16ನೇ ಚಿತ್ರಸಂತೆ ಇಂದು


Team Udayavani, Jan 6, 2019, 6:49 AM IST

16ne-chitra.jpg

ಬೆಂಗಳೂರು: ರಜಾ ದಿನವಾದ ಭಾನುವಾರ (ಜ.6) ನಡೆಯಲಿರುವ 16ನೇ ಚಿತ್ರಸಂತೆಗೆ ನಗರದ ಕುಮಾರ ಕೃಪಾ ರಸ್ತೆ  ಸಜ್ಜಾಗಿದೆ. ಈ ಬಾರಿ “ಮನೆಗೊಂದು ಕಲಾಕೃತಿ’ ಶೀರ್ಷಿಕೆಯಡಿ ಚಿತ್ರ ಸಂತೆ ನಡೆಯುತ್ತಿದ್ದು, ರಾಷ್ಟ್ರಪಿತ ಮಹಾತ್ಮಗಾಂಧಿ ಅವರ 150ನೇ ಜನ್ಮದಿನಾಚರಣೆಗೆ ಈ ಚಿತ್ರ ಸಂತೆಯನ್ನು ಸಮರ್ಪಿಸಲಾಗಿದೆ.

ಈ ಬಾರಿ ಚಿತ್ರಸಂತೆಯಲ್ಲಿ 16 ರಾಜ್ಯಗಳ 1,500 ಕಲಾವಿದರು ಭಾಗವಹಿಸುತ್ತಿದ್ದು, ನಾಲ್ಕು ಲಕ್ಷ ಜನ ಸೇರುವ ನಿರೀಕ್ಷೆಯಿದೆ. ಪರಿಷತ್ತಿನ ವತಿಯಿಂದ ಸಂತೆಗೆ ಬರುವ ಕಲಾಸಕ್ತರಿಗೆ ಹಾಗೂ ಗ್ರಾಹಕರಿಗೆ ಡಿಜಿಟಲ್‌ ಹಣಪಾವತಿ, ನಾಲ್ಕು ಸಂಚಾರಿ ಎಟಿಎಂ, ಪ್ರತ್ಯೇಕವಾಗಿ ಫುಡ್‌ ಕೋರ್ಟ್‌ನಂತಹ ಸೂಕ್ತ ವ್ಯವಸ್ಥೆ ಮಾಡಲಾಗಿದೆ. 100 ರೂ.ನಿಂದ 1ಲಕ್ಷ ರೂ. ಬೆಲೆಯ ಚಿತ್ರಕಲಾಕೃತಿಗಳು ಪ್ರದರ್ಶನ ಹಾಗೂ ಮಾರಾಟಕ್ಕಿವೆ.

ಕಳೆದ ವರ್ಷದ ಚಿತ್ರ ಸಂತೆಯಲ್ಲಿ  2 ಕೋಟಿ ರೂ ವಹಿವಾಟು ನಡೆದಿದ್ದು, ಈ ಬಾರಿ 4 ಕೋಟಿ ವಯಿವಾಟು ನಿರೀಕ್ಷಿಸಲಾಗಿದೆ. ಪ್ರಮುಖವಾಗಿ ಗಾಂಧೀಜಿಯವರ ಕುರಿತ ಕಲಾಕೃತಿಗಳ ಜತಗೆ ಮೈಸೂರಿನ ಸಾಂಪ್ರದಾಯಕ ಶೈಲಿ, ತಂಜಾವೂರು ಶೈಲಿ, ರಾಜಸ್ಥಾನಿ ಶೈಲಿ, ಮಧುಬಿನಿಯ ಶೈಲಿ, ತೈಲ ಜಲವರ್ಣಗಳ ಕಲಾಕೃತಿಗಳು, ಅಕ್ರಿಲಿಕ್‌, ಕೊಲಾಜ್‌, ಲಿಥೋಗ್ರಾಫ್ ಕಲಾಕೃತಿಗಳು ಪ್ರದರ್ಶನದಲ್ಲಿ ಇವೆ. 

