ಟಿಪ್ಪು ದೇಶದ ಆಸ್ತಿ: ಡಿಕೆಶಿ


Team Udayavani, Nov 11, 2018, 12:18 PM IST

tippu.jpg

ಬೆಂಗಳೂರು: ರಾಷ್ಟ್ರ ಹಾಗೂ ರಾಜ್ಯಕ್ಕೆ ಕೊಡುಗೆ ನೀಡಿದ ಮಹನೀಯರ ಜಯಂತಿ ಆಚರಣೆಯಂತೆ ಟಿಪ್ಪು ಸುಲ್ತಾನ್‌ ಜಯಂತಿ ಆಚರಿಸಲಾಗುತ್ತಿದೆ. ಅನಗತ್ಯ ಗೊಂದಲ ಸೃಷ್ಟಿಸಿ ರಾಜ್ಯದಲ್ಲಿ ಶಾಂತಿಗೆ ಭಂಗ ತರುವ ಕೆಲಸವನ್ನು ಯಾರೂ ಮಾಡಬಾರದು ಎಂದು ಸಮ್ಮಿಶ್ರ ಸರ್ಕಾರದ ಪ್ರಮುಖರು ಪ್ರತಿಪಾದಿಸಿದರು.

ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ಶನಿವಾರ ನಡೆದ ಟಿಪ್ಪು ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳ ಗೈರುಹಾಜರಿಯಿಂದಾಗಿ ಸರ್ಕಾರದ ಪರವಾಗಿ ಪಾಲ್ಗೊಂಡಿದ್ದ ಸಚಿವ ಡಿ.ಕೆ.ಶಿವಕುಮಾರ್‌, ಮಾಜಿ ಸಚಿವ ಆರ್‌.ರೋಷನ್‌ ಬೇಗ್‌, ಸಚಿವ ಜಮೀರ್‌ ಅಹಮ್ಮದ್‌ ಟಿಪ್ಪು ಜಯಂತಿಗೆ ವಿರೋಧ ವ್ಯಕ್ತಪಡಿಸುತ್ತಿರುವ ಬಿಜೆಪಿ ವಿರುದ್ಧ ಹರಿಹಾಯ್ದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಚಿವ ಡಿ.ಕೆ.ಶಿವಕುಮಾರ್‌, ಯಾರನ್ನೂ ಮೆಚ್ಚಿಸಲು ಜಯಂತಿ ಕಾರ್ಯಕ್ರಮ ರೂಪಿಸಿಲ್ಲ. ದೇಶದ ಐಕ್ಯತೆ, ಸಮಗ್ರತೆ, ಶಾಂತಿಗಾಗಿ ಶ್ರಮಿಸಿದವರು, ಎಲ್ಲ ಧರ್ಮದ ನಾಯಕರು, ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸುವ ಕಾರ್ಯವನ್ನು ಎಲ್ಲ ಸರ್ಕಾರಗಳು ಮಾಡಿಕೊಂಡು ಬಂದಿವೆ. ಟಿಪ್ಪು ಜಯಂತಿ ಆಚರಣೆಯಲ್ಲಿ ವಿಶೇಷತೆ ಏನೂ ಇಲ್ಲ ಎಂದರು.

ರಾಜಕೀಯದಲ್ಲಿ ಧರ್ಮವಿರಬೇಕು. ಆದರೆ ಧರ್ಮದಲ್ಲಿ ರಾಜಕೀಯವಿರಬಾರದು ಎಂಬುದು ನನ್ನ ವಾದ. ಟಿಪ್ಪು ಕರ್ನಾಟಕದ ಆಸ್ತಿಯಷ್ಟೇ ಅಲ್ಲ, ದೇಶದ ಆಸ್ತಿ. ದೇಶಕ್ಕೆ ರೇಷ್ಮೆ ಪರಿಚಯಿಸಿದವರು ಟಿಪ್ಪು ಸುಲ್ತಾನ್‌. ದೇಶಕ್ಕಾಗಿ ತನ್ನ ಮಕ್ಕಳನ್ನೇ ಒತ್ತೆ ಇರಿಸಿದ ಇತಿಹಾಸ ಪ್ರಪಂಚದಲ್ಲೆಲ್ಲೂ ಇಲ್ಲ. ಹಾಗಿದ್ದರೂ ಬಿಜೆಪಿ ಸ್ನೇಹಿತರ ಸಮಸ್ಯೆ ಏನು ಎಂಬುದು ಅರ್ಥವಾಗುತ್ತಿಲ್ಲ ಎಂದು ಹೇಳಿದರು.

