ಇಂದು ಬಜೆಟ್‌ ,ಗರಿಗೆದರಿವೆ ನಿರೀಕ್ಷೆಗಳು


Team Udayavani, Feb 1, 2019, 12:30 AM IST

budge.jpg

ಬೆಂಗಳೂರು: ಚುನಾವಣಾ ಹೊಸ್ತಿಲಲ್ಲಿ ಮಂಡನೆ ಆಗುತ್ತಿರುವ ಕೇಂದ್ರ ಬಜೆಟ್‌ ಮೇಲೆ ಈಗ ಎಲ್ಲರ ಕಣ್ಣು ನೆಟ್ಟಿವೆ. ಇದಕ್ಕೆ ಪೂರಕವಾಗಿ ಸರ್ಕಾರ ಕೂಡ ತನ್ನ ಕೊನೆಯ ಬಜೆಟ್‌ನಲ್ಲಿ ಮತದಾರರ ಓಲೈಕೆ ಕಸರತ್ತು ಕೂಡ ನಡೆಸಲಿದೆ.

ಇದು ಮಧ್ಯಂತರ ಬಜೆಟ್‌ ಆಗಿರುವುದರಿಂದ ರೈತರ ಸಾಲಮನ್ನಾದಂತಹ ಪ್ರಮುಖ ಘೋಷಣೆಗಳನ್ನು ಇಲ್ಲಿ ಕಾಣಲು ಸಾಧ್ಯವಾಗದಿದ್ದರೂ, ಆ ಸಾಲದ ಮೇಲಿನ ಬಡ್ಡಿಯಾದರೂ ಮನ್ನಾ ಮಾಡಬಹುದು ಎಂಬ ನಿರೀಕ್ಷೆ ಇಟ್ಟುಕೊಳ್ಳಬಹುದು. ಸರಕು ಸೇವಾ ತೆರಿಗೆಗೆ ಕೈಹಾಕಲು ಆಗದಿದ್ದರೂ, ಆದಾಯ ತೆರಿಗೆ ಮಿತಿಯನ್ನು ವಿಸ್ತರಿಸುವ ಮೂಲಕ ತೆರಿಗೆದಾರರನ್ನು ಖುಷಿಪಡಿಸಬಹುದು. ಈ ನಿಟ್ಟಿನಲ್ಲಿ ಬಜೆಟ್‌ ಹೆಚ್ಚು ಮಹತ್ವ ಪಡೆದುಕೊಂಡಿದೆ ಎನ್ನುತ್ತಾರೆ ತಜ್ಞರು.

ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು ದೇಶದ ಆರ್ಥಿಕತೆಯ ಬೆನ್ನೆಲುಬು. ಸರ್ಕಾರದ ಬೊಕ್ಕಸಕ್ಕೆ ಬರುವ ಒಟ್ಟಾರೆ ಆದಾಯದಲ್ಲಿ ಕೈಗಾರಿಕೆ ಪಾಲು ಶೇ. 30ರಷ್ಟಿದ್ದು, ಅದರಲ್ಲಿ ಶೇ. 40ರಷ್ಟು ಈ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳದ್ದಾಗಿದೆ. ಇದರಲ್ಲಿ ರಾಜ್ಯದ ಕೊಡುಗೆಯೂ ದೊಡ್ಡದಿದೆ. ಹಾಗಾಗಿ, ಸಹಜವಾಗಿಯೇ ರಾಜ್ಯದ ಸಣ್ಣ ಕೈಗಾರಿಕೋದ್ಯಮದ ನಿರೀಕ್ಷೆಗಳು ಹೆಚ್ಚಿವೆ. ನಮಗೆ ಮುಖ್ಯವಾಗಿ ಬೇಕಾಗಿರುವುದು “ತಂತ್ರಜ್ಞಾನ ಮೇಲ್ದರ್ಜೆಗೆ ನೀಡುವ ಸಾಲದ ಸಬ್ಸಿಡಿ ನೀತಿ’ಗೆ ಮರುಚಾಲನೆ ನೀಡಬೇಕು. ಇದರಡಿ ಈ ಹಿಂದೆ ಭಾರಿ ಯಂತ್ರೋಪಕರಣ ಖರೀದಿಸುವಾಗ ನೀಡುವ ಸಾಲಕ್ಕೆ ಶೇ. 15ರಷ್ಟು ಸಬ್ಸಿಡಿಯನ್ನು ನೀಡಲಾಗುತ್ತಿತ್ತು. ಕಳೆದೆರಡು ವರ್ಷಗಳಿಂದ ಸ್ಥಗಿತಗೊಳಿಸಲಾಗಿದೆ ಎಂದು ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ (ಎಫ್ಕೆಸಿಸಿಐ)ಯ ಹಿರಿಯ ಉಪಾಧ್ಯಕ್ಷ ಸಿ.ಆರ್‌. ಜನಾರ್ದನ ತಿಳಿಸುತ್ತಾರೆ.

