ಲಘು ಸಾಲಕ್ಕೆ ಚಿಂತನೆ: ಯಡಿಯೂರಪ್ಪ
Team Udayavani, Jan 16, 2021, 12:30 PM IST
ಬೆಂಗಳೂರು: ಕೇಂದ್ರ ರಸ್ತೆ ನಿಧಿ (ಸಿಆರ್ಎಫ್) ಅಡಿ ನಿರ್ವಹಣೆ ಮಾಡಿರುವ ಹೆದ್ದಾರಿ ಕಾಮಗಾರಿಗಳ ಬಾಕಿ ಮೊತ್ತ ಪಾವತಿಗಾಗಿ ಲಘು ಸಾಲ ಪಡೆಯಲು ಚಿಂತನೆ ನಡೆಸಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.
ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರೊಂದಿಗೆ ವರ್ಚ್ಯವಲ್ ಮೂಲಕ ವಿವಿಧ ಯೋಜನೆಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ತುಮಕೂರು- ಶಿವಮೊಗ್ಗ ರಾಷ್ಟೀಯ ಹೆದ್ದಾರಿ ನಿರ್ಮಾಣಕ್ಕೆ ಅನುಮೋದನೆ ನೀಡಿದ ಕೇಂದ್ರ ಸಚಿವರಿಗೆ ಅಭಿನಂದನೆ ಸಲ್ಲಿಸಲಾಗುವುದು ಎಂದು ತಿಳಿಸಿದರು.
ತವರು ಜಿಲ್ಲೆಗೆ ಸಂಪರ್ಕ ಕಲ್ಪಿಸುವ ಹೆದ್ದಾರಿ ಕಾಮಗಾರಿಗೆ ಭೂಸ್ವಾಧೀನ ಪರಿಹಾರ ಪ್ಯಾಕೇಜ್- 4ಅನ್ನು ಶೀಘ್ರವಾಗಿ ಬಿಡುಗಡೆ ಮಾಡಬೇಕು. ರಾಜ್ಯದಲ್ಲಿ ಮುಂದೆ ಆರಂಭವಾಗುವ ಹೆದ್ದಾರಿ ಯೋಜನೆಗಳಿಗೆ ಭೂಸ್ವಾಧೀನ ಪ್ರಕ್ರಿಯೆ ಹಾಗೂ ಪರಿಸರ ಸಂಬಂಧಿ ಅನುಮತಿ ನೀಡಿಕೆಗೆ ಸಂಪೂರ್ಣ ಸಹಕಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.
ಇದನ್ನೂ ಓದಿ:ಜಗತ್ತಿನ ಅತೀ ದೊಡ್ಡ ಕೋವಿಡ್ ಲಸಿಕೆ ಅಭಿಯಾನಕ್ಕೆ ಭಾರತದಲ್ಲಿ ಚಾಲನೆ
ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರ ಅಧಿಕಾರಾವಧಿಯಲ್ಲಿ ರಾಜ್ಯಕ್ಕೆ ಒಟ್ಟು 77,297 ಕೋಟಿ ರೂ. ವೆಚ್ಚದ 222 ಯೋಜನೆಗಳಿಗೆ ಮಂಜೂರಾತಿ ದೊರಕಿದ್ದು, 8,819 ಕಿ.ಮೀ. ರಸ್ತೆ ಯನ್ನು ಮೇಲ್ದರ್ಜೆಗೇರಿಸಲು ಕ್ರಮ ವಹಿಸಿರುವುದು ಶ್ಲಾಘನೀಯ. ಕೋವಿಡ್-19 ಹಾವಳಿ ನಡುವೆಯೂ ರಾಜ್ಯದಲ್ಲಿ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ವಿಚಾರದಲ್ಲಿ ಕೇಂದ್ರ ಸಾಕಷ್ಟು ಮುತುವರ್ಜಿ ತೋರುವ ಜತೆಗೆ ಆರ್ಥಿಕ, ತಾಂತ್ರಿಕ ನೆರವು ನೀಡುತ್ತಿರುವುದಕ್ಕೆ ರಾಜ್ಯದ ಜನರ ಪರ ಅಭಿನಂದನೆ ಸಲ್ಲಿಸಲಾಗುವುದು ಎಂದು ಹೇಳಿದರು.
ದೆಹಲಿಯಿಂದ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಖಾತೆ ರಾಜ್ಯ ಸಚಿವ ಜನರಲ್ ವಿ.ಕೆ. ಸಿಂಗ್, ಮುಖ್ಯಮಂತ್ರಿಗಳ ಗೃಹ ಕಚೇರಿ “ಕೃಷ್ಣಾ’ದಲ್ಲಿ ಲೋಕೋಪಯೋಗಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯ ದರ್ಶಿ ರಜನೀಶ್ ಗೋಯೆಲ್ ಇತರರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ
Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್ ಸೆರೆ
Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ
ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್
Crime: ಅನೈತಿಕ ಸಂಬಂಧ; ವ್ಯಕ್ತಿ ಕೊಲೆಗೆ ಸುಪಾರಿ!
MUST WATCH
ಹೊಸ ಸೇರ್ಪಡೆ
ಮಂಡ್ಯದಲ್ಲಿ ಐಸ್ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ
Panaji: ಸರಕಾರದ ಆ್ಯಪ್ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ
Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ
Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