ಛಾಯಾಗ್ರಾಹಕರಿಗೆ ಆರೋಗ್ಯ ಚೀಟಿ ನೀಡಲು ಚಿಂತನೆ


Team Udayavani, Aug 20, 2019, 3:06 AM IST

Gangambike-mayor

ಬೆಂಗಳೂರು: ಛಾಯಾಗ್ರಾಹಕರಿಗೆ ಆರೋಗ್ಯ ಚೀಟಿ ಹಾಗೂ ಸಂಘಕ್ಕೆ ಧನ ಸಹಾಯ ನೀಡುವ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳುವುದಾಗಿ ಮೇಯರ್‌ ಗಂಗಾಂಬಿಕೆ ಭರವಸೆ ನೀಡಿದರು. ಬೆಂಗಳೂರು ಛಾಯಾಗ್ರಾಹಕರ ಸಂಘ ಸೋಮವಾರ ಪ್ರೆಸ್‌ಕ್ಲಬ್‌ನಲ್ಲಿ ಆಯೋಜಿಸಿದ್ದ ವಿಶ್ವ ಛಾಯಾಗ್ರಾಹಕ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಛಾಯಾಚಿತ್ರ ತೆಗೆಯಲು ತಮ್ಮ ಜೀವವನ್ನು ಲೆಕ್ಕಿಸದೇ ತೆರಳುವ ಛಾಯಾಗ್ರಾಹಕರಿಗೆ ಜೀವನದ ಭದ್ರತೆ ಅವಶ್ಯಕವಾಗಿದೆ. ಹೀಗಾಗಿ ಅವರ ಸಂಘಕ್ಕೆ ನೆರವು ನೀಡಲು ಪಕ್ಷಾತೀತವಾಗಿ ಎಲ್ಲ ನಾಯಕರು ಪ್ರಯತ್ನಿಸಲಾಗುವುದು. ಕೆಲ ಚಿತ್ರಗಳು ಶಾಶ್ವತವಾಗಿ ಉಳಿದು ಅವು ಮುಂದಿನ ಪೀಳಿಗೆಗೆ ಮಾರ್ಗದರ್ಶನ ನೀಡುತ್ತವೆ. ಛಾಯಾಗ್ರಾಹಕರಿಂದ ನಮ್ಮ ಜೀವನದ ಮರೆಯಲಾರದ ಕ್ಷಣಗಳು ಸೆರೆಯಾಗುತ್ತವೆ. ಎಷ್ಟೇ ವರ್ಷಗಳು ಕಳೆದರೂ ಛಾಯಾಚಿತ್ರಗಳು ಹಳೆಯ ನೆನಪುಗಳಿಗೆ ಸಾಕ್ಷಿಯಾಗಿರುತ್ತವೆ ಎಂದು ತಿಳಿಸಿದರು.

ಉಪಮೇಯರ್‌ ಭದ್ರೇಗೌಡ ಮಾತನಾಡಿ, ಹವ್ಯಾಸಿ ಛಾಯಾಗ್ರಾಹಕರಿಗೆ ಹೋಲಿಸಿದರೆ ಪತ್ರಿಕಾ ಛಾಯಾಗ್ರಾಹಕರಿಗೆ ಸ್ವಾತಂತ್ರ ಕಡಿಮೆ ಇರುತ್ತದೆ. ಆರ್ಥಿಕ ಸಮಸ್ಯೆ ಎದುರಿಸುತ್ತಿದ್ದು, ಇವರಿಗೆ ನೆರವು ನೀಡುವ ಬಗ್ಗೆ ಸರ್ಕಾರ ಚಿಂತನೆ ನಡೆಸಬೇಕು ಎಂದರು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ತಂತ್ರಜ್ಞ ನರಸಿಂಹ ಅವರನ್ನು ಸನ್ಮಾನಿಸಲಾಯಿತು.

