ದಿನವಿಡೀ ಟ್ರಾಫಿಕ್‌ ಜಾಂ


Team Udayavani, Jan 31, 2019, 6:28 AM IST

blore-5.jpg

ಬೆಂಗಳೂರು: ಮಹಿಳೆಯರು ಮೊಳಗಿಸಿದ ಮದ್ಯ ನಿಷೇಧದ ಕೂಗಿಗೆ ರಾಜಧಾನಿ ಅಕ್ಷರಶಃ ನಲುಗಿದೆ. ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ಮಹಿಳೆಯರು ನಗರದಲ್ಲಿ ರ್ಯಾಲಿ ಆರಂಭಿಸಿದಾಗಿನಿಂದ ಹಿಡಿದು ಬಹುತೇಕ ರಾತ್ರಿ 8 ಗಂಟೆವರೆಗೂ ನಗರದ ಕೇಂದ್ರ ಭಾಗದಲ್ಲಿ ತೀವ್ರ ಸಂಚಾರ ದಟ್ಟಣೆ ಉಂಟಾಗಿತ್ತು. ಈ ಮೂಲಕ ಮಹಿಳೆಯರ ಮದ್ಯ ನಿಷೇಧ ಕೂಗಿನ ಬಿಸಿ ರಾಜ್ಯ ಸರ್ಕಾರಕ್ಕೆ ತಟ್ಟಿತೋ ಇಲ್ಲವೋ, ರಾಜಧಾನಿ ನಾಗರಿಕರಿಗೆ ತಟ್ಟಿದ್ದಂತೂ ಸುಳ್ಳಲ್ಲ.

ರಾಜ್ಯದಲ್ಲಿ ಮದ್ಯ ನಿಷೇಧ ಮಾಡುವಂತೆ ಆಗ್ರಹಿಸಿ ಸಾವಿರಾರು ಮಹಿಳೆಯರು ನಡೆಸಿದ ಪಾದಯಾತ್ರೆ ಹಾಗೂ ಪ್ರತಿಭಟನೆ ಹಿನ್ನೆಲೆಯಲ್ಲಿ ಬುಧವಾರ ಮೆಜಿಸ್ಟಿಕ್‌ ಸುತ್ತಮುತ್ತಲ ಭಾಗದಲ್ಲಿ ಸಂಚಾರ ದಟ್ಟಣೆ ಉಂಟಾಗಿತ್ತು. ಬೆಳಗ್ಗೆ ಮಲ್ಲೇಶ್ವರ ಆಟದ ಮೈದಾನದಿಂದ ಹೊರಟ ಪಾದಯಾತ್ರೆ ಮಧ್ಯಾಹ್ನದ ವೇಳೆಗೆ ಶೇಷಾದ್ರಿ ರಸ್ತೆ ತಲುಪಿತ‌ು. ಪಾದಯಾತ್ರೆ ಬಂದ ಮಾರ್ಗದ ಉದ್ದಕ್ಕೂ ಸಂಚಾರ ದಟ್ಟಣೆ ಉಂಟಾಗಿದ್ದರಿಂದ ವಾಹನ ಸವಾರರು ಪರದಾಡುವಂತಾಯಿತು.

ಮಧ್ಯಾಹ್ನದಿಂದ ರಾತ್ರಿ 9 ಗಂಟೆಯವರೆಗೂ ಶೇಷಾದ್ರಿ ರಸ್ತೆಯಲ್ಲಿ ಪ್ರತಿಭಟನಾಕಾರರು ಧರಣಿ ಕುಳಿತಿದ್ದರು. ಹೀಗಾಗಿ, ಶೇಷಾದ್ರಿ ರಸ್ತೆಯಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿತ್ತು. ಆ ಸಂದರ್ಭದಲ್ಲಿ ಮೆಜೆಸ್ಟಿಕ್‌, ರೇಸ್‌ಕೋರ್ಸ್‌ ರಸ್ತೆ, ಗಾಂಧಿನಗರ, ಕೆ.ಜೆ ರಸ್ತೆಗಳಲ್ಲಿ ಸಂಚಾರ ದಟ್ಟಣೆ ಉಂಟಾಗಿತ್ತು. ರಾತ್ರಿ 9 ಗಂಟೆ ಸುಮಾರಿಗೆ ಪ್ರತಿಭಟನೆ ಅಂತ್ಯಗೊಂಡ ಬಳಿಕ ಶೇಷಾದ್ರಿ ರಸ್ತೆಯಲ್ಲಿ ಸಂಚಾರಕ್ಕೆ ಅವಕಾಶ ನೀಡಲಾಯಿತು.

