ಉತ್ತರದ ದಟ್ಟಣೆ ನಿವಾರಣೆಗೆ ಯೋಜನೆಗಳ ಗೋಪುರ!

ದಾರಿ ಯಾವುದಯ್ಯಾ ಸಂಚಾರಕೆ

Team Udayavani, Jun 1, 2019, 3:09 AM IST

uttara-datta

ಬೆಂಗಳೂರು: ಆ ಮಾರ್ಗವು ಬೆಂಗಳೂರು ಮತ್ತು ವಿಶ್ವದ ವಿವಿಧ ದೇಶಗಳ ನಡುವಿನ ಸಂಪರ್ಕ ಸೇತುವೆ. ಅಲ್ಲಿ ಉಂಟಾಗುವ ಸಂಚಾರದಟ್ಟಣೆ ನಿವಾರಣೆಗಾಗಿ ಕಳೆದೊಂದು ದಶಕದಲ್ಲಿ ಸರ್ಕಾರ ಘೋಷಿಸಿದ ಯೋಜನೆಗಳು ಆರು. ಆ ಪೈಕಿ ಕಾರ್ಯರೂಪಕ್ಕೆ ತಂದ ಯೋಜನೆಗಳು ಶೂನ್ಯ! ಇದು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಹೆಬ್ಟಾಳ ಮಾರ್ಗದ ಕತೆ.

ವಿಮಾನ ನಿಲ್ದಾಣ ರಸ್ತೆ ಪೀಕ್‌ ಅವರ್‌ನಲ್ಲಿ ಗಂಟೆಗೆ 2,900 ವಾಹನಗಳು ಸಂಚರಿಸುವ ಸಾಮರ್ಥ್ಯ ಹೊಂದಿದೆ. ಆದರೆ, ಅಲ್ಲಿ ವಾಸ್ತವವಾಗಿ ಕಾರ್ಯಾಚರಣೆ ಮಾಡುತ್ತಿರುವ ವಾಹನಗಳ ಸಂಖ್ಯೆ 7,700ರಿಂದ 8,000 ಎಂದು ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ (ಕೆಆರ್‌ಡಿಸಿಎಲ್‌) ಮೆಟ್ರೋ ಯೋಜನೆಗೆ ಸಂಬಂಧಿಸಿದಂತೆ ನೀಡಿದ ವರದಿಯಲ್ಲಿ ಉಲ್ಲೇಖೀಸಿದೆ. ಉದ್ದೇಶಿತ ಮಾರ್ಗದಲ್ಲಿ “ಪೀಕ್‌ ಅವರ್‌’ನಲ್ಲಿ ಪ್ರತಿ ಗಂಟೆಗೆ ಸುಮಾರು 25 ಸಾವಿರ ವಾಹನಗಳು ಸಂಚರಿಸುತ್ತವೆ ಎಂದು ಸಂಚಾರ ಪೊಲೀಸರು ಅಂದಾಜಿಸಿದ್ದಾರೆ. ನರಕಯಾತನೆ ಅನುಭವಿಸುತ್ತಿರುವ ಈ ಮಾರ್ಗದ ಜನರಿಗಾಗಿ ಸರ್ಕಾರ ಯೋಜನೆಗಳ ಆಶಾಗೋಪುರ ಕಟ್ಟಿದೆ. ಆದರೆ, ಆಗಿದ್ದು ಬರೀ ಭ್ರಮನಿರಸನ.

ಘೋಷಿಸಿದ ಯೋಜನೆಗಳೆಲ್ಲವೂ ಸಮಗ್ರ ಯೋಜನಾ ವರದಿಗೆ ಬಂದು ನಿಲ್ಲುತ್ತವೆ. ಇಲ್ಲವೇ ವಿವಾದದ ಅಲೆ ಎಬ್ಬಸುತ್ತವೆ. ಕೊನೆಗೆ ಆ ಅಲೆಯಲ್ಲೇ ಕಣ್ಮರೆ ಆಗುತ್ತವೆ. ಹಿಂದಿನ ಸರ್ಕಾರದಲ್ಲಿ ಇಲ್ಲಿ ಉಕ್ಕಿನ ಸೇತುವೆ ಯೋಜನೆ ಘೋಷಣೆ ಆಗಿತ್ತು. ಅದು ವಿವಾದದ ಕಿಡಿ ಹಚ್ಚಿತು. ಕೊನೆಗೆ ಸರ್ಕಾರ ಯೋಜನೆಯಿಂದ ಹಿಂದೆ ಸರಿಯಿತು. ಈಗ ಮತ್ತದೇ ಮಾರ್ಗದಲ್ಲಿ ಅದೇ ಯೋಜನೆಯನ್ನು ಘೋಷಿಸಲಾಗಿದೆ. ಪುನಃ ಅಷ್ಟೇ ವಿರೋಧ ಕೇಳಿಬರುತ್ತಿದೆ.