ಹೇಳಿಕೆಗಳಿಗಿಂತ ಛಾಯಾಚಿತ್ರಕ್ಕೆ ಮಹತ್ವ: ಛಾಯಾಗ್ರಾಹಕರ ಸಂಘದ ವತಿಯಿಂದ ಆಯೋಜಿಸಿದ್ದ “ಸಾಮಾಜಿಕ ಮಾಧ್ಯಮಗಳ ಯುಗದಲ್ಲಿ ಛಾಯಾಚಿತ್ರ ಪತ್ರಿಕೋದ್ಯಮದ ಮುಂದಿರುವ ಸವಾಲುಗಳು’ ವಿಚಾರ ಸಂಕಿರಣದಲ್ಲಿ ಸೈಬರ್‌ ಕ್ರೈಂ ಪೊಲೀಸ್‌ ಠಾಣಾಧಿಕಾರಿ ಕೆ.ಎನ್‌.ಯಶವಂತಕುಮಾರ್‌ ಮಾತನಾಡಿ, ಛಾಯಾಚಿತ್ರಗಳನ್ನು ಡಿಜಿಟಲ್‌ ಸಾಕ್ಷಿಗಳೆಂದು ಪರಿಗಣಿಸಲಾಗುತ್ತದೆ.

ಅಪರಾಧ ಪ್ರಕರಣಗಳಲ್ಲಿ ಹೇಳಿಕೆಗಳಿಗಿಂತ ಛಾಯಾಚಿತ್ರಗಳು ಹೆಚ್ಚು ದೃಢತೆ ಹೊಂದಿರುತ್ತದೆ ಎಂದರು. ಹಿರಿಯ ಛಾಯಾಗ್ರಾಹಕ ಕೆಂಪಣ್ಣ ಮಾತನಾಡಿ, ವೀರಪ್ಪನ್‌ ಸೆರೆಯಿಂದ ಮರಳಿದ ನಟ ಡಾ. ರಾಜ್‌ಕುಮಾರ್‌ ಅವರು ವಿಮಾನ ನಿಲ್ದಾಣಕ್ಕೆ ಬಂದ ಕೂಡಲೇ ನೆಲಕ್ಕೆ ನಮಸ್ಕರಿಸಿದ ಅಪರೂಪದ ಚಿತ್ರ ಮನೆ ಮಾತಾಗಿತ್ತು. ಇಂತಹ ಛಾಯಾಚಿತ್ರಗಳು ಸೆರೆಹಿಡಿಯಬೇಕಾದರೆ ಛಾಯಾಗ್ರಾಹಕನಿಗೆ ಮೈಯೆಲ್ಲಾ ಕಣ್ಣಾಗಿರಬೇಕು.

ಆಸಕ್ತ ವಿದ್ಯಾರ್ಥಿಗಳು ಹಿರಿಯ ಛಾಯಾಗ್ರಾಹಕನ ಮಾರ್ಗದರ್ಶನ ಪಡೆದರೆ ಅತ್ಯುತ್ತಮ ಫೋಟೊ ಕ್ಲಿಕ್ಕಿಸಬಹುದು ಎಂದು ಸಲಹೆ ನೀಡಿದರು. ಬೆಂಗಳೂರು ವಿವಿ ಕುಲಪತಿ ಪ್ರೊ.ಕೆ.ಆರ್‌.ವೇಣುಗೋಪಾಲ್‌ ಮಾತನಾಡಿ, ಒಂದು ಚಿತ್ರ ಸಾವಿರ ಪದಕ್ಕೆ ಸಮವಾಗಿದ್ದು, ಛಾಯಾಚಿತ್ರಗಳನ್ನು ವರ್ಣಿಸಲು ಪದಗಳೇ ಸಿಗುವುದಿಲ್ಲ. ಫೋಟೊ ಸುದ್ದಿಯ ಸಾರಾಂಶ ತಿಳಿಸುತ್ತದೆ. ನನ್ನ ಪ್ರಕಾರ ನಮ್ಮ ಕಣ್ಣುಗಳೇ ಮೊದಲ ಕ್ಯಾಮೆರಾ ಎಂದು ವರ್ಣಿಸಿದರು.

ಟಾಪ್ ನ್ಯೂಸ್

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.