ಒಂದೇ ಆ್ಯಂಬುಲೆನ್ಸ್ ನಲ್ಲಿ ಮೂರು ಕೋವಿಡ್ ಸೋಂಕಿತರ ಶವ ಸಾಗಾಟ !
Team Udayavani, Apr 16, 2021, 8:21 PM IST
ಬೆಂಗಳೂರು: ನಗರದ ಕೆಂಗೇರಿ ವಿದ್ಯುತ್ ಚಿತಾಗಾರಕ್ಕೆ ಖಾಸಗಿ ಆಸ್ಪತ್ರೆಯೊಂದರ ಒಂದೇ ಆ್ಯಂಬುಲೆನ್ಸ್ ನಲ್ಲಿ ಏಕಕಾಲಕ್ಕೆ ಮೂರು ಶವಗಳನ್ನು ಸಾಗಿಸಿರುವುದು ತಡವಾಗಿ ಬೆಳಕಿಗೆ ಬಂದಿದೆ. ಖಾಸಗಿ ಆಸ್ಪತ್ರೆಯೊಂದರಲ್ಲಿ ಕೊರೊನಾ ಸೋಂಕಿನಿಂದ ಈ ಮೂವರು ಮೃತಪಟ್ಟಿದ್ದರು ಎನ್ನಲಾಗಿದೆ.
ನಗರದಲ್ಲಿ ಕೋವಿಡ್ ಸೋಂಕಿನಿಂದ ಮೃತಪಡುವವರ ಸಂಖ್ಯೆ ಹೆಚ್ಚಾಗುತ್ತಿದ್ದು, ಶವ ಸಂಸ್ಕಾರ ಮತ್ತು ಶವ ಸಾಗಾಣಿಕೆಯಲ್ಲಿ ಅಮಾನವೀಯ ಹಾಗೂ ಖಾಸಗಿ ಆಸ್ಪತ್ರೆಗಳ ಕರಾಳ ಮುಖ ಅನಾವರಣ ಆಗುತ್ತಿದೆ.
ಕಳೆದ ಎರಡು ದಿನಗಳ ಹಿಂದಷ್ಟೇ ಒಂದೇ ಆ್ಯಂಬುಲೆನ್ಸ್ ನಲ್ಲಿ ಎರಡು ಶವಗಳನ್ನು ಸಾಗಿಸಿದ್ದು, ತೀವ್ರ ವಿರೋಧಕ್ಕೆ ಕಾರಣವಾಗಿತ್ತು. ಇದೀಗ ಖಾಸಗಿ ಆಸ್ಪತ್ರೆಗಳು ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಒಂದೇ ಆ್ಯಂಬುಲೆನನ್ಸ್ ನಲ್ಲಿ ಮೂರು ಶವಗಳನ್ನು ಸಾಗಿಸಿದೆ.
ಇದನ್ನೂ ಓದಿ: ಬಸ್ ಗೆ ಕಲ್ಲು ಎಸೆದ ಕಿಡಿಗೇಡಿಗಳು: ಸಾರಿಗೆ ನೌಕರರ ಮುಷ್ಕರಕ್ಕೆ ಚಾಲಕ ಬಲಿ
ಕೋವಿಡ್ ಸೋಂಕಿನಿಂದ ಒಂದೇ ಆಸ್ಪತ್ರೆಯಲ್ಲಿ ಮೂರು ಜನ ಮೃತಪಟ್ಟಿರುವ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಯ ಸಿಬ್ಬಂದಿ ಒಂದೇ ಆ್ಯಂಬುಲೆನ್ಸ್ ನಲ್ಲಿ ಮೃತದೇಹ ಸಾಗಿಸಿದ್ದಾಾರೆ ಎಂದು ಹೆಸರು ಹೇಳಲು ಇಚ್ಛಿಸದ ಕೆಂಗೇರಿ ವಿದ್ಯುತ್ ಚಿತಾಗಾರದ ಸಿಬ್ಬಂದಿಯೊಬ್ಬರು ತಿಳಿಸಿದ್ದಾಾರೆ.