ಇಂದು ಸೂರ್ಯ ಕಿರಣ್ ಪ್ರದರ್ಶನ
Team Udayavani, Feb 23, 2019, 6:23 AM IST
ಬೆಂಗಳೂರು: ಈ ಬಾರಿಯ ಏರೋ ಇಂಡಿಯಾ ಪ್ರದರ್ಶನ ಆರಂಭದ ದಿನದಿಂದಲೂ ಬಾನಂಗದಿಂದ ಮರೆಯಾಗಿದ್ದ ಸೂರ್ಯ ಕಿರಣ್ ತಂಡ ಶನಿವಾರ ಪ್ರದರ್ಶನ ನೀಡಲಿದೆ. ಸಂಜೆ 4:30ಕ್ಕೆ ಸೂರ್ಯ ಕಿರಣ್ತಂಡದ ಏಳು ಜೆಟ್ ಟ್ರೇನರ್ (ತರಬೇತಿ ಯುದ್ಧ ವಿಮಾನ)ಗಳು 14 ನಿಮಿಷಗಳ ಕಾಲ ಹಾರಾಟ ನಡೆಸುವ ಮೂಲಕ ಪ್ರೇಕ್ಷಕರನ್ನು ರಂಜಿಸಲಿವೆ ಎಂದು ಆಯೋಜಕರು ಮಾಹಿತಿ ನೀಡಿದ್ದಾರೆ.
ಏರೋ ಇಂಡಿಯಾ-2019ರ ಉದ್ಘಾಟನೆಯ ಮುನ್ನಾ ದಿನ (ಫೆ.19ರಂದು) ಅಭ್ಯಾಸ ನಡೆಸುವ ಸಂದರ್ಭದಲ್ಲಿ ಸೂರ್ಯ ಕಿರಣ್ ತಂಡದ ಒಂಬತ್ತು ವಿಮಾನಗಳ ಪೈಕಿ ಎರಡು ವಿಮಾನಗಳ ನಡುವೆ ಘರ್ಷಣೆ ಸಂಭವಿಸಿ ಪಥನಗೊಂಡಿದ್ದವು. ಘಟನೆಯಲ್ಲಿ ಪೈಲಟ್ ಒಬ್ಬರು ಮೃತಪಟ್ಟಿದ್ದರು.
ಈ ಹಿನ್ನೆಲೆಯಲ್ಲಿ ಮೊದಲ ಮೂರು ದಿನ ಸೂರ್ಯ ಕಿರಣ್ ತಂಡ ಪ್ರದರ್ಶನ ನೀಡಿರಲಿಲ್ಲ. ಎರಡು ವಿಮಾನಗಳು ಪಥನಗೊಂಡಿರುವ ಕಾರಣ, ಶನಿವಾರ ಏಳು ಜೆಟ್ ಟ್ರೇನರ್ಗಳಷ್ಟೇ ಪ್ರದರ್ಶನ ನೀಡಲಿವೆ ಎಂದು ಆಯೋಜಕರು ಸ್ಪಷ್ಟಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ
MUST WATCH
ಹೊಸ ಸೇರ್ಪಡೆ
ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ
ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.
ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ
Kinnigoli ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ
Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