ಸಹಕಾರಿ ಸಂಘಗಳಿಂದ ಸಮಾಜದ ಏಳ್ಗೆ


Team Udayavani, Sep 3, 2018, 12:13 PM IST

sahakari.jpg

ಬೆಂಗಳೂರು: ಹಣ ಇದ್ದೆಡೆ ಸಮಸ್ಯೆಗಳು ಹೆಚ್ಚಿರುತ್ತವೆ. ಆದರೆ, ಸಹಕಾರಿ ಕ್ಷೇತ್ರ ಅಸಂಘಟಿತರನ್ನು ಸಂಘಟಿತ ವ್ಯವಸ್ಥೆಯೊಳಗೆ ತರುವ ಜತೆಗೆ ಸಮಾಜದ ಏಳ್ಗೆಗೆ ನೆರವಾಗುತ್ತಿದೆ ಎಂದು ಸಹಕಾರ ಸಚಿವ ಬಂಡೆಪ್ಪ ಕಾಶೆಂಪೂರ ಅಭಿಪ್ರಾಯ ವ್ಯಕ್ತಪಡಿಸಿದರು. ವಸಂತ ನಗರದ ಸಂಯುಕ್ತ ಗುಜರಾತಿ ಭವನದಲ್ಲಿ ಭಾನುವಾರ ನಡೆದ ಬಿಎಸ್‌ಎನ್‌ಎಲ್‌ ನೌಕರರ ಪತ್ತಿನ ಸಹಕಾರ ಸಂಘದ ಸುವರ್ಣ ಮಹೋತ್ಸವ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ನಮ್ಮ ಹಿರಿಯರು ಶ್ರಮವಹಿಸಿ ದುಡಿದು ನಿವೇಶನ, ಫ್ಲ್ಯಾಟ್‌ಗಳನ್ನು ಖರೀದಿಸುತ್ತಿದ್ದರು. ಬದಲಾದ ಕಾಲಘಟ್ಟದಲ್ಲಿ ತಿಂಗಳಿಗೆ ಲಕ್ಷ ರು. ವೇತನ ಪಡೆದರೂ ಒಂದು ನಿವೇಶನ ಕೊಳ್ಳುವುದು ಕಷ್ಟವಾಗಿದೆ. ಹೀಗಾಗಿ ಪೋಷಕರು ಆಸ್ತಿ ಮಾಡುವುದಕ್ಕಿಂತ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಬೇಕು. ಮಕ್ಕಳೇ ಕುಟುಂಬದ ಆಸ್ತಿಯಾಗುವಂತೆ ಬೆಳೆಸಬೇಕು ಎಂದು ಸಲಹೆ ನೀಡಿದರು.

ಈ ಸಂಘ ಯಶಸ್ವಿಯಾಗಿ 50 ವರ್ಷ ಪೂರೈಸಿರುವುದು ದೊಡ್ಡ ಸಾಧನೆ. ಆರಂಭದಿಂದ ಉತ್ತಮವಾಗಿ ಮುನ್ನಡೆಸಿಕೊಂಡು ಬಂದಿದ್ದರಿಂದ ಈ ಮಟ್ಟಕ್ಕೆ ಬೆಳೆಯಲು ಸಾಧ್ಯವಾಗಿದೆ. ಅಸಂಘಟಿತರನ್ನು ಸಂಘಟಿತರನ್ನಾಗಿ ಮಾಡುವ ಸಹಕಾರಿ ಕ್ಷೇತ್ರ ಬೆಳೆದಷ್ಟೂ ಸಮಾಜಕ್ಕೆ ಒಳಿತಾಗುತ್ತದೆ ಎಂದರು.

ರಾಜ್ಯದ ಪ್ರತಿಭಾನ್ವಿತರು ರಾಜ್ಯ ಹಾಗೂ ಕೇಂದ್ರ ಲೋಕಸೇವಾ ಆಯೋಗದ ಪರೀಕ್ಷೆಗಳಲ್ಲಿ ಉನ್ನತ ಸಾಧನೆ ಮಾಡುತ್ತಿದ್ದಾರೆ. ಕೆಎಎಸ್‌ ಅಧಿಕಾರಿ ಶಾಸಕನಿಗೆ ಸಮನಾದರೆ, ಐಎಎಸ್‌ ಅಧಿಕಾರಿ ಸಚಿವರಿಗೆ ಸಮಾನವೆಂದರೆ ತಪ್ಪಾಗಲಾರದು. ಶಾಸಕ, ಮಂತ್ರಿ ಪದವಿಗಳು ಐದು ವರ್ಷಕ್ಕೆ ಸೀಮಿತವಾದರೆ, ಸರ್ಕಾರಿ ಅಧಿಕಾರಿಯಾಗಿ 60 ವರ್ಷದವರೆಗೆ ಸೇವೆ ಸಲ್ಲಿಸಬಹುದು. ವಿದ್ಯಾರ್ಥಿಗಳು ಉನ್ನತ ಹುದ್ದೆ ಪಡೆಯುವ ಗುರಿಯೊಂದಿಗೆ ಅಭ್ಯಾಸ ಮಾಡಬೇಕು ಎಂದು ಕಿವಿಮಾತು ಹೇಳಿದರು.

