ಇಂದಿನಿಂದ ಸಿರಿಧಾನ್ಯ ಅಂತಾರಾಷ್ಟ್ರೀಯ ವಾಣಿಜ್ಯ ಮೇಳ


Team Udayavani, Jan 19, 2018, 11:23 AM IST

siridhanay.jpg

ಬೆಂಗಳೂರು: ಸಾವಯವ ಮತ್ತು ಸಿರಿಧಾನ್ಯಗಳ ಅಂತಾರಾಷ್ಟ್ರೀಯ ವಾಣಿಜ್ಯ ಮೇಳಕ್ಕೆ ನಗರದ ಅರಮನೆ ಸಜ್ಜುಗೊಂಡಿದೆ. ದೇಶ-ವಿದೇಶಗಳಿಂದ ಆಹಾರ ಕಂಪನಿಗಳು, ವಿಜ್ಞಾನಿಗಳು ಆಗಮಿಸಲಿದ್ದು, ಮೂರು ದಿನಗಳ ಮೇಳದಲ್ಲಿ ಸುಮಾರು ಹತ್ತು ಸಾವಿರ ರೈತರು, 200ಕ್ಕೂ ಅಧಿಕ ಖರೀದಿದಾರರು, ಸಿರಿಧಾನ್ಯಗಳನ್ನು ಮೌಲ್ಯವರ್ಧನೆ ಮಾಡುವ ನುರಿತ ತಜ್ಞರು ಭಾಗವಹಿಸಲಿದ್ದಾರೆ.

ಅಂದಾಜು 500 ವ್ಯಾಪಾರಿಗಳು-ರೈತರ ನಡುವೆ ಸಭೆಗಳು ನಡೆಯಲಿದೆ ಎಂದು ಕೃಷಿ ಇಲಾಖೆ ಆಯುಕ್ತ ಜಿ. ಸತೀಶ್‌ ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಮೇಳಕ್ಕೆ ಶುಕ್ರವಾರ ಬೆಳಗ್ಗೆ 11ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದು, ಕೇಂದ್ರ ಕೃಷಿ ಸಚಿವ ರಾಧಾಮೋಹನ್‌ ಸಿಂಗ್‌ ವಸ್ತುಪ್ರದರ್ಶನ ಉದ್ಘಾಟಿಸುವರು.

ಕೇಂದ್ರ ಸಚಿವರಾದ ಅನಂತಕುಮಾರ್‌, ಡಿ.ವಿ. ಸದಾನಂದಗೌಡ, ನಿರ್ಮಲಾ ಸೀತಾರಾಮನ್‌, ಹರ್‌ಸಿಮ್ರತ್‌ ಕೌರ್‌ ಬಾದಲ್‌, ಸಚಿವರಾದ ಕೃಷ್ಣ ಭೈರೇಗೌಡ, ಕೆ.ಜೆ. ಜಾರ್ಜ್‌, ಎಸ್‌.ಎಸ್‌. ಮಲ್ಲಿಕಾರ್ಜುನ ಮತ್ತಿತರರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ. 21ರ ಸಮಾರೋಪದಲ್ಲಿ ಸಚಿವ ಆರ್‌.ವಿ. ದೇಶಪಾಂಡೆ ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು.

ವಾಣಿಜ್ಯ ಮೇಳದಲ್ಲಿ ಸುಮಾರು 350 ಮಳಿಗೆಗಳು ತಲೆಯೆತ್ತಲಿವೆ. ಈ ಪೈಕಿ ಈಗಾಗಲೇ 225 ಕಂಪನಿಗಳು ಖಚಿತಪಡಿಸಿದ್ದು, ಉಳಿದವು ಖರೀದಿದಾರರಾಗಿ ಭಾಗವಹಿಸುವ ಭರವಸೆ ನೀಡಿವೆ ಎಂದರು.  

ವ್ಯವಸ್ಥೆ: ಸಾರ್ವಜನಿಕರಿಗೆ ಮೇಳದಲ್ಲಿ ಉಚಿತ ಪ್ರವೇಶ ಕಲ್ಪಿಸಲಾಗಿದೆ. ವಿಧಾನಸೌಧ ಮೆಟ್ರೋ ನಿಲ್ದಾಣದಿಂದ ಅರಮನೆಗೆ ಬರಲು ಪ್ರತಿ 15ರಿಂದ 20 ನಿಮಿಷಕ್ಕೊಂದು ಬಿಎಂಟಿಸಿ ಬಸ್‌ ವ್ಯವಸ್ಥೆ ಮಾಡಿದ್ದು, ಪ್ರಯಾಣ ಉಚಿತವಾಗಿದೆ ಎಂದರು. 

