ಬಿಜೆಪಿ ಪಾದಯಾತ್ರೆಯಲ್ಲಿ ಟಿಕೆಟ್‌ ಆಕಾಂಕ್ಷಿಗಳ ಕಿತ್ತಾಟ


Team Udayavani, Mar 19, 2018, 11:42 AM IST

bjp-ana.jpg

ಬೆಂಗಳೂರು: ಬಿಟಿಎಂ ಲೇಔಟ್‌ ವಿಧಾನಸಭಾ ಕ್ಷೇತ್ರದಲ್ಲಿ ಶನಿವಾರ ಬಿಜೆಪಿ ನಡೆಸಿದ ಬೆಂಗಳೂರು ರಕ್ಷಿಸಿ ಪಾದಯಾತ್ರೆಯಲ್ಲಿ ಕೇಂದ್ರ ಸಚಿವ ಅನಂತಕುಮಾರ್‌ ಸಮ್ಮುಖದಲ್ಲೇ ಪಕ್ಷದ ಟಿಕೆಟ್‌ ಆಕಾಂಕ್ಷಿಗಳು ಜಟಾಪಟಿಗೆ ಇಳಿದ ಘಟನೆ ನಡೆಯಿತು.

ಕೋರಮಂಗಲ ಐದನೇ ಬ್ಲಾಕ್‌ನಿಂದ ಆರಂಭವಾದ ಪಾದಯಾತ್ರೆ ಬಿಟಿಎಂ ಲೇಔಟ್‌ನಲ್ಲಿ ಸಮಾರೋಪಗೊಂಡಿತು. ಈ ಸಂದರ್ಭದಲ್ಲಿ ಬಿಜೆಪಿ ಟಿಕೆಟ್‌ ಆಕಾಂಕ್ಷಿಗಳ ನಡುವೆ ನೂಕಾಟ, ತಳ್ಳಾಟ ನಡೆಯಿತು. ಬಿಜೆಪಿ ರಾಜ್ಯ ಕಾರ್ಯದರ್ಶಿ ಜಯದೇವ ಮತ್ತು ಸಹ ವಕ್ತಾರ ವಿವೇಕ ಸುಬ್ಟಾರೆಡ್ಡಿ ಬೆಂಬಲಿಗರ ನಡುವೆ ನಡೆದ ಕಿತ್ತಾಟ ಕೇಂದ್ರ ಸಚಿವರನ್ನೇ ಇಕ್ಕಟ್ಟಿಗೆ ಸಿಲುಕಿಸಿತ್ತು.

ಕಾಂಗ್ರೆಸ್‌ ವಿರುದ್ಧ ವಾಗ್ಧಾಳಿ: ನಂತರ ಮಾತನಾಡಿದ ಕೇಂದ್ರ ಸಚಿವ ಅನಂತಕುಮಾರ್‌, ಸಿದ್ದರಾಮಯ್ಯ ಕೌರವರ ವಂಶದವರು ಅಂತ ನನಗೆ ಯಾರೋ ಹೇಳಿದರು. ತಕ್ಷಣ ನನಗೆ ಶ್ರೀಲಂಕಾದಿಂದ ಎಸ್‌ಎಂಎಸ್‌ ಬಂತು, ಬಿಜೆಪಿಯವರು ತಪ್ಪಾಗಿ ತಿಳಿದುಕೊಂಡಿ¨ªಾರೆ. ಸಿದ್ದರಾಮಯ್ಯ ಕೌರವ ವಂಶದವರಲ್ಲ, ಕುಂಭಕರ್ಣನ ವಂಶದವರು ಅಂತ ಎಸ್‌ಎಂಎಸ್‌ನಲ್ಲಿತ್ತು ಎಂದು ವ್ಯಂಗ್ಯವಾಡಿದರು.

