50 ಕ್ಷೇತ್ರಗಳಲ್ಲಿ ಲಿಂಗಾಯತರಿಗೆ ಟಿಕೆಟ್
Team Udayavani, Apr 16, 2018, 7:10 AM IST
ಬೆಂಗಳೂರು: ಪ್ರತ್ಯೇಕ ಧರ್ಮದ ಹೋರಾಟಕ್ಕೆ ಪರೋಕ್ಷ ಬೆಂಬಲ ನೀಡಿದ್ದ ಸಿಎಂ ಸಿದ್ದರಾಮಯ್ಯ ಟಿಕೆಟ್ ಹಂಚಿಕೆಯಲ್ಲಿಯೂ ಲಿಂಗಾಯತ ನಾಯಕರಿಗೆ ನಿರೀಕ್ಷಿಸಿದಷ್ಟು ಟಿಕೆಟ್ ನೀಡುವ ಮೂಲಕ ಸಮಾಧಾನ ಪಡಿಸುವ ಪ್ರಯತ್ನ ಮಾಡಿದ್ದಾರೆ. ಉತ್ತರ ಕರ್ನಾಟಕ ಭಾಗದಲ್ಲಿ ಹೆಚ್ಚಿನ ಸ್ಥಾನಗಳಲ್ಲಿ ಲಿಂಗಾಯತ ಸಮುದಾಯದವರಿಗೆ ಟಿಕೆಟ್ ನೀಡಲಾಗಿದೆ.
2013ರ ಚುನಾವಣೆಯಲ್ಲಿ 44 ಕ್ಷೇತ್ರಗಳಲ್ಲಿ ಟಿಕೆಟ್ ನೀಡಲಾಗಿತ್ತು. ಈ ಬಾರಿಯೂ ಅಷ್ಟೇ ಸಂಖ್ಯೆಯ ಲಿಂಗಾಯತ ಸಮುದಾಯದವರಿಗೆ ಟಿಕೆಟ್ ನೀಡಿದ್ದು, ಲಿಂಗಾಯತ ರೆಡ್ಡಿ ಸಮುದಾಯದವರು ಸೇರಿ ಸುಮಾರು 50 ಕ್ಷೇತ್ರಗಳಲ್ಲಿ ಟಿಕೆಟ್ ನೀಡಲಾಗಿದೆ.
ಹಳೇ ಮೈಸೂರು ಭಾಗದಲ್ಲಿ ಕನಿಷ್ಠ ಹತ್ತು ಕ್ಷೇತ್ರದಲ್ಲಿ ಟಿಕೆಟ್ ನೀಡುವಂತೆ ಲಿಂಗಾಯತ ಮುಖಂಡರು ಮನವಿ ಮಾಡಿದ್ದರು. ತಿಪಟೂರಿನಲ್ಲಿ ಬಿ.ನಂಜಾಮರಿ, ಮಡಿಕೇರಿಯಲ್ಲಿ ಎಚ್.ಎಸ್.ಚಂದ್ರಮೌಳಿ ಹಾಗೂ ಗುಂಡ್ಲುಪೇಟೆ ಕ್ಷೇತ್ರದಲ್ಲಿ ಗೀತಾ ಮಹದೇವ ಪ್ರಸಾದ್ಗೆ ಟಿಕೆಟ್ ನೀಡಲಾಗಿದೆ.
ಆದರೆ, ಬೆಂಗಳೂರಿನಲ್ಲಿ ನಾಲ್ಕು ಕ್ಷೇತ್ರಗಳಲ್ಲಿ ಲಿಂಗಾಯತರಿಗೆ ಟಿಕೆಟ್ ನೀಡುವಂತೆ ಕೋರಿದ್ದರಾದರೂ ಯಾವುದೇ ಕ್ಷೇತ್ರದಲ್ಲಿ
ಲಿಂಗಾಯತರಿಗೆ ಟಿಕೆಟ್ ನೀಡಲಾಗಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