ಮೊದಲೇ ಇತ್ತು ಸೇರ್ಪಡೆ ಸುಳಿವು!


Team Udayavani, May 11, 2018, 12:09 PM IST

modale.jpg

ಬೆಂಗಳೂರು: ಮತದಾರರ ಗುರುತಿನಚೀಟಿ ಅಕ್ರಮ ಸಂಗ್ರಹ ಪ್ರಕರಣದ ಕೇಂದ್ರಬಿಂದು ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದಲ್ಲಿ ನಿರೀಕ್ಷೆ ಮೀರಿ ಮತದಾರರ ಸೇರ್ಪಡೆಯಾಗುತ್ತಿರುವ ಬಗ್ಗೆ ಫೆಬ್ರವರಿ ಅಂತ್ಯದಲ್ಲೇ ಸುಳಿವು ಸಿಕ್ಕಿತ್ತು.

ಹೌದು, ಫೆ.28ರಂದು ರಾಜ್ಯ ಚುನಾವಣಾ ಆಯೋಗ ಪ್ರಕಟಿಸಿದ ಅಂತಿಮ ಮತದಾರರ ಪಟ್ಟಿ ಪ್ರಕಾರ ನಗರ ಜಿಲ್ಲಾ ವ್ಯಾಪ್ತಿಯಲ್ಲಿ ರಾಜರಾಜೇಶ್ವರಿ ನಗರವು ಎರಡನೇ ಅತಿ ಹೆಚ್ಚು (25,825 ಸೇರ್ಪಡೆ) ಮತದಾರರು ಸೇರ್ಪಡೆಗೊಂಡ ಕ್ಷೇತ್ರ. ಅಲ್ಲದೆ, ಜನಸಂಖ್ಯೆಗೆ ಅನುಗುಣವಾಗಿ ಮತದಾರರ ಪ್ರಮಾಣ (ಇಪಿ ರೇಷಿಯೊ)ದಲ್ಲೂ ಒಟ್ಟಾರೆ ನಗರದ ಸರಾಸರಿಗಿಂತ ಆ ಕ್ಷೇತ್ರದಲ್ಲಿ ಸಾಕಷ್ಟು ಏರಿಕೆ ಕಂಡುಬಂದಿತ್ತು. ಇದು ನಂತರದಲ್ಲಿಯೂ ಮತ್ತಷ್ಟು ಏರಿಕೆ ಆಗಿರುವುದು ಕಂಡುಬಂದಿದೆ.  

ನಗರ ಜಿಲ್ಲಾ ವ್ಯಾಪ್ತಿಯ ಜನಸಂಖ್ಯೆಗೆ ಅನುಗುಣವಾಗಿ ಮತದಾರರ ಪ್ರಮಾಣ ಫೆ. ಅಂತ್ಯಕ್ಕೆ ಸರಾಸರಿ ಶೇ. 66.84ರಷ್ಟಿದೆ. ಆದರೆ, ಆರ್‌.ಆರ್‌. ನಗರದಲ್ಲಿ ಈ ಪ್ರಮಾಣ ಶೇ. 72.78 ಇದೆ. ಈ ಮಧ್ಯೆ ಮಾರ್ಚ್‌ನಿಂದ ಇದುವರೆಗೆ ಮತ್ತೆ 44 ಸಾವಿರ ಮತದಾರರು ಸೇರ್ಪಡೆಯಾಗಿದ್ದಾರೆ. ಇದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. 

ಕೇವಲ ಆರ್‌.ಆರ್‌. ನಗರವಲ್ಲದೆ ಮಹದೇವಪುರ, ಯಶವಂತಪುರ, ಯಲಹಂಕ ಸೇರಿದಂತೆ ಮತ್ತಿತರ ಕಡೆಗಳಲ್ಲೂ ಅಸ್ವಾಭಾವಿಕವಾಗಿ ಮತದಾರರ ಸಂಖ್ಯೆ ಏರಿಕೆಯಾಗಿದೆ. ಈ ಬಗ್ಗೆ ಮೂರು ತಿಂಗಳ ಹಿಂದೆಯೇ ಚುನಾವಣಾ ಆಯೋಗಕ್ಕೆ ನಾನು ದೂರು ಸಲ್ಲಿಸಿದ್ದೇನೆ.

ನಿಯಮದ ಪ್ರಕಾರ ಶೇ. 4ಕ್ಕಿಂತ ಹೆಚ್ಚು ಮತದಾರರ ಸಂಖ್ಯೆ ಏರಿಕೆಯಾದರೆ ಅಥವಾ ಶೇ. 2ಕ್ಕಿಂತ ಹೆಚ್ಚು ಮತದಾರರನ್ನು ಪಟ್ಟಿಯಿಂದ ಕೈಬಿಟ್ಟಿದ್ದು ಕಂಡುಬಂದರೆ, ಅದೊಂದು ಎಚ್ಚರಿಕೆ ಗಂಟೆಯಾಗುತ್ತದೆ. ಆ ಬಗ್ಗೆ ತನಿಖೆ ನಡೆಸಬೇಕು ಎಂದು ನಿಯಮವೇ ಹೇಳುತ್ತದೆ. ಆದರೆ, ಇಲ್ಲಿ ಅಂತಹ ಯಾವುದೇ ಪ್ರಯತ್ನಗಳು ನಡೆದಂತೆ ಕಂಡುಬರುತ್ತಿಲ್ಲ ಎಂದು ಚುನಾವಣಾ ಪ್ರಕ್ರಿಯೆಗಳ ವಿಶ್ಲೇಷಕ ಟಿ.ಜಿ. ಭಟ್‌ ಆರೋಪಿಸುತ್ತಾರೆ.
 
