ಒಂಟಿ ವೃದ್ಧರ ಮೇಲಿನ ದೌರ್ಜನ್ಯ ತಡೆಗೆ ಚಿಂತನೆ


Team Udayavani, Feb 7, 2019, 5:10 AM IST

blore-5.jpg

ಬೆಂಗಳೂರು: ಜನಸ್ನೇಹಿ ಪೊಲೀಸ್‌ ವ್ಯವಸ್ಥೆ ತರುವ ನಿಟ್ಟಿನಲ್ಲಿ ಮತ್ತೂಂದು ಹೆಜ್ಜೆ ಇಟ್ಟಿರುವ ನಗರ ಪೊಲೀಸರು ‘ಹಿರಿಯ ನಾಗರಿಕರು ಮತ್ತು ಪೋಷಕರನ್ನೊಳಗೊಂಡ ಸಮಿತಿ’ ರಚಿಸುವ ಮೂಲಕ ಹಿರಿಯ ನಾಗರಿಕರು ಹಾಗೂ ಸಾರ್ವಜನಿಕರ ಜತೆ ಉತ್ತಮ ಬಾಂಧವ್ಯ ಹೊಂದಲು ಮುಂದಾಗಿದ್ದಾರೆ.

ಈಗಾಗಲೇ ನಗರದ ಎಲ್ಲ ಎಂಟು ಕಾನೂನು ಸುವ್ಯವಸ್ಥೆ ವಲಯಗಳಲ್ಲಿ ಜಾರಿಯಲ್ಲಿರುವ ಗಸ್ತು ಪೊಲೀಸ್‌ ಸಿಬ್ಬಂದಿ ತಮ್ಮ ವ್ಯಾಪ್ತಿಯಲ್ಲಿರುವ 15-20 ಮಂದಿ ಹಿರಿಯ ಹಾಗೂ ಜವಾಬ್ದಾರಿಯುತ ನಾಗರಿಕರನ್ನು ಆಯ್ಕೆ ಮಾಡಿ ಅವರೊಂದಿಗೆ ತಿಂಗಳಿಗೊಮ್ಮೆ ಸಭೆ ನಡೆಸಿ ಕೆಲ ಸಲಹೆ ಪಡೆಯಲು ಸೂಚಿಸಲಾಗಿದೆ. ಸಮಿತಿಗೆ ಆಯ್ಕೆಯಾದ ನಾಗರಿಕರಿಗೆ ಆಯಾ ವಲಯ ಪೊಲೀಸ್‌ ಠಾಣೆಯಿಂದ ಪ್ರತ್ಯೇಕ ಗುರುತಿನ ಚೀಟಿ ವಿತರಿಸಲಾಗುತ್ತದೆ. ಈ ಮೂಲಕ ಕಮ್ಯೂನಿಟಿ ಪೊಲೀಸಿಂಗ್‌ (ಸಮುದಾಯ ಪೊಲೀಸ್‌ ವ್ಯವಸ್ಥೆ) ಅನ್ನು ಇನ್ನಷ್ಟು ಗಟ್ಟಿ ಮಾಡಲಾಗುವುದು ಎಂದು ಪೊಲೀಸ್‌ ಅಧಿಕಾರಿಯೊಬ್ಬರು ಹೇಳಿದರು.

ಅಷ್ಟೇ ಅಲ್ಲದೆ, ಗಸ್ತು ತಿರುಗುವ ಸಿಬ್ಬಂದಿ ಕಡ್ಡಾಯವಾಗಿ ಸಮಿತಿ ಸದಸ್ಯರ ಜತೆ ಸಮಾಲೋಚನೆ ನಡೆಸಿ, ಅವರಿಂದ ಸರಗಳ್ಳತನ ಹಾಗೂ ಇತರೆ ಕಾನೂನು ಬಾಹಿರ ಚಟು ವಟಿಕೆಗಳ ತಡೆಗೆ ಏನೆಲ್ಲ ಮುನ್ನೆಚ್ಚರಿಕಾ ಕ್ರಮವಹಿಸ‌ಬೇಕು ಎಂಬುದರ ಬಗ್ಗೆ ಸಲಹೆ ಪಡೆಯಬೇಕು. ಜತೆಗೆ ಪೊಲೀಸ್‌ ಇಲಾಖೆಯಿಂದ ಆಯೋಜಿಸುವ ಜಾಗೃತಿ ಕಾರ್ಯಕ್ರಮ, ಆಂದೋಲನಗಳಲ್ಲಿ ಸಮಿತಿಯ ಸದಸ್ಯರನ್ನು ಸೇರಿಸಿಕೊಂಡು ಸ್ಥಳೀಯವಾಗಿ ಅಪರಾಧ ಪ್ರಕರಣಗಳನ್ನು ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮಕೈಗೊಳ್ಳಬೇಕು ಎಂಬುದು ಸಮಿತಿಯ ಮುಖ್ಯ ಉದ್ದೇಶ ಎಂದು ಅಧಿಕಾರಿಗಳು ವಿವರಿಸಿದರು.