ಕೇಂದ್ರಕ್ಕೆ ಸವಾಲು: ದೆಹಲಿಯಲ್ಲಿ ನಿಮ್ಮದೇ ದೊಡ್ಡ ಅಧಿಕಾರವಿದೆ. ಟಿಪ್ಪು ಜಯಂತಿ ಆಚರಣೆ ಬಂದ್‌ ಮಾಡಿ ಎಂದು ಫ‌ರ್ಮಾನು ಹೊರಡಿಸಲಿ. ನಾವು ನಮ್ಮ ಅಂಗಡಿ ಮುಚ್ಚಿ ಹೊರಗೆಲ್ಲೋ ಮಾಡಿಕೊಳ್ಳುತ್ತೇವೆ. ಹಾಗೆಯೇ ರಾಷ್ಟ್ರಪತಿಗಳಿಗೂ ತಮ್ಮ ಭಾಷಣ ಸರಿಯಿರಲಿಲ್ಲ. ಆ ಭಾಷಣ ಹಿಂಪಡೆದು ಮತ್ತೂಂದು ಭಾಷಣ ಮಾಡುವಂತೆ ಹೇಳಲಿ. ಟಿಪ್ಪು ತ್ಯಾಗ, ಬಲಿದಾನಕ್ಕೆ ಸರ್ಕಾರ ಗೌರವ ನೀಡುತ್ತಿದೆ.

ಯಾರು ಏನೇ ಮಾತನಾಡಲಿ ಆಚರಣೆ ಮುಂದುವರಿಯಲಿದೆ ಎಂದು ಹೇಳಿದರು. ಮುಸ್ಲಿಂ ನಾಯಕರಿಗೆ ಹೇಗೆಲ್ಲಾ ತೊಂದರೆ ನೀಡಲಾಗುತ್ತಿದೆ ಎಂಬುದು ನನಗೆ ಗೊತ್ತಿದೆ. ಗುಜರಾತ್‌ನಲ್ಲಿ ನಿಮ್ಮ ನಾಯಕರ ರಕ್ಷಣೆಗೆ ಹೋದಾಗ ಏನೆಲ್ಲಾ ಕಿರುಕುಳ ನೀಡಲಾಯಿತು. ನನಗೆ ಹೇಗೆಲ್ಲಾ ಕಷ್ಟ ನೀಡಲಾಯಿತು. ಅದನ್ನೆಲ್ಲಾ ಅನುಭವಿಸಿದ್ದೇನೆ ಎಂದು ಭಾವುಕರಾದ ಡಿ.ಕೆ.ಶಿವಕುಮಾರ್‌, ಯಾರೂ ಎದೆಗುಂದ ಬೇಕಿಲ್ಲ ಎಂದರು.

ಸಚಿವ ಜಮೀರ್‌ ಅಹಮ್ಮದ್‌ ಖಾನ್‌ ಮಾತನಾಡಿ, ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ ಮೂರು ಬಾರಿ ಟಿಪ್ಪು ಜಯಂತಿ ಆಚರಿಸಲಾಗಿತ್ತು. ಸಮ್ಮಿಶ್ರ ಸರ್ಕಾರದಲ್ಲಿ ಎಲ್ಲ ಜಿಲ್ಲೆಗಳಲ್ಲಿ ಜಯಂತಿ ಆಚರಣೆ ನಡೆಯುತ್ತಿದೆ. ಎಷ್ಟೇ ವಿರೋಧ ವ್ಯಕ್ತಪಡಿಸಿದರೂ ಆಚರಣೆಯನ್ನು ಯಾರೂ ನಿಲ್ಲಿಸಲು ಸಾಧ್ಯವಿಲ್ಲ ಎಂದು ಗುಡುಗಿದರು.

