Bangalore: ಸಂಚಾರ ಪೊಲೀಸ್‌ಗೆ ಧಮ್ಕಿ, ಹಲ್ಲೆ; ಬೈಕ್‌ ಸವಾರ ಬಂಧನ


Team Udayavani, Feb 13, 2024, 11:03 AM IST

Bangalore: ಸಂಚಾರ ಪೊಲೀಸ್‌ಗೆ ಧಮ್ಕಿ, ಹಲ್ಲೆ; ಬೈಕ್‌ ಸವಾರ ಬಂಧನ

ಬೆಂಗಳೂರು: ಹೆಡ್‌ ಕಾನ್‌ಸ್ಟೇಬಲ್ ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪಿಯನ್ನು ವಿಲ್ಸನ್‌ಗಾರ್ಡನ್‌ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬಿಟಿಎಂ ಲೇಔಟ್‌ನ ಸೈಯದ್‌ ಸಫಿ (28) ಬಂಧಿತ. ಆರೋಪಿ ವಿರುದ್ಧ ವಿಲ್ಸನ್‌ಗಾರ್ಡನ್‌ ಸಂಚಾರ ಠಾಣೆ ಹೆಡ್‌ಕಾನ್‌ ಸ್ಟೇಬಲ್‌ ಸಿದ್ರಾಮೇಶ್ವರ ಕೌಜಲಗಿ ಎಂಬುವರು ವಿಲ್ಸನ್‌ ಗಾರ್ಡನ್‌ ಠಾಣೆಯಲ್ಲಿ ಕೇಸ್‌ ದಾಖಲಿಸಿದ್ದು, ಈ ಸಂಬಂಧ ಆರೋಪಿಯನ್ನು ಬಂಧಿಸಲಾಗಿದೆ. ‌

ಫೆ.12ರಂದು ಹೆಡ್‌ಕಾನ್‌ಸ್ಟೇಬಲ್ ಸಿದ್ರಾಮೇಶ್ವರ ಕೌಜಲಗಿ ಮತ್ತು ಲೋಕೇಶ್‌ ಡಾ ಮರೀಗೌಡ ರಸ್ತೆಯ 10ನೇ ಕ್ರಾಸ್‌ ಜಂಕ್ಷನ್‌ ಬಳಿ ಕರ್ತವ್ಯ ನಿರ್ವಹಿಸುತ್ತಿದ್ದರು. ಬೆಳಗ್ಗೆ 11.30ರ ಸುಮಾರಿಗೆ ಆರೋಪಿ ಹೆಲ್ಮೆಟ್‌ ಧರಿಸದೆ ವಾಹನ ಚಾಲನೆ ಮಾಡಿಕೊಂಡು ಹೋಗುತ್ತಿದ್ದ. ಆಗ ಸಿದ್ರಾಮೇಶ್ವರ ಕೌಜಲಗಿ ತಮ್ಮ ಮೊಬೈಲ್‌ ತೆಗೆದು ಪ್ರಕರಣ ದಾಖಲಿಸಲು ಮುಂದಾಗಿದ್ದಾರೆ. ಅದನ್ನು ಗಮನಿಸಿದ ಆರೋಪಿ, ನಂಬರ್‌ ಪ್ಲೇಟ್‌ ಕೊಡುತ್ತೇನೆ ಎಷ್ಟು ಬೇಕಾದರೂ ಪ್ರಕರಣ ಹಾಕು ಎಂದು, ‌ ಮೊಬೈಲ್‌ ಕಸಿದುು ಪರಾರಿಯಾಗಲು ಯತ್ನಿಸಿದ್ದಾನೆ.

ಕೂಡಲೇ ಸಿದ್ರಾಮೇಶ್ವರ ಆರೋಪಿಯ ಬೆನ್ನು ಹತ್ತಿ ಹಿಡಿದುಕೊಂಡಿದ್ದಾರೆ. ಅದಕ್ಕೆ ಇನ್ನಷ್ಟು ಕೋಪಗೊಂಡ ಆರೋಪಿ, ನಡು ರಸ್ತೆಯಲ್ಲಿ ವಾಹನ ನಿಲ್ಲಿಸಿ ಸುಗಮ ಸಂಚಾರಕ್ಕೆ ಅಡ್ಡಿ ಉಂಟು ಮಾಡಿದ್ದಾನೆ. ಅದನ್ನು ಪ್ರಶ್ನಿಸಿದಕ್ಕೆ ಸಿದ್ರಾಮೇಶ್ವರ ಜತೆ ಜಗಳ ಮಾಡಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಅಲ್ಲದೆ, ಜಂಕ್ಷನ್‌ಗಳಲ್ಲಿ ಸಂಚಾರ ಪೊಲೀಸರು ಬಳಸುವ ಕಿಯಾಸ್ಕ್‌  ಗೆ ಬೆಂಕಿ ಹಚ್ಚುತ್ತೇನೆ ಎಂದು ಬೆದರಿಕೆ ಹಾಕಿದ್ದಾನೆ. ಜತೆಗೆ ಸಿದ್ರಾಮೇಶ್ವರ ಅವರ ಕೈ ಬೆರಳುಗಳಿಗೆ ಹಲ್ಲಿನಿಂದ ಕಚ್ಚಿ ಗಾಯಗೊಳಿಸಿದ್ದಾನೆ.

 

ಟಾಪ್ ನ್ಯೂಸ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

10

Bengaluru: ಫ್ಲೈಓವರ್‌ಗಳಲ್ಲೂ ಕಸ ಸುರಿಯುವ ವಾಹನ ಸವಾರರು 

7

Bengaluru: ಸೈಕಲ್‌ ಕದಿಯುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಬಂಧನ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Manipal ಆಸ್ಪತ್ರೆಯ ಡಾ.ರಾಮದಾಸ್‌ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್‌ ಸೇವೆ ಆರಂಭ

Manipal ಆಸ್ಪತ್ರೆಯ ಡಾ.ರಾಮದಾಸ್‌ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್‌ ಸೇವೆ ಆರಂಭ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

ಅಯ್ಯೋ ಬಿಸಿಲು! ಕರಾವಳಿಯಲ್ಲಿ ಮಣ್ಣಿನ ತೇವಾಂಶ ಕಡಿಮೆ: ನೀರಿಲ್ಲ, ಫಸಲಿಲ್ಲ

ಅಯ್ಯೋ ಬಿಸಿಲು! ಕರಾವಳಿಯಲ್ಲಿ ಮಣ್ಣಿನ ತೇವಾಂಶ ಕಡಿಮೆ: ನೀರಿಲ್ಲ, ಫಸಲಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.