ಇನ್ನೂ ಮೂರು ದಿನ ಮಳೆ
Team Udayavani, May 22, 2018, 12:09 PM IST
ಬೆಂಗಳೂರು: ನಗರದಾದ್ಯಂತ ಸೋಮವಾರ ಮತ್ತೆ ಮಳೆ ಅಬ್ಬರಿಸಿದ್ದು, ಇನ್ನೂ ಎರಡು-ಮೂರು ದಿನ ಮುಂದುವರಿಯುವ ಸಾಧ್ಯತೆ ಇದೆ.
ಸಂಜೆ 5ರ ಸುಮಾರಿಗೆ ಶುರುವಾದ ಮಳೆ ಅರ್ಧ ತಾಸು ಧಾರಾಕಾರವಾಗಿ ಸುರಿಯಿತು. ಇದರಿಂದ ನಗರದ ಪ್ರಮುಖ ರಸ್ತೆಗಳು, ಜಂಕ್ಷನ್ಗಳು, ಅಂಡರ್ಪಾಸ್ಗಳು ಜಲಾವೃತಗೊಂಡವು. ಪರಿಣಾಮ ವಾಹನಗಳ ಸುಗಮ ಸಂಚಾರಕ್ಕೆ ವ್ಯತ್ಯಯ ಉಂಟಾಯಿತು. ಕಚೇರಿಗಳಿಂದ ಮನೆಗೆ ಹಿಂತಿರುಗುವ ನೌಕರರಿಗೆ ಇದರ ಬಿಸಿ ತುಸು ಜೋರಾಗಿ ತಟ್ಟಿತು.
ನಗರದಲ್ಲಿ ಸೋಮವಾರ ಗರಿಷ್ಠ 33 ಮಿ.ಮೀ. ಮಳೆಯಾಗಿದೆ. ರಾಜರಾಜೇಶ್ವರಿನಗರದಲ್ಲಿ 26 ಮಿ.ಮೀ., ಬೊಮ್ಮನಹಳ್ಳಿ 23, ಬಸವನಗುಡಿ 17.5, ಕೆಂಗೇರಿ 15, ಕೆ.ಆರ್. ಪುರ 15.5, ಎಚ್. ಗೊಲ್ಲಹಳ್ಳಿ 12, ಮಂಡೂರು 11, ಶಿಗೇಹಳ್ಳಿ 18, ಕುಮಾರಸ್ವಾಮಿ ಲೇಔಟ್ 9, ಕೋರಮಂಗಲ 8, ಲಾಲ್ಬಾಗ್ 6, ನಾಗರಬಾವಿ 5 ಮಿ.ಮೀ. ಮಳೆಯಾಗಿದೆ.
ಉತ್ತರದಿಂದ ತಮಿಳುನಾಡು ಮಧ್ಯೆ “ಕಡಿಮೆ ಒತ್ತಡದ ತಗ್ಗು’ (ಟ್ರಫ್) ಉಂಟಾಗಿದ್ದು, ಇದು ರಾಜ್ಯದ ದಕ್ಷಿಣ ಒಳನಾಡಿನಲ್ಲೂ ಹಾದುಹೋಗಿದೆ. ಅದೇ ರೀತಿ, ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ ಕಂಡುಬಂದಿದೆ. ಆದರೆ ರಾಜ್ಯದ ಮೇಲೆ ಇದರ ಯಾವುದೇ ಪ್ರಭಾವ ಇರುವುದಿಲ್ಲ. ಮಲೆನಾಡು, ಕರಾವಳಿಯಲ್ಲಿ ಮಾತ್ರ ಇದು ತುಸು ಮಳೆ ಸುರಿಸಲಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (ಕೆಎಸ್ಎನ್ಡಿಎಂಸಿ) ತಿಳಿಸಿದೆ.
ಐದಾರು ಮರ ಧರೆಗೆ: ನಗರದಲ್ಲಿ ಸೋಮವಾರ ಸುರಿದ ಮಳೆಗೆ ಐದಾರು ಮರಗಳು ಧರೆಗುರುಳಿದ್ದು, ಅಂಡರ್ ಪಾಸ್ಗಳಲ್ಲಿ ಮಳೆನೀರು ನಿಂತ ಪರಿಣಾಮ ವಾಹನ ಸವಾರರು ತೊಂದರೆ ಅನುಭವಿಸುವಂತಾಯಿತು.
ಸೋಮವಾರ ಸಂಜೆ ಸುಮಾರಿಗೆ ಸುರಿದ ನಿರಂತರ ಮಳೆಗೆ ಜೆ.ಪಿ.ನಗರದ ಡಾಲರ್ ಕಾಲೋನಿ, ಅಮೊRà ಬಡಾವಣೆ, ಡಬಲ್ ರಸ್ತೆ ಸೇರಿದಂತೆ ಹಲವೆಡೆ ಬೃಹತ್ ಮರಗಳು ಧರೆಗುರುಳಿದ್ದು, ವೈಯಾಲಿಕಾಲವ್, ಮಲ್ಲೇಶ್ವರ, ಬಸವನಗುಡಿ ಸೇರಿದಂತೆ ಕೆಲವು ಕಡೆಗಳಲ್ಲಿ ಮರದ ಕೊಂಬೆಗಳು ಧರೆಗುರುಳಿವೆ.
ಇನ್ನು ಒಕಳಿಪುರ ಹಾಗೂ ಸ್ಯಾಂಕಿ ರಸ್ತೆ ಅಂಡರ್ ಪಾಸ್ಗಳಲ್ಲಿ ಮಳೆನೀರು ನಿಂತ ಪರಿಣಾಮ ವಾಹನ ಸವಾರರು ಅಂಡರ್ಪಾಸ್ಗಳಲ್ಲಿ ಸಂಚಾರಿಸಲಾಗದೆ ತೊಂದರೆ ಅನುಭವಿಸಿದರು. ಈ ಕುರಿತು ಪಾಲಿಕೆಗೆ ದೂರು ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ
MUST WATCH
ಹೊಸ ಸೇರ್ಪಡೆ
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