ಹಿರಿಯ ನಾಗರಿಕರ ಬಗ್ಗೆ ಮಾಹಿತಿ: ಇತ್ತೀಚೆಗೆ ನಗರದಲ್ಲಿ ಒಂಟಿ ವೃದ್ಧರ ಮೇಲಿನ ದೌರ್ಜನ್ಯಗಳು ಹೆಚ್ಚಾಗುತ್ತಿವೆ. ಈ ಹಿನ್ನೆಲೆಯಲ್ಲಿ ಪ್ರತಿ ತಿಂಗಳು ಹಿರಿಯ ನಾಗರಿಕರ ವಿರುದ್ಧ ದಾಖಲಾಗಿರುವ ಪ್ರಕರಣಗಳ ತನಿಖಾ ಹಂತ ಮತ್ತು ಪ್ರಗತಿ, ಜರುಗಿಸಲಾದ ಕಾನೂನು ಕ್ರಮಗಳು ಹಾಗೂ ಇಂತಹ ಪ್ರಕರಣಗಳು ಮತ್ತೆ ನಡೆಯದಂತೆ ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳ ಬಗ್ಗೆ ಪ್ರತಿ ತಿಂಗಳ 20ನೇ ತಾರೀಖೀನೊಳಗೆ ರಾಜ್ಯ ಪೊಲೀಸ್‌ ಮಹಾನಿರ್ದೇಶಕರು, ಕರ್ನಾಟಕ ರಾಜ್ಯ ಮತ್ತು ಜಿಲ್ಲಾ ಮ್ಯಾಜಿಸ್ಟ್ರೇಟ್ ಅವರಿಗೆ ಮಾಹಿತಿಯನ್ನು ಎಲ್ಲ ಉಪ ಪೊಲೀಸ್‌ ಆಯುಕ್ತರು ಕಡ್ಡಾಯವಾಗಿ ಸಲ್ಲಿಸಬೇಕು ಎಂದು ನಗರ ಪೊಲೀಸ್‌ ಆಯುಕ್ತರು ಆದೇಶ ಹೊರಡಿಸಿದ್ದಾರೆ.

ಮೊದಲ ಬಾರಿಗೆ ವೃದ್ಧರ ಮಾಹಿತಿ ಸಂಗ್ರಹ
ಇದೇ ಮೊದಲ ಬಾರಿಗೆ ನಗರ ಪೊಲೀಸ್‌ ಕಮಿಷನರೆಟ್ ವ್ಯಾಪ್ತಿಯಲ್ಲಿ ಪ್ರತಿ ಠಾಣೆಗಳ ಗಸ್ತು ಸಿಬ್ಬಂದಿ ತಮ್ಮ ವ್ಯಾಪ್ತಿಯಲ್ಲಿರುವ ಹಿರಿಯ ನಾಗರಿಕರು, ಪ್ರಮುಖವಾಗಿ ಆರೈಕೆ ಮಾಡುವವರಿಲ್ಲದೆ ಒಂಟಿಯಾಗಿ ವಾಸವಾಗಿರುವ ವೃದ್ಧರ ಬಗ್ಗೆ ಮಾಹಿತಿ ಕಲೆ ಹಾಕಲು ಮುಂದಾಗಿದ್ದಾರೆ. ಪ್ರತಿ ಮನೆಗೆ ಭೇಟಿ ನೀಡಿ, 60 ವರ್ಷ ಮೇಲ್ಪಟ್ಟ ವೃದ್ಧರ ವಯಸ್ಸು, ವಿಳಾಸ, ಭಾವಚಿತ್ರ ಹಾಗೂ ಸಂಪರ್ಕ ಸಂಖ್ಯೆಯನ್ನು ಪಡೆಯುತ್ತಿದ್ದಾರೆ. ಜತೆಗೆ ಸರಗಳ್ಳರ ಬಗ್ಗೆ ಎಚ್ಚರದಿಂದಿರಲು, ಮನೆಯಿಂದ ಹೊರಗಡೆ ಹೋಗುವಾಗ ಸಾರ್ವಜನಿಕರು ಅನುಸರಿಸಬೇಕಾದ ಕ್ರಮಗಳ ಕುರಿತ ಕರಪತ್ರಗಳನ್ನು ವಿತರಿಸಿ ಜಾಗೃತಿ ಮೂಡಿಸುತ್ತಿದ್ದಾರೆ. ಈ ಕರಪತ್ರದಲ್ಲಿ ಗಸ್ತು ಸಿಬ್ಬಂದಿಯ ಸಂಪರ್ಕ ಸಂಖ್ಯೆಯನ್ನು ನಮೂದಿಸಲಾಗಿದ್ದು, ಒಂದು ವೇಳೆ ಅಪರಿಚಿತರಿಂದ ಮಾತ್ರವಲ್ಲದೆ, ಬೇರೆ ಯಾವುದೇ ರೀತಿಯ ತೊಂದರೆಯಾದಲ್ಲಿ ಕೂಡಲೇ ಸಿಬ್ಬಂದಿ ಸಂಪರ್ಕಿಸಬಹುದು. ನಂತರ ಆ ಪೊಲೀಸ್‌ ಸಿಬ್ಬಂದಿ ಕೆಲ ಕ್ಷಣಗಳಲ್ಲೇ ವೃದ್ಧರ ಸಮಸ್ಯೆಗೆ ನೆರವಾಗಲಿದ್ದಾರೆ. ಒಂಟಿಯಾಗಿ ವಾಸ ಮಾಡುವ ವೃದ್ಧರ ಬಗ್ಗೆ ಹೆಚ್ಚು ಕಾಳಜಿ ವಹಿಸಲಾಗುವುದು ಎಂದು ಅಧಿಕಾರಿ ಹೇಳಿದರು.