ಮಾಜಿ ಸಚಿವ ಆರ್‌.ರೋಷನ್‌ ಬೇಗ್‌ ಮಾತನಾಡಿ, ಕೆಲ ದಿನಗಳಿಂದ ನಾಟಕ ಶುರು ಮಾಡಿರುವ ಬಿಜೆಪಿಯವರು ಟಿಪ್ಪು ಜಯಂತಿ ಆಚರಿಸಬಾರದು ಎಂದು ಹೇಳುತ್ತಿದ್ದಾರೆ. ನಾವು ಬಿಜೆಪಿಯವರ ಅನುಮತಿ ಪಡೆದು ಜಯಂತಿ ಆಚರಿಸಬೇಕೆ? ಸಮಯ ಬಂದರೆ ದೆಹಲಿಗೆ ತೆರಳಿ ಟಿಪ್ಪು ಜಯಂತಿ ಆಚರಿಸುತ್ತೇವೆ. ಇತರೆ ಜಯಂತಿ ಆಚರಣೆಗೆ ರಜೆ ನೀಡುವಂತೆ ಟಿಪ್ಪು ಜಯಂತಿಗೆ ರಜೆ ಕೇಳಿಲ್ಲ. ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ  ಜಯಂತಿ ಆಚರಿಸಿದರೆ ಹೊಟ್ಟೆಯುರಿಕೊಂಡರೆ ಏನು ಮಾಡುವುದು.

ಮುಂದಿನ ಲೋಕಸಭಾ ಚುನಾವಣೆಯಲ್ಲಿ ಸೋಲಾಗುವುದು ಬಿಜೆಪಿಗೆ ಗೊತ್ತಾಗುತ್ತಿದೆ. ಹಾಗಾಗಿ ಮತಗಳ ಧ್ರುವೀಕರಣಕ್ಕೆ ಮುಂದಾಗಿದ್ದಾರೆ. ಚುನಾವಣೆ ಹಿನ್ನೆಲೆಯಲ್ಲಿ ಹಿಂದೂ- ಮುಸ್ಲಿಮರು ಪರಸ್ಪರ ಕಿತ್ತಾಡುವಂತೆ ಮಾಡುವ ಪ್ರಯತ್ನವಿದು ಎಂದರು. ಸಚಿವೆ ಡಾ.ಜಯಮಾಲಾ ಮಾತನಾಡಿದರು. ರಾಜ್ಯದಲ್ಲಿ ಟಿಪ್ಪು ಜಯಂತಿ ಆಚರಣೆಗೆ ಚಾಲನೆ ಕಾರಣರಾದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಭಿಕರು ಜೈಕಾರ ಕೂಗಿದರು.

ಆಮೀರ್‌- ಎ- ಷರಿಯತ್‌ನ (ಕರ್ನಾಟಕ) ಹಜರತ್‌ ಮೌಲಾನ ಸಗೀರ್‌ ಅಹಮ್ಮದ್‌ಖಾನ್‌ ಸಾಹೇಬ್‌ ರಷಾದಿ ಅವರು ಆಶೀರ್ವಚನ ನೀಡಿದರು. ಮೈಸೂರು ವಿಶ್ವವಿದ್ಯಾಲಯದ ಇತಿಹಾಸ ಪ್ರಾಧ್ಯಾಪಕ ಡಾ.ಕೆ.ಸದಾಶಿವ ಅವರು ಟಿಪ್ಪು ಕುರಿತು ಉಪನ್ಯಾಸ ನೀಡಿದರು. ಶಾಸಕರಾದ ಎನ್‌.ಎ.ಹ್ಯಾರಿಸ್‌, ರಿಜ್ವಾನ್‌ ಹರ್ಷದ್‌, ಸಾರ್ವಜನಿಕ ಸಂಪರ್ಕ ಇಲಾಖೆ ನಿರ್ದೇಶಕ ಎನ್‌.ಆರ್‌.ವಿಶು ಕುಮಾರ್‌ ಇತರರು ಉಪಸ್ಥಿತರಿದ್ದರು.