ಬ್ಯಾಂಕ್‌ಗಳಲ್ಲಿ ಶೇ. 8.5ರಷ್ಟು ಬಡ್ಡಿದರದಲ್ಲಿ ಗೃಹ ಸಾಲ ನೀಡಲಾಗುತ್ತಿದೆ. ಇದೇ ಬಡ್ಡಿದರದಲ್ಲಿ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೂ ಸಾಲ ಯಾಕೆ ನೀಡುವುದಿಲ್ಲ. ಅಷ್ಟೇ ಅಲ್ಲ, ನಮಗೆ ನೀಡಿದ ಸಾಲದಲ್ಲಿ ಶೇ. 97ರಷ್ಟು ಸಾಲ ಮರುಪಾವತಿ ಆಗುತ್ತದೆ. ಸೆಕ್ಯುರಿಟಿ ಇದ್ದರೂ ಯಾಕೆ ಸಾಲ ಕೊಡುವುದಿಲ್ಲ ಅಂತಾರೆ? ಶುಕ್ರವಾರ ಮಂಡನೆ ಆಗಲಿರುವ ಬಜೆಟ್‌ನಲ್ಲಿ ಉತ್ತರ ಎದುರುನೋಡುತ್ತಿದ್ದೇವೆ.

ಜಿಲ್ಲೆಗೊಂದು ಕ್ಲಸ್ಟರ್‌ಗಳನ್ನು ರೂಪಿಸಬೇಕು. ಇದರಿಂದ ಪ್ರೋತ್ಸಾಹಧನ ಸಿಗುತ್ತದೆ. ಸಣ್ಣ ಕೈಗಾರಿಕೋದ್ಯಮದ ವೃದ್ಧಿಗೆ ಇದು ದೊಡ್ಡ ಕೊಡುಗೆ ಆಗಲಿದೆ. ಗುಣಮಟ್ಟ ಸುಧಾರಣೆ ಆಗುತ್ತದೆ. ಆವಿಷ್ಕಾರದ ಮಂತ್ರ ಜಪಿಸಿದರೂ ಸಂಶೋಧನೆಗೆ ಆದ್ಯತೆ ಸಿಕ್ಕಿಲ್ಲ. ಕೌಶಲ್ಯಾಭಿವೃದ್ಧಿ ಸಚಿವರು ನಮ್ಮವರೇ ಆಗಿದ್ದರೂ, ನಿರೀಕ್ಷೆಗಳು ಹುಸಿಯಾಗಿವೆ. ಕಾರ್ಮಿಕರಿಗೆ ಕನಿಷ್ಠ ವೇತನ ನೀಡಬೇಕು ಎಂಬ ನಿಯಮದಿಂದ ಸಣ್ಣ ಕೈಗಾರಿಕೆಗಳನ್ನು ಹೊರಗಿಡಬೇಕು. ಪೆಟ್ರೋಲ್‌ ಮತ್ತು ಡೀಸೆಲ್‌ ಅನ್ನು ಜಿಎಸ್‌ಟಿ ವ್ಯಾಪ್ತಿಗೆ ತರುವುದು ಸೇರಿದಂತೆ ಹಲವು ನಿರೀಕ್ಷೆಗಳಿವೆ ಎಂದು ಜನಾರ್ದನ ಹೇಳಿದರು.