ಬಿಟಿಎಂ ಲೇಔಟ್‌ನಲ್ಲಿ ಹಲವರು ನಿ¨ªೆ ಮಾಡಲ್ಲ ಕಾರಣ, ವೀರಪ್ಪಮೊಯ್ಲಿಯವರು ಟ್ವೀಟ್‌ ಮಾಡಿ ಸತ್ಯ ಹೇಳಿ¨ªಾರೆ, ಮಾರ್ಗರೇಟ್‌ ಆಳ್ವ ಕಾಂಗ್ರೆಸ್‌ ವಿರುದ್ಧವೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ.  ಖೇಣಿಯನ್ನು ಸೇರಿಸಿಕೊಂಡಿದ್ದಕ್ಕೆ ಹಿರಿಯ ನಾಯಕ ಖರ್ಗೆ ಕೂಡ ಬೇಸರ ವ್ಯಕ್ತಪಡಿಸಿದ್ದರು. ಕಾಂಗ್ರೆಸ್‌ನಲ್ಲಿ ಲೀಡರ್ಸ್‌ ಇಲ್ಲ.  ಕೇವಲ ಕಾಂಟ್ರಾಕ್ಟರ್‌, ಡೆವಲ್ಪರ್ ಇದ್ದಾರೆ ಎಂದು ವಾಗ್ಧಾಳಿ ನಡೆಸಿದರು.

ಕಾಂಗ್ರೆಸ್‌ನಲ್ಲಿ ಬಿಟ್ಟಕ್ಕು, ಜೆಡಿಎಸ್‌ನಲ್ಲಿ ಇಕ್ಕಟ್ಟು. ಅಪ್ಪ ಒಂದು ಕಡೆ, ಹಿರಿಯ ಮಗ ಇನ್ನೊಂದು ಕಡೆ, ಕಿರಿಯ ಮಗ ಒಂದು ಕಡೆ, ಸೊಸೆ ಒಂದು ಕಡೆ ಎಂದು ಮಾಜಿ ಪ್ರಧಾನಿ ದೇವೇಗೌಡ ಕುಟುಂಬದ ಬಗ್ಗೆ ಟೀಕಿಸಿದರು. ಉತ್ತಮ ಸ್ಪಂದನೆ:ಗೃಹ ಸಚಿವ ರಾಮಲಿಂಗಾರೆಡ್ಡಿಯವರ ಕ್ಷೇತ್ರವೂ ಆಗಿರುವ ಬಿಟಿಎಂ ಲೇಔಟ್‌ನಲ್ಲಿ ಬಿಜೆಪಿ ಪಾದಯಾತ್ರೆಗೆ ಉತ್ತಮ ಸ್ಪಂದನೆ ದೊರೆಯಿತು . 

ರಾಜ್ಯ ಬಿಜೆಪಿ ಕಾರ್ಯದರ್ಶಿ ಜಯದೇವ, ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಸುದರ್ಶನ್‌, ವಿಧಾನ ಪರಿಷತ್‌ ಸದಸ್ಯೆ ತಾರಾ ಅನೂರಾಧ ಮತ್ತಿತರರಿದ್ದರು. ಜಯನಗರ ಹಾಗೂ ಗೋವಿಂದರಾಜು ನಗರ ವಿಧಾನಸಭಾ ಕ್ಷೇತ್ರದಲ್ಲೂ ಬಿಜೆಪಿಯಿಂದ ಪಾದಯಾತ್ರೆ ನಡೆಸಿದರು. ಕೇಂದ್ರ ಸಚಿವ ಅನಂತ್‌ ಕುಮಾರ್‌, ಮಾಜಿ ಉಪ ಮುಖ್ಯಮಂತ್ರಿ ಆರ್‌.ಅಶೋಕ್‌, ಮಾಜಿ ಸಚಿವ ವಿ.ಸೋಮಣ್ಣ ಮೊದಲಾದವರು ಭಾಗವಹಿಸಿದ್ದರಯ.

ಕಾಂಗ್ರೆಸ್‌ ಪ್ರಜಾತಂತ್ರಕ್ಕೆ ವಿರುದ್ಧವಾಗಿದೆ: ಕಾಂಗ್ರೆಸ್‌ ಪ್ರಜಾತಂತ್ರಕ್ಕೆ ವಿರುದ್ಧವಾದ ಸಂಸ್ಕೃತಿ ಅನುಸರಿಸುತ್ತಿದೆ. ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ, ಎನ್‌ಡಿಎಗೆ ಸದನದ ಒಳಗೆ ಮತ್ತು ಹೊರಗೆ ಎಲ್ಲರ ಬೆಂಬಲ ಇದೆ. ಕಾಂಗ್ರೆಸ್‌ ಮತ್ತು ವಿರೋಧಪಕ್ಷದವರು ಮಂಡಿಸಲಿರುವ ಅವಿಶ್ವಾಸ ಗೊತ್ತುವಳಿ ಎದುರಿಸಲು ಸಿದ್ಧರಿದ್ದೇವೆ.

