ನಾಳೆ “ನಮ್ಮ ಮನೆ, ಬಿಜೆಪಿ ಮನೆ’ ಅಭಿಯಾನ


Team Udayavani, Apr 24, 2018, 6:40 AM IST

rao.jpg

ಬೆಂಗಳೂರು: ರಾಜ್ಯಾದ್ಯಂತ ಕಾರ್ಯ ಕರ್ತರ ಮನೆಯ ಮೇಲಿನ ಬಿಜೆಪಿ ಧ್ವಜ ತೆರವುಗೊಳಿಸುತ್ತಿರುವ ಚುನಾವಣಾ ಆಯೋಗದ ಕ್ರಮದ ವಿರುದ್ಧ ಎ.25ರಂದು “ನಮ್ಮ ಮನೆ ಬಿಜೆಪಿ ಮನೆ’ ಘೋಷಣೆಯ ಅಭಿಯಾನ ದಡಿ 11 ಲಕ್ಷ ಕಾರ್ಯಕರ್ತರು ತಮ್ಮ ಮನೆಗಳ ಮೇಲೆ ಪಕ್ಷದ ಧ್ವಜ ಹಾರಿಸಲಿದ್ದಾರೆಂದು ಬಿಜೆಪಿ ರಾಜ್ಯ ಉಸ್ತುವಾರಿ ಮುರಳೀಧರರಾವ್‌ ಹೇಳಿದರು.

ನಗರದಲ್ಲಿ  ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಲ ಅಧಿಕಾರಿಗಳು ಕಾಂಗ್ರೆಸ್‌ ಸರಕಾರಕ್ಕೆ ಅನುಕೂಲ ಆಗುವಂತೆ ವರ್ತಿಸುತ್ತಿದ್ದು, ಬಿಜೆಪಿ ಬಗ್ಗೆ ಪೂರ್ವಗ್ರಹರಾಗಿದ್ದಾರೆ ಎಂಬ ದೂರುಗಳಿವೆ. ಆ ಹಿನ್ನೆಲೆಯಲ್ಲಿ ಎರಡು ಬಾರಿ ಆಯೋಗಕ್ಕೆ ದೂರು ನೀಡಿದರೂ ಕ್ರಮ ಕೈಗೊಂಡಿಲ್ಲ. ಆಯೋಗ ಸ್ಪಂದಿಸದಿದ್ದರೆ ಕೇಂದ್ರ ಚುನಾವಣಾ ಆಯೋಗದ ಮೊರೆ ಹೋಗಲಾಗುವುದು ಎಂದರು.

ಮನೆ ಮೇಲಿಂದ ಧ್ವಜಗಳನ್ನು ತೆರವುಗೊಳಿಸಬೇಕು ಎಂದು ಯಾವ ನಿಯಮ ದಲ್ಲೂ ಇಲ್ಲ. ಪಕ್ಷವನ್ನು ಬೆಂಬಲಿಸುವಂತೆ ಲಕ್ಷಾಂತರ ಕಾರ್ಯಕರ್ತರು ತಮ್ಮ ಕಟ್ಟಡ ಗಳ ಮೇಲೆ ಬರೆಸಿದ್ದ ಪ್ರಚಾರ ಬರಹವನ್ನು  ಸೂಚನೆ ನೀಡದೆ ಆಯೋಗ ತೆರವು ಗೊಳಿಸುತ್ತಿದೆ. ಕಟ್ಟಡ ಮಾಲಕರು ಇಲ್ಲವೇ ಪಕ್ಷದ ಪದಾಧಿಕಾರಿಗಳಿಗೆ ಮಾಹಿತಿ ನೀಡಿ ತೆರವುಗೊಳಿಸದಿದ್ದರೆ ಅನಂತರ ಆಯೋಗ ಕ್ರಮ ಕೈಗೊಳ್ಳಬೇಕಿತ್ತು. ಆದರೆ ಯಾವುದೇ ಮುನ್ಸೂಚನೆ ನೀಡದೆ ಪ್ರಚಾರ ಬರಹ ಅಳಿಸಲಾಗುತ್ತಿದೆ.

