ಕೊಡಗಿಗೆ ಇಂದು ರಕ್ಷಣಾ ಸಚಿವೆ : ಹಾನಿಗೊಳಗಾದ ಪ್ರದೇಶಗಳ ವೀಕ್ಷಣೆ
Team Udayavani, Aug 24, 2018, 6:40 AM IST
ಬೆಂಗಳೂರು:ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಶುಕ್ರವಾರ ಕೊಡಗಿನಲ್ಲಿ ನೆರೆಯಿಂದ ಹಾನಿಗೀಡಾದ ಪ್ರದೇಶಗಳ ಪರಿಶೀಲನೆ ನಡೆಸಲಿದ್ದಾರೆ.
ಬೆಳಗ್ಗೆ 8.20 ಕ್ಕೆ ಮೈಸೂರಿನಿಂದ ಹೊರಟು 9 ಕ್ಕೆ ಹಾರಂಗಿ ಹೆಲಿಪ್ಯಾಡ್ ತಲುಪಿ ಅಲ್ಲಿಂದ ಕುಶಾಲನಗರದ ಕುವೆಂಫು ಬಡಾವಣೆ, ಸಾಯಿ ಬಡಾವಣೆಗಳಲ್ಲಿ ಸಂತ್ರಸ್ತರನ್ನು ಭೇಟಿ ಮಾಡಲಿದ್ದಾರೆ.
ನಂತರ ಮಾದಾಪುರದಲ್ಲಿ ಭೂ ಕುಸಿತಕ್ಕೆ ಒಳಗಾಗಿರುವ ಪ್ರದೇಶಕ್ಕೆ ಭೇಟಿ ನೀಡಿ ವೀಕ್ಷಣೆ ಮಾಡಿ ಮಡಿಕೇರಿಯಲ್ಲಿ ಮೈತ್ರಿ ಹಾಲ್ನಲ್ಲಿ ಪುನರ್ವಸತಿ ಕೇಂದ್ರದಲ್ಲಿ ಆಶ್ರಯ ಪಡೆದಿರುವ ಜನರ ಅಹವಾಲು ಆಲಿಸಲಿದ್ದಾರೆ.
ನಂತರ ಕೊಡಗು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅಧಿಕಾರಿಗಳ ಜತೆ ಸಭೆ ನಡೆಸಿ ಪರಿಹಾರ ಕಾರ್ಯಗಳ ಬಗ್ಗೆ ಸಮಾಲೋಚ ನಡೆಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.