ರಾಜ್ಯಾದ್ಯಂತ ಇಂದು ರಂಜಾನ್‌ ಹಬ್ಬ ;ಗಣ್ಯರ ಶುಭಾಶಯಗಳು


Team Udayavani, Jun 26, 2017, 3:45 AM IST

25BNP-(16).jpg

ಬೆಂಗಳೂರು: ಇಸ್ಲಾಮಿಕ್‌ ಕ್ಯಾಲೆಂಡರ್‌ನ ಶವ್ವಾಲ್‌ ತಿಂಗಳ ಮೊದಲ ದಿನದ ಚಂದ್ರದರ್ಶನ ಭಾನುವಾರ ಸಂಜೆ ಆಗಿದ್ದು, ಅದರಂತೆ ಸೋಮವಾರ (ಜೂ.26) ಕರಾವಳಿ ಜಿಲ್ಲೆಗಳು ಹೊರತುಪಡಿಸಿ ರಾಜ್ಯಾದ್ಯಂತ ಮುಸ್ಲಿಂ ಬಾಂಧವರು ಈದ್‌ ಉಲ್‌ ಫಿತ್ರ (ರಂಜಾನ್‌ ಹಬ್ಬ) ಆಚರಿಸಲಿದ್ದಾರೆ ಎಂದು ಕರ್ನಾಟಕ ರಾಜ್ಯ ಚಂದ್ರದರ್ಶನ ಸಮಿತಿ ಪ್ರಕಟಿಸಿದೆ.

ಕರಾವಳಿ ಭಾಗದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಭಾನುವಾರವೇ ಈದ್‌ ಉಲ್‌ ಫಿತ್ರ ಆಚರಿಸಲಾಯಿತು. ಸೋಮವಾರ ರಾಜ್ಯದ ಉಳಿದ ಎಲ್ಲ ಭಾಗಗಳಲ್ಲಿ ಈದ್‌ ಆಚರಿಸಲಾಗುವುದು ಎಂದು ಸಮಿತಿ ಸದಸ್ಯ ಮೌಲಾನಾ ಮಕ್ಸೂದ್‌ ಇಮ್ರಾನ್‌ ರಶಾದಿ ಮಾಹಿತಿ ನೀಡಿದ್ದಾರೆ.

ಹಬ್ಬದ ಪ್ರಯುಕ್ತ ಮುಸ್ಲಿಂ ಬಾಂಧವರು ಈದ್ಗಾ ಮೈದಾನಗಳಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಿದ್ದಾರೆ. ಬೆಂಗಳೂರು, ಮೈಸೂರು, ಹುಬ್ಬಳ್ಳಿ ಧಾರವಾಡ, ಬೆಳಗಾವಿ, ದಾವಣಗೆರೆ, ರಾಯಚೂರು, ಕಲಬುರಗಿ, ಬೀದರ್‌ ಸೇರಿದಂತೆ ರಾಜ್ಯದ ಎಲ್ಲ ಜಿಲ್ಲಾ, ತಾಲೂಕ ಕೇಂದ್ರಗಳು ಸೇರಿದಂತೆ ಸ್ಥಳೀಯ ಮಟ್ಟದಲ್ಲಿ ನಡೆಯುವ ವಿಶೇಷ ಪ್ರಾರ್ಥನೆಯಲ್ಲಿ ಮುಸ್ಲಿಂ ಬಾಂಧವರು ಪಾಲ್ಗೊಳ್ಳಲಿದ್ದಾರೆ.

ಇದಲ್ಲದೇ ಬೆಂಗಳೂರಿನ ಮಿಲ್ಲರ್ಸ್‌ ಖುದ್ದೂಸ್‌ ಸಾಬ್‌ ಈದ್ಗಾ, ಬನ್ನೇರುಘಟ್ಟ ರಸ್ತೆಯ ಹಜರತ್‌ ಬಿಲಾಲ್‌ ಈದ್ಗಾ, ಮೈಸೂರು ರಸ್ತೆಯ ಚಾಮರಾಜಪೇಟೆ ಈದ್ಗಾ, ಜಯನಗರ 4ನೇ ಬ್ಲಾಕ್‌ನ ಈದ್ಗಾ, ಶಿವಾಜಿನಗರದ ಛೋಟಾ ಮೈದಾನ, ನಾಗವಾರದ ಸಬೀಲುರ್ರಶಾದ್‌ ಅರೆಬಿಕ್‌ ಕಾಲೇಜು ಮೈದಾನ ಸೇರಿದಂತೆ ವಿವಿಧ ಕಡೆ ಈದ್‌ ಪ್ರಾರ್ಥನೆ ನಡೆಯಲಿದೆ.