ಖಾನಾವಳಿ ಮೇಳದ ಕೇಂದ್ರ ಬಿಂದು: ಈ ಬಾರಿಯ ಮೇಳದಲ್ಲಿ ಬೃಹತ್‌ ಖಾನಾವಳಿಯನ್ನು ಪರಿಚಯಿಸಲಾಗಿದ್ದು, 20 ರೆಸ್ಟೋರೆಂಟ್‌ಗಳು ಔಟ್‌ಲೆಟ್‌ಗಳನ್ನು ಸ್ಥಾಪಿಸಿವೆ. ಕೃಷಿ ಇಲಾಖೆ, ರಾಮಯ್ಯ ಅನ್ವಯಿಕ ವಿಜ್ಞಾನಗಳ ವಿಶ್ವವಿದ್ಯಾಲಯದ ನ್ಯೂಟ್ರಾಸುಟಿಕಲ್ಸ್‌ ಸಂಶೋಧನೆ ಕೇಂದ್ರದ ಸಹಯೋಗದಲ್ಲಿ ಈ “ಖಾನಾವಳಿ’ ತೆರೆಯಲಾಗಿದ್ದು,

ಸಾಂಪ್ರದಾಯಿಕ ಸಿರಿಧಾನ್ಯ ಆಹಾರದ ಟ್ರೆಂಡ್‌, ಅಡಿಗೆ ಪ್ರದರ್ಶನ, ಸ್ಪರ್ಧೆಗಳು ಇಲ್ಲಿ ನಡೆಯಲಿವೆ. ರೈತರಿಗಾಗಿ ಪ್ರತ್ಯೇಕ ಕೃಷಿ ಕಾರ್ಯಾಗಾರ ಕೂಡ ಏರ್ಪಡಿಸಲಾಗಿದೆ. ವಿದ್ಯಾರ್ಥಿಗಳಿಗಾಗಿ ಪೋಸ್ಟರ್‌ ಮತ್ತು ಮಕ್ಕಳಿಗೆ ಚಿತ್ರಕಲಾ ಸ್ಪರ್ಧೆಗೂ ಇದು ವೇದಿಕೆ ಆಗಲಿದೆ ಎಂದು ಆಯುಕ್ತರು ಹೇಳಿದರು.

ಟಾಪ್ ನ್ಯೂಸ್

Breach Of Privacy….; ಐಪಿಎಲ್ ಪ್ರಸಾರಕರ ವಿರುದ್ಧ ರೇಗಾಡಿದ ರೋಹಿತ್ ಶರ್ಮಾ

Breach Of Privacy….; ಐಪಿಎಲ್ ಪ್ರಸಾರಕರ ವಿರುದ್ಧ ರೇಗಾಡಿದ ರೋಹಿತ್ ಶರ್ಮಾ

13-doctor

Health: ಸದಾ ಎಚ್ಚರದಿಂದಿರಿ: ನಿಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಿ

Basavakalyana; ಬ್ಯಾಂಕ್ ಗೆ ಜಮೆ ಮಾಡಲು ತಂದಿದ್ದ 1.37 ಲಕ್ಷ ರೂ‌ ಎಗರಿಸಿದ ಖದೀಮ

Basavakalyana; ಬ್ಯಾಂಕ್ ಗೆ ಜಮೆ ಮಾಡಲು ತಂದಿದ್ದ 1.37 ಲಕ್ಷ ರೂ‌ ಎಗರಿಸಿದ ಖದೀಮ

12-

Heat Weather: ಹಬೆಯಾಡುತ್ತಿರುವ ವಸುಂಧರೆ

11-candle

UV Fusion: ಆಯಸ್ಸು ಅಳಿಯುವ ಮುನ್ನ

10-ಉವ-ಉಸಿಒನ

Madhur Temple: ಏಕದಂತನ ಚಿತ್ರವೇ ಮೂರ್ತಿ ಆದ ಪರಿ

CSKvsRCB; ಹಲವು ದಾಖಲೆಗಳಿಗೆ ಸಾಕ್ಷಿಯಾದ ಬೆಂಗಳೂರು – ಚೆನ್ನೈ ಪಂದ್ಯ

CSKvsRCB; ಹಲವು ದಾಖಲೆಗಳಿಗೆ ಸಾಕ್ಷಿಯಾದ ಬೆಂಗಳೂರು – ಚೆನ್ನೈ ಪಂದ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: ಜಗಳ ವೇಳೆ ತಳ್ಳಿದಾಗ ವಿದ್ಯುತ್‌ ತಂತಿ ಮೇಲೆ ಬಿದ್ದ ಯುವಕ ಸಾವು: 2 ಆರೋಪಿಗಳ ಬಂಧನ

Crime: ಜಗಳ ವೇಳೆ ತಳ್ಳಿದಾಗ ವಿದ್ಯುತ್‌ ತಂತಿ ಮೇಲೆ ಬಿದ್ದ ಯುವಕ ಸಾವು: 2 ಆರೋಪಿಗಳ ಬಂಧನ

7

ಇನ್‌ಸ್ಪೆಕ್ಟರ್‌ ಹೆಸರಲ್ಲಿ ಸುಲಿಗೆ: ಬೆಸ್ಕಾಂ ಎಂಜಿನಿಯರ್‌ ಸೆರೆ

Bengaluru: 14 ಲಕ್ಷ ರೂ. ಒಡವೆ ಕದಿದ್ದ ಬಾಲಕ ವಶಕ್ಕೆ

Bengaluru: 14 ಲಕ್ಷ ರೂ. ಒಡವೆ ಕದಿದ್ದ ಬಾಲಕ ವಶಕ್ಕೆ

Bengaluru: ಬೆದರಿಸಲು ನೇಣಿಗೆ ಕೊರಳೊಡ್ಡಿದ ಪತಿ ದಿಢೀರ್‌ ಕುಣಿಕೆ ಬಿಗಿದು ಸಾವು

Bengaluru: ಬೆದರಿಸಲು ನೇಣಿಗೆ ಕೊರಳೊಡ್ಡಿದ ಪತಿ ದಿಢೀರ್‌ ಕುಣಿಕೆ ಬಿಗಿದು ಸಾವು

Fraud: ಗೃಹ ಸಚಿವರ ಆಪ್ತ ಎಂದು ನಂಬಿಸಿ ಹಲವರಿಗೆ ವಂಚನೆ

Fraud: ಗೃಹ ಸಚಿವರ ಆಪ್ತ ಎಂದು ನಂಬಿಸಿ ಹಲವರಿಗೆ ವಂಚನೆ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Davanagere; ಭಾರೀ ಮಳೆಗೆ ನೆಲಕಚ್ಚಿದ ಭತ್ತದ ಬೆಳೆ

Davanagere; ಭಾರೀ ಮಳೆಗೆ ನೆಲಕಚ್ಚಿದ ಭತ್ತದ ಬೆಳೆ

Breach Of Privacy….; ಐಪಿಎಲ್ ಪ್ರಸಾರಕರ ವಿರುದ್ಧ ರೇಗಾಡಿದ ರೋಹಿತ್ ಶರ್ಮಾ

Breach Of Privacy….; ಐಪಿಎಲ್ ಪ್ರಸಾರಕರ ವಿರುದ್ಧ ರೇಗಾಡಿದ ರೋಹಿತ್ ಶರ್ಮಾ

15-rain

Rain: ಕಳಸ ತಾಲೂಕಿನಾದ್ಯಂತ ಭಾರೀ ಗಾಳಿ-ಮಳೆ; ಜನಜೀವನ ಅಸ್ತವ್ಯಸ್ತ, ವಿದ್ಯುತ್ ಸಂಪರ್ಕ ಕಡಿತ

ರಾಜ್ಯ ಯಾವ ದಿಕ್ಕಿನತ್ತ ಸಾಗುತ್ತಿದೆ…: ಪ್ರದೀಪ ಶೆಟ್ಟರ

Hubli; ರಾಜ್ಯ ಯಾವ ದಿಕ್ಕಿನತ್ತ ಸಾಗುತ್ತಿದೆ…: ಪ್ರದೀಪ ಶೆಟ್ಟರ

14-panaji

Panaji: ಅಪಾಯಕಾರಿ ಮರ ಕಡಿಯಲು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.