“ಸ್ಟಾರ್ಟ್‌ಅಪ್‌ಗ್ಳಿಗೆ ಒತ್ತು ಕೊಡಲಿ’
ದೇಶದ ಆರ್ಥಿಕತೆಯಲ್ಲಿ ಸ್ಟಾರ್ಟ್‌ಅಪ್‌ಗ್ಳು ಗಮನಾರ್ಹ ಪಾತ್ರ ನಿರ್ವಹಿಸುತ್ತಿವೆ. ಇವುಗಳನ್ನು ಸೆಳೆಯಲು ಷೇರು ಬಂಡವಾಳ ಹೂಡಿಕೆಗೆ ಪೂರಕ ಯೋಜನೆಗಳನ್ನು ಘೋಷಿಸಬೇಕು. ವೈಯಕ್ತಿಕ ತೆರಿಗೆ ವಿನಾಯ್ತಿ ಎರಡೂವರೆ ಲಕ್ಷ ರೂ. ಇದೆ. ಇದರ ಮಿತಿಯನ್ನು ಮತ್ತಷ್ಟು ಹೆಚ್ಚಿಸುವ ಅಗತ್ಯವಿದೆ. ಇದರಿಂದ ಹೆಚ್ಚು ಹೂಡಿಕೆ ನಿರೀಕ್ಷಿಸಬಹುದು. ಅಂತಿಮವಾಗಿ ಇದು ಸರ್ಕಾರಕ್ಕೂ ಆದಾಯ ತಂದುಕೊಡಲಿದೆ ಎಂದು ಆರ್ಥಿಕ ತಜ್ಞ ಎನ್‌. ನಿತ್ಯಾನಂದ ವಿಶ್ಲೇಷಿಸುತ್ತಾರೆ.

ಮಧ್ಯಂತರ ಬಜೆಟ್‌ ಇದಾಗಿರುವುದರಿಂದ ಮುಂದಿನ ಮೂರ್‍ನಾಲ್ಕು ತಿಂಗಳಿಗೆ ಮಾಡಬಹುದಾದ ಖರ್ಚು-ವೆಚ್ಚಗಳ ಅಂದಾಜು ಇಲ್ಲಿ ಇರುತ್ತದೆ. ಹಾಗಾಗಿ, ಪ್ರಮುಖ ಘೋಷಣೆಗಳನ್ನು ಇಲ್ಲಿ ನಿರೀಕ್ಷಿಸಲಾಗದು. ಆದರೆ, ಜನಸಾಮಾನ್ಯರ ಹಿತದೃಷ್ಟಿಯಿಂದ ಆದಾಯ ತೆರಿಗೆ ವಿನಾಯ್ತಿ ಪ್ರಮಾಣ ವಿಸ್ತರಿಸಬಹುದು. ಹಿರಿಯ ನಾಗರಿಕರಿಗೆ ಇರುವ ತೆರಿಗೆ ವಿನಾಯ್ತಿ ಮಿತಿಯನ್ನೂ ವಿಸ್ತರಿಸಿದರೆ ಉತ್ತಮ. ಇದೆಲ್ಲವೂ ಪಿಂಚಣಿ, ಭವಿಷ್ಯನಿಧಿಯಂತಹ ವಿವಿಧ ರೂಪದಲ್ಲಿ ಪುನಃ ಸರ್ಕಾರದ ಬೊಕ್ಕಸಕ್ಕೆ ಹರಿದುಬರುತ್ತದೆ ಎಂದು ತೆರಿಗೆ ತಜ್ಞ ಬಿ.ಟಿ. ಮನೋಹರ್‌ ಅಭಿಪ್ರಾಯಪಡುತ್ತಾರೆ.

ಆದಾಯ ದುಪ್ಪಟ್ಟಿಗೆ ಬೇಕು ಯೋಜನೆ
ರೈತರ ಆದಾಯ ದುಪ್ಪಟ್ಟುಗೊಳಿಸುವುದಾಗಿ ಈ ಹಿಂದೆಯೇ ಘೋಷಿಸಿದೆ. ಈಗ ಅದಕ್ಕೆ ಪೂರಕವಾದ ಯೋಜನೆಗಳನ್ನು ಸರ್ಕಾರದಿಂದ ನಿರೀಕ್ಷಿಸಲಾಗುತ್ತಿದೆ. ಸಮಗ್ರ ಕೃಷಿ ರೈತನ ಬದುಕಿಗೆ ಆಸರೆ ಆಗಬಲ್ಲದು ಎಂಬುದು ಈಗಾಗಲೇ ಸಾಬೀತಾಗಿದೆ. ಇದನ್ನು ಒಂದು ಮಿಷನ್‌ ರೀತಿಯಲ್ಲಿ ಕೊಂಡೊಯ್ಯಬೇಕು. ಈ ಮಾದರಿಗೆ ಮುಖ್ಯವಾಗಿ ಬೇಕಾಗಿರುವುದು ನೀರಿನ ಸೌಲಭ್ಯ. ಕೃಷಿ ಹೊಂಡದಂತಹ ಕಾರ್ಯಕ್ರಮಗಳನ್ನು ಘೋಷಿಸುವ ಅವಶ್ಯಕತೆ ಇದೆ. ಅಲ್ಲದೆ, ಈಗಾಗಲೇ ಇರುವ ಗ್ರಾಮ ಸಡಕ್‌ ಯೋಜನೆ, ಹವಾಮಾನ ಆಧಾರಿತ ಬೆಳೆವಿಮೆ ಯೋಜನೆ ಸೇರಿದಂತೆ ಹತ್ತುಹಲವು ಯೋಜನೆಗಳನ್ನು ಫ‌ಲಾನುಭವಿಗಳ ಮನೆಬಾಗಿಲಿಗೆ ಕೊಂಡೊಯ್ಯಲು ಸಂಯೋಜಕರನ್ನು ನೇಮಿಸುವ ಅವಶ್ಯಕತೆ ಇದೆ ಎಂದು ಸಾಮಾಜಿಕ-ಆರ್ಥಿಕ ಬದಲಾವಣೆ ಅಧ್ಯಯನ ಸಂಸ್ಥೆ ನಿರ್ದೇಶಕ ಡಾ.ಎಂ.ಜಿ. ಚಂದ್ರಕಾಂತ್‌ ಹೇಳುತ್ತಾರೆ.

