ನಾಳೆ ರಂಜಾನ್ ಹಬ್ಬ
Team Udayavani, Jun 15, 2018, 6:15 AM IST
ಬೆಂಗಳೂರು: ಗುರುವಾರ ಸಂಜೆ ಚಂದ್ರದರ್ಶನವಾಗದ ಹಿನ್ನಲೆಯಲ್ಲಿ ರಾಜ್ಯಾದ್ಯಂತ ಶನಿವಾರ “ಈದುಲ್ ಫಿತ್ರ’ (ರಂಜಾನ್ ಹಬ್ಬ) ಆಚರಿಸಲಾಗುವುದು ಎಂದು ಕರ್ನಾಟಕ ರಾಜ್ಯ ಚಂದ್ರದರ್ಶನ ಸಮಿತಿ ಹೇಳಿದೆ.
ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯ ಕೇಂದ್ರ ಕಚೇರಿಯಲ್ಲಿ ಗುರುವಾರ ಸಂಜೆ ನಡೆದ ಸಮಿತಿಯ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ.
ಗುರುವಾರ ಚಂದ್ರದರ್ಶನವಾಗುವ ನಿರೀಕ್ಷೆಯಿತ್ತು. ಆದರೆ, ರಾಜ್ಯದ ಬಹುತೇಕ ಕಡೆ ದಟ್ಟ ಮೋಡ ಕವಿದ ವಾತಾವರಣ ಇದ್ದ ಹಿನ್ನೆಲೆಯಲ್ಲಿ ಚಂದ್ರದರ್ಶನ ಸಾಧ್ಯವಾಗಿಲ್ಲ. ಈ ಮಧ್ಯೆ ಶುಕ್ರವಾರ ಉಪವಾಸದ 30 ದಿನಗಳು ಪೂರ್ಣಗೊಳ್ಳುವ ಹಿನ್ನೆಲೆಯಲ್ಲಿ ಶನಿವಾರ ಹಬ್ಬ ಆಚರಿಸಲಾಗುವುದು ಎಂದು ಸಮಿತಿಯ ಅಧ್ಯಕ್ಷ ಮೌಲಾನ ಮಕ್ಸೂದ್ ಇಮ್ರಾನ್ ರಶಾದಿ ಉದಯವಾಣಿಗೆ ತಿಳಿಸಿದ್ದಾರೆ.