ಬಹುಮಹಡಿ ನಿವಾಸಿಗಳ ಚಿತ್ತ ಪ್ರಣಾಳಿಕೆಯತ್ತ


Team Udayavani, Apr 21, 2018, 11:56 AM IST

bahu-mahadi.jpg

ಬೆಂಗಳೂರು: ನಗರದ ಅಪಾರ್ಟ್‌ಮೆಂಟ್‌ ನಿವಾಸಿಗಳ ಚಿತ್ತ ಈಗ ವಿವಿಧ ಪಕ್ಷಗಳು ಬಿಡುಗಡೆ ಮಾಡಲಿರುವ ಚುನಾವಣಾ ಪ್ರಣಾಳಿಕೆಯತ್ತ ನೆಟ್ಟಿದ್ದು, ತಮ್ಮ ಸಮಸ್ಯೆಗಳನ್ನು ನಿವಾರಿಸುವ ಭರವಸೆ ನೀಡುವವರ ಬೆಂಬಲಿಸಲು ಮುಂದಾಗಿದ್ದಾರೆ.

ಬೆಳ್ಳಂದೂರು ಕೆರೆ ನೊರೆ ಸಮಸ್ಯೆ ಉಂಟಾದಾಗೆಲ್ಲಾ ಅಪಾರ್ಟ್‌ಮೆಂಟ್‌ಗಳ ನಿವಾಸಿಗಳಲ್ಲಿ ನಡುಕ ಹುಟ್ಟುತ್ತದೆ. ಈ ಬಗ್ಗೆ ಜನಪ್ರತಿನಿಧಿಗಳಿಂದ ಯಾವುದೇ ನೆರವು ತಮಗೆ ಸಿಗುತ್ತಿಲ್ಲ. ಇದರಿಂದ ಕಂಗೆಟ್ಟ ಅಪಾರ್ಟ್‌ಮೆಂಟ್‌ ನಿವಾಸಿಗಳು, ಚುನಾವಣೆಯನ್ನು ಅಸ್ತ್ರವಾಗಿ ಬಳಸಲು ಮುಂದಾಗಿದ್ದು, ಈ ನಿಟ್ಟಿನಲ್ಲಿ ಬೆಂಗಳೂರು ಅಪಾರ್ಟ್‌ಮೆಂಟ್‌ ಫೆಡರೇಷನ್‌ ಅಡಿ ಒಗ್ಗಟ್ಟಾಗಿ ತಮ್ಮ ಸಾಮರ್ಥ್ಯ ಸಾಬೀತುಪಡಿಸಲು ನಿರ್ಧರಿಸಿದ್ದಾರೆ. 

ಕೊಳಚೆನೀರು ಸಂಸ್ಕರಣಾ ಘಟಕ (ಎಸ್‌ಟಿಪಿ) ಅಳವಡಿಕೆಯಲ್ಲಿರುವ ಗೊಂದಲ ಈಗಲೂ ಮುಂದುವರಿದಿದೆ. ಇದಕ್ಕೊಂದು ಸರಿಯಾದ ಮಾರ್ಗಸೂಚಿ ಇಲ್ಲ. ಈ ಎಸ್‌ಟಿಪಿಗೆ ಬಳಸಲಾಗುವ ವಿದ್ಯುತ್‌ಗೆ “ವಾಣಿಜ್ಯ ಉದ್ದೇಶ’ದ ದರ ವಿಧಿಸಲಾಗುತ್ತಿದೆ. ನೀರಿನ ಬಳಕೆ ಶುಲ್ಕ ಸಾಮಾನ್ಯ ಬಳಕೆದಾರರಿಗಿಂತ ಮೂರುಪಟ್ಟು ಹೆಚ್ಚು ವಸೂಲು ಮಾಡಲಾಗುತ್ತಿದೆ.

ಇಂತಹ ಹತ್ತುಹಲವು ಸಮಸ್ಯೆಗಳನ್ನು ಬೆಂಗಳೂರು ಅಪಾರ್ಟ್‌ಮೆಂಟ್‌ಗಳು ಎದುರಿಸುತ್ತಿವೆ. ಈ ಸಮಸ್ಯೆಗಳನ್ನು ಪ್ರಸ್ತಾಪಿಸುವ ಪ್ರಣಾಳಿಕೆಯನ್ನು ಅಪಾರ್ಟ್‌ಮೆಂಟ್‌ ನಿವಾಸಿಗಳು ಎದುರುನೋಡುತ್ತಿದ್ದಾರೆ. ತಮ್ಮ ಬೇಡಿಕೆಗಳ ಈಡೇರಿಕೆಯ ಭರವಸೆ ನೀಡುವಂತಹ ಪಕ್ಷಗಳ ಪರವಾಗಿ ನಿಲ್ಲಲು ಚಿಂತನೆ ನಡೆಸಿದ್ದಾರೆ. 

