ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಮೂರು ಕೋವಿಡ್ ಕೇರ್ ಕೇಂದ್ರಗಳು ಎರಡು ದಿನದಲ್ಲಿ ಕಾರ್ಯಾರಂಭ


Team Udayavani, May 9, 2021, 3:40 PM IST

suresh kumar

ಬೆಂಗಳೂರು: ಬೊಮ್ಮನಹಳ್ಳಿ ವಲಯಕ್ಕೆ ಸೇರಿದ ಉತ್ತರಹಳ್ಳಿ, ಜಿಗಣಿ ಹಾಗೂ ಅಂಜನಾಪುರ ವಾರ್ಡ್ ಗಳಲ್ಲಿ ಒಟ್ಟಾರೆ 150 ಹಾಸಿಗೆಗಳ ಕೋವಿಡ್ ಕೇರ್ ಕೇಂದ್ರಗಳನ್ನು ಮುಂದಿನ ಎರಡು ದಿ‌ನಗಳಲ್ಲಿ‌ ಪ್ರಾರಂಭಿಸಲಾಗುವುದು ಎಂದು ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.

ಜಿಗಣಿಯ ಸಮಾಜ ಕಲ್ಯಾಣ ಇಲಾಖೆಗೆ ಸೇರಿದ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ವಿಜಯಶ್ರೀ ಖಾಸಗಿ ಆಸ್ಪತ್ರೆಯ ಸಹಯೋಗದಲ್ಲಿ ನಿರ್ಮಿಸಲಾಗುತ್ತಿರುವ ಕೋವಿಡ್ ಕೇಂದ್ರ‌ ಪೂರ್ವಸಿದ್ಧತೆಗಳನ್ನು ಪರಿಶೀಲಿಸಿ ಮಾತನಾಡಿದ ಸಚಿವರು, ಇಂದು ಉತ್ತರಹಳ್ಳಿ ವಾರ್ಡಿನ‌ ಬಿಬಿಎಂಪಿ ಪದವಿಪೂರ್ವ ಕಾಲೇಜು ಹಾಗೂ ಅಂಜನಾಪುರ ವಾರ್ಡಿನ‌ ಬಿಹೈಂಡ್ ವುಡ್ಸ್ ರೆಸಾರ್ಟಿನಲ್ಲಿ ಸಿದ್ಧಗೊಳಿಸುತ್ತಿರುವ ಕೋವಿಡ್ ಕೇಂದ್ರಗಳನ್ನೂ ಪರಿಶೀಲನೆ‌ ಮಾಡಿದ್ದೇನೆ. ಸೋಂಕಿತರ ಆರೈಕೆಗೆ ಅವಶ್ಯಕವಿರುವ ಮೂಲಸೌಕರ್ಯಗಳ ಕುರಿತಂತೆ ಕೆಲವು ಸಲಹೆ-ಸೂಚನೆಗಳನ್ನು ಸಹ ಅಧಿಕಾರಿಗಳಿಗೆ ನೀಡಿದ್ದೇನೆ.  ಈ ಮೂರೂ ಕಡೆ ಸುಸಜ್ಜಿತವಾದ ಕೋವಿಡ್ ಕೇರ್‌ ಸೆಂಟರ್ ಗಳು ಇನ್ನು ಎರಡು ದಿನಗಳಲ್ಲಿ ಆರಂಭಗೊಳ್ಳಲಿವೆ. ಒಟ್ಟಾರೆಯಾಗಿ ಇಪ್ಪತ್ತು ಆಕ್ಸಿಜನ್‌ ಪೂರಕ ಹಾಸಿಗೆಗಳನ್ನು ಸಿದ್ಧಪಡಿಸಲಾಗಿದ್ದು, ಈ ಭಾಗದ ಕೋವಿಡ್ ಸೋಂಕಿತ ನಾಗರಿಕರಿಗೆ ಈ ಕೇಂದ್ರಗಳು ಅತ್ಯುತ್ತಮ ಸೌಕರ್ಯಗಳನ್ನು ಕಲ್ಪಿಸಲಿವೆ ಎಂದರು.

ಶಾಸಕರ‌ ಸಹಕಾರ: ಬೆಂಗಳೂರು ದಕ್ಷಿಣ ಕ್ಷೇತ್ರದ ಶಾಸಕರಾದ ಕೃಷ್ಣಪ್ಪ ಅವರು ಈ ಕೋವಿಡ್ ಕೇಂದ್ರಗಳ ಸ್ಥಾಪನೆಗೆ ಅಪಾರವಾದ ಕೊಡುಗೆ ನೀಡಿದ್ದು, ತಮ್ಮ‌ ಸಮೀಪ ಸಹವರ್ತಿಗಳ ಸಹಕಾರದೊಂದಿಗೆ, ಅಂಜನಾಪುರದ ಬಿಹೈಂಡ್ ವುಡ್ ರೆಸಾರ್ಟ್ ನಲ್ಲಿ 50 ಹಾಸಿಗೆಗಳ ಆರೈಕೆ ಕೇಂದ್ರ ಸ್ಥಾಪನೆಗೆ ಸಹ ಸಹಕಾರ‌ ನೀಡಿದ್ದಾರೆ. ಜನಪ್ರತಿನಿಧಿಗಳ ಈ ರೀತಿಯ ಸಹಕಾರ‌ ಇಂದಿನ ಸಂದರ್ಭದಲ್ಲಿ ವಿಶ್ವಾಸವನ್ನು ತುಂಬುವಂತಹುದ್ದಾಗಿದೆ ಎಂದು ಸಚಿವ ಸುರೇಶ್ ಕುಮಾರ್ ಶ್ಲಾಘಿಸಿದರು.

ಇದನ್ನೂ ಓದಿ:ನೀವು ಉಳಿಯುತ್ತಿರೋ ಇಲ್ಲವೋ ನಾನಂತೂ ಉಳಿಯಬೇಕು: ಸಚಿವ ಉಮೇಶ್ ಕತ್ತಿ

ಸಚಿವರೊಂದಿಗೆ ಬೆಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಕೃಷ್ಣಪ್ಪ, ಬೊಮ್ಮನಹಳ್ಳಿ ನೋಡಲ್ ಅಧಿಕಾರಿಯಾದ ರಾಜೇಂದ್ರಕುಮಾರ ಕಠಾರಿಯ, ಬೊಮ್ಮನ ಹಳ್ಳಿ ವಲಯ ಜಂಟಿ ಆಯುಕ್ತರು ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

ಗೋ ಸಂರಕ್ಷಣೆ ಮಾಡಿದರೆ ನಾಡಿನ ಸಮಸ್ತ ಸಂಪತ್ತು ವೃದ್ಧಿ;ಪೇಜಾವರ ಶ್ರೀ ಅಭಿಮತ

ಗೋ ಸಂರಕ್ಷಣೆ ಮಾಡಿದರೆ ನಾಡಿನ ಸಮಸ್ತ ಸಂಪತ್ತು ವೃದ್ಧಿ; ಪೇಜಾವರ ಶ್ರೀ ಅಭಿಮತ

ಕುಡಿವ ನೀರಿಗೆ ಗಲ್ಲಿ ಗಲ್ಲಿ ಅಲೆಯುತ್ತಿರುವ ಗೊರಗುಂಟೆಪಾಳ್ಯ ಕೊಳೆಗೇರಿ  ನಿವಾಸಿಗಳು

ಕುಡಿವ ನೀರಿಗೆ ಗಲ್ಲಿ ಗಲ್ಲಿ ಅಲೆಯುತ್ತಿರುವ ಗೊರಗುಂಟೆಪಾಳ್ಯ ಕೊಳೆಗೇರಿ  ನಿವಾಸಿಗಳು

5

Water shortage: ಕಬ್ಬನ್‌ಪಾರ್ಕ್‌ನ ಬಾಲಭವನ ಬೋಟಿಂಗ್‌ಗೂ ನೀರಿನ ಬರ

Fraud: ನಕಲಿ ಪೇಮೆಂಟ್‌ ಆ್ಯಪ್‌ ಬಳಸಿ 2.29 ಲಕ್ಷ ಚಿನ್ನ ಖರೀದಿಸಿ ದೋಖಾ

Fraud: ನಕಲಿ ಪೇಮೆಂಟ್‌ ಆ್ಯಪ್‌ ಬಳಸಿ 2.29 ಲಕ್ಷ ಚಿನ್ನ ಖರೀದಿಸಿ ದೋಖಾ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.