– ವಿಜಯಕುಮಾರ ಚಂದರಗಿ

ಟಾಪ್ ನ್ಯೂಸ್

Election Campaign 25 ವರ್ಷಗಳ ಹಿಂದೆ; ಆಗ ದುಡ್ಡಿನ ಆಸೆ ಇರಲಿಲ್ಲ…! 

Election Campaign 25 ವರ್ಷಗಳ ಹಿಂದೆ; ಆಗ ದುಡ್ಡಿನ ಆಸೆ ಇರಲಿಲ್ಲ…! 

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ

Udupi; ಚೆಕ್‌ ಅಮಾನ್ಯ ಪ್ರಕರಣ: ಆರೋಪಿಗೆ ಶಿಕ್ಷೆ

Udupi; ಚೆಕ್‌ ಅಮಾನ್ಯ ಪ್ರಕರಣ: ಆರೋಪಿಗೆ ಶಿಕ್ಷೆ

Belthangady ಶಾಲಾ ಬಸ್‌ ಚಾಲಕ ಹೃದಯಾಘಾತದಿಂದ ಸಾವು

Belthangady ಶಾಲಾ ಬಸ್‌ ಚಾಲಕ ಹೃದಯಾಘಾತದಿಂದ ಸಾವು

Mangaluru ವೈದ್ಯಕೀಯ ಪದವೀಧರೆ ಪಿಜಿಯಲ್ಲಿ ಸಾವು

Mangaluru ವೈದ್ಯಕೀಯ ಪದವೀಧರೆ ಪಿಜಿಯಲ್ಲಿ ಸಾವು

Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ

Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Election Campaign 25 ವರ್ಷಗಳ ಹಿಂದೆ; ಆಗ ದುಡ್ಡಿನ ಆಸೆ ಇರಲಿಲ್ಲ…! 

Election Campaign 25 ವರ್ಷಗಳ ಹಿಂದೆ; ಆಗ ದುಡ್ಡಿನ ಆಸೆ ಇರಲಿಲ್ಲ…! 

ವಿಟ್ಲ:ಅಡ್ಯನಡ್ಕ ಸಮೀಪ ಗುಡ್ಡಕ್ಕೆ ಬೆಂಕಿ

ವಿಟ್ಲ:ಅಡ್ಯನಡ್ಕ ಸಮೀಪ ಗುಡ್ಡಕ್ಕೆ ಬೆಂಕಿ

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ

Udupi; ಚೆಕ್‌ ಅಮಾನ್ಯ ಪ್ರಕರಣ: ಆರೋಪಿಗೆ ಶಿಕ್ಷೆ

Udupi; ಚೆಕ್‌ ಅಮಾನ್ಯ ಪ್ರಕರಣ: ಆರೋಪಿಗೆ ಶಿಕ್ಷೆ

Belthangady ಶಾಲಾ ಬಸ್‌ ಚಾಲಕ ಹೃದಯಾಘಾತದಿಂದ ಸಾವು

Belthangady ಶಾಲಾ ಬಸ್‌ ಚಾಲಕ ಹೃದಯಾಘಾತದಿಂದ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.