ರಸ್ತೆ ಅಪಘಾತದಲ್ಲಿ ಮೂವರು ಸಾವು


Team Udayavani, Nov 2, 2018, 11:26 AM IST

raste.jpg

ಬೆಂಗಳೂರು: ನಗರದ ಮೂರು ಸಂಚಾರ ಠಾಣಾ ವ್ಯಾಪ್ತಿಯಲ್ಲಿ ಗುರುವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ವಿದ್ಯಾರ್ಥಿ, ಟೆಕ್ಕಿ ಸೇರಿ ಮೂವರು ಮೃತಪಟ್ಟಿದ್ದಾರೆ. ತಟ್ಟೆ ಇಡ್ಲಿ ತಿನ್ನಲು ಬಿಡದಿಗೆ ಬೈಕ್‌ನಲ್ಲಿ ಹೋಗುತ್ತಿದ್ದ ವಿದ್ಯಾರ್ಥಿಗೆ ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕಿ ಹೊಡೆದ ಪರಿಣಾಮ ಆತ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮೈಸೂರು ರಸ್ತೆ ಸಮೀಪದ “ನೈಸ್‌’ ಜಂಕ್ಷನ್‌ನಲ್ಲಿ ಗುರುವಾರ ಬೆಳಗ್ಗೆ ನಡೆದಿದೆ.

ವಿಜಯನಗರ ನಿವಾಸಿ ಪೂರ್ಣಚಂದ್ರ (18) ಮೃತ ವಿದ್ಯಾರ್ಥಿ. ಘಟನೆ ಸಂಬಂಧ ಕೆಎಸ್‌ಆರ್‌ಟಿಸಿ ಬಸ್‌ ಚಾಲಕ ಚಿಕ್ಕಪ್ಪ ಎಂಬಾತನನ್ನು ಬಂಧಿಸಲಾಗಿದೆ. ವಿಜಯನಗರದ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿರುವ ಪೂರ್ಣಚಂದ್ರ ಮತ್ತು ಇತರೆ ಮೂವರು ಸ್ನೇಹಿತರೊಂದಿಗೆ ಎರಡು ಬೈಕ್‌ಗಳಲ್ಲಿ ಗುರುವಾರ ಬೆಳಗ್ಗೆ 8 ಗಂಟೆ ಸುಮಾರಿಗೆ ತಟ್ಟೆ ಇಡ್ಲಿ ತಿನ್ನಲು ಬಿಡದಿಗೆ ಹೋಗುತ್ತಿದ್ದರು.

ಇದೇ ವೇಳೆ ವೇಗವಾಗಿ ಬಂದ ಮೈಸೂರಿಗೆ ಹೊರಟಿದ್ದ ಕೆಎಸ್‌ಆರ್‌ಟಿಸಿ ಬಸ್‌, ಬೈಕ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದ್ದು, ಪೂರ್ಣಚಂದ್ರ ಕೆಳಗೆ ಬಿದ್ದಿದ್ದಾನೆ. ಬಳಿಕ ಬಸ್‌ ಈತನ ಎರಡು ಕಾಲುಗಳ ಮೇಲೆ ಹರಿದಿದ್ದು, ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಸ್ಥಳಕ್ಕೆ ಧಾವಿಸಿದ ಕೆಂಗೇರಿ ಸಂಚಾರ ಪೊಲೀಸರು ಆರೋಪಿ ಬಸ್‌ ಚಾಲಕ ಚಿಕ್ಕಪ್ಪನನ್ನು ಬಂಧಿಸಿದ್ದಾರೆ. ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆರ್‌.ಆರ್‌.ನಗರ ಆಸ್ಪತ್ರೆಗೆ ರವಾನಿಸಿದ್ದಾರೆ. ಪ್ರಕರಣ ಕೆಂಗೇರಿ ಸಂಚಾರ ಠಾಣೆಯಲ್ಲಿ ದಾಖಲಾಗಿದೆ.

ಟೆಕ್ಕಿ ಸಾವು: ಬೈಕ್‌ನಲ್ಲಿ ವೇಗವಾಗಿ ಹೋಗುವಾಗ ನಿಯಂತ್ರಣ ತಪ್ಪಿ ಬಟ್ಟೆ ಅಂಗಡಿ ಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ಟೆಕ್ಕಿಯೊಬ್ಬ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕೆ.ಆರ್‌.ಪುರ ಸಂಚಾರ ಠಾಣಾ ವ್ಯಾಪ್ತಿಯಲ್ಲಿ ಗುರುವಾರ ಮುಂಜಾನೆ ನಡೆದಿದೆ.

ಆಂಧ್ರಪ್ರದೇಶ ಮೂಲದ ಸೂರ್ಯತೇಜು (27) ಮೃತ ಟೆಕ್ಕಿ. ಗುರುವಾರ ಮುಂಜಾನೆ 4 ಗಂಟೆ ಸುಮಾರಿಗೆ ಕೆಲಸ ಮುಗಿಸಿಕೊಂಡು ಕಲ್ಕರೆಯಿಂದ ರಾಮಮೂರ್ತಿನಗರಕ್ಕೆ ಹೋಗುವಾಗ ದುರ್ಘ‌ಟನೆ ಸಂಭವಿಸಿದೆ ಎಂದು ಸಂಚಾರ ಪೊಲೀಸರು ಹೇಳಿದರು.

