ಈ ಬಾರಿ ಪಕ್ಷದಲ್ಲಿ ಒಗ್ಗಟ್ಟಿದೆ, ಗೆಲ್ಲುವ ವಿಶ್ವಾಸವೂ ಇದೆ


Team Udayavani, Apr 30, 2018, 12:31 PM IST

Padmavathi4.jpg

ಬೆಂಗಳೂರು: ರಾಜಾಜಿನಗರದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಎರಡನೇ ಬಾರಿ ವಿಧಾನಸಭೆಗೆ ಸ್ಪರ್ಧಿಸುತ್ತಿರುವ ಮಾಜಿ ಮೇಯರ್‌ ಜಿ. ಪದ್ಮಾವತಿ, ಈಗಾಗಲೇ ಮನೆ ಮನೆ ಪ್ರಚಾರ ಆರಂಭಿಸಿದ್ದಾರೆ. ಪಕ್ಷದ ಕಾರ್ಯಕರ್ತರ ಹಾಗೂ ನಾಯಕರ ಜತೆಗೂಡಿ ಗೆಲುವಿಗೆ ಬೇಕಾದ ತಂತ್ರ ರೂಪಿಸುತ್ತಿದ್ದಾರೆ. ನಾಲ್ಕು ಬಾರಿ ಶಾಸಕರಾಗಿರುವ ಮಾಜಿ ಸಚಿವ ಹಾಗೂ ಹಾಲಿ ಶಾಸಕ ಎಸ್‌.ಸುರೇಶ್‌ ಕುಮಾರ್‌ ವಿರುದ್ಧ ಸ್ಪರ್ಧೆಗೆ ಇಳಿದಿರುವ ಜಿ.ಪದ್ಮಾವತಿ ಅವರು “ಉದಯವಾಣಿ’ಗೆ ನೀಡಿದ ಕಿರು ಸಂದರ್ಶನ.

* ಯಾವ ವಿಚಾರ ಕ್ಷೇತ್ರದ ಮತದಾರರ ಮುಂದಿಟ್ಟು ಪ್ರಚಾರದಲ್ಲಿ ತೊಡಗಿದ್ದೀರಿ?
ರಾಜಾಜಿನಗರ ಕ್ಷೇತ್ರದಲ್ಲಿ ನಾಲ್ಕು ಅವಧಿಗೆ ಒಂದೇ ಪಕ್ಷದವರು ಶಾಸಕರಾಗಿದ್ದರೂ ಅಭಿವೃದ್ಧಿ ಮಾತ್ರ ಶೂನ್ಯ. ಯುವಕರಿಗೆ ಬೇಕಾದ ಉದ್ಯೋಗ ಸೃಷ್ಟಿಸಿಲ್ಲ. ಆಟದ ಮೈದಾನಗಳು ಅಭಿವೃದ್ಧಿಯಾಗಿಲ್ಲ. ಹಲವು ವಾರ್ಡ್‌ಗಳಲ್ಲಿ ಹತ್ತಾರು ಸಮಸ್ಯೆಗಳಿವೆ. ಇದನ್ನು ಮತದಾರರ ಮುಂದಿಡುತ್ತಿದ್ದೇನೆ.

* ಗೆಲುವಿಗೆ ನಿಮ್ಮ ಕಾರ್ಯತಂತ್ರವೇನು?
ಕ್ಷೇತ್ರದ ಸಮಗ್ರ ಅಭಿವೃದ್ಧಿಯ ಹಿತದೃಷ್ಟಿಯಿಂದ ಪ್ರತ್ಯೇಕ ಪ್ರಣಾಳಿಕೆಯನ್ನು ಸಿದ್ಧಪಡಿಸಿಕೊಂಡಿದ್ದೇವೆ. ರಾಜ್ಯ ಸರ್ಕಾರದ ಸಾಧನೆ, ಬಿಬಿಎಂಪಿ ಮೇಯರ್‌ ಆಗಿದ್ದ ಸಂದರ್ಭದಲ್ಲಿ ಕ್ಷೇತ್ರಕ್ಕೆ ನೀಡಿದ ಕೊಡುಗೆ ಹಾಗೂ ಕ್ಷೇತ್ರದ ಅಭಿವೃದ್ಧಿಗಾಗಿ ನಮ್ಮಲ್ಲಿರುವ ಕಾರ್ಯ ಯೋಜನೆಗಳ ಆಧಾರದಲ್ಲಿ ಮತ ಕೇಳುತ್ತಿದ್ದೇನೆ. 