ಕೊಡಗು ಪ್ರವಾಹ ಸಂತ್ರಸ್ತರಿಗೆ ನೆರವಾಗಲು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಸಂಘದಿಂದ 25 ಸಾವಿರ ರೂ. ದೇಣಿಗೆ ನೀಡುವುದಾಗಿ ಸಂಘದ ಅಧ್ಯಕ್ಷ ಚಂದ್ರಪ್ಪ ಘೋಷಿಸಿದರು. ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಅಧಿಕ ಅಂಕ ಗಳಿಸಿದ ಸಂಘದ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಿದ ನಂತರ ಸಂಘದ ವೆಬ್‌ಸೈಟ್‌ ಲೋಕಾರ್ಪಣೆ ಮಾಡಿದರು. ರಾಜ್ಯ ಸಹಕಾರ ಸಂಘಗಳ ಲೆಕ್ಕಪರಿಶೋಧನಾ ನಿರ್ದೇಶಕ ಪ್ರಕಾಶ್‌ ಸಿ.ಮಜಿಗಿ, ಸಂಘದ ಉಪಾಧ್ಯಕ್ಷ ಕೆ.ದೊರೆಸ್ವಾಮಿ ಮೊದಲಾದವರು ಇದ್ದರು.

ಟಾಪ್ ನ್ಯೂಸ್

CM  Siddaramaiah ಸೋಲು ಖಚಿತವಾಗುತ್ತಿದ್ದಂತೆ ಮೋದಿ ವಿಚಿತ್ರ ಮಾತು

CM Siddaramaiah ಸೋಲು ಖಚಿತವಾಗುತ್ತಿದ್ದಂತೆ ಮೋದಿ ವಿಚಿತ್ರ ಮಾತು

ಪರಿಷತ್‌ ಚುನಾವಣೆ: ಮೊದಲ ದಿನ ಸಲ್ಲಿಕೆಯಾಗದ ನಾಮಪತ್ರ

ಪರಿಷತ್‌ ಚುನಾವಣೆ: ಮೊದಲ ದಿನ ಸಲ್ಲಿಕೆಯಾಗದ ನಾಮಪತ್ರ

ಲೂಟಿ ಸರಕಾರ ಅಂದ್ರೆ ದಾಖಲೆ ಕೇಳುತ್ತಿದ್ದ ಸಿದ್ದು ಈಗ ಏನು ಮಾಡುತ್ತಾರೆ?: ಅಶೋಕ್‌

ಲೂಟಿ ಸರಕಾರ ಅಂದ್ರೆ ದಾಖಲೆ ಕೇಳುತ್ತಿದ್ದ ಸಿದ್ದು ಈಗ ಏನು ಮಾಡುತ್ತಾರೆ?: ಅಶೋಕ್‌

“ಡಿಕೆಶಿ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ಸಮ್ಮತಿ ವಾಪಸ್‌: ಕಾನೂನು ಉಲ್ಲಂಘನೆಯಾಗಿಲ್ಲ’

“ಡಿಕೆಶಿ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ಸಮ್ಮತಿ ವಾಪಸ್‌: ಕಾನೂನು ಉಲ್ಲಂಘನೆಯಾಗಿಲ್ಲ’

PM Modi ಮೈಸೂರು ಆತಿಥ್ಯದ ವೆಚ್ಚ ರಾಜ್ಯವೇ ಭರಿಸಲಿದೆ: ಈಶ್ವರ ಖಂಡ್ರೆ

Eshwara Khandre ಪ್ರಧಾನಿ ಮೈಸೂರು ಆತಿಥ್ಯದ ವೆಚ್ಚ ರಾಜ್ಯವೇ ಭರಿಸಲಿದೆ

Siddaramaiah ಪುತ್ರ ಸಾಧುಗಳ ಜತೆ ವಿದೇಶಕ್ಕೆ ಹೋಗಿದ್ದರಾ: ಕುಮಾರಸ್ವಾಮಿ ಪ್ರಶ್ನೆSiddaramaiah ಪುತ್ರ ಸಾಧುಗಳ ಜತೆ ವಿದೇಶಕ್ಕೆ ಹೋಗಿದ್ದರಾ: ಕುಮಾರಸ್ವಾಮಿ ಪ್ರಶ್ನೆ