ಟೆಕ್ಕಿ ಸೂರ್ಯತೇಜು ರಾಮಮೂರ್ತಿನಗರದ ಬಾಡಿಗೆ ಮನೆಯೊಂದರಲ್ಲಿ ಸೇಹಿತರ ಜತೆ ವಾಸವಾಗಿದ್ದು, ಐಟಿಪಿಎಲ್‌ ಕಂಪನಿಯಲ್ಲಿ ಸಾಫ್ಟ್ವೇರ್‌ ಎಂಜಿನಿಯರ್‌ ಆಗಿ ಕೆಲಸ ಮಾಡುತ್ತಿದ್ದ. ಗುರುವಾರ ನಸುಕಿನ 2 ಗಂಟೆ ಸುಮಾರಿಗೆ ಕೆಲಸ ಮುಗಿದ ಬಳಿಕ ಕಲ್ಕರೆಯಲ್ಲಿರುವ ಸ್ನೇಹಿತನನ್ನು ಬಿಟ್ಟು ವಾಪಸ್‌ ರಾಮಮೂರ್ತಿನಗರ ಕಡೆಗೆ ವೇಗವಾಗಿ ಬಂದಿದ್ದಾನೆ.

ಈ ವೇಳೆ ರಾಮಮೂರ್ತಿನಗರ ಮುಖ್ಯರಸ್ತೆಯ ಆಲದಮರದ ಬಸ್‌ ನಿಲ್ದಾಣ ಸಮೀಪ ನಿಯಂತ್ರಣ ತಪ್ಪಿ ಬಟ್ಟೆ ಅಂಗಡಿಯ ಗೋಡೆಗೆ ಡಿಕ್ಕಿ ಹೊಡೆದಿದ್ದಾನೆ. ಪರಿಣಾಮ ತಲೆಗೆ ಗಂಭೀರ ಪೆಟ್ಟು ಬಿದ್ದು ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಘಟನೆ ವೇಳೆ ಸೂರ್ಯತೇಜು ಹೆಲ್ಮೆಟ್‌ ಧರಿಸಿರಲಿಲ್ಲ. ಹೀಗಾಗಿ ದುರ್ಘ‌ಟನೆ ಸಂಭವಿಸಿದೆ ಎಂದು ಸಂಚಾರ ಪೊಲೀಸರು ಹೇಳಿದರು. ಪ್ರಕರಣ ಕೆ.ಆರ್‌.ಪುರ ಸಂಚಾರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಅಪರಿಚಿತ ವ್ಯಕ್ತಿ ಸಾವು: ಕಾರು ಡಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ಪಾದಚಾರಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹಲಸೂರು ಸಂಚಾರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ. ಹಲಸೂರಿನ 100 ಅಡಿ ರಸ್ತೆಯ ದೂಪನಹಳ್ಳಿ ಜಂಕ್ಷನ್‌ ಬಳಿ ಅಪರಿಚಿತ ವ್ಯಕ್ತಿ ರಸ್ತೆ ದಾಟುತ್ತಿದ್ದರು.

ಈ ವೇಳೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದ್ದು, ತೀವ್ರ ರಕ್ತಸ್ರಾವದಿಂದ ಆ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಮೃತ ವ್ಯಕ್ತಿಯ ಹೆಸರು ವಿಳಾಸ ಪತ್ತೆಯಾಗಿಲ್ಲ. 45-50 ವರ್ಷ ವಯಸ್ಸಿನವರಾಗಿದ್ದು, ಮೃತದೇಹವನ್ನು ಬೌರಿಂಗ್‌ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಸಂಚಾರ ಪೊಲೀಸರು ಹೇಳಿದರು. ಹಲಸೂರು ಸಂಚಾರ ಠಾಣೆಯಲ್ಲಿ  ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಕೊಲೆಗೈದ

Crime: ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಕೊಲೆಗೈದ

Bengaluru: ಖೋಖೋ ತೀರ್ಪು ವಿವಾದ: ಫೀಲ್ಡ್‌ನಲ್ಲೇ ಚಾಕು, ಡ್ಯಾಗರ್‌ ಹಿಡಿದು ಹೊಡೆದಾಟ!

Bengaluru: ಖೋಖೋ ತೀರ್ಪು ವಿವಾದ: ಫೀಲ್ಡ್‌ನಲ್ಲೇ ಚಾಕು, ಡ್ಯಾಗರ್‌ ಹಿಡಿದು ಹೊಡೆದಾಟ!

ಸ್ನೇಹಿತನ ಪತ್ನಿಯ ಕ್ಯಾನ್ಸರ್‌ ಚಿಕಿತ್ಸೆಗಾಗಿ ಬೈಕ್‌ ಕಳ್ಳತನಕ್ಕಿಳಿದ ಕುಚುಕು ಗೆಳೆಯ! 

ಸ್ನೇಹಿತನ ಪತ್ನಿಯ ಕ್ಯಾನ್ಸರ್‌ ಚಿಕಿತ್ಸೆಗಾಗಿ ಬೈಕ್‌ ಕಳ್ಳತನಕ್ಕಿಳಿದ ಕುಚುಕು ಗೆಳೆಯ! 

Shivakumar

Bengaluru: ಅಧಿವೇಶನದ ಬಳಿಕ ಕಾವೇರಿ ನೀರಿನ ದರ ಪರಿಷ್ಕರಣೆ: ಡಿ.ಕೆ.ಶಿವಕುಮಾರ್‌

Bengaluru: ಕೋರ್ಟ್‌ನಲ್ಲೇ ವಕೀಲೆಗೆ ಚಾಕು ಇರಿದ ಆರೋಪಿ ಸೆರೆ

Bengaluru: ಕೋರ್ಟ್‌ನಲ್ಲೇ ವಕೀಲೆಗೆ ಚಾಕು ಇರಿದ ಆರೋಪಿ ಸೆರೆ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.