ಪಕ್ಷ ಸಂಘಟನೆ ಮಾಡಿದ್ರೆ ಟಿಕೆಟ್‌: ಎಚ್‌.ಡಿ.ದೇವೇಗೌಡ


Team Udayavani, Oct 12, 2017, 6:20 AM IST

HD-Devegowda–800.jpg

ಬೆಂಗಳೂರು:”ಟಿಕೆಟ್‌ಗಾಗಿ ನಾಯಕರ ಹಿಂದೆ-ಮುಂದೆ ಸುತ್ತಾಡೋದು ಬೇಡ. ಪಕ್ಷದ ಧ್ವಜ ಹಿಡಿದು ಸಂಘಟನೆ ಮಾಡಿ. ಕಾರ್ಯಕ್ರಮಗಳಲ್ಲಿ ವೇದಿಕೆ ಮೇಲೆ ಕಾಣಿಸಿಕೊಂಡರೆ ನಾಯಕರಾಗುವುದಿಲ್ಲ. ಜನರ ವಿಶ್ವಾಸ ಗಳಿಸಿದರೆ ಮಾತ್ರ ನಾಯಕರಾಗುತ್ತಾರೆ’ ಇದು ಮಾಜಿ ಪ್ರಧಾನಿ ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ.ದೇವೇಗೌಡರು ಟಿಕೆಟ್‌ ಆಕಾಂಕ್ಷಿಗಳಿಗೆ ಹೇಳಿದ ಕಿವಿಮಾತು.

ಪಕ್ಷದ ಕಚೇರಿಯಲ್ಲಿ ವಿಧಾನಸಭೆ ಚುನಾವಣೆಯ ಆಕಾಂಕ್ಷಿಗಳ ಸಭೆ ನಡೆಸಿದ ಅವರು,ಟಿಕೆಟ್‌ಗಾಗಿ ಲಾಬಿ-ಗೀಬಿ ಮಾಡುವ ಅಗತ್ಯವಿಲ್ಲ. ನಾನು ಕುಮಾರಸ್ವಾಮಿ ಭಾಷಣ ಮಾಡುವಾಗ ಟಿವಿಯಲ್ಲಿ ಮುಖ ತೋರಿಸಲು ನಮ್ಮ ಹಿಂದೆ ಬಂದು ನಿಂತುಕೊಳ್ಳುವುದಲ್ಲ.  ವೇದಿಕೆಗೆ ಸೀಮಿತರಾಗಿರುವ ಗಿರಾಕಿಗಳನ್ನು  ಈ ಬಾರಿ ಹತ್ತಿರಕ್ಕೂ ಸೇರಿಸುವುದಿಲ್ಲ. ಪಕ್ಷ ಕಟ್ಟುವವರಿಗೆ ಮಾತ್ರ ಟಿಕೆಟ್‌. ಪ್ರತಿ ಜಿಲ್ಲೆ ಮತ್ತು ಕ್ಷೇತ್ರಾವಾರ ಮಾಹಿತಿ ಪಡೆಯುತ್ತೇವೆ. ಯಾರು ಪಕ್ಷಕ್ಕೆ ಕೆಲಸ ಮಾಡುತ್ತಿದ್ದಾರೋ ಅವರಿಗೆ ಟಿಕೆಟ್‌ ಎಂದು ತಿಳಿಸಿದರು.

ರಾಜ್ಯ ವಿಧಾನಸಭೆಗೆ ನಿಗದಿತ ಸಮಯಕ್ಕಿಂತ ಎರಡು -ಮೂರು ತಿಂಗಳ ಮುಂಚೆಯೇ ಚುನಾವಣೆ ಎದುರಾಗುವ ಸಾಧ್ಯತೆಯಿದ್ದು ಕಾರ್ಯಕರ್ತರು, ಮುಖಂಡರು ಸಜ್ಜಾಗಬೇಕು .  ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾರ್ಚ್‌ನಲ್ಲಿ ಇರುವುದರಿಂದ ಜನವರಿಯಲ್ಲಿ ಚುನಾವಣೆ ನಡೆದರೂ ಅಚ್ಚರಿಯಿಲ್ಲ. ಯಾವಾಗ ಚುನಾವಣೆ ನಡೆದರೂ ಎದುರಿಸಲು ಸನ್ನದ್ದರಾಗಬೇಕು ಎಂದು ಹೇಳಿದರು.

