![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-415x249.jpg)
ಈ ಬಾರಿ ಮಕ್ಕಳಿಗೆ ಶಾಲೆಯಲ್ಲೇ ಬೇಸಿಗೆಯ ಮೋಜು
Team Udayavani, Apr 15, 2017, 10:04 AM IST
![Ban15041706Medn.jpg](https://www.udayavani.com/wp-content/uploads/2017/04/15/Ban15041706Medn-620x403.jpg)
ಬೆಂಗಳೂರು: ಬರಪೀಡಿತ ತಾಲೂಕಿನ ಸರ್ಕಾರಿ ಶಾಲಾ ಮಕ್ಕಳಿಗೆ ಬೇಸಿಗೆ ರಜೆಯಲ್ಲೂ ಮಧ್ಯಾಹ್ನದ ಬಿಸಿಯೂಟ ಇರುತ್ತದೆ. ಜತೆಗೆ 150ಕ್ಕೂ ಅಧಿಕ ಮಕ್ಕಳಿರುವ ಶಾಲೆಗಳಲ್ಲಿ ಬೇಸಿಗೆ ಶಿಬಿರ-ಬೇಸಿಗೆ ಸಂಭ್ರಮ, ಸ್ವಲ್ಪ ಓದು- ಸ್ವಲ್ಪ ಮೋಜು ವಿಶೇಷ ಕಾರ್ಯಕ್ರಮ ಸಹ ಸಾರ್ವಜನಿಕ ಶಿಕ್ಷಣ ಇಲಾಖೆ
ರೂಪಿಸಿದೆ.
ಬರ ಪೀಡಿತ ತಾಲೂಕಿನ ಸರ್ಕಾರಿ ಶಾಲಾ ಮಕ್ಕಳಿಗೆ ಬೇಸಿಗೆ ರಜೆಯಲ್ಲಿ ಬಿಸಿಯೂಟ ನೀಡುವ ವ್ಯವಸ್ಥೆ ಕಳೆದ ಕೆಲವು ವರ್ಷದಿಂದ ನಡೆದುಕೊಂಡು ಬರುತ್ತಿದೆ. ಆದರೆ, ನಿರೀಕ್ಷಿತ ಪ್ರಮಾಣದಲ್ಲಿ ಮಕ್ಕಳು ಶಾಲೆಗೆ ಬರುವುದಿಲ್ಲ ಎಂಬ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆ, ರಾಜ್ಯ ಶಿಕ್ಷಣ ಸಂಶೋಧನೆ ಮತ್ತು
ತರಬೇತಿ ಇಲಾಖೆ, ಸರ್ವಶಿಕ್ಷಾ ಅಭಿಯಾನ ಹಾಗೂ ಪ್ರಥಮ್ ಸಂಸ್ಥೆಯ ಜತೆ ಸೇರಿ ಬೇಸಿಗೆ ಶಿಬಿರ-ಬೇಸಿಗೆ ಸಂಭ್ರಮ ಕಾರ್ಯಕ್ರಮ ಸಿದ್ಧಪಡಿಸಿದೆ.
6 ವಾರಗಳ ಕಾರ್ಯಕ್ರಮ: ಬೇಸಿಗೆ ರಜೆಯಲ್ಲಿ ಮಕ್ಕಳಿಗೆ ಕಲಿಕೆಯ ಜತೆಗೆ ಮೋಜು ನೀಡಬೇಕು ಎಂಬ ಉದ್ದೇಶದಿಂದ ಇದೇ ಮೊದಲ ಬಾರಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಬೇಸಿಗೆ ಶಿಬಿರ-ಬೇಸಿಗೆ ಸಂಭ್ರಮ ಕಾರ್ಯಕ್ರಮವನ್ನು ರೂಪಿಸಿದೆ. 6 ವಾರಗಳ ಕಾಲ ಈ ಶಿಬಿರ ನಡೆಯಲಿದೆ. ಇದು ನಿತ್ಯದ ಶಾಲಾ ಅವಧಿಯಂತೆ ಇರುತ್ತದೆ. ಬೆಳಗ್ಗೆಯಿಂದ ಸಂಜೆಯ ತನಕವೂ ಸರಳ ಕಲಿಕೆಯ ಜತೆಗೆ ಮೋಜಿನ ಆಟ, ಹರಟೆ ಇತ್ಯಾದಿ ಯೋಜಿಸಲಾಗಿದೆ. ಏ.17ರಿಂದ ಮೇ 28ರ ತನಕ ಸ್ವಲ್ಪ ಓದು-ಸ್ವಲ್ಪ ಮೋಜು ಬೇಸಿಗೆ ಶಿಬಿರ ನಡೆಯಲಿದೆ.
