ಆತ್ಮಾವಲೋಕನ ಮಾಡಿಕೊಳ್ಳದ ಮುತ್ಸದಿಗಳು: ದೊರೆಸ್ವಾಮಿ ಬೇಸರ
Team Udayavani, Jun 17, 2019, 3:05 AM IST
ಬೆಂಗಳೂರು: ಈ ಬಾರಿಯ ಚುನಾವಣೆಯಲ್ಲಿ ದೇಶ ಕಂಡ ಅತ್ಯುತ್ತಮ ರಾಜಕೀಯ ಮುತ್ಸದಿಗಳು ಸೋಲನುಭವಿಸಿದ್ದಾರೆ. ಆದರೆ ಹೀಗೇಕಾಯ್ತು ಎಂಬ ಬಗ್ಗೆ ಅವರು ಆತ್ಮವಲೋಕನ ಮಾಡಿಕೊಳ್ಳದೇ ಗಾಢ ನಿದ್ರೆಗೆ ಜಾರಿರುವುದು ಬೇಸರದ ಸಂಗತಿ ಎಂದು ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ಅಭಿಪ್ರಾಯಪಟ್ಟರು.
ಸಮಕಾಲೀನ ಸಮಾಜಿಕ ಸಾಂಸ್ಕೃತಿಕ ವೇದಿಕೆ, ಭಾನುವಾರ ಬಸವನಗುಡಿ ನ್ಯಾಷನಲ್ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಹಿರಿಯ ಲೇಖಕ ಡಾ.ಜಿ.ರಾಮಕೃಷ್ಣ ಅವರ “ವರ್ತಮಾನ’ ಕೃತಿ ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.
ಇತ್ತೀಚಿನ ಚುನಾವಣೆ ಫಲಿತಾಂಶ ನೋಡಿದಾಗ ಜನರು ಕೂಡ ಮತಾಂಧರಾಗಿದ್ದಾರೆಯೇ ಎಂಬ ಅನುಮಾನ ಕಾಡುತ್ತಿದೆ. ಜನ ಸ್ವತಂತ್ರವಾಗಿ ಆಲೋಚನೆ ಮಾಡುವ ಶಕ್ತಿ ಕಳೆದು ಕೊಂಡಿದ್ದಾರೆಯೇ ಎಂದನಿಸುತ್ತದೆ ಎಂದು ಕಳವಳ ವ್ಯಕ್ತಪಡಿಸಿದರು.
ನಾನು ಹೇಳಿದ್ದೇ ರಾಷ್ಟ್ರೀಯತೆ, ಅದನ್ನೇ ಒಪ್ಪಿಕೊಳ್ಳಬೇಕು ಎಂದು ಹೇಳುವ ಮತ್ತು ಹೇರುವಿಕೆ ಸರಿಯಲ್ಲ. ಬಲವಂತವಾಗಿ ರಾಷ್ಟ್ರೀಯತೆಯನ್ನು ಇನ್ನೂಬ್ಬರ ಮೇಲೆ ಹೇರುವ ಕೆಲಸ ಇತ್ತೀಚಿನ ದಿನಗಳಲ್ಲಿ ನಡೆಯುತ್ತಿದ್ದು, ಇದು ಯಾವ ಕಾಲಕ್ಕೂ ನಡೆಯಬಾರದು ಎಂದು ಹೇಳಿದರು.
ಚಳುವಯಿಂದ ಸಮಸ್ಯೆ ಪರಿಹಾರವಾಗಬೇಕು: ಬರೀ ಚಳವಳಿ ಮಾಡಿದರೆ ಪ್ರಯೋಜನವಿಲ್ಲ. ಅದರಿಂದ ಸಮಸ್ಯೆಗಳಿಗೆ ಪರಿಹಾರ ಸಿಗಬೇಕು. ಸಮಸ್ಯೆ ಪರಿಹಾರವಾಗುವ ರೀತಿಯಲ್ಲಿ ಚಳವಳಿ ಸಂಘಟಿಸಬೇಕು. ಈ ಪ್ರವೃತ್ತಿಯನ್ನು ಯುವಕರು ಬೆಳೆಸಿಕೊಳ್ಳಬೇಕು ಎಂದು ನುಡಿದರು.
ಕೃತಿ ಕುರಿತು ಮಾತನಾಡಿದ ಶಶಿಧರ್ ಢೋಂಗ್ರೆ, “ವರ್ತಮಾನ’ ಕೃತಿಯಲ್ಲಿ ಲೇಖಕರು ರಾಷ್ಟ್ರೀಯತೆ ವ್ಯಾಖ್ಯಾನ, ಮನುವಾದ ಸೇರಿದಂತೆ ಹಲವು ವಿಷಯಗಳ ಬಗ್ಗೆ ಬೆಳಕು ಚೆಲ್ಲಿದ್ದಾರೆ. ಮನುವಾದದ ಬಗ್ಗೆ ಹೆಚ್ಚು ಹೇಳಲಾಗಿದೆ ಎಂದರು. ಲೇಖಕ ಡಾ.ಜಿ.ರಾಮಕೃಷ್ಣ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ನಮ್ಮ ಸುತ್ತ ಭಯೋತ್ಪಾದಕರಿದ್ದಾರೆ!: “ನಮ್ಮ ಸುತ್ತಮುತ್ತ ಭಯೋತ್ಪಾದಕರಿದ್ದಾರೆ. ಅವರು ಅನಧಿಕೃತ ಪೊಲೀಸರ ರೀತಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ನ್ಯಾಯ ಪರ ದ್ವನಿ ಎತ್ತಿದವರನ್ನು ಬೇಟೆಯಾಡಲಾಗುತ್ತಿದೆ. ಭಯದ ವಾತಾವರಣ ನಿರ್ಮಾಣವಾಗುತ್ತಿದ್ದು, ಸಾಂಸ್ಕೃತಿಕ ಪರಂಪರೆ ದಿನೇ ದಿನೆ ಗೌಣವಾಗುತ್ತಿದೆ. ಇದನ್ನು ಎತ್ತಿ ಹಿಡಿಯುವ ಕೆಲಸವಾಗಬೇಕಾಗಿದೆ,’ ಎಂದು ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಅಧ್ಯಕ್ಷ ಡಾ.ಕೆ.ಮರುಳಸಿದ್ದಪ್ಪ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ
MUST WATCH
ಹೊಸ ಸೇರ್ಪಡೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