ನಾಗವಾರದ ಸಬೀಲುರ್ರಶಾದ್‌ ಅರೆಬಿಕ್‌ ಕಾಲೇಜು ಮೈದಾನದಲ್ಲಿ ನಡೆಯಲಿರುವ ಈದ್‌ ಪ್ರಾರ್ಥನೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್‌ ಭಾಗವಹಿಸಲಿದ್ದಾರೆ. ಮುಸ್ಲಿಮರು ಪವಿತ್ರ ಈದ್‌ ಉಲ್‌ ಫಿತ್ರ ಹಬ್ಬಕ್ಕೆ ರಾಜ್ಯಪಾಲ ವಜುಭಾಯಿ ವಾಲಾ, ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್‌, ಕಾರ್ಯಾಧ್ಯಕ್ಷ ದಿನೇಶ್‌ ಗುಂಡೂರಾವ್‌ ಸೇರಿದಂತೆ ಹಲವು ರಾಜಕೀಯ ಮುಖಂಡರು, ಗಣ್ಯರು ಶುಭಾಷಯ ಕೋರಿದ್ದಾರೆ.

ಗಣ್ಯರ ಶುಭಾಶಯಗಳು
ಬೆಂಗಳೂರು:
ಈದುಲ್‌ ಫಿತ್ರ ಎಂದು ಕರೆಯಲಾಗುವ ಮುಸ್ಲಿಮರ ಪವಿತ್ರ ರಂಜಾನ್‌ ಹಬ್ಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜ್ಯದ ಸಮಸ್ತ ಜನತೆಗೆ ಶುಭಾಶಯಗಳನ್ನು ತಿಳಿಸಿದ್ದಾರೆ.

ವ್ಯಕ್ತಿಯ ಮನಃಶುದ್ದಿ ಮತ್ತು ಆತ್ಮಶುದ್ಧಿಗಾಗಿ ಒಂದು ತಿಂಗಳು ಉಪವಾಸ ವೃತ ಆಚರಿಸಿ, ತಿಂಗಳ ಕೊನೆಗೆ ಆಚರಿಸುವ ಹಬ್ಬದ ಸಂದರ್ಭದಲ್ಲಿ ಬಡವರಿಗೆ ದಾನ ಮಾಡುವುದು ರಂಜಾನ್‌ ಹಬ್ಬದ ವಿಶೇಷತೆ. ದಾನದ ಈ ಸಂಪ್ರದಾಯ ತಾನೂ ಬದುಕುವುದರ ಜೊತೆಗೆ ಮತ್ತೂಬ್ಬರನ್ನು ಬದುಕಲು ಅವಕಾಶ ನೀಡಬೇಕು ಎಂಬ ಶ್ರೇಷ್ಠ ಸಂದೇಶ ಸಾರುತ್ತದೆ.

ಒಂದೆಡೆ ಜಾತಿ ಜಾತಿಗಳ ನಡುವೆ ವಿಷ ಬೀಜ ಬಿತ್ತಿ ಕಂದರ ಸೃಷ್ಟಿಸುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಮತ್ತೂಂದಡೆ ಧರ್ಮ ಧರ್ಮಗಳ ನಡುವೆ ಸಂಘರ್ಷಕ್ಕೆ ಕಾರಣವಾಗುತ್ತಿರುವವರ  ಸಂಖ್ಯೆಯೂ ಏರಿಕೆಯಾಗುತ್ತಿದೆ. ಇಂತಹ ಸಂದರ್ಭದಲ್ಲಿ ರಂಜಾನ್‌ ಹಬ್ಬವು ಎಲ್ಲಡೆ ಮತ್ತು ಎಲ್ಲರಲ್ಲೂ ಸಹೋದರತೆ ಮತ್ತು ಸೌಹಾರ್ದತೆ ಮೂಡಿಸಲು ಪ್ರೇರಣೆ ಮತ್ತು ಸ್ಪೂರ್ತಿ ನೀಡಲಿ ಎಂಬುದೇ ನನ್ನ ಮನದಾಳದ ಹಾರೈಕೆ ಎಂದು ಸಿದ್ದರಾಮಯ್ಯ ತಮ್ಮ ಶುಭಾಷಯ ಸಂದೇಶದಲ್ಲಿ ತಿಳಿಸಿದ್ದಾರೆ.

