ಕೃತ್ಯ ಖಂಡಿಸದವರೂ ದೇಶದ್ರೋಹಿಗಳೇ
Team Udayavani, Feb 25, 2019, 6:30 AM IST
ಬೆಂಗಳೂರು: “ದೇಶದ್ರೋಹಿ ಚಟುವಟಿಕೆಗಳನ್ನು ಕಂಡೂ ಕಾಣದಂತೆ ಸುಮ್ಮನೆ ಕುಳಿತುಕೊಳ್ಳುವವರು ಮತ್ತು ಅದರ ವಿರುದ್ಧ ಮಾತನಾಡದವರು ಸಹ ಪರೋಕ್ಷವಾಗಿ ದೇಶದ್ರೋಹಿಗಳೇ,’ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ತಿಳಿಸಿದರು.
ಕರ್ನಾಟಕ ಕ್ಷತ್ರಿಯ ಮರಾಠ ಪರಿಷತ್ ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಛತ್ರಪತಿ ಶಿವಾಜಿ ಮಹಾರಾಜರ 392ನೇ ಜಯಂತ್ಯುತ್ಸವದಲ್ಲಿ ಮಾತನಾಡಿದ ಅವರು, ಉಗ್ರರ ದಾಳಿಗಳಿಂದ ಇಂದು ದೇಶ ಸಂದಿಗ್ಧ ಪರಿಸ್ಥಿತಿಯಲ್ಲಿದೆ. ಇಂತಹ ಸಂದರ್ಭದಲ್ಲಿ ಕೆಲವರು ಆ ಘಟನೆಗೂ ತಮಗೂ ಸಂಬಂಧವೇ ಇಲ್ಲವೆಂಬ ರೀತಿ ವರ್ತಿಸುತ್ತಾರೆ. ಕಂಡೂ ಕಾಣದಂತಿರುತ್ತಾರೆ.
ಉಗ್ರರ ಹೀನ ಕೃತ್ಯವನ್ನು ಖಂಡಿಸಿ ಹೋರಾಟ ನಡೆಸುವುದಿರಲಿ, ಆ ಘಟನೆ ಬಗ್ಗೆ ಮಾತು ಕೂಡ ಆಡುವುದಿಲ್ಲ. ಇಂತಹ ಮನಸ್ಥಿತಿ ಉಳ್ಳವರೂ ಒಂದು ರೀತಿ ದೇಶದ್ರೋಹಿಗಳೇ ಆಗಿರುತ್ತಾರೆ ಎಂದರು. ಭಾರತದ ಮೇಲೆ ಪಾಕಿಸ್ತಾನದ ಉಗ್ರರು ದಾಳಿ ನಡೆಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಶಿವಾಜಿಯ ದೇಶ ಪ್ರೇಮ ನಮಗೆ ಆದರ್ಶವಾಗಬೇಕು. ಈ ನಿಟ್ಟಿನಲ್ಲಿ “ದೇಶ ಮೊದಲು”ಎಂಬ ಮನೋಧರ್ಮ ಅನುಷ್ಠಾನವಾಗಬೇಕು ಎಂದು ಹೇಳಿದರು.
ಈ ವೇಳೆ 96 ಕುಳಿಗಳ ಪುಸ್ತಕ ಬಿಡುಗಡೆ, ವಿದ್ಯಾರ್ಥಿ ವೇತನ, ವಿಧವಾ ವೇತನ, ವಿಕಲಚೇತನರಿಗೆ ಮಾಸಾಶನ, ವೃದ್ಧಾಪ್ಯ ವೇತನ ವಿತರಿಸಲಾಯಿತು. ಗವಿಪುರಂ ಭವಾನಿ ಪೀಠ ಗೋಸಾಯಿ ಮಠದ ಮಂಜುನಾಥ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಶಾಸಕ ರೋಷನ್ ಬೇಗ್, ಪರಿಷತ್ನ ಕೌನ್ಸಿಲ್ ಅಧ್ಯಕ್ಷ ವಿ.ಎ.ರಾಣೋಜಿ ರಾವ್ ಸಾಠೆ, ರಾಜ್ಯಾಧ್ಯಕ್ಷ ಎಸ್.ಸುರೇಶ್ ರಾವ್ ಸಾಠೆ ಉಪಸ್ಥಿತರಿದ್ದರು.
ಮೀಸಲಾತಿಗಾಗಿ ಬೇಡುವುದು ಬೇಡ: ಸಿಂಧ್ಯಾ “ಕ್ಷತ್ರಿಯ, ಮರಾಠ ಸಮುದಾಯವು ಪ್ರಸ್ತುತ ಹಿಂದುಳಿದ ವರ್ಗದ ಪ್ರವರ್ಗ-3ಬಿ ಅಡಿಯಲ್ಲಿದ್ದು, ಅದನ್ನು ಪ್ರವರ್ಗ-2ಎ ಗೆ ಸೇರಿಸಬೇಕು ಎಂಬ ಹತ್ತಾರು ವರ್ಷಗಳ ಬೇಡಿಕೆಗೆ ಯಾವ ಸರ್ಕಾರವೂ ಸ್ಪಂದಿಸುತ್ತಿಲ್ಲ. ಹೀಗಾಗಿ, ಮೀಸಲಾತಿಗಾಗಿ ಯಾರನ್ನೂ ಬೇಡುವುದು ಬೇಡ. ನಾವೇ ಬೀದಿಗಿಳಿದು ಹೋರಾಟ ಮಾಡೋಣ. ನಮ್ಮ ಸಮುದಾಯದ ನಾಯಕರನ್ನು ರಾಜಕೀಯವಾಗಿ ಬೆಂಬಲಿಸಿ ನಮ್ಮ ಹಕ್ಕನ್ನು ನಾವು ಪಡೆಯೋಣ,’ ಎಂದು ಪಿ.ಜಿ.ಆರ್.ಸಿಂಧ್ಯಾ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
MUST WATCH
ಹೊಸ ಸೇರ್ಪಡೆ
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್