ಮೋಹನ್‌ ಭದ್ರಾವತಿ

ಟಾಪ್ ನ್ಯೂಸ್

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!

ಸಿ.ಟಿ.ರವಿ

Vijayapura; ವಿಕಸಿತ ಭಾರತಕ್ಕೆ ವಿಶ್ವನಾಯಕ ಮೋದಿ ನಾಯಕತ್ವ ಅನಿವಾರ್ಯ: ಸಿ.ಟಿ.ರವಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Fraud: ಮದುವೆ ಆಗದೇ ದೈಹಿಕ ಸಂಪರ್ಕ ಬೆಳೆಸಿ ಮಹಿಳಾ ಟೆಕಿಗೆ ವಂಚನೆ

Fraud: ಮದುವೆ ಆಗದೇ ದೈಹಿಕ ಸಂಪರ್ಕ ಬೆಳೆಸಿ ಮಹಿಳಾ ಟೆಕಿಗೆ ವಂಚನೆ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

15

ವೃದ್ಧಾಶ್ರಮ ಸ್ವಚ್ಛತೆ ಬಂದು ಮಾಲೀಕರ ಮನೆಗೇ ಕನ್ನ

Bengaluru: ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ; ನಾಲ್ಕು ವರ್ಷದ ಮಗು ಆಹುತಿ

Bengaluru: ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ; ನಾಲ್ಕು ವರ್ಷದ ಮಗು ಆಹುತಿ

Fraud: ಫ್ಲ್ಯಾಟ್‌ ಖರೀದಿ ಹೆಸರಲ್ಲಿ ಖಾಸಗಿ ಫೈನಾನ್ಸ್‌ ಕಂಪನಿಗೆ 60.8 ಲಕ್ಷ ವಂಚನೆ

Fraud: ಫ್ಲ್ಯಾಟ್‌ ಖರೀದಿ ಹೆಸರಲ್ಲಿ ಖಾಸಗಿ ಫೈನಾನ್ಸ್‌ ಕಂಪನಿಗೆ 60.8 ಲಕ್ಷ ವಂಚನೆ

MUST WATCH

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

ಹೊಸ ಸೇರ್ಪಡೆ

2-

ಸಂಸದರ ವಿರುದ್ಧ ಸುದ್ದಿ ಹರಿಬಿಟ್ಟು,ಪೊಲೀಸ್ ಪ್ರಕರಣ ಎದುರಿಸಿದ್ದವರಿಂದ ಪಾಠ ಕಲಿಯಬೇಕಾಗಿಲ್ಲ

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

choo mantar kannada movie

Sharan; ಮೇ 10ಕ್ಕೆ ‘ಛೂ ಮಂತರ್‌’ ತೆರೆಗೆ ಸಿದ್ಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.