ವಿಶೇಷವಾಗಿ ಪ್ರದರ್ಶನಕ್ಕೆ ಆಗಮಿಸುವ ಕಲಾರಸಿಕರ ಭಾವಚಿತ್ರಗಳನ್ನು ಸ್ಥಳದಲ್ಲಿಯೇ ರಚಿಸಿ ಕೊಡುವ ಕಲಾವಿದರ ದಂಡು ಈ ಬಾರಿ ಚಿತ್ರ ಸಂತೆಯಲ್ಲಿದೆ. ಇವರ ಜತೆಗೆ ವ್ಯಂಗಚಿತ್ರಕಾರರು ಇರಲಿದ್ದಾರೆ. ಬೆಳಗ್ಗೆ 10 ಗಂಟೆಗೆ ಮುಖ್ಯ.ಮಂತ್ರಿ ಎಚ್‌.ಡಿ ಕುಮಾರ ಸ್ವಾಮಿ ಅವರು ಉದ್ಘಾಟಿಸಲಿದ್ದಾರೆ. ಅತಿಥಿಗಳಾಗಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌, ಸಚಿವ ಡಿ.ಕೆ.ಶಿವಕುಮಾರ್‌, ಮೇಯರ್‌ ಗಂಗಾಬಿಕೆ ಸೇರಿದಂತೆ ಮತ್ತಿತ್ತರ ಭಾಗವಹಿಸುತ್ತಿದ್ದಾರೆ. 

ಗಾಂಧಿ ಕುಟೀರ: ಹಿಂದೆ ಮಹಾತ್ಮ ಗಾಂಧೀಜಿ ಅವರು ಬೆಂಗಳೂರಿಗೆ ಬಂದಾಗ ಕುಮಾರ ಕೃಪಾದಲ್ಲಿ ವಾಸ್ತವ್ಯ ಹೂಡುತ್ತಿದ್ದು, ಚಿತ್ರಕಲಾ ಪರಿಷತ್ತಿನ ಆವರಣದಲ್ಲಿನ ಕಲ್ಲು ಬಂಡೆ ಮೇಲೆ ಧ್ಯಾನ ಮಾಡುತ್ತಿದ್ದರು. ಅದರ ನೆನಪಿಗಾಗಿ ಚಿತ್ರ ಸಂತೆಯಲ್ಲಿ ಆ ಬಂಡೆ ಮೇಲೆ ಬಿದಿರಿನಿಂದ ಗಾಂಧಿ ಕುಟೀರವನ್ನು ವಿನ್ಯಾಸಪಡಿಸಿದ್ದು, ಅದರ ಒಳಗೆ ದೃಶ್ಯ ಕಲೆಯ ಮೂಲಕ ಗಾಂಧೀಜಿ ಅವರಿಗೆ ಗೌರವ ಸಮರ್ಪಿಸಲಾಗುತ್ತಿದೆ. ಗಾಂಧೀಜಿ ಅವರ ಕೆಲವು ಪ್ರಮುಖ ಫೋಟೊಗಳನ್ನು ಗಾಂಧಿ ಭವನ ನೀಡಲಿದೆ.

ಬೃಹತ್‌ ಚರಕ ಆಕರ್ಷಣೆ: ಚಿತ್ರಸಂತೆ ಗಾಂಧೀಜಿಯವರಿಗೆ ಸಮರ್ಪಿಸಿರುವುದರಿಂದ ಚಿತ್ರಕಲಾ ಮಹಾವಿದ್ಯಾಲಯದ ಅಧ್ಯಾಪಕ ಮತ್ತು ವಿದ್ಯಾರ್ಥಿಗಳು ಬೃಹತ್‌ ಗಾತ್ರದ ಗಾಂಧೀ ಕನ್ನಡ ಮತ್ತು ಚರಕವನ್ನು ಚಿತ್ರಕಲಾ ಪರಿಷತ್ತಿನ ಆವರಣದಲ್ಲಿ ನಿರ್ಮಿಸಲಾಗಿದೆ. ಈ ಎರಡು ಕಲಾಕೃತಿಗಳು ಚಿತ್ರ ಸಂತೆಯ ಪ್ರಮುಖ ಆಕರ್ಷಣೆಯಾಗಿವೆ.

ಸಂಚಾರ ನಿರ್ಬಂಧ: ಕುಮಾರಕೃಪ ರಸ್ತೆ, ಶಿವಾನಂದ ಸರ್ಕಲ್‌, ವಿಂಡ್ಸರ್‌ ಮ್ಯಾನರ್‌ ಹಾಗು ಕ್ರಿಸೆಂಟ್‌ ರಸ್ತೆಯ ಸೇರಿದಂತೆ ಚಿತ್ರ ಸಂತೆ ನಡೆಯುವ ಸ್ಥಳಗಳಲ್ಲಿ ಬೆಳಗ್ಗೆ 6 ರಿಂದ ರಾತ್ರಿ 9 ಗಂಟೆವರೆಗೆ ವಾಹನ ಸಂಚಾರ ನಿರ್ಬಂಧಿಸಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಈ ರಸ್ತೆಗಳಲ್ಲಿ 25 ಅಡಿ ಅಂತರದಲ್ಲಿ ಸಿಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.

ಟಾಪ್ ನ್ಯೂಸ್

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.