ವಾಹನ ಬಿಡಿಸಿಕೊಳ್ಳಲು ಅಂಗಲಾಚಿದ ಸವಾರ: ಕರುಣೆ ತೋರದ ಟೋಯಿಂಗ್ ಸಿಬ್ಬಂದಿ; ವಿಡಿಯೋ ವೈರಲ್
Team Udayavani, Jan 30, 2022, 12:37 PM IST
ಬೆಂಗಳೂರು: ನಗರದಲ್ಲಿ ಸಂಚಾರ ವಿಭಾಗದ ಟೋಯಿಂಗ್ ಸಿಬ್ಬಂದಿಯ ಮತ್ತೂಂದು ಅಮಾನವೀಯ ಘಟನೆ ಬೆಳಕಿಗೆ ಬಂದಿದೆ. ಈ ಕುರಿತ ವಿಡಿಯೋವೊಂದು ವೈರಲ್ ಆಗಿದ್ದು, ಸಂಚಾರ ಪೊಲೀಸರು ಹಾಗೂ ಟೋಯಿಂಗ್ ಸಿಬ್ಬಂದಿ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇಂದಿರಾನಗರ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ಆನ್ಲೈನ್ ವಸ್ತುಗಳನ್ನು ಡೆಲಿವರಿ ಮಾಡುವ ಯುವಕನೊಬ್ಬ ತನ್ನ ವಾಹನ ನಿಲ್ಲಿಸಿ ವಸ್ತುಗಳನ್ನು ಕೊಡಲು ಹೋಗಿದ್ದರು. ವಾಪಸ್ ಬಂದಾಗ ಟೋಯಿಂಗ್ ಸಿಬ್ಬಂದಿ ದ್ವಿಚಕ್ರ ವಾಹನವನ್ನು ತಮ್ಮ ವಾಹನಕ್ಕೆ ತುಂಬಿಕೊಂಡಿದ್ದಾರೆ. ಅದನ್ನು ಕಂಡ ಆತ ಕೂಡಲೇ ವಾಹನ ಹಿಡಿದುಕೊಂಡು ನಿಲ್ಲಿಸುವಂತೆ ಗೋಳಾಡಿದ್ದಾನೆ. ಆದರೂ ಟೋಯಿಂಗ್ ಸಿಬ್ಬಂದಿ ವಾಹನ ನಿಲ್ಲಿಸಿಲ್ಲ. ವಾಹನ ಸವಾರ ವಾಹನ ಬಿಡಿಸಿಕೊಳ್ಳಲು ಓಡುತ್ತಿರುವ ದೃಶ್ಯ ಸಂಚಾರ ಪೊಲೀಸರ ಅಮಾನವೀಯ ವರ್ತನೆಗೆ ಸಾಕ್ಷಿಯಾಗಿದೆ. ಈ ವಿಡಿಯೋ ವೈರಲ್ ಆಗಿದ್ದು, ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಟೋಯಿಂಗ್ ರೌಡಿಗಳು ಎಂದು ನಮೂದಿಸಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಟೋಯಿಂಗ್ಸಿಬ್ಬಂದಿ ಕಾರ್ಯವೈಖರಿ ಬಗ್ಗೆ ಸಾಕಷ್ಟು ಆಕ್ರೋಶ ವ್ಯಕ್ತವಾಗಿದ್ದರೂ, ಟೋಯಿಂಗ್ ನಿಯಮವನ್ನು ಸಿಬ್ಬಂದಿ ಪಾಲಿಸುತ್ತಿಲ್ಲ. ಗಾಡಿ ತೆಗೆದುಕೊಳ್ಳುವ ಮೊದಲು ಧ್ವನಿವರ್ಧಕದಮೂಲಕ ಅನೌನ್ಸ್ ಮಾಡಬೇಕು. ಐದಾರು ನಿಮಿಷದವರೆಗೆ ಮಾಲೀಕ ಬಾರದಿದ್ದರೆಟೋಯಿಂಗ್ ಮಾಡಬೇಕು. ಆದರೆ, ಈಗಲೂ ಧ್ವನಿವರ್ಧಕದ ಮೂಲಕ ಅನೌನ್ಸ್ ಮಾಡದೆ ದ್ವಿಚಕ್ರ ವಾಹನಗಳನ್ನು ಟೋಯಿಂಗ್ ಮಾಡಲಾಗುತ್ತಿದೆ ಎಂದು ಬೇಸರ ಹೊರ ಹಾಕಿದ್ದಾರೆ.
ಮಹಿಳೆ ಮೇಲೆ ದೌರ್ಜನ್ಯ :
ಬೆಂಗಳೂರು: ಟೋಯಿಂಗ್ ವಿಚಾರವಾಗಿ ಜಗಳ ನಡೆದಿದ್ದು, ಪೊಲೀಸ್ಗೆ ಅಂಗವಿಕಲ ಮಹಿಳೆಯೊಬ್ಬರು ಕಲ್ಲಿನಿಂದ ಹೊಡೆದಿದ್ದಾರೆ. ಸಿಟ್ಟಾಹಲಸೂರು ಗೇಟ್ ಸಂಚಾರ ಠಾಣೆ ಎಎಸ್ಐ ನಾರಾಯಣ, ಅಂಗವಿಕಲ ಮಹಿಳೆಗೆ ಬೂಟುಗಾಲಿನಿಂದ ಒದ್ದಿದ್ದಾರೆ.
ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಜ. 24ರಂದು ನಡೆದಿರುವ ಈ ಘಟನೆ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಎಎಸ್ಐ ವರ್ತನೆಗೆ ಆಕ್ರೋಶ ವ್ಯಕ್ತವಾಗಿದ್ದು,ಅವರನ್ನು ಅಮಾನತು ಮಾಡುವಂತೆ ಜನ ಒತ್ತಾಯಿಸುತ್ತಿದ್ದಾರೆ. ಟೋಯಿಂಗ್ ಪ್ರಶ್ನಿಸಿದ ಮಹಿಳೆಯನ್ನು ಎಳೆದಾಡಿ ಬೂಟುಗಾಲಿನಿಂದ ಒದ್ದಿದ್ದಾರೆ.
ನಂತರ, ಮಹಿಳೆಯನ್ನು ಕರ್ತವ್ಯಕ್ಕೆ ಅಡ್ಡಿಪಡಿಸಿ ಹಲ್ಲೆ ಮಾಡಿದ ಆರೋಪದಡಿ ಮಹಿಳೆಯನ್ನು ಬಂಧಿಸಿದ್ದಾರೆ. ಮಹಿಳೆ ಮೇಲಿನ ಹಲ್ಲೆ ದೃಶ್ಯವನ್ನುಹಂಚಿಕೊಂಡಿರುವ ಸಾರ್ವಜನಿಕರು ಎಎಸ್ಐ ಅಮಾನತಿಗೆ ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
MUST WATCH
ಹೊಸ ಸೇರ್ಪಡೆ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್