ಮೊಬೈಲ್‌ ಕೊಳ್ಳುವುದಾಗಿ ತಿಳಿಸಿ ಮಚ್ಚುತೋರಿಸಿ ಸುಲಿಗೆ – ಮೂವರ ಬಂಧನ


Team Udayavani, Jan 25, 2021, 11:25 PM IST

ಮೊಬೈಲ್‌ ಕೊಳ್ಳುವುದಾಗಿ ತಿಳಿಸಿ ಮಚ್ಚುತೋರಿಸಿ ಸುಲಿಗೆ – ಮೂವರ ಬಂಧನ

ಬೆಂಗಳೂರು: ಆನ್‌ಲೈನ್‌ ಮಾರಾಟ ತಾಣಗಳಲ್ಲಿ ವಸ್ತುಗಳನ್ನು ಕೊಳ್ಳಲು ಇಚ್ಛಿಸಿ ಕರೆಸಿಕೊಳ್ಳುವವರ ಬಗ್ಗೆ ಎಚ್ಚರವಿರಲಿ. ವಸ್ತುಗಳನ್ನು ಕೊಳ್ಳುವ ನೆಪದಲ್ಲಿ ಕರೆಸಿಕೊಂಡು ಹಲ್ಲೆ ನಡೆಸಿ ಸುಲಿಗೆ ಮಾಡುವ ದುಷ್ಕರ್ಮಿಗಳು ಸಕ್ರಿಯರಾಗಿದ್ದಾರೆ.ಇಂತಹದ್ದೊಂದು ಪ್ರಕರಣ ಕಲಾಸಿಪಾಳ್ಯ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

“ಓಎಲ್‌ಎಕ್ಸ್‌’ ತಾಣದಲ್ಲಿ ಮಾರಕ್ಕಿಟ್ಟಿದ್ದ ಮೊಬೈಲ್‌ ಖರೀದಿಸುವುದಾಗಿ ನಂಬಿಸಿ ವಿದ್ಯಾರ್ಥಿಯೊಬ್ಬರನ್ನು ತಮ್ಮ ರೂಂಗೆ ಕರೆಸಿಕೊಂಡ ದುಷ್ಕರ್ಮಿಗಳು ಆತನಿಗೆ ಮಚ್ಚು ತೋರಿಸಿ ಬೆದರಿಸಿ, ಮೊಬೈಲ್‌, 20 ಸಾವಿರ ರೂ. ಕಿತ್ತುಕೊಂಡಿದ್ದ ಮೂವರು ಆರೋಪಿಗಳನ್ನು ಕಲಾಸಿಪಾಳ್ಯ ಪೊಲೀಸರು ಬಂಧಿಸಿದ್ದಾರೆ.

