ಹುಲಿ ಮರಣೋತ್ತರಪರೀಕ್ಷೆಗೂ ಗಡಿ ಸಮಸ್ಯೆ!


Team Udayavani, Feb 1, 2018, 12:30 PM IST

blore-2.jpg

ಬೆಂಗಳೂರು: ಎರಡು ರಾಜ್ಯಗಳ ನಡುವಿನ ಗಡಿ ಸಮಸ್ಯೆ ಬರೀ ಮನುಷ್ಯರಿಗೆ ಮಾತ್ರ ಎಂಬುದನ್ನು ನೋಡಿದ್ದೇವೆ. ಆದರೆ, ಬೇಟೆಗಾರರಿಂದ ಬಲಿಯಾದ ಹುಲಿಯೊಂದರ ಮರಣೋತ್ತರ ಪರೀಕ್ಷೆಗೂ ಈಗ ಗಡಿ ಸಮಸ್ಯೆ ಎದುರಾಗಿದೆ.

ಹೌದು! ಮೂರು ತಿಂಗಳ ಹಿಂದೆ ತಮಿಳುನಾಡಿನ ಸತ್ಯಮಂಗಲ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಹುಲಿಯನ್ನು ಕೊಂದಿದ್ದ ಮೂವರು ಆರೋಪಿಗಳು ಯಶವಂತಪುರ ಬಳಿ ಹುಲಿ ಚರ್ಮ ಮಾರಾಟಕ್ಕೆ ಬಂದಾಗ ಖರೀದಿದಾರ ಸೇರಿದಂತೆ ನಾಲ್ವರನ್ನು ಆರ್‌ಎಂಸಿ ಯಾರ್ಡ್‌ ಪೊಲೀಸರು ಬಂಧಿಸಿದ್ದರು. ಆದರೆ, ಇದೀಗ ತಮಿಳುನಾಡು ಅರಣ್ಯಾಧಿಕಾರಿಗಳು ನಮ್ಮ ವ್ಯಾಪ್ತಿಯಲ್ಲಿ ಹುಲಿ ಕೊಂದಿಲ್ಲ. ಘಟನೆಗೂ ನಮಗೂ ಅದಕ್ಕೂ ಸಂಬಂಧವಿಲ್ಲ ಎಂದು ನಿರ್ಲಕ್ಷ್ಯ ತೋರುತ್ತಿದ್ದಾರೆ.

ಆದರೆ, ಬಂಧಿತ ಆರೋಪಿಗಳಾದ ಸತ್ಯಮಂಗಲ ಜಿಲ್ಲೆಯ ಬಾಲಕೃಷ್ಣ , ಮಹೇಶ, ರಂಗರಾಜ ಹುಲಿಯ ನ್ನು ಕೊಂದಿದ್ದು, ತಮಿಳುನಾಡಿನ ಸತ್ಯಮಂಗಲ ಕಾಡಿನಲ್ಲೇ ಎನ್ನುತ್ತಿದ್ದಾರೆ. ಜತೆಗೆ ಘಟನಾ ಸ್ಥಳಕ್ಕೆ ತೆರಳಿದ್ದ ಆರ್‌ಎಂಸಿ ಯಾರ್ಡ್‌ ಪೊಲೀಸರು ಕೂಡ ಹುಲಿಕೊಂದು ಚರ್ಮ ಸುಲಿದ ಸ್ಥಳ ತಮಿಳುನಾಡು ಅರಣ್ಯ ಪ್ರದೇಶಕ್ಕೆ ಸೇರಿದ್ದು, ಆರೋಪಿಯ ಮನೆಯಲ್ಲಿದ್ದ ಹುಲಿಯ ಚರ್ಮ ಹಾಗೂ ಹಲ್ಲುಗಳನ್ನು ಅಲ್ಲಿಂದಲೇ ವಶಕ್ಕೆ ಪಡೆಯಲಾಗಿದೆ. 

ಆದರೆ ಅರಣ್ಯ ಸಿಬ್ಬಂದಿ ನಮ್ಮ ವ್ಯಾಪ್ತಿಯಲ್ಲಿ ಘಟನೆ ಜರುಗಿಲ್ಲ ಎನ್ನುತ್ತಿದ್ದಾರೆ. ಹೀಗಾಗಿ ಹುಲಿ ಚರ್ಮ ಮತ್ತು ಹಲ್ಲುಗಳನ್ನು ವಿಧಿವಿಜ್ಞಾನ ಪರೀಕ್ಷಾ ಕೇಂದ್ರಕ್ಕೆ ಕಳುಹಿಸಲಾಗಿದೆ ಎಂದು ಹಿರಿಯ ಪೊಲೀಸ್‌ ಅಧಿಕಾರಿ “ಉದಯವಾಣಿ’ಗೆ ತಿಳಿಸಿದ್ದಾರೆ.

ಪೊಲೀಸರ ಮಾಹಿತಿ ಪ್ರಕಾರ, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಪುನತಿ ಶ್ರೀಧರ್‌ ಆರ್‌ಎಂಸಿ ಯಾರ್ಡ್‌ ಪೊಲೀಸ್‌ ಠಾಣೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ತಮಿಳುನಾಡಿನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳ ಜತೆ ಚರ್ಚಿಸಿದ್ದು, ಬಂಧಿತ ಬೇಟೆಗಾರರ ಜಾಲ ಕುರಿತು ಹೆಚ್ಚು ಮಾಹಿತಿ ಸಂಗ್ರಹಿಸಲು ತಿಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. 

ಜ.22ರಂದು ಆರ್‌ಎಂಸಿ ಯಾರ್ಡ್‌ ಪೊಲೀಸರು ಯಶವಂತಪುರ ಹೂವಿನ ಮಾರುಕಟ್ಟೆ ಬಸ್‌ ನಿಲ್ದಾಣದಲ್ಲಿ ಗೋಣಿಚೀಲದಲ್ಲಿ ಹುಲಿಯ ಚರ್ಮ ಹಾಗೂ ಹಲ್ಲುಗಳನ್ನು ತುಂಬಿಕೊಂಡು ಮಾರಾಟಕ್ಕೆ ಯತ್ನಿಸುತ್ತಿದ್ದಾಗ ಸತ್ಯಮಂಗಲ ಜಿಲ್ಲೆಯ ಬಾಲಕೃಷ್ಣ ಡಿ. (28) ಮಹೇಶ (23) ರಂಗರಾಜ (36) ಎಂಬುವವರನ್ನು ಬಂಧಿಸಿದ್ದರು. ಬಳಿಕ ಖರೀದಿದಾರ ಮಲ್ಲಪನನ್ನೂ ಬಂಧಿಸಲಾಗಿತ್ತು

ಟಾಪ್ ನ್ಯೂಸ್

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

Election Commission: ಪ್ರಿಯಾಂಕ್‌ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು

Election Commission: ಪ್ರಿಯಾಂಕ್‌ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.