ಈ ಕುರಿತು ಚರ್ಚಿಸಲು ಏಪ್ರಿಲ್‌ 22ರಂದು ನಗರದ ಚೌಡಯ್ಯ ಸ್ಮಾರಕ ಸಭಾಂಗಣದಲ್ಲಿ ಕಾಂಗ್ರೆಸ್‌, ಬಿಜೆಪಿ, ಜೆಡಿಎಸ್‌ ಮತ್ತು ಆಮ್‌ ಆದ್ಮಿ ಪಕ್ಷದ ಮುಖಂಡರನ್ನು ಆಹ್ವಾನಿಸಿದ್ದು, ಅಲ್ಲಿ ನಮ್ಮ ಸಮಸ್ಯೆಗಳನ್ನು ಆ ನಾಯಕರ ಮುಂದಿಡಲಾಗುವುದು. ನಂತರ ಯಾವ್ಯಾವ ಪಕ್ಷಗಳು ಏನು ಭರವಸೆ ನೀಡಿವೆ ಎಂಬುದನ್ನು ಅಪಾರ್ಟ್‌ಮೆಂಟ್‌ ನಿವಾಸಿಗಳಿಗೆ ತಿಳಿಸಲಾಗುವುದು. ಅದನ್ನು ಆಧರಿಸಿ ಸ್ವತಃ ನಿವಾಸಿಗಳು ಯಾರನ್ನು ಬೆಂಬಲಿಸಬೇಕು ಎಂಬುದನ್ನು ನಿರ್ಧರಿಸುತ್ತಾರೆ ಎಂದು ಬೆಂಗಳೂರು ಅಪಾರ್ಟ್‌ಮೆಮಟ್‌ ಫೆಡರೇಷನ್‌ (ಬಿಎಎಫ್) ಕಾರ್ಯದರ್ಶಿ ಕೆ.ವಿ. ಪ್ರಸನ್ನ “ಉದಯವಾಣಿ’ಗೆ ತಿಳಿಸಿದರು. 

ಹಠಕ್ಕೆ ಬಿದ್ದ ಅಪಾರ್ಟ್‌ಮೆಂಟ್‌ ನಿವಾಸಿಗಳು: ಎಸ್‌ಟಿಪಿ ಸೇರಿದಂತೆ ಹಲವು ಸಮಸ್ಯೆಗಳನ್ನು ತೆಗೆದುಕೊಂಡು ಅನೇಕ ಬಾರಿ ಸ್ಥಳೀಯ ಕಾರ್ಪೋರೇಟರ್‌, ಶಾಸಕರ ಬಳಿ ಹೋಗಿದ್ದೇವೆ. ಆದರೆ, ಅವರೆಲ್ಲರಿಂದ “ನೀವು (ಅಪಾರ್ಟ್‌ಮೆಂಟ್‌ ನಿವಾಸಿಗಳು) ವೋಟು ಹಾಕುವುದೇ ಇಲ್ವಲ್ಲಾ’ ಎಂಬ ಉತ್ತರ ಬರುತ್ತಿತ್ತು. ಆಗ, ನಮ್ಮ ಮತದಾನದ ಹಕ್ಕಿನ ಬಗ್ಗೆ ಮನದಟ್ಟಾಯ್ತು.

ಇದೇ ಕಾರಣಕ್ಕೆ ಹಠಕ್ಕೆ ಬಿದ್ದು, ಮತದಾರರ ನೋಂದಣಿ ಮಾಡಿಸಿದ್ದೇವೆ. ಇದರ ಫ‌ಲವಾಗಿ ಸುಮಾರು 25 ಸಾವಿರಕ್ಕೂ ಅಧಿಕ ಮತದಾರರು ಸೇರ್ಪಡೆಯಾಗಿದ್ದಾರೆ. ತಮ್ಮ ಊರುಗಳಲ್ಲಿರುವ ಮತದಾರರ ಗುರುತಿನ ಚೀಟಿ ರದ್ದುಪಡಿಸಿ, ಬೆಂಗಳೂರಿನಲ್ಲಿ ನೋಂದಣಿ ಮಾಡಿಸಿದ್ದೇವೆ. ಅಲ್ಲದೆ, ಗರಿಷ್ಠ ಮತದಾನಕ್ಕೆ ಪಣತೊಟ್ಟಿದ್ದೇವೆ. ಈ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣಗಳ ಮೂಲಕ ಮತ ಚಲಾಯಿಸುವಂತೆ ಮನವಿ ಮಾಡಲಾಗುತ್ತಿದೆ.