ಈ ಮಧ್ಯೆ ಮೆಟ್ರೋ ಯೋಜನೆ ಘೋಷಿಸಿದ್ದು, ಅದು ಹೆಬ್ಟಾಳ ಮೂಲಕವೇ ಹಾದುಹೋಗಲಿದೆ ಎಂದು ಹೇಳಲಾಗಿದೆ. ಇದಕ್ಕೂ ಮುನ್ನ “ಹೈ-ಸ್ಪೀಡ್‌’ ರೈಲು, ಕಮ್ಯುಟರ್‌ ರೈಲು, ಮೋನೊ ರೈಲು, ಬಾಣಸವಾಡಿಯಿಂದ ನೇರವಾಗಿ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಪ್ರತ್ಯೇಕ ರಸ್ತೆ, ಮೆಟ್ರೋ ರೈಲು ಇವಿಷ್ಟೂ ಯೋಜನೆಗಳನ್ನು ವಿವಿಧ ಅವಧಿಯಲ್ಲಿ ಸರ್ಕಾರ ಘೋಷಣೆ ಮಾಡಿದೆ.

ಯೋಜನೆಗಳೂ… ಲಾಬಿಗಳೂ…: ಬಹುತೇಕ ಯೋಜನೆಗಳ ಹಿಂದೆ ಹಲವು ರೀತಿಯ ಲಾಬಿಗಳು ಕೆಲಸ ಮಾಡುತ್ತವೆ. ತಜ್ಞರೊಂದಿಗೆ ಚರ್ಚಿಸದೆ, ಸಾಧಕ-ಬಾಧಕಗಳನ್ನೂ ನೋಡದೆ, ವೈಯಕ್ತಿಕ ಹಿತಾಸಕ್ತಿಗಾಗಿ ಜನಪ್ರಿಯ ಯೋಜನೆಗಳನ್ನು ಘೋಷಿಸಲಾಗುತ್ತದೆ. ನಂತರ ಆ ಯೋಜನೆಗಳ ವಸ್ತುಸ್ಥಿತಿಯನ್ನು ತಿಳಿಯಲಾಗುತ್ತದೆ. ಆಗ, ಆ ಯೋಜನೆಯನ್ನು ಕೈಬಿಡಲಾಗುತ್ತದೆ. ಹೆಬ್ಟಾಳ-ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ನಡುವೆ ಘೋಷಿಸಿದ ಯೋಜನೆಗಳಲ್ಲಿ ಆಗಿರುವುದೂ ಇದೇ ಎಂದು ಸಾರಿಗೆ ತಜ್ಞ ಎಂ.ಎನ್‌. ಶ್ರೀಹರಿ ಅಭಿಪ್ರಾಯಪಡುತ್ತಾರೆ.

ಮೊದಲು ರಾಜಕೀಯ ಸಾಧಕ-ಬಾಧಕಗಳ ಬಗ್ಗೆ ಚಿಂತನೆ ಆಗಬೇಕು. ಸ್ಥಳೀಯ ಸಂಸ್ಥೆಗಳು, ನಿವಾಸಿಗಳಿಂದ ಅಭಿಪ್ರಾಯ ಸಂಗ್ರಹಿಸಬೇಕು. ಅಲ್ಲಿ ಒಪ್ಪಿಗೆಯಾದ ಬಳಿಕ ತಜ್ಞರಿಂದ ಸಾಧಕ-ಬಾಧಕಗಳ ಕುರಿತು ಚರ್ಚಿಸಬೇಕು. ಇದಾದ ಮೇಲೆ ಹಣಕಾಸಿನ ಸಾಧಕ-ಬಾಧಕ ಬರುತ್ತದೆ. ಯೋಜನೆ ಅನುಷ್ಠಾನಕ್ಕೆ ಪ್ರತ್ಯೇಕ ಕಾರ್ಪೋರೇಷನ್‌ ಸ್ಥಾಪಿಸಬೇಕು. ಆದರೆ, ಈಗ ಆಗುತ್ತಿರುವುದೆಲ್ಲಾ ತದ್ವಿರುದ್ಧ. ಇದೇ ಕಾರಣಕ್ಕೆ ಕಳೆದ ಹತ್ತು ವರ್ಷಗಳಲ್ಲಿ ಹಲವು ಯೋಜನೆಗಳನ್ನು ಘೋಷಿಸಿದ್ದರೂ, ವಿವಿಧ ಹಂತಗಳಲ್ಲಿ ಅವ್ಯಾವೂ ಕಾರ್ಯರೂಪಕ್ಕೆ ಬಂದಿಲ್ಲ ಎಂದು ಅವರು ಬೇಸರ ವ್ಯಕ್ತಪಡಿಸುತ್ತಾರೆ.

ಈವರೆಗೆ ಘೋಷಿಸಿದ ಯೋಜನೆಗಳು
* ಹೈ-ಸ್ಪೀಡ್‌ ರೈಲು: ಮಿನ್ಸ್‌ಚೌಕ್‌ನಿಂದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ (ಕೆಐಎಎಲ್‌). ಯೋಜನಾ ವೆಚ್ಚ 6,990 ಕೋಟಿ ರೂ. ಸಮಗ್ರ ಯೋಜನಾ ವರದಿ (ಡಿಪಿಆರ್‌) ಬಂದ ನಂತರ ಯೋಜನೆ ಬಗ್ಗೆ ಮಾತಿಲ್ಲ.