Siddaramaiah ಪುತ್ರ ಸಾಧುಗಳ ಜತೆ ವಿದೇಶಕ್ಕೆ ಹೋಗಿದ್ದರಾ: ಕುಮಾರಸ್ವಾಮಿ ಪ್ರಶ್ನೆ

D. K. Shivakuma ಜೂ.1ರಿಂದ ಕಾಂಗ್ರೆಸ್‌ ಕುಟುಂಬ ಸದಸ್ಯತ್ವ ಅಭಿಯಾನ

D. K. Shivakuma ಜೂ.1ರಿಂದ ಕಾಂಗ್ರೆಸ್‌ ಕುಟುಂಬ ಸದಸ್ಯತ್ವ ಅಭಿಯಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

Bengaluru: ಮೊಬೈಲ್‌ ದೋಚುತ್ತಿದ್ದ ಇಬ್ಬರ ಬಂಧನ

Misbehavior: ಡ್ರಗ್ಸ್‌ ಅಮಲಲ್ಲಿ ಅಪ್ರಾಪ್ತೆ ಜತೆ ಅನುಚಿತ ವರ್ತನೆ: ಯುವಕ ಪೊಲೀಸರ ವಶ

Misbehavior: ಡ್ರಗ್ಸ್‌ ಅಮಲಲ್ಲಿ ಅಪ್ರಾಪ್ತೆ ಜತೆ ಅನುಚಿತ ವರ್ತನೆ: ಯುವಕ ಪೊಲೀಸರ ವಶ

Rave party: ಸಿಸಿಬಿ ಪೊಲೀಸರಿಗೆ ಆಂಧ್ರ ರಾಜಕಾರಣಿಗಳಿಂದ ಒತ್ತಡ

Rave party: ಸಿಸಿಬಿ ಪೊಲೀಸರಿಗೆ ಆಂಧ್ರ ರಾಜಕಾರಣಿಗಳಿಂದ ಒತ್ತಡ

4

Arrested: ಬೀದಿಬದಿ ಮಲಗಿದ್ದವರ ಹತ್ಯೆ: ಸರಣಿ ಹಂತಕನ ಸೆರೆ

7

Rave Party: ನಟಿ ಹೇಮಾ ಸೇರಿ 8 ಮಂದಿಗೆ ನೋಟಿಸ್‌

MUST WATCH

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

ಹೊಸ ಸೇರ್ಪಡೆ

CM  Siddaramaiah ಸೋಲು ಖಚಿತವಾಗುತ್ತಿದ್ದಂತೆ ಮೋದಿ ವಿಚಿತ್ರ ಮಾತು

CM Siddaramaiah ಸೋಲು ಖಚಿತವಾಗುತ್ತಿದ್ದಂತೆ ಮೋದಿ ವಿಚಿತ್ರ ಮಾತು

ಪರಿಷತ್‌ ಚುನಾವಣೆ: ಮೊದಲ ದಿನ ಸಲ್ಲಿಕೆಯಾಗದ ನಾಮಪತ್ರ

ಪರಿಷತ್‌ ಚುನಾವಣೆ: ಮೊದಲ ದಿನ ಸಲ್ಲಿಕೆಯಾಗದ ನಾಮಪತ್ರ

ಲೂಟಿ ಸರಕಾರ ಅಂದ್ರೆ ದಾಖಲೆ ಕೇಳುತ್ತಿದ್ದ ಸಿದ್ದು ಈಗ ಏನು ಮಾಡುತ್ತಾರೆ?: ಅಶೋಕ್‌

ಲೂಟಿ ಸರಕಾರ ಅಂದ್ರೆ ದಾಖಲೆ ಕೇಳುತ್ತಿದ್ದ ಸಿದ್ದು ಈಗ ಏನು ಮಾಡುತ್ತಾರೆ?: ಅಶೋಕ್‌

“ಡಿಕೆಶಿ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ಸಮ್ಮತಿ ವಾಪಸ್‌: ಕಾನೂನು ಉಲ್ಲಂಘನೆಯಾಗಿಲ್ಲ’

“ಡಿಕೆಶಿ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ಸಮ್ಮತಿ ವಾಪಸ್‌: ಕಾನೂನು ಉಲ್ಲಂಘನೆಯಾಗಿಲ್ಲ’

PM Modi ಮೈಸೂರು ಆತಿಥ್ಯದ ವೆಚ್ಚ ರಾಜ್ಯವೇ ಭರಿಸಲಿದೆ: ಈಶ್ವರ ಖಂಡ್ರೆ

Eshwara Khandre ಪ್ರಧಾನಿ ಮೈಸೂರು ಆತಿಥ್ಯದ ವೆಚ್ಚ ರಾಜ್ಯವೇ ಭರಿಸಲಿದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.