ಅಪಾರ್ಟ್‌ಮೆಂಟ್‌ಗಳಲ್ಲಿ ಈ ಸಂಬಂಧದ ಹೋಲ್ಡಿಂಗ್‌ ಹಾಕಲಾಗಿದೆ. ವಾಯುವಿಹಾರಕ್ಕೆ ಸಿಕ್ಕಲ್ಲಿ ಮತ ಹಾಕುವಂತೆ ಕೋರುವುದು ಸೇರಿದಂತೆ ಹಲವು ರೀತಿಯ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಪ್ರಸನ್ನ ಮಾಹಿತಿ ನೀಡಿದರು. ಸಾಮಾನ್ಯವಾಗಿ ಪ್ರತಿ ಚುನಾವಣೆಯಲ್ಲಿ ಈ ಅಪಾರ್ಟ್‌ಮೆಂಟ್‌ ನಿವಾಸಿಗಳ ಮತದಾನದ ಪ್ರಮಾಣ ಶೇ. 20ಕ್ಕಿಂತ ಕಡಿಮೆ ಇರುತ್ತದೆ. ಈ ಸಲ ಇದನ್ನು ಶೇ. 80ಕ್ಕೆ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದೂ ಅವರು ಹೇಳಿದರು. 

ನಿರ್ಣಾಯಕ ಆಗುವ ಸಾಧ್ಯತೆ: ನಗರದಲ್ಲಿ 100ಕ್ಕೂ ಅಧಿಕ ಫ್ಲ್ಯಾಟ್‌ಗಳಿರುವ 4-5 ಸಾವಿರ ಅಪಾರ್ಟ್‌ಮೆಂಟ್‌ಗಳೂ ಸೇರಿ ಒಟ್ಟಾರೆ 10 ಸಾವಿರಕ್ಕೂ ಹೆಚ್ಚು ಅಪಾರ್ಟ್‌ಮೆಂಟ್‌ಗಳಿದ್ದು, ಇದರಲ್ಲಿ ಸುಮಾರು ಎರಡು ಲಕ್ಷ ಮತದಾರರು ಇದ್ದಾರೆ. ಬೊಮ್ಮನಹಳ್ಳಿ, ಹೆಬ್ಟಾಳ, ಸಿ.ವಿ. ರಾಮನ್‌ನಗರ, ಮಹದೇವಪುರ, ಬೆಂಗಳೂರು ದಕ್ಷಿಣ, ಬನ್ನೇರುಘಟ್ಟ ರಸ್ತೆ ಸೇರಿದಂತೆ ಮತ್ತಿತರ ಕಡೆಗಳಲ್ಲಿ ಅಪಾರ್ಟ್‌ಮೆಂಟ್‌ಗಳು ಹೆಚ್ಚಿನ ಸಂಖ್ಯೆಯಲ್ಲಿವೆ.

ಅಲ್ಲೆಲ್ಲಾ ಅಂದುಕೊಂಡಂತೆ ಗರಿಷ್ಠ ಪ್ರಮಾಣದಲ್ಲಿ ಮತ ಚಲಾಯಿಸಿದರೆ, ಈ ಅಪಾರ್ಟ್‌ಮೆಂಟ್‌ ನಿವಾಸಿಗಳು ನಿರ್ಣಾಯಕ ಆಗುವ ಸಾಧ್ಯತೆ ಇದೆ ಎಂದು ಯುವ ಮತದಾರ ನೋಂದಣಿ ಮತ್ತು ಜಾಗೃತಿ ಅಭಿಯಾನ ಕಾರ್ಯಕರ್ತ ಡಿ.ವಿ. ಆನಂದ್‌ ಅಭಿಪ್ರಾಯಪಡುತ್ತಾರೆ. ಕಳೆದ ಚುನಾವಣೆಗಳಿಗೆ ಹೋಲಿಸಿದರೆ, ಅಪಾರ್ಟ್‌ಮೆಂಟ್‌ ನಿವಾಸಿಗಳಲ್ಲಿ ಈ ಬಾರಿ ಆಸಕ್ತಿ ಇದೆ. ಮತ ಚಲಾಯಿಸಲು ಅವರೆಲ್ಲಾ ಉತ್ಸುಕರಾಗಿದ್ದಾರೆ. ಸಾವಿರಾರು ಮತದಾರರನ್ನು ಸ್ವತಃ ನಾನೇ ನೋಂದಣಿ ಮಾಡಿಸಿದ್ದೇನೆ ಎಂದೂ ಆನಂದ್‌ ತಿಳಿಸುತ್ತಾರೆ. 

