ಬೆಳ್ಳಿ ವಸ್ತು ಕದ್ದ ಮೂವರ ಬಂಧನ
Team Udayavani, Aug 18, 2018, 2:35 PM IST
ಬೆಂಗಳೂರು: ಮಾಲೀಕರಿಗೆ ತಿಳಿಯದಂತೆ ಜ್ಯುವೆಲ್ಲರಿ ಶಾಪ್ ಗೋದಾಮಿನಲ್ಲಿ ಬೆಳ್ಳಿ ವಸ್ತುಗಳನ್ನು ಕಳವು ಮಾಡುತ್ತಿದ್ದ ಮೂವರು ಆರೋಪಿಗಳು ಕಲಾಸಿಪಾಳ್ಯ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಕವಿಕಾ ಲೇಔಟ್ನ ಆದೇಶ್ ಅಲಿಯಾಸ್ ಆದಿ (24), ಅಂಧಾನಿ (23) ಮತ್ತು ಕಸ್ತೂರಿ ಬಾ ನಗರದ ಕಿರಣ್(19) ಬಂಧಿತರು. ಆರೋಪಿಗಳಿಂದ 18 ಲಕ್ಷ ರೂ. ಮೌಲ್ಯದ 45 ಕೆ.ಜಿ. ತೂಕದ ಬೆಳ್ಳಿಯ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಂಧಿತ ಮೂವರು ಅವಿನ್ಯೂ ರಸ್ತೆಯ ರಾಜಾ ಮಾರುಕಟ್ಟೆಯಲ್ಲಿರುವ ಶ್ರೀಕಾಂತ್ ಎಂಬುವರ ಅಂಜನಾದ್ರಿ ಜ್ಯುವೆಲ್ಲರಿ ಅಂಗಡಿ ಮಳಿಗೆಯಲ್ಲಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದರು. ಆರಂಭದಲ್ಲಿ ಚೆನ್ನಾಗಿ ಕೆಲಸ ಮಾಡಿ ಮಾಲೀಕರ ನಂಬಿಕೆ ಗಳಿಸಿದ್ದರು. ಈ ಹಿನ್ನೆಲೆಯಲ್ಲಿ ಮಾಲೀಕ ಶ್ರೀಕಾಂತ್ ಆರೋಪಿಗಳಿಗೆ ಮಳಿಗೆ ಹಾಗೂ ಗೋದಾಮು ಕೀ ಕೊಟ್ಟು ಹೋಗುತ್ತಿದ್ದರು. ಇದನ್ನೇ ದುರುಪಯೋಗ ಪಡಿಸಿಕೊಂಡ ಮೂವರು ಜ್ಯುವೆಲ್ಲರಿ ಅಂಗಡಿಯಲ್ಲಿ ಆಗಾಗ್ಗೆ ಸಣ್ಣ -ಪುಟ್ಟ ಬೆಳ್ಳಿ ವಸ್ತುಗಳನ್ನು ಕಳವು ಮಾಡುತ್ತಿದ್ದರು.
ಜತೆಗೆ ಗೋದಾಮಿನಲ್ಲಿದ್ದ ಬೆಳ್ಳಿಯ ವಸ್ತುಗಳನ್ನು ಅಂಗಡಿಗೆ ತರುವಾಗ ಬೆಳ್ಳಿಯ ದೀಪಗಳು, ತಟ್ಟೆಗಳನ್ನು ಕಳವು ಮಾಡಿ ಬೇರೆಡೆ ಇಡುತ್ತಿದ್ದರು. ಕೆಲ ದಿನಗಳ ಹಿಂದೆ ಮೂವರು ಬ್ಯಾಗ್ವೊಂದರಲ್ಲಿ ಕಳವು ಮಾಡಿದ ಬೆಳ್ಳಿಯ ವಸ್ತುಗಳನ್ನು ತುಂಬಿಕೊಂಡು ದೊಡ್ಡಮಾವಳ್ಳಿಯ ಸುಶೀಲ ರಸ್ತೆಯಲ್ಲಿ ಅನುಮಾನಸ್ವದವಾಗಿ ಹೋಗುತ್ತಿದ್ದರು. ಇದೇ ವೇಳೆ ಗಸ್ತು ತಿರುಗುತ್ತಿದ್ದ ಪೇದೆಗಳಾದ ಬೇಲೂರಯ್ಯ, ಕಾರಯ್ಯ, ವಿನೋದ್ ಕುಮಾರ್ ಮತ್ತು ಮಾಗಲ್ಯ ನಾಯಕ್ ಅನುಮಾನಗೊಂಡು ಮೂವರನ್ನು ತಡೆದು ವಿಚಾರಣೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ವರಮಹಾಲಕ್ಷ್ಮೀ ಹಬ್ಬದಂದು ಮಾರಾಟ: ಬೆಳ್ಳಿ ವಸ್ತುಗಳನ್ನು ಕಳವು ಮಾಡಿದ್ದ ಆರೋಪಿಗಳು ಮುಂದಿನ ವಾರದಲ್ಲಿ ಬರುವ ವರಮಹಾಲಕ್ಷ್ಮೀ ಹಬ್ಬದ ಸಂದರ್ಭದಲ್ಲಿ ಪರಿಚಯಸ್ಥರಿಗೆ ಕಡಿಮೆ ಮೊತ್ತಕ್ಕೆ ಮಾರಾಟ ಮಾಡಲು ಸಿದ್ಧತೆ ನಡೆಸಿದ್ದರು ಎಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ
ಚಾಕೋಲೆಟ್ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ
MUST WATCH
ಹೊಸ ಸೇರ್ಪಡೆ
Tragedy: ತನ್ನ ಅಪಾರ್ಟ್ಮೆಂಟ್ನಲ್ಲೇ ನೇಣಿಗೆ ಶರಣಾದ ಭೋಜ್ಪುರಿ ನಟಿ… ಕಾರಣ ನಿಗೂಢ
B.Y. Raghavendra: ಕಾಂಗ್ರೆಸ್ನವರ ಬಳಿ ಗ್ಯಾರಂಟಿ ಅಡ್ವಾನ್ಸ್ ಹಣ ಕೇಳಿ: ಬಿವೈಆರ್
Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