ಸಿಎಂ-ಪ್ರತಿಭಟನಾಕಾರರ ಸಭೆ ವಿಫ‌ಲ: ರಾಜ್ಯದಲ್ಲಿ ಸಂಪೂರ್ಣ ಮದ್ಯ ನಿಷೇಧ ಕುರಿತ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ಪ್ರತಿಭಟನಾಕಾರರ ನಡುವೆ ವಿಧಾನಸೌಧದಲ್ಲಿ ಬುಧವಾರ ನಡೆದ ಸಭೆ ವಿಫ‌ಲವಾಗಿದ್ದು, ಬೆಂಗಳೂರಿನ ಶೇಷಾದ್ರಿ ರಸ್ತೆಯಲ್ಲಿ ಧರಣಿ ಮುಂದುವರಿಸಿದ್ದ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದು ಬಿಡುಗಡೆ ಮಾಡಿದರು.

ಜ.29ರಂದು ರಾತ್ರಿ ಮಲ್ಲೇಶ್ವರ ಆಟದ ಮೈದಾನ ತಲುಪಿದ ಪಾದ ಯಾತ್ರಿಗಳಿಗೆ ಶಾಸಕ ಅಶ್ವತ್ಥ ನಾರಾಯಣ ಊಟದ ವ್ಯವಸ್ಥೆ ಮಾಡಿದ್ದರು. ಸ್ನಾನ, ಶೌಚಕ್ಕೆ ಸುತ್ತಲಿನ ಶಾಲೆ ಕಾಲೇಜುಗಳಲ್ಲಿ ವ್ಯವಸ್ಥೆ ಮಾಡಲಾಗಿತ್ತು. ಸತತ 11 ದಿನಗಳು ಸುಮಾರು 200 ಕಿ.ಮೀ ನಡೆದು ದಣಿದಿದ್ದ ಹೋರಾಟ ಗಾರರು ರಾತ್ರಿ ಚಳಿಯಲ್ಲಿಯೇ ಟವೆಲ್‌ಗ‌ಳನ್ನೇ ಹೊದಿಕೆ ಮಾಡಿಕೊಂಡು ಮಲಗಿದ್ದರು.

ಬೆಳಗ್ಗೆ ಮಹಿಳಾ ಮುಖಂಡರು ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್‌.ದೊರೆಸ್ವಾಮಿ, ರಂಗಕರ್ಮಿ ಪ್ರಸನ್ನ ಹಾಗೂ ಲಂಚಮುಕ್ತ ಕರ್ನಾಟಕ ನಿರ್ಮಾಣ ವೇದಿಕೆ ರವಿಕೃಷ್ಣಾ ರೆಡ್ಡಿ ಜತೆ ಚರ್ಚೆ ನಡೆಸಿದರು.

ರಾಜಕಾರಣಿಗಳು ಕರ್ತವ್ಯ ಭ್ರಷ್ಟರು: ಈ ವೇಳೆ ಎಚ್.ಎಸ್‌.ದೊರೆಸ್ವಾಮಿ ಮಾತನಾಡಿ, ರಾಜ್ಯಸರ್ಕಾರ ಮದ್ಯ ವಹಿವಾಟನ್ನೇ ಬಹುದೊಡ್ಡ ಆದಾಯವನ್ನಾಗಿ ಪರಿಗಣಿಸಿ ಮದ್ಯಪಾನಕ್ಕೆ ಉತ್ತೇಜಿಸುವುದು ಸರಿಯಲ್ಲ. ಇಂದು ಕುಡಿತದಿಂದ ಸಾವಿರಾರು ಕುಟುಂಬ, ಲಕ್ಷಾಂತರ ಮಹಿಳೆಯರ ಜೀವನ ಬೀದಿಪಾಲಾಗುತ್ತಿದೆ. ಸರ್ಕಾರವು ಮಹಿಳೆಯರ ಜೀವನ ಮುಖ್ಯವೋ ಅಥವಾ ತಮ್ಮ ಆದಾಯ ಮುಖ್ಯವೋ ಎಂದು ಆಲೋಚಿಸಬೇಕು ಎಂದು ಪ್ರಶ್ನಿಸಿದರು.

ಮದ್ಯಪಾನ ನಿಷೇಧಕ್ಕೆ ಆಗ್ರಹಿಸಿ ಕಾಲ್ನಡಿಗೆಯಲ್ಲಿ ಬಂದಿರುವ ಹೆಣ್ಣುಮಕ್ಕಳನ್ನು ಸಂಬಂಧಪಟ್ಟ ಜನಪ್ರತಿನಿಧಿಗಳು ಭೇಟಿ ಮಾಡಿಲ್ಲ. ಸರ್ಕಾರ ಉಳಿಸಿಕೊಳ್ಳಲು, ಬೀಳಿಸುವ ಸಲುವಾಗಿ ಜಗಳ ಮಾಡಿಕೊಳ್ಳುತ್ತಿದ್ದಾರೆಯೇ ಹೊರತು ಯಾವೊಬ್ಬ ಸಚಿವರು ಈ ಮಹಿಳೆಯರನ್ನು ಕಾಣಲು ಬಂದಿಲ್ಲ. ದಾರಿಮಧ್ಯೆ ಹೆಣ್ಣು ಮಗಳು ಸಾವನ್ನಪ್ಪಿದ್ದರೂ ಸಹ ಸ್ಪಂದಿಸಿಲ್ಲ. ಈ ರಾಜಕಾರಣಿಗಳು ಕರ್ತವ್ಯ ಭ್ರಷ್ಟರು ಎಂದು ಕಿಡಿಕಾರಿದರು. ಈ ಕುರಿತು ಮಂಗಳವಾರ ದೇವೇಗೌಡರಿಗೆ ಪತ್ರ ಬರೆದಿದ್ದೇನೆ. ಗಾಂಧೀಜಿ ಕನಸು ಮದ್ಯಪಾನ ಮುಕ್ತ ಭಾರತ. ಅದಕ್ಕಾಗಿ ಹುತಾತ್ಮರ ದಿನದಂದೆ ಹೋರಾಟ ಮಾಡುತ್ತಿದ್ದು, ಸಾವಿರಾರು ಮಹಿಳೆಯರು ಹೋರಾಟಕ್ಕೆ ಬೀದಿಗಿಳಿದಿ ದ್ದಾರೆ. ಸರ್ಕಾರ ಅಕ್ಟೋಬರ್‌ 2 ಒಳಗೆ ಮದ್ಯ ನಿಷೇದಿಸಿ ಆದೇಶ ಹೊರಡಿಸಬೇಕು. ಇದು ಸರ್ಕಾರಕ್ಕೆ ನಾವು ಕೊಡುತ್ತಿರುವ ಅಂತಿಮಗಡುವು ಎಂದರು.

ದಾರಿಯುದ್ದಕ್ಕೂ ದಾನಿಗಳ ಸಹಾಯ ಹಸ್ತ
ಮದ್ಯಪಾನ ನಿಷೇಧಿಸುವಂತೆ ಆಗ್ರಹಿಸಿ ‘ಬೆಂಗಳೂರು ಚಲೋ’ ನಡೆಸಲು ತೀರ್ಮಾನಿಸಿ ರಾಜ್ಯದ 28 ಜಿಲ್ಲೆಯ ಸಾವಿರಾರು ಮಹಿಳೆಯರು ಧೀರ ಮಹಿಳೆ ಒನಕೆ ಓಬವ್ವ ಜಿಲ್ಲೆಯಲ್ಲಿ ಒಗ್ಗೂಡಿದೆವು. ಮದ್ಯಪಾನದಿಂದ ನಮಗಾಗುತ್ತಿರುವ ನೋವನ್ನು ಸರ್ಕಾರಕ್ಕೆ, ಮುಖ್ಯಮಂತ್ರಿಗಳಿಗೆ ಮುಟ್ಟಿಸಲೇಬೇಕು ಎಂಬ ಕಿಚ್ಚಿನಿಂದ ಪಾದಯಾತ್ರೆ ಹೊರಟ ನಾವು ಊಟ ವಸತಿ ಬಗ್ಗೆ ಚಿಂತೆ ಮಾಡಲಿಲ್ಲ. ಆದರೆ, ನಮಗೆ ದಾರಿಯುದ್ದಕ್ಕೂ ಊರುಗಳ ಗ್ರಾಮಸ್ಥರು, ಸಾಣೇಹಳ್ಳಿ ಮಠ, ಸಿದ್ಧಗಂಗಾ ಮಠ, ಆದಿಚುಂಚನಗಿರಿಮಠ, ಶಿರಾ, ತುಮಕೂರಿನ ಸಂಘ ಸಂಸ್ಥೆಗಳು ಊಟ ವಸತಿಯ ಅವಕಾಶ ಮಾಡಿದರು. ನಡಿಗೆಯಿಂದ ಧಣಿದ ನಮಗೆ ಸಾಕಷ್ಟು ಜನ ನೆರವಾದರು, ಗಾಯವಾಗಿದ್ದ ಕಾಲುಗಳಿಗೆ ಔಷದೋಪಚಾರ ಮಾಡಿದರು ಅವರೆಲ್ಲರಿಗೂ ನಾವು ಋಣಿ ಎನ್ನುತ್ತಾರೆ ರಾಯಚೂರಿನ ಮಹಿಳಾ ಸದಸ್ಯೆ ವಿದ್ಯಾ.

ಸಿಎಂಗೆ ಕಿಂಚಿತ್ತೂ ಕಾಳಜಿ ಇಲ್ಲವೆ?
ಪಾದಯಾತ್ರಿ ರೇಣುಕಮ್ಮ ಅಪಘಾತದಲ್ಲಿ ನಿಧನರಾಗಿ ಮೂರು ದಿನಗಳಾಯಿತು. ಆದರೆ, ರಾಜ್ಯದ ಮುಖ್ಯಮಂತ್ರಿಗಳು ಈ ಕುರಿತು ವಿಚಾರಿಸುವಷ್ಟು ಸಮಯವಿಲ್ಲ. ಮೃತರ ಮನೆಯವರ ಕಷ್ಟ ಅವರೊಳಗೆ ಕೇಳಿಸುತ್ತಿಲ್ಲ. ತಮ್ಮ ಮಗನ ಸಿನಿಮಾ ನೋಡಲು ಅದನ್ನು ಇತರರಿಗೆ ರಾಜಕಾರಣಿಗಳಿಗೆ ತೋರಿಸಲು ಸಮಯವಿರುತ್ತದೆ. ಆದರೆ, ಬಡಮಹಿಳೆಯರ ಬಗ್ಗೆ ಕಿಂಚಿತ್ತೂ ಕಾಳಜಿ ಇಲ್ಲವೇ?ಎಂದು ತಮ್ಮ ನೋವನ್ನು ವ್ಯಕ್ತಪಡಿಸಿದರು ಬಳ್ಳಾರಿಯ ಹೋರಾಟಗಾರ್ತಿ ಶಾರದಮ್ಮ.