ಮುಂದಿನ ಒಂದು ತಿಂಗಳ ಕಾಲ ಮನೆ ಮನೆಗೆ ಕುಮಾರಣ್ಣ ಅಭಿಯಾನ ಪ್ರತಿಯೊಬ್ಬರೂ ಯಶಸ್ವಿ ಮಾಡಬೇಕು. ಆಕಾಂಕ್ಷಿಗಳು ಗ್ರಾಮಗಳತ್ತ ಹೋಗಬೇಕು. ಟಿಕೆಟ್‌ ಜಪ ಬಿಟ್ಟು ಕೆಲಸ ಮಾಡಿ. ನೀವು ಮಾಡಿರುವ ಕೆಲಸ ಚೆನ್ನಾಗಿದ್ದರೆ ನಾವೇ ಕರೆದು ಟಿಕೆಟ್‌ ಕೊಡ್ತೇವೆ ಎಂದರು.

ನವೆಂಬರ್‌ 2 ರಂದು ಪ್ರಧಾನಿ ನರೇಂದ್ರಮೋದಿ ರಾಜ್ಯಕ್ಕೆ ಆಗಮಿಸಲಿದ್ದು ದ್ವಿಚಕ್ರ ವಾಹನ ಮೂಲಕ ನವಭಾರತ ಕಾರ್ಯಕ್ರಮಕ್ಕೆ ಚಾಲನೆ ನೀಡಲು ಮುಂದಾಗಿದ್ದಾರೆ. ಇಲ್ಲಿ ಸಿದ್ದರಾಮಯ್ಯ ಮನ್‌ಕಿಬಾತ್‌ಗೆ ಸರಿ ಸಮನಾಗಿ ಕಾಮ್‌ಕಿ ಬಾರ್‌  ಎಂದಿದ್ದಾರೆ. ನಾವು ಎರಡೂ ಪಕ್ಷಗಳಷ್ಟು ಆರ್ಥಿಕವಾಗಿ ಬಲಶಾಲಿಗಳಲ್ಲ, ಸ್ವಂತ ಪರಿಶ್ರಮದಿಂದ ಗೆಲ್ಲಬೇಕು. ನಮ್ಮ ಕಾರ್ಯಕ್ರಮಗಳೇ ನಮ್ಮ ಜೀವಾಳ ಎಂದು ತಿಳಿಸಿದರು.

ಶಸ್ತ್ರ ಚಿಕಿತ್ಸೆಗೊಳಗಾಗಿ ವಿಶ್ರಾಂತಿಯಲ್ಲಿರುವ ಎಚ್‌.ಡಿ.ಕುಮಾರಸ್ವಾಮಿ ನವೆಂಬರ್‌ 1 ರಿಂದ ರಾಜ್ಯ ಪ್ರವಾಸ ಮಾಡಲಿದ್ದಾರೆ. ಯಾರ ಹಂಗೂ ಇಲ್ಲದೆ ಸ್ವಂತ ಶಕ್ತಿಯ ಮೇಲೆ ಸರ್ಕಾರ  ತರುವುದು ಅವರ ಕನಸು. ಅದು ಸಾಕಾರವಾಗಲು ನಿಮ್ಮೆಲ್ಲರ ಶ್ರಮ, ತ್ಯಾಗ, ಪರಿಶ್ರಮ ಅಗತ್ಯ ಎಂದು ಹೇಳಿದರು.