* ಪ್ರಚಾರ ಕಾರ್ಯ ಹೇಗಿದೆ?
ನಿತ್ಯ ಬೆಳಗ್ಗೆ 7 ಗಂಟೆಯಿಂದಲೇ ಕಾರ್ಯಕರ್ತರ ಜತೆಗೂಡಿ ಮತಯಾಚನೆ ಆರಂಭಿಸುತ್ತೇವೆ. ಕ್ಷೇತ್ರ ವ್ಯಾಪ್ತಿಯ ಪಾರ್ಕ್‌, ಹೋಟೆಲ್‌ಗ‌ಳಿಗೆ ಭೇಟಿ ನೀಡಿ, ಅಲ್ಲಿರುವವರಲ್ಲಿ ಕಾಂಗ್ರೆಸ್‌ಗೆ ಮತ ನೀಡುವಂತೆ ಮನವಿ ಮಾಡುತ್ತಿದ್ದೇವೆ. ಪ್ರತಿ ವಾರ್ಡ್‌ನ ಎಲ್ಲ ಮನೆಗೂ ಹೋಗುತ್ತಿದ್ದೇವೆ. ಕಾಂಗ್ರೆಸ್‌ ಸರ್ಕಾರದ ಸಾಧನೆ ಮತ್ತು ಕ್ಷೇತ್ರದ ಶಾಸಕರ ವೈಫ‌ಲ್ಯವನ್ನು ಜನರ ಮುಂದಿಡುತ್ತಿದ್ದೇವೆ. ಪ್ರಚಾರಕ್ಕೆ ನೂರಾರು ಸಂಖ್ಯೆಯಲ್ಲಿ ಯುವಜನತೆ ಬರುತ್ತಿದ್ದಾರೆ.

* ಶಾಸಕರಾದರೆ ಕ್ಷೇತ್ರಕ್ಕೆ ನಿಮ್ಮ ಕೊಡುಗೆ ಏನು?
ಕ್ಷೇತ್ರದಲ್ಲಿ ಸುಸಜ್ಜಿತ ಕಲಾಭವನ, ಈಜುಕೊಳ, ಆಟದ ಮೈದಾನ ಇಲ್ಲ.  ಈ ಬಗ್ಗೆ ಗಮನಹರಿಸಲಾಗುವುದು. ಮೊದಲ ಆದ್ಯತೆಯಾಗಿ ಕುಡಿಯುವ ನೀರಿನ ಸಮಸ್ಯೆ ಇಲ್ಲದಂತೆ ನೋಡಿಕೊಳ್ಳುತ್ತೇನೆ.  ಆಟದ ಮೈದಾನ ಅಭಿವೃದ್ಧಿ, ಸ್ಫೋರ್ಟ್‌ ಕ್ಲಬ್‌ ಸ್ಪಾಪಿಸಿ, ಯುವತಿಯರಿಗಾಗಿ ಬಹುಉಪಯೋಗಿ ಜಿಮ್‌ ಸ್ಥಾಪನೆಗೆ ಒತ್ತು ನೀಡಲಿದ್ದೇನೆ. ಮಹಿಳಾ ಸಬಲೀಕರಣಕ್ಕೆ ಬೇಕಾದ ಅಗತ್ಯ ಕ್ರಮ ತೆಗೆದುಕೊಳ್ಳುವ ಮೂಲಕ ರಾಜಾಜಿನಗರವನ್ನು ಮಾದರಿ ಕ್ಷೇತ್ರ ಮಾಡುವ ಉದ್ದೇಶ ಇದೆ. ನಿರುದ್ಯೋಗ ನಿವಾರಣೆಗೆ ಎರಡು ತಿಂಗಳಿಗೊಮ್ಮೆ ಉದ್ಯೋಗ ಮೇಳ ಆಯೋಜಿಸಲಿದ್ದೇನೆ. ಕ್ಷೇತ್ರದ ಬ್ರಾಹ್ಮಣ ಸಮುದಾಯದವರಿಗಾಗಿ ವೈದಿಕ ಸಭಾಭವನ ನಿರ್ಮಿಸುವ ಯೋಜನೆಯಿದೆ.

* 2008ರಲ್ಲಿ ಸೋಲಿಗೆ ಕಾರಣ?
2008ರಲ್ಲಿ ಚುನಾವಣೆಗೆ ಸ್ಪರ್ಧಿಸಿದ್ದ ಸಂದರ್ಭದಲ್ಲಿ ನಮ್ಮವರೇ ಕೆಲವರು ಮೋಸ ಮಾಡಿದ್ದರಿಂದ ಸೋಲಬೇಕಾಯಿತು. ಈ ಬಾರಿ ಅಂತಹ ಯಾವುದೇ ಸಮಸ್ಯೆ ಇಲ್ಲ. ಕಾಂಗ್ರೆಸ್‌ನ ಎಲ್ಲಾ ಕಾರ್ಪೊರೇಟರ್‌ಗಳು ಒಟ್ಟಾಗಿದ್ದೇವೆ. ಈ ಬಾರಿ ಖಂಡಿತ ಕಾಂಗ್ರೆಸ್‌ ಜಯಭೇರಿ ಭಾರಿಸಲಿದೆ.

* ರಾಜ ಖಾರ್ವಿ ಕೊಡೇರಿ 

ಟಾಪ್ ನ್ಯೂಸ್

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-C-brijesh

Dakshina Kannada; ಕ್ಯಾಪ್ಟನ್‌ ಬ್ರಿಜೇಶ್‌ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.