ಬಿಜೆಪಿ ಪೂರ್ಣ ಬಹುಮತ ಪಡೆದು ಆಡಳಿತಕ್ಕೆ ಬಂದಿದೆ. ದೇಶದ ಜನರ ಆಶೀರ್ವಾದ ಹಾಗೂ ಪಾರ್ಲಿಮೆಂಟ್‌ ಬೆಂಬಲ ಇದೆ ಎಂದು ಸಚಿವ ಅನಂತ್‌ ಕುಮಾರ್‌ ಹೇಳಿದರು. ಮಿತ್ರಪಕ್ಷ ತೆಲಗು ದೇಶಂ ಪಾರ್ಟಿ ಆಂಧ್ರಕ್ಕೆ ವಿಶೇಷ ಪ್ಯಾಕೇಜ್‌ ನೀಡಬೇಕೆಂಬ ವಿಷಯದಲ್ಲಿ ತನ್ನ ನಿರ್ಧಾರ ತೆಗೆದುಕೊಂಡಿದೆ. ಮೋದಿ ಸರ್ಕಾರ ಆಂಧ್ರದ ಸಮಗ್ರ ಅಭಿವೃದ್ಧಿಗೆ 24 ಸಾವಿರ ಕೋಟಿ ರೂ. ನೀಡಿದೆ.

ಅಮರಾತಿಯ ಪುನರ್‌ ನಿರ್ಮಾಣ, ಆಂಧ್ರದ ಅಣೆಕಟ್ಟು ಹಾಗೂ ರಸ್ತೆಗಳ ನಿರ್ಮಾಣಕ್ಕೂ ಅನುದಾನ ನೀಡಿದೆ. ಆಂಧ್ರದಲ್ಲಿ ವೈಎಸ್‌ಆರ್‌ ಕಾಂಗ್ರಸ್‌ ಹಾಗೂ ಬೇರೆ ಪಕ್ಷಗಳ ಆಂದೋಲನದಿಂದ ಧೃತಿಗೆಟ್ಟು ಈ ನಿರ್ಧಾರ ತೆಗೆದುಕೊಂಡಿದೆ. ತೆಲಗು ದೇಶಂ ಪಾರ್ಟಿ ಎನ್‌ಡಿಎಯಿಂದ ಬೇರಾದರೂ ಆಂಧ್ರದ ಅಭಿವೃದ್ಧಿಯಲ್ಲಿ ಮೋದಿ ಸರ್ಕಾರ ಇದ್ದೇ ಇರುತ್ತದೆ ಎಂದರು.

ಮನೆಮನೆಗೆ ಕಾಂಗ್ರೆಸ್‌ ಎಂಬ ಅಭಿಯಾನವನ್ನು ಕಾಂಗ್ರೆಸ್‌ ಪಕ್ಷ ನಡೆಸುತ್ತಿದೆಯಾದರೂ ಅಲ್ಲಿ ನಾಯಕರ ಮಕ್ಕಳಿಗಷ್ಟೇ ಟಿಕೆಟ್‌ ನೀಡಲಾಗುತ್ತದೆ. ಪ್ರತಿ ಜಿಲ್ಲೆಯಲ್ಲೂ ಟಿಕೆಟ್‌ ಹಂಚಲು ಲಾಬಿ ಗುಂಪುಗಳನ್ನು ಸಿಎಂ ಸಿದ್ದರಾಮಯ್ಯ ರೂಪಿಸಿದ್ದಾರೆ.
-ಅನಂತ್‌ಕುಮಾರ್‌, ಕೇಂದ್ರ ಸಚಿವ

ಟಾಪ್ ನ್ಯೂಸ್

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.