ಪ್ರತ್ಯೇಕ ಅಪಘಾತಗಳಲ್ಲಿ ಮೂವರ ಸಾವು
Team Udayavani, Jan 22, 2019, 6:40 AM IST
ಬೆಂಗಳೂರು: ನಗರದಲ್ಲಿ ಕಳೆದ 24 ಗಂಟೆಗಳಲ್ಲಿ ಸಂಭವಿಸಿದ ಮೂರು ಪ್ರತ್ಯೇಕ ಅಪಘಾತಗಳಲ್ಲಿ ಮೂವರು ಮೃತಪಟ್ಟಿದ್ದಾರೆ. ಸರಕು ಸಾಗಣೆ ವಾಹನಕ್ಕೆ ಬೈಕ್ ಡಿಕ್ಕಿಯಾಗಿ ಯುವಕ ಮೃತಪಟ್ಟ ಘಟನೆ ಕೆ.ಆರ್.ಪುರದ ಬಟ್ಟರಹಳ್ಳಿ ಬಳಿ ನಡೆದಿದೆ. ಪಶ್ಚಿಮ ಬಂಗಾಳದ ಅತುಲ್ ಬರ್ಮನ್ ಮೃತನು.
ಗಾರೆ ಕೆಲಸ ಮಾಡುತ್ತಿದ್ದ ತುಲ್, ಭಾನುವಾರ ರಾತ್ರಿ 8.30ರ ವೇಳೆಗೆ ಕೆಲಸ ಮುಗಿಸಿಕೊಂಡು ಬೈಕ್ನಲ್ಲಿ ಮನೆಗೆ ತೆರಳುವಾಗ ಅಪಘಾತ ಸಂಭವಿಸಿದೆ. ತೀವ್ರವಾಗಿ ಗಾಯಗೊಂಡಿದ್ದ ಆತನನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸಲಿಲ್ಲ. ಪ್ರಕರಣ ದಾಖಲಿಸಿಕೊಂಡ ಕೆ.ಆರ್.ಪುರ ಪೊಲೀಸರು, ಸರಕು ಸಾಗಣೆ ವಾಹನ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.
ಬೈಕ್ ಸವಾರ ಸಾವು: ಹಿಂಬದಿಯಿಂದ ಬಂದ ವಾಹನ ಡಿಕ್ಕಿ ಹೊಡೆದು ಬೈಕ್ ಸವಾರ ಮೃತಪಟ್ಟ ಘಟನೆ ವೈಟ್ಫೀಲ್ಡ್ ಬಿಗ್ಬಜಾರ್ ಬಳಿ ನಡೆದಿದೆ. ತಮಿಳುನಾಡಿನ ಪರಮೇಶ್ವರನ್ ಮೃತನು. ಖಾಸಗಿ ಗ್ರಾಫಿಕ್ ಕಂಪನಿ ಉದ್ಯೋಗಿ ಪರಮೇಶ್ವರನ್, ಭಾನುವಾರ ಮಧ್ಯಾಹ್ನ ತನ್ನ ಬುಲೆಟ್ ಬೈಕ್ನಲ್ಲಿ ಮನೆಗೆ ಹೋಗುವಾಗ ಅವಘಡ ಸಂಭವಿಸಿದ್ದು, ವೈಟ್ಫೀಲ್ಡ್ನ ಸಂಚಾರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕಾರ್ಮಿಕನ ಮೇಲೆ ಹರಿದ ಲಾರಿ: ರಸ್ತೆ ದಾಟುತ್ತಿದ್ದ ಕೂಲಿ ಕಾರ್ಮಿಕನ ಮೇಲೆ ಸರಕು ಸಾಗಣೆ ಲಾರಿ ಹರಿದು, ಚಿಕಿತ್ಸೆ ಫಲಿಸದೆ ಕಾರ್ಮಿಕ ಮೃತಪಟ್ಟ ಘಟನೆ ದೇವನಹಳ್ಳಿ ಡಾಬಾ ಗೇಟ್ ಬಳಿ ನಡೆದಿದೆ. ಬಿಹಾರ ಮೂಲದ ನಿರಂಜನ್ (50) ಮೃತರು. ಡಾಬಾ ಗೇಟ್ನ ನಿರ್ಮಾಣ ಹಂತದ ಕಟ್ಟಡದಲ್ಲಿ ಕಾರ್ಮಿಕನಾಗಿದ್ದ ನಿರಂಜನ್, ಭಾನುವಾರ ರಾತ್ರಿ 8 ಗಂಟೆಗೆ ರಸ್ತೆ ದಾಟುವಾಗ ಘಟನೆ ನಡೆದಿದೆ. ದೇವನಹಳ್ಳಿ ಸಂಚಾರ ಪೊಲೀಸರು ಲಾರಿ ಚಾಲಕನನ್ನು ಬಂಧಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ
ಚಾಕೋಲೆಟ್ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ
Bengaluru: ಚೆಕ್ ದುರ್ಬಳಕೆ; ಕ್ಯಾಷಿಯರ್, ಎಲ್ಐಸಿ ಏಜೆಂಟ್ಗೆ ಜೈಲು
MUST WATCH
ಹೊಸ ಸೇರ್ಪಡೆ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು