ಬೆಳ್ಳಂಬೆಳಗ್ಗೆಯೇ ಟ್ರಾಫಿಕ್‌ ಜಾಮ್‌!


Team Udayavani, May 15, 2018, 12:22 PM IST

bellm-bellagge.jpg

ಬೆಂಗಳೂರು: ಕಳೆದ ಎರಡು ದಿನಗಳಿಂದ ಖಾಲಿಕಖಾಳಿಯಾಗಿದ್ದ ಮಹಾನಗರದ ಬಹುತೇಕ ರಸ್ತೆಗಳಲ್ಲಿ ಸೋಮವಾರ ಬೆಳಗ್ಗೆಯೇ ವಿಪರೀತ ಸಂಚಾರ ದಟ್ಟಣೆ ಉಂಟಾಗಿ ಪ್ರಯಾಣಿಕರು ಹಾಗೂ ವಾಹನ ಸವಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿತ್ತು.

ಮುಖ್ಯವಾಗಿ ಹೊರ ಜಿಲ್ಲೆಗಳಿಂದ ನಗರಕ್ಕೆ ಸಂಪರ್ಕ ಕಲ್ಪಿಸುವ ಹೆದ್ದಾರಿಗಳು ಹಾಗೂ ಮುಖ್ಯರಸ್ತೆಗಳಲ್ಲಿ ಸಂಚಾರ ದಟ್ಟಣೆ ಹೆಚ್ಚಾಗಿತ್ತು. ಮೈಸೂರು ರಸ್ತೆ, ತುಮಕೂರು ರಸ್ತೆ, ಕನಕಪುರ ರಸ್ತೆ, ಹಳೇ ಮದ್ರಾಸ್‌ ರಸ್ತೆಗಳಲ್ಲಿ ಎರಡು -ಮೂರು ಗಂಟೆಗಳ ಕಾಲ ಸಂಚಾರ ಅಸ್ತವ್ಯಸ್ತವಾಗಿತ್ತು.

ಮೇ 12ರಂದು ನಡೆದ ರಾಜ್ಯ ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ಬೆಂಗಳೂರಿನಲ್ಲಿ ವಾಸವಾಗಿದ್ದ ರಾಜ್ಯದ ವಿವಿಧ ಜಿಲ್ಲೆಗಳ ಜನ, ಮತದಾನಕ್ಕಾಗಿ ತಮ್ಮ ಊರುಗಳಿಗೆ ತೆರಳಿದ್ದರು. ಇನ್ನು ಮೇ 13 ಭಾನುವಾರವಾದ್ದರಿಂದ ಸೋಮವಾರ ಬೆಳಗ್ಗೆ ಖಾಸಗಿ ಹಾಗೂ ಸಾರ್ವಜನಿಕ ವಾಹನಗಳಲ್ಲಿ ವಾಪಸ್‌ ಬಂದಿದ್ದರಿಂದ ನಗರ ಪ್ರವೇಶಿಸುವ ತುಮಕೂರು, ಮೈಸೂರು, ದೇವನಹಳ್ಳಿ, ಅನೇಕಲ್‌, ಬನ್ನೇರುಘಟ್ಟ, ಹೊಸಕೋಟೆ ರಸ್ತೆಗಳಳಲ್ಲಿ ಬೆಳಗ್ಗೆ 6 ಗಂಟೆಯಿಂದಲೇ ಸಂಚಾರ ದಟ್ಟಣೆ ಕಂಡುಬಂತು.

ಉತ್ತರ ಕರ್ನಾಟಕ ಹಾಗೂ ಮಲೆನಾಡು ಭಾಗಗಳಿಗೆ ಸಂಪರ್ಕ ಕಲ್ಪಿಸುವ ತುಮಕೂರು ರಸ್ತೆಯಲ್ಲಿ ವಿವಿಧ ಜಿಲ್ಲೆಗಳಿಂದ ಖಾಸಗಿ ಹಾಗೂ ಸರ್ಕಾರಿ ಬಸ್‌ಗಳು, ಕಾರುಗಳು ಹಾಗೂ ದ್ವಿಚಕ್ರವಾಹನಗಳು ಏಕಕಾಲಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಬಂದ ಪರಿಣಾಮ ಈ ರಸ್ತೆಯ ಟೋಲ್‌ ಕೇಂದ್ರಗಳ ಬಳಿ ತೀವ್ರ ಸಂಚಾರ ದಟ್ಟಣೆ ಕಂಡುಬಂತು. ಮುಖ್ಯವಾಗಿ ನೆಲಮಂಗಲ ಟೋಲ್‌ಬಳಿ 1 ಕಿ.ಮೀಗೂ ಹೆಚ್ಚು ದೂರದವರೆಗೂ ವಾಹನಗಳು ನಿಂತಿದ್ದವು.

ಇನ್ನು ಗುರುಗುಂಟೆ ಪಾಳ್ಯದಿಂದ ಮೆಜೆಸ್ಟಿಕ್‌ವರೆಗೂ ಸಿಗುವ ಟ್ರಾಫಿಕ್‌ ಸಿಗ್ನಲ್‌ಗ‌ಳಲ್ಲಿ ವಾಹನಗಳು ಅರ್ಧಗಂಟೆಗೂ ಹೆಚ್ಚು ಕಾಲ ನಿಂತಲ್ಲೇ ನಿಲ್ಲಬೇಕಾಯಿತು. ತುಮಕೂರು-ಹಾಸನ ಮಾರ್ಗದಲ್ಲಿ ಬಂದ ಪ್ರಯಾಣಿಕರು, ನಾಗಸಂದ್ರಕ್ಕೆ ಬರುತ್ತಿದ್ದಂತೆ ಬಸ್‌ ಇಳಿದು ಮೆಟ್ರೋ ಮೂಲಕ ನಗರ ಪ್ರವೇಶಿಸಿದರು. ಹಾಗಾಗಿ ಈ ಮಾರ್ಗದ ಮೆಟ್ರೋ ರೈಲುಗಳಲ್ಲೂ ಹೆಚ್ಚಿನ ಜನಸಂದಣಿ ಇತ್ತು.

ಟಾಪ್ ನ್ಯೂಸ್

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

Crime: ಅನೈತಿಕ ಸಂಬಂಧ; ವ್ಯಕ್ತಿ ಕೊಲೆಗೆ ಸುಪಾರಿ!

Crime: ಅನೈತಿಕ ಸಂಬಂಧ; ವ್ಯಕ್ತಿ ಕೊಲೆಗೆ ಸುಪಾರಿ!

CCB Raid: ಲೋಕ ಚುನಾವಣೆ ಹಿನ್ನೆಲೆ; ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ದಾಳಿ

CCB Raid: ಲೋಕ ಚುನಾವಣೆ ಹಿನ್ನೆಲೆ; ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ದಾಳಿ

Motivational: ಪಿಯುನಲ್ಲಿ 2 ಬಾರಿ ಫೇಲ್‌, ಯುಪಿಎಸ್ಸಿ ಪಾಸ್‌

Motivational: ಪಿಯುನಲ್ಲಿ 2 ಬಾರಿ ಫೇಲ್‌, ಯುಪಿಎಸ್ಸಿ ಪಾಸ್‌

Bike Theft: ಹಗಲಲ್ಲಿ ಫುಡ್‌ಡೆಲಿವರಿ ಕೆಲಸ, ರಾತ್ರಿ ಬೈಕ್‌ಗಳ ಕಳವು: ಆರೋಪಿ ಬಂಧನ

Bike Theft: ಹಗಲಲ್ಲಿ ಫುಡ್‌ಡೆಲಿವರಿ ಕೆಲಸ, ರಾತ್ರಿ ಬೈಕ್‌ಗಳ ಕಳವು: ಆರೋಪಿ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.