ಬೇಡಿಕೆಗಳು: ಕೊಳಚೆನೀರು ಸಂಸ್ಕರಣಾ ಘಟಕಕ್ಕೆ ಸಂಬಂಧಿಸಿದಂತೆ ಸ್ಪಷ್ಟ ಮಾರ್ಗಸೂಚಿ ಹೊರಡಿಸಬೇಕು. ನೀರಿನ ಶುಲ್ಕ ಸಾಮಾನ್ಯವಾಗಿರಬೇಕು. ಘನತ್ಯಾಜ್ಯ ಸಂಗ್ರಹಕ್ಕೆ ಸೆಸ್‌ ಪಡೆಯಲಾಗುತ್ತಿದೆ. ಆದರೆ, ಅದಕ್ಕೆ ಪೂರಕ ಸೌಲಭ್ಯಗಳನ್ನು ಒದಗಿಸಿಲ್ಲ. ಇದನ್ನು ಪೂರೈಸಬೇಕು. ವಿನಾಕಾರಣ ಅಪಾರ್ಟ್‌ಮೆಂಟ್‌ಗಳನ್ನು ಟಾರ್ಗೆಟ್‌ ಮಾಡಬಾರದು. 

-10 ಸಾವಿರ ನಗರದಲ್ಲಿರುವ ಅಂದಾಜು ಅಪಾರ್ಟ್‌ಮೆಂಟ್‌ಗಳು
-2 ಲಕ್ಷ ಅಪಾರ್ಟ್‌ಮೆಂಟ್‌ಗಳಲ್ಲಿರುವ ಮತದಾರರು
-25 ಸಾವಿರ ಅಪಾರ್ಟ್‌ಮೆಂಟ್‌ಗಳಿಂದ ಹೊಸದಾಗಿ ಸೇರ್ಪಡೆಗೊಂಡ ಮತದಾರರು
-250 ಬೆಂಗಳೂರು ಅಪಾರ್ಟ್‌ಮೆಂಟ್‌ ಫೆಡರೇಷನ್‌ನಲ್ಲಿರುವ ಗ್ರೂಪ್‌ಗ್ಳು

* ವಿಜಯಕುಮಾರ್‌ ಚಂದರಗಿ

ಟಾಪ್ ನ್ಯೂಸ್

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಕೊಲೆಗೈದ

Crime: ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಕೊಲೆಗೈದ

Bengaluru: ಖೋಖೋ ತೀರ್ಪು ವಿವಾದ: ಫೀಲ್ಡ್‌ನಲ್ಲೇ ಚಾಕು, ಡ್ಯಾಗರ್‌ ಹಿಡಿದು ಹೊಡೆದಾಟ!

Bengaluru: ಖೋಖೋ ತೀರ್ಪು ವಿವಾದ: ಫೀಲ್ಡ್‌ನಲ್ಲೇ ಚಾಕು, ಡ್ಯಾಗರ್‌ ಹಿಡಿದು ಹೊಡೆದಾಟ!

ಸ್ನೇಹಿತನ ಪತ್ನಿಯ ಕ್ಯಾನ್ಸರ್‌ ಚಿಕಿತ್ಸೆಗಾಗಿ ಬೈಕ್‌ ಕಳ್ಳತನಕ್ಕಿಳಿದ ಕುಚುಕು ಗೆಳೆಯ! 

ಸ್ನೇಹಿತನ ಪತ್ನಿಯ ಕ್ಯಾನ್ಸರ್‌ ಚಿಕಿತ್ಸೆಗಾಗಿ ಬೈಕ್‌ ಕಳ್ಳತನಕ್ಕಿಳಿದ ಕುಚುಕು ಗೆಳೆಯ! 

Shivakumar

Bengaluru: ಅಧಿವೇಶನದ ಬಳಿಕ ಕಾವೇರಿ ನೀರಿನ ದರ ಪರಿಷ್ಕರಣೆ: ಡಿ.ಕೆ.ಶಿವಕುಮಾರ್‌

Bengaluru: ಕೋರ್ಟ್‌ನಲ್ಲೇ ವಕೀಲೆಗೆ ಚಾಕು ಇರಿದ ಆರೋಪಿ ಸೆರೆ

Bengaluru: ಕೋರ್ಟ್‌ನಲ್ಲೇ ವಕೀಲೆಗೆ ಚಾಕು ಇರಿದ ಆರೋಪಿ ಸೆರೆ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.