ಟಿಪ್ಪು ಜಯಂತಿ ಆಚರಿಸುವವರೇ ಕೋಮುವಾದಿಗಳು: ಮುರಳೀಧರರಾವ್
Team Udayavani, Oct 23, 2017, 6:20 AM IST
ಬೆಂಗಳೂರು: ಟಿಪ್ಪು ಜಯಂತಿಯನ್ನು ಬೆಂಬಲಿಸಿದರೆ ಜಾತ್ಯತೀತರು, ವಿರೋಧಿಸಿದರೆ ಜಾತಿವಾದಿಗಳು ಎಂಬ ಯೋಚನೆ ಸರಿಯಿಲ್ಲ ಎಂದಿರುವ ಬಿಜೆಪಿ ರಾಜ್ಯ ಉಸ್ತುವಾರಿ ಮುರಳೀಧರರಾವ್, ಟಿಪ್ಪು ಒಬ್ಬ ಕೋಮುವಾದಿ, ಧರ್ಮಾಂಧ, ಹಿಂದೂಗಳನ್ನು ಹತ್ಯೆ ಮಾಡುತ್ತಿದ್ದನೆಂಬ ಕಾರಣಕ್ಕೆ ಆತನ ಜಯಂತಿಯನ್ನು ಸರ್ಕಾರದ ವತಿಯಿಂದ ಆಚರಿಸಲು ಬಿಜೆಪಿ ವಿರೋಧಿಸುತ್ತದೆ ಎಂದಿದ್ದಾರೆ.
ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನಿಜವಾದ ಜಾತ್ಯತೀತವಾದ ಎಂದರೆ ಅದು ಎಲ್ಲಾ ಜಾತಿ-ಧರ್ಮಗಳನ್ನು
ರಕ್ಷಿಸುವುದು ಮತ್ತು ಉತ್ತೇಜಿಸುವುದು. ಮತ್ತೂಂದು ಅರ್ಥದಲ್ಲಿ ಸರ್ವಪಂಥ ಸಮಭಾವ ಆಗಿದೆ ಎಂದರು.
ಟಿಪ್ಪು ಜಯಂತಿಯನ್ನು ಬೆಂಬಲಿಸಿದರೆ ಜಾತ್ಯತೀತರು, ವಿರೋಧಿಸಿದರೆ ಜಾತಿವಾದಿಗಳು ಎಂದು ಹೇಳಲಾಗುತ್ತಿದೆ. ಆದರೆ, ಈ ಮಾತೇ ಪೂರ್ವಾಗ್ರಹ ಪೀಡಿತ. ಹಿಂದೂಗಳ ಹತ್ಯೆ ಮಾಡುತ್ತಿದ್ದ ಟಿಪ್ಪು ಜಯಂತಿ ಆಚರಣೆ ನಿಜವಾದ ಕೋಮುವಾದ. ಟಿಪ್ಪು ಆಡಳಿತಕ್ಕೆ ಒಳಪಟ್ಟಿದ್ದ ಕೊಡಗು, ಮಲಬಾರ್ ಭಾಗದ ಎಲ್ಲಾ ಜನ ಟಿಪ್ಪುವನ್ನು ಜಾತ್ಯತೀತವಾದಿ ಎಂದರೆ ಆಗ ಜಯಂತಿಯನ್ನು ಒಪ್ಪಬಹುದು. ಟಿಪ್ಪು ಒಬ್ಬ ಅರಸ ಅಷ್ಟೇ, ಆದರ್ಶ ಅರಸನಲ್ಲ. ಆದರೆ ಕಾಂಗ್ರೆಸ್ ಟಿಪ್ಪುವನ್ನು ಜಾತಿ, ಮತಗಳ ಹೆಸರಿನಲ್ಲಿ ವೈಭವೀಕರಿಸುತ್ತಿದೆ ಎಂದು ಆರೋಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
MUST WATCH
ಹೊಸ ಸೇರ್ಪಡೆ
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