6 ಮತ್ತು 7ನೇ ತರಗತಿ ವಿದ್ಯಾರ್ಥಿಗಳಿಗೆ ಮಾತ್ರ: ಸರ್ಕಾರಿ ರಜಾ ದಿನ ಹೊರತುಪಡಿಸಿ ಮಧ್ಯಾಹ್ನದ ಬಿಸಿಯೂಟ 1ರಿಂದ 8ನೇ ತರಗತಿ ಮಕ್ಕಳಿಗೆ ನಿತ್ಯ ಇರುತ್ತದೆ. ಆದರೆ, ಸ್ವಲ್ಪ ಓದು-ಸ್ವಲ್ಪ ಮೋಜು ಬೇಸಿಗೆ ಶಿಬಿರ ಐದು ಮತ್ತು ಆರನೇ ತರಗತಿ ಪಾಸಾದ, ಅಂದರೆ, 2017-18ನೇ ಸಾಲಿನಲ್ಲಿ 6 ಮತ್ತು 7ನೇ ತರಗತಿಯಲ್ಲಿ ಅಭ್ಯಾಸ ಮಾಡಲಿರುವ ವಿದ್ಯಾರ್ಥಿಗಳಿಗೆ ಮಾತ್ರ ಇರುತ್ತದೆ. ಬೇರೆ ಯಾವ ತರಗತಿಯ ಮಕ್ಕಳಿಗೂ ಇದು ಇರುವುದಿಲ್ಲ. ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ(ಡೈಸ್)ಯ ವರದಿ ಆಧರಿಸಿ 150ಕ್ಕಿಂತ ಅಧಿಕ ವಿದ್ಯಾರ್ಥಿಗಳು ಇರುವ 7049 ಶಾಲೆಗಳನ್ನು ಬೇಸಿಗೆ ಶಿಬಿರ-ಬೇಸಿಗೆ ಸಂಭ್ರಮ ಕಾರ್ಯಕ್ರಮಕ್ಕೆ ಆಯ್ಕೆ ಮಾಡಿಕೊಳ್ಳಲಾಗಿದೆ.
ಶಿಕ್ಷಕರಿಗೆ ತರಬೇತಿ: ಬೇಸಿಗೆ ರಜೆಯಲ್ಲಿ ನಡೆಸುವ ಬೇಸಿಗೆ ಶಿಬಿರಕ್ಕೆ ಬರುವ ವಿದ್ಯಾರ್ಥಿಗಳಿಗೆ ಯಾವುದೇ ಕಿರಿಕಿರಿ ಅಥವಾ ಒತ್ತಡ ಆಗದ ಮಾದರಿಯಲ್ಲಿ ಶಿಬಿರ ನಡೆಸಿಕೊಡಲು ಶಿಕ್ಷಕರಿಗೆ ತರಬೇತಿಯನ್ನು ನೀಡಲಾಗಿದೆ. 25 ವಿದ್ಯಾರ್ಥಿಗಳಿಗೆ ಒಬ್ಬ ಶಿಕ್ಷಕನನ್ನು ಗುರುತಿಸಲಾಗಿದೆ. ಸೇವಾ ನಿರತ ಶಿಕ್ಷಕರಿಗೆ ತರಬೇತಿ ನೀಡಲು ಈಗಾಗಲೇ ಬಿಡುಗಡೆಯಾಗಿರುವ ಸರ್ವಶಿಕ್ಷ ಅಭಿಯಾನದ ತರಬೇತಿ ಅನುದಾನದಲ್ಲಿ ಬೇಸಿಗೆ ಸಂಭ್ರಮಕ್ಕೆ ಆಯ್ಕೆಯಾದ ಶಿಕ್ಷಕರಿಗೆ ಒಂದು ದಿನದ ತರಬೇತಿ ನೀಡಲಾಗಿದೆ.
ವಿದ್ಯಾರ್ಥಿಗಳನ್ನು ಹುಡುಕುವುದೇ ಸವಾಲು
ಸರ್ಕಾರಿ ಶಾಲೆಯ ಬೇಸಿಗೆ ರಜೆ ಈಗಾಗಲೇ ಆರಂಭವಾಗಿರುವುದರಿಂದ ಮಕ್ಕಳು ಸಂಬಂಧಿಕರ ಮನೆಗೆ ಹೋಗಿರುತ್ತಾರೆ ಅಥವಾ ಇನ್ಯಾವುದೇ ಬೇಸಿಗೆ ಶಿಬಿರಕ್ಕೆ ಸೇರಿಕೊಂಡಿರುತ್ತಾರೆ. ಸರ್ಕಾರಿ ಶಾಲೆಗಳಲ್ಲಿ ಬೇಸಿಗೆ ಶಿಬಿರ ನಡೆಸುವ ಯಾವುದೇ ಸೂಚನೆ ವಿದ್ಯಾರ್ಥಿಗಳಿಗೆ ನೀಡದೆ ಇರುವುದರಿಂದ ಶಿಬಿರದ ಮೇಲ್ವಿಚಾರಣೆ ಹೊಂದಿರುವ ಅಧಿಕಾರಿಗಳಿಗೆ ಮಕ್ಕಳನ್ನು ಹುಡುಕಿ ತರವುದೇ ದೊಡ್ಡ ಸವಾಲಾಗಿದೆ. ಮಕ್ಕಳನ್ನು ಶಿಬಿರಕ್ಕೆ ಕಳುಹಿಸಿಕೊಡುವ ಮಾದರಿಯಲ್ಲಿ ಸಾರ್ವಜನಿಕ ಪ್ರಚಾರ ಕೈಗೊಳ್ಳುವಂತೆ ಶಿಕ್ಷಣ ಇಲಾಖೆಯಿಂದ ಸೂಚನೆ ನೀಡಲಾಗಿದೆ.
ಟಾಪ್ ನ್ಯೂಸ್
![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-150x90.jpg)
Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
MUST WATCH
ಹೊಸ ಸೇರ್ಪಡೆ
![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-150x90.jpg)
Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-150x83.jpg)
Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.