ಟಿಕೆಟ್‌ಗಾಗಿ ಹೊಡೆದಾಡುವುದು, ಬಡಿದಾಡುವುದು ಬೇಡ. ಸರ್ಕಾರ ತರುವುದು ನಮ್ಮ ಗುರಿಯಾಗಬೇಕು. ಒಬ್ಬರೇ ಆಕಾಂಕ್ಷಿ ಇರುವ ಕಡೆ ಸಮಸ್ಯೆಯಿಲ್ಲ. ಇಬ್ಬರು ಮೂವರು ಇರುವ ಕಡೆ ಸ್ವಲ್ಪ ಹೊಂದಾಣಿಕೆ ಅಗತ್ಯ. ಪಕ್ಷದ ಹಿತದೃಷ್ಟಿಯಿಂದ ನೀವೇ ಒಮ್ಮತದ ಆಯ್ಕೆ ಮಾಡಿಕೊಂಡರೂ ಸರಿಯೇ. ಇಲ್ಲವೇ ಪಕ್ಷದ ತೀರ್ಮಾನಕ್ಕೆ ಎಲ್ಲರೂ ಬದ್ಧರಾಗಿ ಎಂದು ತಾಕೀತು ಮಾಡಿದರು.

ಇದೇ ಸಂದರ್ಭದಲ್ಲಿ ಜೆಡಿಎಸ್‌ ಸರ್ಕಾರದ ಸಾಧನೆಗಳು, ಎಚ್‌.ಡಿ.ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗಿ ರೂಪಿಸಿದ ಯೋಜನೆಗಳ ಕಿರುಹೊತ್ತಿಗೆ” ಮನೆ ಮನೆಗೆ ಕುಮಾರಣ್ಣ’ ಬಿಡುಗಡೆ ಮಾಡಲಾಯಿತು.

ಕುಮಾರಣ್ಣ ನಿಮ್ಮ ಅಪ್ಪನನ್ನು ಬಿಟ್ಟು ಬಾ, ಮತ್ತೆ ನಾವು ನಿಮ್ಮನ್ನು ಮುಖ್ಯಮಂತ್ರಿ ಮಾಡ್ತೇವೆ ಎಂದವರೆಲ್ಲಾ ಈಗ ಪಕ್ಷ ಬಿಟ್ಟು ಹೋಗಿದ್ದಾರೆ. ಅಂದು ಕುಮಾರಸ್ವಾಮಿಯನ್ನು ಸಿಎಂ ಮಾಡ್ತೀವಿ ಎಂದವರು  ಈಗ ಪಂತಾಹ್ವಾನ ನೀಡುತ್ತಿದ್ದಾರೆ. ರಾಮನಗರದಲ್ಲಿ ಗೆದ್ದು ತೋರಿಸಲು ಸಾಕು ಎನ್ನುತ್ತಿದ್ದಾರೆ. ರಾಜ್ಯದ ಜನ ನಮ್ಮೊಂದಿಗಿದ್ದಾರೆ. ನೂರಕ್ಕೆ ನೂರರಷ್ಟು ಜೆಡಿಎಸ್‌ ಅಧಿಕಾರಕ್ಕೆ ಬರಲಿದೆ.
– ಎಚ್‌.ಡಿ.ದೇವೇಗೌಡ, ಮಾಜಿ ಪ್ರಧಾನಿ

ಟಾಪ್ ನ್ಯೂಸ್

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Election Commission: ಪ್ರಿಯಾಂಕ್‌ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು

Election Commission: ಪ್ರಿಯಾಂಕ್‌ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು

Congress party: ಮಾಲೀಕಯ್ಯ ಗುತ್ತೇದಾರ್‌ ಇಂದು ಕಾಂಗ್ರೆಸ್‌ ಸೇರ್ಪಡೆ

Congress party: ಮಾಲೀಕಯ್ಯ ಗುತ್ತೇದಾರ್‌ ಇಂದು ಕಾಂಗ್ರೆಸ್‌ ಸೇರ್ಪಡೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.