ಮಡಿವಾಳ ಸಮುದಾಯ ಎಸ್ಸಿಗೆ ಸೇರಿಸಲು ಚಿಂತನೆ
Team Udayavani, Feb 2, 2018, 6:05 AM IST
ಬೆಂಗಳೂರು: ಮಡಿವಾಳ ಸಮುದಾಯವನ್ನು ಪರಿಶಿಷ್ಠ ಜಾತಿಗೆ ಸೇರಿಸುವ ಕುರಿತು ಗಂಭೀರ ಚಿಂತನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಮಡಿವಾಳ ಮಾಚಿದೇವ ಜಯಂತಿ ಕಾರ್ಯ ಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮಡಿವಾಳ ಜಾತಿಗೆ ಪ್ರಾತಿನಿಧ್ಯ ನೀಡಲು ಮಾಧ್ಯಮ ಅಕಾಡೆಮಿ ಅಧ್ಯಕ್ಷ ಸ್ಥಾನ ನೀಡಿದ್ದೇವೆ. ಮಡಿವಾಳ ನಿಗಮ ಮಂಡಳಿ ಸ್ಥಾಪನೆಗೆ ಚಿಂತನೆ ನಡೆದಿದೆ ಎಂದು ಹೇಳಿದರು.
ಮಡಿವಾಳ ಸಮುದಾಯಕ್ಕೆ ವಿಧಾನಸಭೆ ಟಿಕೆಟ್ ನೀಡಿ ಎಂದು ಸಭಿಕರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಎಂ,ಮಡಿವಾಳರಿಗೆ ಟಿಕೆಟ್ ಕೊಟ್ಟರೆ ಯಾರು ಗೆಲ್ಲುತ್ತಾರೆ ಎಂದು ಪ್ರಶ್ನಿಸಿದರು. ಸೊರಬ ಕ್ಷೇತ್ರದಲ್ಲಿ ರಾಜು ತಲ್ಲೂರ್ಗೆ ಟಿಕೆಟ್ ನೀಡಿ ಎಂದು ಕೇಳಿದರು. ಸಮೀಕ್ಷೆ ನಡೆಸಿ ಗೆಲ್ಲುವ ಸಾಧ್ಯತೆ ನೋಡಿ ಟಿಕೆಟ್ ನೀಡಲಾಗುವುದು ಎಂದರು.
ಚುನಾವಣೆ ಹತ್ತಿರ ಬರುತ್ತಿರುವಂತೆ ಕುರುಬರು, ಉಪ್ಪಾರ, ಅಂಬಿಗರು, ವೀರಶೈವರೂ ಸೇರಿ ಹಲವು ಜಾತಿಗಳನ್ನು ಪರಿಶಿಷ್ಠ ಜಾತಿಗೆ ಸೇರಿಸುವಂತೆ ಒತ್ತಡ ಹೆಚ್ಚುತ್ತಿದೆ. ಸರ್ಕಾರ ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳಲಿದೆ ಎಂದರು. ಕಾರ್ಯಕ್ರಮದಲ್ಲಿ ಮಡಿವಾಳ ಮಾಚಿದೇವ ಪುಸ್ತಕ ಬಿಡುಗಡೆ ಮಾಡಲಾಯಿತು. ಸಚಿವೆ ಉಮಾಶ್ರೀ, ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್, ಚಿತ್ರದುರ್ಗದ ಬಸವ ಮಾಚಿದೇವ ಸ್ವಾಮೀಜಿ ಹಾಗೂ ಮಡಿವಾಳ ಜನಾಂಗದ ಅಧ್ಯಕ್ಷ ಸಿ. ನಂಜಪ್ಪ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