ಮುಂಗಾರು ಪೂರ್ವ ಮಳೆಯ ಆರ್ಭಟ: ಸಿಡಿಲಿಗೆ ಮೂವರು ಬಲಿ
Team Udayavani, May 5, 2017, 11:01 AM IST
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆಯ ಆರ್ಭಟ ಮುಂದುವರಿದಿದ್ದು, ಗುರುವಾರ ಸಿಡಿಲಿಗೆ ಮೂವರು ಬಲಿಯಾಗಿದ್ದಾರೆ.
ಧಾರವಾಡ ತಾಲೂಕಿನ ಯಾದವಾಡ ಗ್ರಾಮ ಸರಹದ್ದಿನ ಹೊಲದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಸಿಡಿಲು ಬಡಿದು ಬೈಲಹೊಂಗಲ ತಾಲೂಕಿನ ದೊಡವಾಡ ಗ್ರಾಮದ ನೇಮಿನಾಥ ಬಾಳೇಶ ಅಲಸಂದಿ (23) ಎಂಬುವರು ಅಸುನೀಗಿದ್ದಾರೆ. ಇವರ ಜೊತೆಗಿದ್ದ ಅದೇ ಗ್ರಾಮದ ಪ್ರವೀಣ ತುಪ್ಪದ (23) ಎಂಬುವರು ಗಾಯಗೊಂಡಿದ್ದಾರೆ. ಇದೇ ವೇಳೆ, ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಓಬಳಾಪುರ ಗ್ರಾಮದ ಹೊಲದಲ್ಲಿ ಕುರಿ ಮೇಯಿಸುತ್ತಿದ್ದ ವೇಳೆ ಸಿಡಿಲು ಬಡಿದು ಪ್ರಕಾಶ ಸಿದಟಛಿಪ್ಪ ಕರಡಿಗುಡ್ಡ (32) ಹಾಗೂ ಭೀರಪ್ಪ ಭರಮಪ್ಪ ಅರಿಶಿನಗೋಡಿ (17) ಎಂಬುವರು ಅಸುನೀಗಿದ್ದಾರೆ.
6 ಕುರಿಗಳು ಸ್ಥಳದಲ್ಲೇ ಸಾವನ್ನಪ್ಪಿವೆ. ಈ ಮಧ್ಯೆ, ಬಾಳೆಹೊನ್ನೂರು ಮತ್ತು ಹಾಸನದಲ್ಲಿ ರಾಜ್ಯದಲ್ಲಿಯೇ ಅಧಿಕ, 4 ಸೆಂ.ಮೀ.ಗಳಷ್ಟು ಮಳೆ ಸುರಿದರೆ, ಕಲಬುರಗಿಯಲ್ಲಿ ರಾಜ್ಯದಲ್ಲಿಯೇ ಗರಿಷ್ಠ, 40.6ಡಿ.ಸೆ.ತಾಪಮಾನ ದಾಖಲಾಯಿತು. ರಾಜ್ಯದ ಕೆಲವೆಡೆ ಶುಕ್ರವಾರವೂ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