ಬೆಳೆಗಳಿಗೆ ಇರಲಿದೆ ಲೋಹದ ಹಕ್ಕಿ ಗಳ ನಿಗಾ


Team Udayavani, Nov 20, 2019, 10:26 AM IST

bng-tdy-1

ಬೆಂಗಳೂರು: ಬೆಳೆಗಳ ನಿರ್ವಹಣೆಗೆ ಬಳಸುವ ಡ್ರೋನ್‌ ಹಳೆಯದಾಯ್ತು. ಈಗ ಲೋಹದ ಹಕ್ಕಿಗಳ ನೆರವಿಂದ ಬೆಳೆಗಳ ಆರೋಗ್ಯದ ಮೇಲೆ ನಿಗಾ ಇಡುವ ವ್ಯವಸ್ಥೆ ಬರುತ್ತಿದೆ!

ವಿಮಾನಗಳಲ್ಲಿ ಮಲ್ಟಿ ಸ್ಪೆಕ್ಟರಲ್‌ ಕ್ಯಾಮೆರಾಗಳನ್ನು ಅಳವಡಿಸಿ, ಜಮೀನುಗಳ ಚಿತ್ರಗಳನ್ನು ಸೆರೆಹಿಡಿ ಯುವ ವ್ಯವಸ್ಥೆ ಅಭಿವೃದ್ಧಿಪಡಿಸಲಾಗಿದೆ. ಹೀಗೆ ಸೆರೆಹಿಡಿಯುವ ಚಿತ್ರಗಳು ಡ್ರೋನ್‌ಗಿಂತ ಹೆಚ್ಚು ಮಾಹಿತಿ ಒಳಗೊಂಡಿರುತ್ತದೆ. ಜತೆಗೆ ಎತ್ತರ ದಲ್ಲಿ ಹಾರಾಟ ಮಾಡಿ ಅಲ್ಪಾವಧಿಯಲ್ಲಿ ಅಧಿಕ ಪ್ರದೇಶ ಸುತ್ತುಹಾಕಿ, ಮಾಲೀಕರಿಗೆ ವರದಿ ಒಪ್ಪಿಸಲಿದೆ.

ಡ್ರೋನ್‌ ಅಬ್ಬಬ್ಟಾ ಎಂದರೆ, ನೆಲದಿಂದ 400 ಅಡಿ ಎತ್ತರದಲ್ಲಿ ಹಾರಾಡುತ್ತದೆ. ಅದಕ್ಕಿಂತ ಎತ್ತರಕ್ಕೆ ಹೋಗಲು ಅವಕಾಶ ಇಲ್ಲ. ವಿಮಾನವು4 ಸಾವಿರ  ಅಡಿ ಎತ್ತರದವರೆಗೂ ಹಾರುತ್ತದೆ. ಹಾಗಾಗಿ, ಕಡಿಮೆ ಅವಧಿಯಲ್ಲಿ ಹೆಚ್ಚು ಪ್ರದೇಶದ ಬೆಳೆಯ ನಿರ್ವಹಣೆ ಮಾಡಬಹುದು. ಇದಕ್ಕೆ ಮಲ್ಟಿ ಸ್ಪೆಕ್ಟರಲ್‌ ಕ್ಯಾಮೆರಾ ಅಳವಡಿಸಲಾಗಿರುತ್ತದೆ. ಅವುಗಳು ಭೂಮಿಯ ಮೇಲ್ಮೆಯಿಂದ ಕೇವಲ 1 ಮೀಟರ್‌ ಪಿಕ್ಸೆಲ್‌ನಲ್ಲಿ ಬೆಳೆಗಳ ಚಿತ್ರವನ್ನು ಸೆರೆಹಿಡಿದು ನಿಯಂತ್ರಣ ಕೊಠಡಿಗೆ ರವಾನಿಸುತ್ತದೆ. ಅದನ್ನು ವಿಶ್ಲೇಷಣೆ ಮಾಡಿ, ಅಗತ್ಯ ಕ್ರಮ ಕೈಗೊಳ್ಳಬ ಹುದು ಎಂದು ಅಮೆರಿಕ ಮೂಲದ ವಿರಿಡಿಸ್‌ ಆರ್‌ಎಸ್‌ ಲಿಸಂಸ್ಥಾಪಕ ಹಾಗೂ ಹಿರಿಯ ವಿಜ್ಞಾನಿ ಮಾರ್ಕ್‌ ಜಾನೆಟ್‌ ತಿಳಿಸಿದರು.

ನಗರದ ಅರಮನೆ ಆವರಣದಲ್ಲಿ ನಡೆಯುತ್ತಿರುವ 3 ದಿನಗಳ ಬೆಂಗಳೂರು ಟೆಕ್‌ ಸಮಿಟ್‌ನಲ್ಲಿ ಮಂಗಳವಾರ “ಇಂಟೆಲಿಜೆಂಟ್‌ ಸಿಸ್ಟಮ್ಸ್‌ ಇನ್‌ ಅಗ್ರಿಕಲ್ಚರ್‌’ (ಕೃಷಿಯಲ್ಲಿ ಚತುರ ವ್ಯವಸ್ಥೆಗಳ ಪ್ರಯೋಗ) ಕುರಿತ ಗೋಷ್ಠಿಯಲ್ಲಿ ಭಾಗವಹಿಸಿ ನಂತರ “ಉದಯವಾಣಿ’ಯೊಂದಿಗೆ ಮಾತನಾಡಿದರು. ವಾರದಲ್ಲಿ 1.50 ಲಕ್ಷ ಹೆಕ್ಟೇರ್‌ ಪ್ರದೇಶದ ಕೃಷಿ ಬೆಳೆಗಳ ಚಿತ್ರಣವನ್ನು ನೀಡುವ ಸಾಮರ್ಥ್ಯವನ್ನು ಈ ವಿಮಾನ ಹೊಂದಿದೆ. ಇದೇ ಅವಧಿಯಲ್ಲಿ ಇಷ್ಟೊಂದು ಪ್ರದೇಶದ ನಿರ್ವಹಣೆಗೆ 35 ಡ್ರೋನ್‌ಗಳು ಬೇಕಾಗುತ್ತವೆ. ಸಾಮಾನ್ಯ ವಿಮಾನಗಳಿಗಿಂತ ಕೃಷಿ ನಿರ್ವಹಣೆಗಾಗಿ ಪರಿಚಯಿ ಸಿದ ಲೋಹದ ಹಕ್ಕಿಯ ವಿನ್ಯಾಸ ಭಿನ್ನವಾಗಿರುತ್ತದೆ. ಇದರ ರೆಕ್ಕೆಗಳಿಗೆ ಕ್ಯಾಮೆರಾಗಳನ್ನು ಅಳವಡಿ ಸಲಾ ಗಿರುತ್ತದೆ. ಇದರ ಹಾರಾಟಕ್ಕೆ ನಾಗರಿಕ ವಿಮಾನ ಯಾನ ಮಹಾ  ನಿರ್ದೇಶನಾಲಯದ ಅನುಮತಿ ಕಡ್ಡಾಯ. ಇದು ನಮಗೆ ಸವಾಲಾಗಿದ್ದು, ಸ್ಥಳೀಯ ಸರ್ಕಾರಗಳ ನೆರವಿನಿಂದ ಇದರ ಅನುಮತಿ ದೊರೆಯುವ ವಿಶ್ವಾಸವಿದೆ ಎಂದರು.

ಮಹಾರಾಷ್ಟ್ರ, ಗುಜರಾತ್‌ ಆಸಕ್ತಿ: “ಸಣ್ಣಹಿಡುವಳಿ ದಾ ರರಿಗೆ ಇದು ಅನುಕೂಲ ಆಗುವುದಿಲ್ಲ. ದೊಡ್ಡ ಹಿಡುವಳಿದಾರರು ಒಟ್ಟಾಗಿ ಮಾಡಬಹುದು. ಈ ನಿಟ್ಟಿನಲ್ಲಿ ಮಹಾರಾಷ್ಟ್ರ ಮತ್ತು ಗುಜರಾತ್‌ ಸರ್ಕಾರಗಳು ಮುಂದೆಬಂದಿವೆ. ಯಾವ ಬೆಳೆಗಳ ನಿರ್ವಹಣೆ ಬೇಕಾದರೂ ಮಾಡಬಹುದು. ಸದ್ಯಕ್ಕೆ ಹತ್ತಿ, ದ್ರಾಕ್ಷಿ ಮತ್ತಿತರ ಬೆಳೆಗಳ ಮೇಲೆ ಪ್ರಯೋಗ ಮಾಡಲು ಚಿಂತನೆ ನಡೆದಿದೆ’ ಎಂದರು.

 

 

-ವಿಜಯಕುಮಾರ್‌ ಚಂದರಗಿ

ಟಾಪ್ ನ್ಯೂಸ್

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.