ಬಿಗಿ ಭದ್ರತೆ: ರಾಜ್ಯ ಸರ್ಕಾರದ ವತಿಯಿಂದ ಟಿಪ್ಪು ಜಯಂತಿ ಆಚರಣೆಗೆ ವಿರೋಧ ವ್ಯಕ್ತವಾಗಿದ್ದ ಹಿನ್ನೆಲೆಯಲ್ಲಿ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ಆಯೋಜನೆಯಾಗಿದ್ದ ಕಾರ್ಯಕ್ರಮಕ್ಕೆ ಬಿಗಿ ಪೊಲೀಸ್‌ ಭದ್ರತೆ ಕಲ್ಪಿಸಲಾಗಿತ್ತು. ಪೊಲೀಸ್‌ ಸರ್ಪಗಾವಲಿನ ಜತೆಗೆ ಕ್ಷಿಪ್ರ ಕಾರ್ಯಾಚರಣೆ ಪಡೆಯನ್ನು  (ಆರ್‌ಎಎಫ್) ಭದ್ರತೆಗೆ ನಿಯೋಜಿಸಲಾಗಿತ್ತು. ವಿಧಾನಸೌಧದ ಎಲ್ಲ ಪ್ರವೇಶ ದ್ವಾರಗಳ ಬಳಿಯೂ ಯೋಧರನ್ನು ನಿಯೋಜಿಸಲಾಗಿತ್ತು. ಬ್ಯಾಂಕ್ವೆಟ್‌ ಹಾಲ್‌ನ ಪ್ರವೇಶದ್ವಾರದಲ್ಲೂ ಆರ್‌ಎಎಫ್ ಯೋಧರನ್ನು ನಿಯೋಜಿಸಲಾಗಿತ್ತು.

ದೇಶದಲ್ಲಿ ಟಿಪ್ಪು ಸುಲ್ತಾನ್‌ಗೆ ತನ್ನದೇ ಆದ ಚರಿತ್ರೆ ಇದ್ದು, ಜಯಂತಿ ಆಚರಣೆಗೆ ರಾಜ್ಯ ಸರ್ಕಾರ ಬದ್ಧವಾಗಿದೆ. ಕೆಲ ಬಿಜೆಪಿ ಸ್ನೇಹಿತರು ವಿರೋಧಪಡಿಸುತ್ತಿದ್ದಾರೆ. ಹಾಗಿದ್ದರೆ ಈ ಹಿಂದೆ ಬಿ.ಎಸ್‌.ಯಡಿಯೂರಪ್ಪ ಯಾಕೆ ಟಿಪ್ಪು ಜಯಂತಿ ಆಚರಿಸಿದರು. ಮುಖ್ಯಮಂತ್ರಿಯಾಗಿದ್ದಾಗ ಜಗದೀಶ್‌ ಶೆಟ್ಟರ್‌, ಗೃಹ ಸಚಿವರಾಗಿದ್ದಾಗ ಆರ್‌. ಅಶೋಕ್‌ ಟಿಪ್ಪು ಜಯಂತಿ ಆಚರಣೆಯಲ್ಲಿ ಮಾಡಿದ ಭಾಷಣ ಕೇಳಿದ್ದೀರಾ. ವಾಟ್ಸ್‌ಆ್ಯಪ್‌ನಲ್ಲಿ ಕಳುಹಿಸಲೆ. ಸುಮ್ಮನೆ ಯಾಕೆ ರಾಜಕಾರಣ ಮಾಡುತ್ತೀರಿ. 
-ಡಿ.ಕೆ.ಶಿವಕುಮಾರ್‌, ಸಚಿವ

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.