* ಕಮ್ಯುಟರ್‌ ರೈಲು: ಯಶವಂತಪುರ ಅಥವಾ ಬೈಯಪ್ಪನಹಳ್ಳಿ ಇವೆರಡರಿಂದಲೂ ದೇವನಹಳ್ಳಿಗೆ ಸಂಪರ್ಕ ಕಲ್ಪಿಸುತ್ತದೆ. ಸರ್ಕಾರ ತನ್ನ ಪಾಲಿನ ಹಣ, ಜಾಗ ಕೊಡುವುದಾಗಿ ಒಪ್ಪಿಕೊಂಡಿದೆ. ಕಳೆದ ರೈಲ್ವೆ ಬಜೆಟ್‌ನಲ್ಲಿ ರೈಲ್ವೆ ಸಚಿವರೂ “ಪರಿಶೀಲಿಸುವುದಾಗಿ’ ಹೇಳಿದ್ದಾರೆ. ಈಚೆಗೆ ಸಚಿವರು ಬೆಂಗಳೂರಿಗೆ ಬಂದಾಗಲೂ ಕಮ್ಯುಟರ್‌ ರೈಲು ಸೇರಿದಂತೆ ರೈಲು ಯೋಜನೆಗಳ ಅನುಷ್ಠಾನಕ್ಕಾಗಿ ಪ್ರತ್ಯೇಕ ಕಾರ್ಪೋರೇಷನ್‌ ಸ್ಥಾಪಿಸುವ ಅಗತ್ಯವಿದೆ ಎಂದೂ ಪ್ರತಿಪಾದಿಸಿದ್ದಾರೆ.

* ಮೊನೊ ರೈಲು: ಜೆ.ಪಿ. ನಗರದಿಂದ ಹೆಬ್ಟಾಳದವರೆಗೆ 34 ಕಿ.ಮೀ. ಉದ್ದದ ಮೊನೊ ರೈಲು ಯೋಜನೆಯನ್ನು ಸರ್ಕಾರ ಘೋಷಿಸಿತ್ತು. ಪ್ರತಿ ಕಿ.ಮೀ.ಗೆ 110ರಿಂದ 140 ಕೋಟಿ ರೂ. ವೆಚ್ಚ ಆಗುತ್ತದೆ ಎಂದೂ ಹೇಳಿತ್ತು. ನಂತರದಲ್ಲಿ ಈ ಬಗ್ಗೆ ಚಕಾರ ಇಲ್ಲ.

* ಪ್ರತ್ಯೇಕ ರಸ್ತೆ: 2011ರಲ್ಲಿ ಬಾಣಸವಾಡಿಯಿಂದ ವಿಮಾನ ನಿಲ್ದಾಣಕ್ಕೆ ಪ್ರತ್ಯೇಕ ರಸ್ತೆ ನಿರ್ಮಾಣಕ್ಕೆ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ಮುಂದಾಗಿತ್ತು. ಆದರೆ, ಕೆಐಎಎಲ್‌ ಅನುಮತಿ ನೀಡಲಿಲ್ಲ ಎಂಬ ಕಾರಣಕ್ಕೆ ಸ್ಥಗಿತಗೊಳಿಸಲಾಯಿತು. ಈಗ ಲೋಕೋಪಯೋಗಿ ಇಲಾಖೆಯಿಂದ ಈ ಯೋಜನೆ ಕೈಗೆತ್ತಿಕೊಳ್ಳಲಾಗಿದೆ.

* ಉಕ್ಕಿನ ಸೇತುವೆ: ನಗರದಿಂದ ಕೆಐಎಎಲ್‌ವರೆಗಿನ 30 ಕಿ.ಮೀ.ನಲ್ಲಿ 6.72 ಕಿ.ಮೀ. ಉದ್ದದ ಷಟಥ ಉಕ್ಕಿನ ಸೇತುವೆಯನ್ನು ನಿರ್ಮಿಸುವುದಾಗಿ ಘೋಷಿಸಿತ್ತು. ನಂತರ ಕೈಬಿಡಲಾಯಿತು. ಈಗ ಇದರ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದೆ.

* ಮೆಟ್ರೋ ರೈಲು: ನಾಗವಾರ, ಹೆಬ್ಟಾಳ, ಜಕ್ಕೂರು, ಕೋಗಿಲು, ಟ್ರಂಪೆಟ್‌, ಚಿಕ್ಕಜಾಲ, ವೆಸ್ಟ್‌ ಕೆಐಎ, ಅಂತರರಾಷ್ಟ್ರೀಯ ವಿಮಾನ ನಿಲ್ದಾಣ.

* ವಿಜಯಕುಮಾರ್‌ ಚಂದರಗಿ

ಟಾಪ್ ನ್ಯೂಸ್

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.