ಹುಸೇನ್‌ ಷರೀಫ್, ಆಫ್ರಿದ್‌ ಖಾನ್‌, ಅಡ್ನಾನ್‌ ಪಾಷಾ ಬಂಧಿತರು. ಆರೋಪಿಗಳಿಂದ 10 ಸಾವಿರ ರೂ. ನಗದು ಹಾಗೂ ಸುಲಿಗೆ ಮಾಡಿದ್ದ ಒಂದು ಮೊಬೈಲ್‌ ಪೊಲೀಸರು ಜಪ್ತಿ ಮಾಡಿಕೊಂಡಿದ್ದಾರೆ.ಆರೋಪಿಗಳು ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಾಗಿದ್ದು ಈ ಹಿಂದೆ ಯಾವುದೇ ಅಪರಾಧ ಕೃತ್ಯದಲ್ಲಿ ಭಾಗಿಯಾದ ಹಿನ್ನೆಲೆಯಿಲ್ಲ. ಹಣಕ್ಕಾಗಿ ಆರೋಪಿಗಳು ಸುಲಿಗೆ ಮಾಡಿದ್ದಾಗಿ ವಿಚಾರಣೆ ವೇಳೆ ತಿಳಿಸಿದ್ದಾರೆ. ಕೃತ್ಯದಲ್ಲಿ ಇನ್ನೂ ಮೂವರು ಆರೋಪಿಗಳು ಭಾಗಿಯಾಗಿದ್ದು ಅವರ ಬಂಧನಕ್ಕೆ ಕ್ರಮ ವಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೋರಮಂಗಲದ ಅನುರಾಗ್‌ ಕೆಲದಿನಗಳ ಹಿಂದೆ  ಇನ್‌ಸ್ಟಾ ಗ್ರಾಂನಲ್ಲಿ ಐ ಫೋನ್‌ ಖರೀದಿಸಿದ್ದರು. ಖರೀದಿ ಮಾಡಿದ್ದ ಮೊಬೈಲ್‌ ಇಷ್ಟವಾಗದಿದ್ದಕ್ಕೆ ಅದನ್ನು ಮಾರಾಟ ಮಾಡಲು ಓಎಲ್‌ಎಕ್ಸ್‌ನಲ್ಲಿ  ಜಾಹೀರಾತು ನೀಡಿ ದೂರವಾಣಿ ನಂಬರ್‌ ಹಾಕಿದ್ದರು. ಜ.23ರಂದು ಅವರಿಗೆ ಕರೆ ಮಾಡಿದ್ದ ಒಬ್ಟಾತ ಐಫೋನ್‌ ಖರೀದಿಸುವುದಾಗಿ ತಿಳಿಸಿ ಚಿಕ್ಕಪೇಟೆ ಮೆಟ್ರೋನಿಲ್ದಾಣದ ಬಳಿ ರಾತ್ರಿ ಎಂಟು ಗಂಟೆಗೆ ಬರುವಂತೆ ತಿಳಿಸಿದ್ದಾನೆ.

ಹೀಗಾಗಿ ಅಲ್ಲಿಗೆ ಹೋಗಿದ್ದ ಅನುರಾಗ್‌ನನ್ನು ಭೇಟಿ ಮಾಡಿದ್ದ ಇಬ್ಬರು ಆರೋಪಿಗಳು, ಎಟಿಎಂನಲ್ಲಿ ಹಣ ಡ್ರಾ ಮಾಡಿಕೊಡುವುದಾಗಿ ನಂಬಿಸಿ ಬೈಕ್‌ ಹತ್ತಿಸಿಕೊಂಡಿದ್ದರು. ಮಾರ್ಗಮಧ್ಯೆ ಮೋತಿನಗರದಲ್ಲಿ ಮನೆಯಲ್ಲಿ ತಮ್ಮ ತಾಯಿಯ ಹತ್ತಿರ ನಗದು ಕೊಡಿಸುತ್ತೇನೆ ಎಂದ ಆರೋಪಿ ಮೋತಿನಗರದಲ್ಲಿ ಕೊಠಡಿಯೊಂದಕ್ಕೆ ಕರೆದೊಯ್ದಿದ್ದರು.

ಕೊಠಡಿ ಒಳಗೆ ಹೋಗುತ್ತಿದ್ದಂತೆ ಡೋರ್‌ಲಾಕ್‌ ಮಾಡಿದ ಆರೋಪಿಗಳು ಮಚ್ಚುತೋರಿಸಿ ಬೆದರಿಸಿದರು. ಜತೆಗೆ, ಕೈಗಳಿಂದ ಹಲ್ಲೆ ನಡೆಸಿ ಮೊಬೈಲ್‌ ಹಾಗೂ 20 ಸಾವಿರ ರೂ.  ನಗದು ಕಿತ್ತುಕೊಂಡಿದ್ದರು. ಬಳಿಕ ಬೇರೆ ಕಡೆ ಅನುರಾಗ್‌ನನ್ನು ಕರೆದೊಯ್ಯಲು ಕೆಳಗಡೆ ಕರೆತರುತ್ತಿದ್ದಂತೆ ತಪ್ಪಿಸಿಕೊಂಡಿದ್ದ ಆತ ಬಾರ್‌ವೊಂದಕ್ಕೆ ತೆರಳಿ ಅಲ್ಲಿನ ಸಿಬ್ಬಂದಿ ಸಹಾಯ ಪಡೆದು ಪೊಲೀಸರಿಗೆ ದೂರು ನೀಡಿದ್ದರು ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದರು.

ಟಾಪ್ ನ್ಯೂಸ್

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.