“ಪವಿತ್ರ ಈದ್‌ ಉಲ್‌ ಫಿತ್ರ ಹಬ್ಬದ ಪ್ರಯುಕ್ತ ಸಮಸ್ತ ಮುಸ್ಲಿಂ ಬಾಂಧವರಿಗೆ ಶುಭಾಷಯಗಳನ್ನು ತಿಳಿಸುತ್ತೇನೆ . ಹಬ್ಬವು ಸುಖ, ಆರೋಗ್ಯ ಮತ್ತು ಶಾಂತಿಯುತ ಜೀವನ ದಯಪಾಲಿಸಲಿ ಎಂದು ಹಾರೈಸುತ್ತೇನೆ’.
  – ವಜುಭಾಯಿ ವಾಲಾ, ರಾಜ್ಯಪಾಲ.

“ಶಾಂತಿ ಮತ್ತು ಸಹೋದರ ಭಾವವನ್ನು ಸಂಭ್ರಮದಿಂದ ವ್ಯಕ್ತಪಡಿಸುವ ರೀತಿಯಲ್ಲಿ ಆಚರಿಸಲಾಗುವ ಪವಿತ್ರ ರಂಜಾನ್‌ ಹಬ್ಬದ ಸಂದರ್ಭದಲ್ಲಿ ನಾಡಿನ ಎಲ್ಲ ಮುಸ್ಲಿಂ ಬಾಂಧವರಿಗೆ ಶುಭಾಷಯಗಳನ್ನು ತಿಳಿಸುತೇನೆ. ಎಲ್ಲ ಮತರ್ಧಮಗಳ ಜನರು ಒಗ್ಗಟ್ಟು ಮತ್ತು ಸೌಹಾರ್ದತೆಯಿಂದ ಒಂದೇ ಕುಟುಂಬದ ರೀತಿ ಬದುಕಿ ವಿವಿಧತೆಯಲ್ಲಿ ಏಕತೆ ಕಾಣುವ ಭಾರತದ ಭಾವೈಕ್ಯತೆ ಬಲಗೊಳ್ಳಲಿ. ಜನರ ಬದುಕು ಹಸನಾಗಿ ಸುಖ ಶಾಂತಿ, ಸಮೃದ್ಧಿ ನೆಲೆಸಲಿ ಎಂದು ಹಾರೈಸುತ್ತೇನೆ’.
 - ಡಾ. ಜಿ. ಪರಮೇಶ್ವರ್‌, ಕೆಪಿಸಿಸಿ ಅಧ್ಯಕ್ಷ.

“ಸಹೋದರತ್ವದ ಪ್ರತೀಕವಾಗಿರುವ ಪವಿತ್ರ ರಂಜಾನ್‌ ಹಬ್ಬದ ಆಚರಣೆಯ ಸಂದರ್ಭದಲ್ಲಿ ನಾಡಿನ ಸಮಸ್ತ ಮುಸ್ಲಿಂ ಬಾಂಧವರಿಗೆ ಹಾರ್ದಿಕ ಶುಭಾಷಯಗಳನ್ನು ಕೋರುತ್ತಾ, ನಾಡಿನ ಸಮಸ್ತ ಜನತೆಗೆ ಸುಖ ಶಾಂತಿ ಸಮೃದ್ಧಿ ವೃದ್ಧಿಸಲೆಂದು ಹಾರೈಸುತ್ತೇನೆ’.
 - ದಿನೇಶ್‌ ಗುಂಡೂರಾವ್‌, ಕೆಪಿಸಿಸಿ ಕಾರ್ಯಾಧ್ಯಕ್ಷ.

ಟಾಪ್ ನ್ಯೂಸ್

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.