ಗೊಂದಲ ಸೂಚನೆ: ನವೆಂಬರ್‌ನಿಂದ ಫೆಬ್ರವರಿ 28ರವರೆಗೆ ರಾಜರಾಜೇಶ್ವರಿನಗರ ವ್ಯಾಪ್ತಿಯಲ್ಲಿ 25,825 ಮತದಾರರು ಸೇರ್ಪಡೆಯಾಗಿದ್ದರೆ, ಪರಿಷ್ಕರಣೆ (ಮಾರ್ಚ್‌-ಮೇ) ಅವಧಿಯಲ್ಲಿ 16,558 ಜನ ಸೇರ್ಪಡೆಯಾಗಿದ್ದಾರೆ. ಇದರಿಂದ ಇಪಿ ರೇಷಿಯೊ ಶೇ. 72.78ರಿಂದ ಶೇ. 75ಕ್ಕೆ ಏರಿಕೆ ಆಗುತ್ತದೆ. ಇದರರ್ಥ ಆ ಕ್ಷೇತ್ರದಲ್ಲಿ ಮತದಾರರ ಸೇರ್ಪಡೆಯಲ್ಲಿ ಗೊಂದಲ ಇರುವುದರ ಸೂಚನೆಯೇ ಆಗಿದೆ ಎಂದು ಯುವ ಮತದಾರ ನೋಂದಣಿ ಮತ್ತು ಜಾಗೃತಿ ಅಭಿಯಾನ ಕಾರ್ಯಕರ್ತ ಆನಂದ್‌ ತೀರ್ಥ ತಿಳಿಸುತ್ತಾರೆ. 

ಸ್ವತಃ ಚುನಾವಣಾ ಆಯೋಗ ತಿಳಿಸಿದಂತೆ ಬೂತ್‌ ಮಟ್ಟದ ಅಧಿಕಾರಿಗಳು ಮನೆ-ಮನೆಗೆ ತೆರಳಿ ಮತದಾರರ ನೋಂದಣಿ ಮಾಡಿಸಿದ್ದಾರೆ. ಹಾಗಾಗಿ, ಇಷ್ಟೊಂದು ಪ್ರಮಾಣ ಮತದಾರರ ಏರಿಕೆ ಹಿನ್ನೆಲೆಯಲ್ಲಿ ಬೂತ್‌ ಮಟ್ಟದ ಅಧಿಕಾರಿಗಳ ನೋಂದಣಿ ಪ್ರಕ್ರಿಯೆ ಪ್ರಶ್ನಾರ್ಹವಾಗಿದೆ. ಅದೇನೇ ಇರಲಿ, ಈಗ ಕಾಲ ಮಿಂಚಿದೆ. ಆದರೆ, ಮುಂಬರುವ ಲೋಕಸಭಾ ಚುನಾವಣೆಯಲ್ಲಾದರೂ ಈ ಗೊಂದಲ ಪುನರಾವರ್ತನೆ ಆಗದಂತೆ ಎಚ್ಚರ ವಹಿಸುವ ಅವಶ್ಯಕತೆ ಇದೆ ಎಂದೂ ಅವರು ಹೇಳುತ್ತಾರೆ. 

ನಗರದಲ್ಲಿ ಮತದಾರರ ಸೇರ್ಪಡೆ ಪ್ರಮಾಣ ಸರಾಸರಿ ಶೇ. 6ರಷ್ಟಿದೆ. ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದಲ್ಲಿ ಮಾತ್ರ ಶೇ. 10ರಷ್ಟಿದೆ. ಆದರೆ, ಮತದಾರರ ಗುರುತಿನಚೀಟಿ ಅಕ್ರಮ ಸಂಗ್ರಹ ಪ್ರಕರಣಕ್ಕೂ ಮತ್ತು ರಾಜರಾಜೇಶ್ವರಿ ನಗರದಲ್ಲಿನ ಮತದಾರರ ಪ್ರಮಾಣ ಏರಿಕೆಗೂ ಯಾವುದೇ ಸಂಬಂಧ ಇಲ್ಲ.
-ಸಂಜೀವ್‌ ಕುಮಾರ್‌, ರಾಜ್ಯ ಮುಖ್ಯ ಚುನಾವಣಾಧಿಕಾರಿ. 

ಅತಿ ಹೆಚ್ಚು ಇಪಿ ರೇಷಿಯೊ ಕ್ಷೇತ್ರಗಳು
-ಯಶವಂತಪುರ    ಶೇ.74.54
-ಯಲಹಂಕ    ಶೇ.73.10
-ಆರ್‌.ಆರ್‌.ನಗರ    ಶೇ.72.78
-ಕೆ.ಆರ್‌. ಪುರ    ಶೇ.71.81
ಒಟ್ಟಾರೆ ನಗರ ಜಿಲ್ಲೆಯ ಸರಾಸರಿ    ಶೆ.66.84

* ವಿಜಯಕುಮಾರ್‌ ಚಂದರಗಿ 

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.