ಪರಿಷತ್ ಸದಸ್ಯರ ಧರಣಿ ಸಿಎಂ ಜತೆ ಇಂದು ಮಾತುಕತೆ
Team Udayavani, Sep 15, 2017, 7:30 AM IST
ಬೆಂಗಳೂರು: ಶಿಕ್ಷಕರು, ವಿದ್ಯಾರ್ಥಿಗಳು, ಉಪನ್ಯಾಸಕರು ಹಾಗೂ ಶಾಲಾ ಆಡಳಿತ ಮಂಡಳಿಗಳ ವಿವಿಧ ಬೇಡಿಕೆ
ಈಡೇರಿಸುವಂತೆ ಒತ್ತಾಯಿಸಿ ವಿಧಾನ ಪರಿಷತ್ ಸದಸ್ಯರು ಕಳೆದ 6 ದಿನದಿಂದ ನಡೆಸುತ್ತಿರುವ ಅಹೋರಾತ್ರಿ ಧರಣಿ
ಶುಕ್ರವಾರವೂ ಮುಂದುವರಿಯಲಿದೆ. ಈ ಕುರಿತು ಮುಖ್ಯಮಂತ್ರಿಗಳು ವಿಧಾನಪರಿಷತ್ ಸದಸ್ಯರ ಪೂರ್ವಭಾವಿ ಸಮಾಲೋಚನೆಯನ್ನೂ ನಡೆಸಿದ್ದಾರೆ.
ಶುಕ್ರವಾರ ಸಂಜೆ 4 ಗಂಟೆ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಚರ್ಚೆಗೆ ಆಹ್ವಾನಿಸಿದ್ದು, ಮಾತುಕತೆ
ವಿಫಲವಾದರೆ ರಾಜ್ಯಾದ್ಯಂತ ಮುಷ್ಕರ, ಎರಡು ಲಕ್ಷ ಶಿಕ್ಷಕರು, ಉಪನ್ಯಾಸಕರು, ಬೋಧಕೇತರ ಸಿಬ್ಬಂದಿಯಿಂದ ವಿಧಾನಸೌಧ ಮುತ್ತಿಗೆ, ಶಾಲಾ-ಕಾಲೇಜು ಬಂದ್ ಸೇರಿ ವಿವಿಧ ಹಂತದ ಪ್ರತಿಭಟನೆ ಸ್ವರೂಪ ಪಡೆಯುವ ಸಾಧ್ಯತೆಯಿದೆ. ಮುಖ್ಯಮಂತ್ರಿಗಳು ಚರ್ಚೆಗೆ ಆಹ್ವಾನಿಸಿರುವ ಹಿನ್ನೆಲೆಯಲ್ಲಿ ಗುರುವಾರ ಬಸವರಾಜ ಹೊರಟ್ಟಿ, ಪುಟ್ಟಣ್ಣ ಅವರ ನೇತೃತ್ವದಲ್ಲಿ 13 ವಿಧಾನಪರಿಷತ್ ಸದಸ್ಯರು ಪೂರ್ವಭಾವಿ ಸಮಾಲೋಚನೆ ನಡೆಸಿದರು.
ನಂತರ ಸುದ್ದಿಗಾರರ ಜತೆ ಮಾನಾಡಿದ ಜೆಡಿಎಸ್ನ ರಮೇಶ್ಬಾಬು, ನಾವು ಸರ್ಕಾರದ ಮುಂದೆ 37 ಬೇಡಿಕೆ ಇಟ್ಟಿದ್ದೇವೆ. ಆ ಪೈಕಿ ಶೇ.60 ರಷ್ಟು ಸರ್ಕಾರದ ಆದೇಶಗಳ ಮೂಲಕ ಬಗೆಹರಿಯಲಿದೆ. ಉಳಿದ ಕೆಲವು ಬೇಡಿಕೆಗಳಿಗೆ ಆರ್ಥಿಕ ಇಲಾಖೆ ಒಪ್ಪಿಗೆ ಬೇಕಾಗಿದೆ. ನಮ್ಮ ಬೇಡಿಕೆ ಈಡೇರದಿದ್ದರೆ ರಾಜ್ಯಾದ್ಯಂತ ಮುಷ್ಕರ, ವಿಧಾನಸೌಧ ಮುತ್ತಿಗೆ, ಶಾಲಾ-ಕಾಲೇಜು ಬಂದ್ ಬಗ್ಗೆಯೂ ಚರ್ಚೆ ನಡೆದಿದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು