ತಂಪೆರೆದ ಮಳೆ ನಡುವೆ ಟ್ರಾಫಿಕ್‌ ಬಿಸಿ


Team Udayavani, Apr 21, 2018, 11:56 AM IST

tamperada.jpg

ಬೆಂಗಳೂರು: ನಗರದಲ್ಲಿ ಶುಕ್ರವಾರ ಮತ್ತೆ ಮಳೆ ಆರ್ಭಟಿಸಿತು. ಪರಿಣಾಮ ಮಳೆ ನೀರು ಪ್ರಮುಖ ರಸ್ತೆಗಳಿಗೆ ನುಗ್ಗಿ ಹಲವೆಡೆ ಸಂಚಾರದಟ್ಟಣೆ ಉಂಟಾಯಿತು. ನಾಲ್ಕೈದು ಕಡೆ ಮರಗಳು ನೆಲಕ್ಕುರುಳಿದವು. 

ದಿಢೀರ್‌ ಮಳೆಯಿಂದ ಕಾರು ಮತ್ತು ಬೈಕ್‌ ಸವಾರರು ಮತ್ತು ಬಸ್‌ ಪ್ರಯಾಣಿಕರಿಗೆ ಸಂಚಾರದಟ್ಟಣೆ ಬಿಸಿ ತಟ್ಟಿತು. ಆದರೆ, ಬಿಸಿಲಿನ ಝಳದಿಂದ ಕಂಗೆಟ್ಟಿದ್ದ ಜನರಿಗೆ ಸಂಜೆ ಮಳೆ ತಂಪೆರೆಯಿತು. ನಗರದ ಕನಿಷ್ಠ ಉಷ್ಣಾಂಶ ಒಂದೇ ದಿನದಲ್ಲಿ 3ರಿಂದ 4 ಡಿಗ್ರಿ ಸೆಲ್ಸಿಯಸ್‌ ಇಳಿಕೆಯಾಗಿದ್ದು ಕಂಡುಬಂತು.  

ಸಂಜೆ 4ರ ಸುಮಾರಿಗೆ ಶುರುವಾದ ಮಳೆ, ಸುಮಾರು ಒಂದು ತಾಸಿಗೂ ಹೆಚ್ಚು ಕಾಲ ಅಬ್ಬರಿಸಿತು. ಗಾಳಿಸಹಿತ ಮಳೆಗೆ ತಗ್ಗುಪ್ರದೇಶಗಳು, ರಸ್ತೆ ಬದಿಯ ಚರಂಡಿಗಳು, ಅಂಡರ್‌ಪಾಸ್‌ ರಸ್ತೆಗಳು ಕೆಲ ಹೊತ್ತಿನಲ್ಲೇ ಜಲಾವೃತವಾದವು.

ಪ್ರಮುಖ ರಸ್ತೆಗಳಲ್ಲಿ ಎಂದಿಗಿಂತ ವಾಹನಗಳದಟ್ಟಣೆ ಉಂಟಾಗಿ, ಹೆಜ್ಜೆ-ಹೆಜ್ಜೆಗೂ ಮೂರ್‍ನಾಲ್ಕು ನಿಮಿಷ ಕಾಯುವಂತಾಯಿತು. ರಸ್ತೆಯಲ್ಲಿ ನಿಂತ ನೀರಿನಲ್ಲಿ ಮುಂದೆ ಸಾಗಲಾಗದೆ ದ್ವಿಚಕ್ರ ವಾಹನ ಸವಾರರು ತೊಂದರೆ ಅನುಭವಿಸಿದರು. ಇತ್ತ ರಸ್ತೆಗಳಲ್ಲಿ ವಾಹನ ಸುಗಮ ಸಂಚಾರಕ್ಕೆ ಪೊಲೀಸರು ಹರಸಾಹಸ ಮಾಡಿದರು. 

ಮೇಕ್ರಿವೃತ್ತದ ಬಪೇರಾ ಚಿತ್ರಮಂದಿರ, ಕಾವೇರಿ ಚಿತ್ರಮಂದಿರ ಬಳಿಯ ಮ್ಯಾಜಿಕ್‌ ಬಾಕ್ಸ್‌, ಕಾವೇರಿ ಜಂಕ್ಷನ್‌ ಹಾಗೂ ಶಿವಾನಂದ ವೃತ್ತ, ಓಕಳೀಪುರ, ಶೇಷಾದ್ರಿಪುರ, ಜಯದೇವ ಆಸ್ಪತ್ರೆ ಜಂಕ್ಷನ್‌, ಮಡಿವಾಳ, ಸಿ.ಟಿ.ಮಾರುಕಟ್ಟೆ, ರಾಜಾಜಿನಗರ, ಬಸನವಗುಡಿ, ವಿಂಡ್ಸರ್‌ ಮ್ಯಾನರ್‌, ಮಾಗಡಿ ರಸ್ತೆಯ ಟೋಲ್‌ ಗೇಟ್‌ ಬಳಿಯ ಅಂಡರ್‌ಪಾಸ್‌ಗಳು ಹಾಗೂ ಜಂಕ್ಷನ್‌ಗಳಲ್ಲಿ ನೀರು ನಿಂತು ಕಾರು, ಬೈಕ್‌ಗಳ ಸಂಚಾರಕ್ಕೆ ವ್ಯತ್ಯಯ ಉಂಟಾಯಿತು.

ಗಾಳಿಸಹಿತ ಮಳೆಗೆ ಇಂದಿರಾನಗರ 100 ಅಡಿ ರಸ್ತೆ, ಮಲ್ಲೇಶ್ವರ, ರಾಜರಾಜೇಶ್ವರಿ ನಗರ, ವಿಜಯನಗರ, ಹಲಸೂರಿನಲ್ಲಿ ಮರಗಳು ಧರೆಗುರುಳಿದವು. ಇದರಿಂದ ಆ ಭಾಗದಲ್ಲಿ ಸಂಚಾರ ಮಂದಗತಿಯಲ್ಲಿತ್ತು. ನಗರದ ಬಸವನಗುಡಿಯಲ್ಲಿ 20 ಮಿ.ಮೀ., ಕುಮಾರಸ್ವಾಮಿ ಲೇಔಟ್‌ 16.5, ಹೆಮ್ಮಿಗೆಪುರ 18, ನಾಗರಬಾವಿ 14, ಲಾಲ್‌ಬಾಗ್‌ 16, ಸಾರಕ್ಕಿ 12, ಕೆಂಗೇರಿ 12, ಎಚ್‌ಎಸ್‌ಆರ್‌ ಲೇಔಟ್‌ 10, ಕೊಡಿಗೇಹಳ್ಳಿ 13.5 ಮಿ.ಮೀ. ಮಳೆಯಾಗಿದೆ ಎಂದು ರಾಜ್ಯ ನೈಸರ್ಗಿಕ ವಿಪತ್ತು ಉಸ್ತುವಾರಿ ಕೇಂದ್ರ (ಕೆಎಸ್‌ಎನ್‌ಡಿಎಂಸಿ) ತಿಳಿಸಿದೆ. 

ಇನ್ನೂ ಎರಡು ದಿನ ಮಳೆ?: ನಗರದಲ್ಲಿ ಇನ್ನೂ ಎರಡು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮಧ್ಯಪ್ರದೇಶ-ತೆಲಂಗಾಣ ಮತ್ತು ರಾಜ್ಯದ ಒಳನಾಡಿನ ನಡುವೆ ಕಡಿಮೆ ಒತ್ತಡದ ತಗ್ಗು (ಟ್ರಫ್) ಉಂಟಾಗಿದೆ. ಇದರಿಂದ ಮಳೆಯಾಗುತ್ತಿದ್ದು, ನಗರ ಸೇರಿದಂತೆ ಒಳನಾಡಿನಲ್ಲಿ ಇನ್ನೂ ಎರಡು ದಿನ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ ಎಂದು ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಕೊಲೆಗೈದ

Crime: ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಕೊಲೆಗೈದ

Bengaluru: ಖೋಖೋ ತೀರ್ಪು ವಿವಾದ: ಫೀಲ್ಡ್‌ನಲ್ಲೇ ಚಾಕು, ಡ್ಯಾಗರ್‌ ಹಿಡಿದು ಹೊಡೆದಾಟ!

Bengaluru: ಖೋಖೋ ತೀರ್ಪು ವಿವಾದ: ಫೀಲ್ಡ್‌ನಲ್ಲೇ ಚಾಕು, ಡ್ಯಾಗರ್‌ ಹಿಡಿದು ಹೊಡೆದಾಟ!

ಸ್ನೇಹಿತನ ಪತ್ನಿಯ ಕ್ಯಾನ್ಸರ್‌ ಚಿಕಿತ್ಸೆಗಾಗಿ ಬೈಕ್‌ ಕಳ್ಳತನಕ್ಕಿಳಿದ ಕುಚುಕು ಗೆಳೆಯ! 

ಸ್ನೇಹಿತನ ಪತ್ನಿಯ ಕ್ಯಾನ್ಸರ್‌ ಚಿಕಿತ್ಸೆಗಾಗಿ ಬೈಕ್‌ ಕಳ್ಳತನಕ್ಕಿಳಿದ ಕುಚುಕು ಗೆಳೆಯ! 

Shivakumar

Bengaluru: ಅಧಿವೇಶನದ ಬಳಿಕ ಕಾವೇರಿ ನೀರಿನ ದರ ಪರಿಷ್ಕರಣೆ: ಡಿ.ಕೆ.ಶಿವಕುಮಾರ್‌

Bengaluru: ಕೋರ್ಟ್‌ನಲ್ಲೇ ವಕೀಲೆಗೆ ಚಾಕು ಇರಿದ ಆರೋಪಿ ಸೆರೆ

Bengaluru: ಕೋರ್ಟ್‌ನಲ್ಲೇ ವಕೀಲೆಗೆ ಚಾಕು ಇರಿದ ಆರೋಪಿ ಸೆರೆ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.