ಬರೂ ಕನ್ನಡ ಮಾತನಾಡಲೇಬೇಕು’ ಎಂದು ಸಿಎಂ ಹೇಳಿದರು.
ನೀರಿನಲ್ಲಿ ಅನ್ಯಾಯ: “ನಮ್ಮ ಮೆಟ್ರೋ ರೈಲಿನಲ್ಲಿ ಹಿಂದಿ ಬಳಕೆ ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರಕ್ಕೆ ಖಡಾ ಖಂಡಿತವಾಗಿ ಪತ್ರ ಬರೆದು ತಿಳಿಸಿದ್ದೇನೆ. ತಮಿಳುನಾಡು, ಕೇರಳದ ಮೆಟ್ರೋ ರೈಲಿನಲ್ಲಿ ಇಲ್ಲದ ಹಿಂದಿ ಇಲ್ಲ್ಯಾಕೆ ಬೇಕು? ಕೃಷ್ಣಾ, ಕಾವೇರಿ, ಮಹಾದಾಯಿ ನದಿ ನೀರು ವಿಚಾರದಲ್ಲಿ ರಾಜ್ಯಕ್ಕೆ ಅನ್ಯಾಯವಾಗಿದೆ. ನ್ಯಾಯಕ್ಕಾಗಿ ನಮ್ಮ ಸರ್ಕಾರ ಹೋರಾಡುತ್ತದೆ. ಎಂದರು.
ಪ್ರಶಸ್ತಿ ಪ್ರದಾನ: ವಿವಿಧ ಕ್ಷೇತ್ರಗಳ ಸಾಧಕರಿಗೆ ಬಸವೇಶ್ವರ ಪ್ರಶಸ್ತಿ, ರಾಷ್ಟ್ರಕವಿ ಕುವೆಂಪು ಪ್ರಶಸಿ, ಡಾ.ರಾಜ್ಕುಮಾರ್ ಪ್ರಶಸ್ತಿ, ಶಾಂತವೇರಿ ಗೋಪಾಲಗೌಡ ಪ್ರಶಸ್ತಿ, ಪ್ರೊ. ಎಂ.ಡಿ.ನಂಜುಂಡಸ್ವಾಮಿ ಪ್ರಶ ಸ್ತಿ, ಎಸ್.ಕೆ.ಕರೀಂಖಾನ್ ಪ್ರಶಸ್ತಿ, ಕೆ.ಶ್ಯಾಮರಾವ್ ಪ್ರಶಸ್ತಿ ಸೇರಿದಂತೆ ವಿವಿಧ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಯಿತು. ಬಸವಜಯ ಮೃತ್ಯುಂಜಯಸ್ವಾಮೀಜಿ, ಬಸವ ಮೂರ್ತಿ ಮಾದರ ಚೆನ್ನಯ್ಯ ಸ್ವಾಮೀಜಿ, ಸಚಿವರಾದ ರಾಮಲಿಂಗರೆಡ್ಡಿ, ಡಿ.ಕೆ.ಶಿವಕುಮಾರ್, ಎಚ್.ಆಂಜನೇಯ, ಕರವೇ ಅಧ್ಯಕ್ಷ ಟಿ.ಎ.ನಾರಾಯಣ ಗೌಡ ಇತರರು ಇದ್ದರು.
ಕನ್ನಡದ ಪರ ಹೋರಾಟ ಸುಲಭವಲ್ಲ. ಈ ಹಾದಿಯಲ್ಲಿ ಕೇಸು ಜೈಲು ಸಾಮಾನ್ಯ. ಕನ್ನಡಕ್ಕಾಗಿ ಹೋರಾಡಿರುವ ಕನ್ನಡಿಗರ ವಿರುದ್ಧ ದಾಖಲಾಗಿರುವ ಕೇಸುಗಳನ್ನು ಸರ್ಕಾರ ವಾಪಸ್ ಪಡೆಯಲಿದೆ.
ಸಿದ್ದರಾಮಯ್ಯ, ಮುಖ್ಯಮಂತ್ರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ
MUST WATCH
ಹೊಸ ಸೇರ್ಪಡೆ
Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು
Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್
ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ
Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ
BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