ಈ ಸರ್ಕಾರ ತನಿಖೆ ಮಾಡಿಸುವುದರಲ್ಲೇ ತಲ್ಲೀನವಾಗಿದೆ : ದಿನೇಶ್ ಗುಂಡೂರಾವ್
Team Udayavani, Sep 17, 2019, 2:50 PM IST
ಬೆಂಗಳೂರು: ಇವತ್ತಿನ ಸರ್ಕಾರ ಸತ್ತು ಬಿದ್ದಿದೆ. ಹಿಂದಿನ ಸರ್ಕಾರದ ಯೋಜನೆಗಳನ್ನು ತನಿಖೆ ಮಾಡುವುದರಲ್ಲಿಯೇ ಹೆಚ್ಚು ತಲ್ಲೀನವಾಗಿದೆ. ಮೈತ್ರಿ ಹಾಗೂ ಹಿಂದಿನ ಕಾಂಗ್ರೆಸ್ ಸರ್ಕಾರದ ಯೋಜನೆಗಳನ್ನು ಜನರು ನೆನಪಿಸಿಕೊಳ್ಳುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಡೂರಾವ್ ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತಾನಾಡಿದ ಅವರು ಕೇಂದ್ರದವರು ಸಿಎಂಗೆ ಮರ್ಯಾದೆ ಕೊಡ್ತಿಲ್ಲ. ಮಂತ್ರಿಗಳು ಮರ್ಯಾದೆ ಕೊಡ್ತಿಲ್ಲ. ಈ ಸರ್ಕಾರ ಬಂದ ಮೇಲೆ ಜನರಿಗೆ ಭ್ರಮ ನಿರಸನ ಆಗಿದೆ. ಜೆಡಿಎಸ್ ಏಕಾಂಗಿಯಾಗಿ ಸ್ಪರ್ಧಿಸುವ ಬಯಕೆ ಹೊಂದಿದ್ದರೆ ಅವರ ಇಚ್ಚೆ. ನಾವು ಸ್ವಂತ ಬಲದಿಂದ ಅಧಿಕಾರಕ್ಕೆ ಬರಲು ಎಲ್ಲ ರೀತಿಯ ತಯಾರಿ ನಡೆಸುತ್ತಿದ್ದೇವೆ. ಅನರ್ಹ ಶಾಸಕರ ಪ್ರಕರಣ ರಮೇಶ್ ಕುಮಾರ್ ಕಾನೂನಾತ್ಮಕವಾಗಿಯೇ ಕ್ರಮ. ಕೈಗೊಂಡಿದ್ದಾರೆ. ಅವರ ಆದೇಶವನ್ನು ಯಾವ ಕೋರ್ಟ್ ಗಳನ್ನು ಏಕಾ ಏಕಿ ತೆಗೆದು ಹಾಕಲು ಸಾಧ್ಯವಿಲ್ಲ ಎಂದರು.
ಅವರಿಗೆ ಬಿಜೆಪಿ ನಂಬದಂತೆ ಹೇಳಿದ್ದೆ. ಕಾಂಗ್ರೆಸ್ ನಲ್ಲಿ ರಾಜರಾಗಿದ್ದರು. ಈಗ ಅವರ ಪರಿಸ್ಥಿತಿ ಏನಾಗಿದೆ ಅಂತ ಎಲ್ಲರಿಗೂ ಗೊತ್ತಿದೆ. ಅನರ್ಹ ಶಾಸಕರು ಯಾವುದೇ ಕಾರಣಕ್ಕೂ ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ. ಅವರು ಬಿಜೆಪಿ ಜೊತೆ ಸೇರಿಕೊಂಡು ರಾಜಕಾರಣ ರೂಪಿಸಿಕೊಳ್ಳಲಿ ಎಂದು ಹೇಳಿದರು.
ಶಿವಕುಮಾರ್ ವಿಚಾರದಲ್ಲಿ ಪಕ್ಷ ಅವರೊಂದಿಗೆ ನಿಂತಿದೆ. ಕುಮಾರಸ್ವಾಮಿ ಅವರೂ ಡಿಕೆಶಿ ಪರವಾಗಿ ಮಾತನಾಡಿದ್ದಾರೆ. ಅವರ ಬಗ್ಗೆ ಬೇರೆ ಏನು ಮಾತನಾಡುವುದಿಲ್ಲ. ಡಿಕೆಶಿಗೆ ನ್ಯಾಯಾಲಯದಲ್ಲಿ ಜಯ ಸಿಗುವ ಭರವಸೆ ಇದೆ, ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಶಾಸಕಾಂಗ ಪಕ್ಷದ ಸಭೆ ನಡೆಸಲು ಸಿಎಸ್ ಮೌಖಿಕ ಅನುಮತಿ ನೀಡಿದ್ದರು ಆದರೆ, ಲಿಖಿತ ರೂಪದಲ್ಲಿ ಅನುಮತಿ ನೀಡಲು ನಿರಾಕರಿಸಿದ್ದಾರೆ. ಬಹುಶಃ ಇದರಲ್ಲಿಯೂ ಬಿಜೆಪಿ.ರಾಜಕಾರಣ ಮಾಡಿರುವ ಸಾಧ್ಯತೆ ಇದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ
Sirsi: ಕಲಿತ ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸ್ಪೀಕರ್ ಕಾಗೇರಿ!
Lok Sabha Election: ಕೊಪ್ಪಳ, ರಾಯಚೂರಿನಲ್ಲಿ ಮತದಾನದಿಂದ ದೂರ ಉಳಿದ ಮತದಾರರು…
ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್ಚಂದ್ರ ಅವರಿಂದ ಚಿಕಿತ್ಸೆ
Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