ಪಕ್ಷದ ಸಭೆಗಳಲ್ಲಿ ಪಾಲ್ಗೊಳ್ಳುವ ಕಾರ್ಯಕರ್ತರು ಊಟ ಮಾಡಲು ನಗರ ಪೊಲೀಸ್‌ ಆಯುಕ್ತರು ಅವಕಾಶ ನೀಡುತ್ತಿಲ್ಲ. ಬೆಂಗಳೂರಿನಲ್ಲಿನ ಜಾಹೀರಾತು ಫ‌ಲಕಗಳಲ್ಲಿ ಪಕ್ಷದ ಜಾಹೀರಾತು ಪ್ರದರ್ಶನಕ್ಕೂ ಬಿಬಿಎಂಪಿ ಅವಕಾಶ ನೀಡುತ್ತಿಲ್ಲ. ಗಣ್ಯರು,ಸಂತರ ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡಲು ಸಹ ಅಡ್ಡಿಪಡಿಸಲಾಗುತ್ತಿದೆ ಎಂದರು.

ಜನಾರ್ದನ ರೆಡ್ಡಿಗೆ ಎಲ್ಲೂ ಅವಕಾಶ ನೀಡಿಲ್ಲ
ಮಾಜಿ ಸಚಿವ ಜನಾರ್ದನ ರೆಡ್ಡಿ ಅವರಿಗೆ ಪಕ್ಷದ ಚುನಾ ವಣಾ ಪ್ರಕ್ರಿಯೆ ವ್ಯವಸ್ಥೆಯಲ್ಲಿ ಎಲ್ಲಿಯೂ ಯಾವುದೇ ಅಧಿಕೃತ ಜವಾಬ್ದಾರಿ ನೀಡಿಲ್ಲ. ಈಗಾಗಲೇ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಅವರು ಬಿಜೆಪಿಗೂ ಜನಾರ್ದನ ರೆಡ್ಡಿ ಅವರಿಗೂ ಯಾವುದೇ ರೀತಿಯ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಸಾವಿರಾರು ಮಂದಿ ಮುಖಂಡರು, ಪ್ರಮುಖರು ಪಕ್ಷದ ಪರವಾಗಿ ಪ್ರಚಾರ ನಡೆಸುತ್ತಿದ್ದಾರೆ ಎಂದು ಹೇಳಿದರು.

ಬರುತ್ತಿದ್ದಾರೆ ನಾಯಕರು
ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ, ಕೇಂದ್ರ ಸಚಿವರಾದ ರಾಜನಾಥ್‌ಸಿಂಗ್‌, ನಿತಿನ್‌ ಗಡ್ಕರಿ, ಸುಷ್ಮಾ ಸ್ವರಾಜ್‌, ಸ್ಮತಿ ಇರಾನಿ, ಉಮಾ ಭಾರತಿ, ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌, ಮಧ್ಯಪ್ರದೇಶ ಸಿಎಂ ಶಿವರಾಜ್‌ಸಿಂಗ್‌ ಚವ್ಹಾಣ್‌, ಮಹಾರಾಷ್ಟ್ರ ಸಿಎಂ ದೇವೇಂದ್ರ ಫ‌ಡ್ನವೀಸ್‌, ಛತ್ತೀಸ್‌ಗಢ ಸಿಎಂ ರಮಣ್‌ ಸಿಂಗ್‌ ಇತರರ ರಾಜ್ಯ ಪ್ರವಾಸ ಕಾರ್ಯಕ್ರಮ ಸಿದ್ಧಪಡಿಸಲಾಗುತ್ತಿದೆ ಎಂದು ಬಿಜೆಪಿ ರಾಜ್ಯ ಚುನಾವಣಾ ಉಸ್ತುವಾರಿ ಮುರಳೀಧರ್‌ ರಾವ್‌ ಹೇಳಿದರು.

ಟಾಪ್ ನ್ಯೂಸ್

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

4-bng

Bengaluru: 290 ರೌಡಿಶೀಟರ್‌ಮನೆಗಳ ಮೇಲೆ ದಾಳಿ 

3-crime

Bengaluru: ಸ್ನೇಹಿತರಿಂದಲೇ ಸುಪಾರಿ ಕಿಲ್ಲರ್‌ನ ಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

17

ಕೋರ್ಟ್‌ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

16-

ನಟ, ಕಾಂಗ್ರೆಸ್‌ ಮಾಜಿ ಸಂಸದ ಗೋವಿಂದ “ಶಿಂಧೆ ಸೇನೆ’ ಸೇರ್ಪಡೆ

15-

ಕಂಗನಾ ವಿರುದ್ಧ ಪೋಸ್ಟ್: ಕೈ ನಾಯಕಿಗೆ‌ ಟಿಕೆಟ್‌ ಡೌಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.