ಪಾದಯಾತ್ರಿ ಸಂಗಾತಿ ಕಳೆದುಕೊಂಡೆವು
ಚಿತ್ರದುರ್ಗದಲ್ಲಿ ಪಾದಯಾತ್ರೆ ಆರಂಭಸಿದಾಗ ಇದ್ದ ರಾಯಚೂರಿನ ನಮ್ಮ ಸಂಗಾತಿ ರೇಣುಕಮ್ಮ(70) ಈಗ ನಮ್ಮೊಂದಿಗಿಲ್ಲ. ತಮ್ಮ ಮನೆಯಲ್ಲಿ ಯಾರೂ ಮದ್ಯಪಾನಿಗಳಿಲ್ಲದಿದ್ದರೂ ಅಕ್ಕ ಪಕ್ಕದ ಮನೆಯಲ್ಲಿ ಮದ್ಯಪಾನ ಮಾಡಿ ಬಂದ ಪುರುಷರಿಂದ ಆ ಮನೆಯವರ ಮೇಲೆ ಆಗುತ್ತಿದ್ದ ದೌರ್ಜನ್ಯ, ಹಿಂಸೆಗಳನ್ನು ಕಂಡು ಈ ಪಾದಯಾತ್ರೆಗೆ ತಮ್ಮ ಸೊಸೆಯೊಂದಿಗೆ ಅವರು ಬಂದಿದ್ದರು. ಆದರೆ, ರಸ್ತೆ ಮಧ್ಯೆ ನಮಗೆ ಸೂಕ್ತ ಬಂದೋಬಸ್ತ್, ವಾಹನಗಳಿಂದ ಸುರಕ್ಷತೆ ಇಲ್ಲದೇ ಸಂಭವಿಸಿದ ಅಪಘಾತದಲ್ಲಿ ಅವರನ್ನು ಕಳೆದು ಕೊಂಡಿಡೆವು. ಅವರ ಕುಟುಂಬದ ಆಕ್ರಂದನ ಮುಗಿಲು ಮಟ್ಟಿತ್ತು. ಪತಿಯೊಂದಿಗೆ ಕೂಲಿ ಕೆಲಸ ಮಾಡುತ್ತಿದ್ದ ರೇಣುಕಮ್ಮಳಿಗೆ 3 ಹೆಣ್ಣುಮಕ್ಕಳಿದ್ದು, ಅದರಲ್ಲಿ ಕಿರಿಯ ಮಗಳು ಅಂಗವಿಕಲೆ ಎಂದು ಕಣ್ಣೀರು ಹಾಕಿದರು ಹೋರಾಟಗಾರ್ತಿ ವಿರೂಪಮ್ಮ.

ಕಾನೂನು ಭಂಗ ಆರೋಪ ಹಿನ್ನೆಲೆಯಲ್ಲಿ ಪ್ರತಿಭಟನಾಕಾರನ್ನು ವಶಕ್ಕೆ ಪಡೆದಿದ್ದು, ಬಿಡುಗಡೆ ಗೊಳಿಸಲಾಗಿದೆ. 
●ಬಿ.ಕೆ ಸಿಂಗ್‌, ಹೆಚ್ಚುವರಿ ಪೊಲೀಸ್‌ ಆಯುಕ್ತ, ಪಶ್ಚಿಮ ವಿಭಾಗ

ಪ್ರತಿಭಟನಾಕಾರನನ್ನು ಚದುರಿಸುವ ನಿಟ್ಟಿನಲ್ಲಿ ಪೊಲೀಸರು ಬಂಧಿಸಿ ವಿವಿಧ ಪೊಲೀಸ್‌ ಠಾಣೆಗಳಿಗೆ ಕರೆದೊಯ್ದರು ಒಂದು ಗಂಟೆ ನಂತರ ಬಿಡುಗಡೆಗೊಳಿಸಿ ಮನೆಗೆ ತೆರಳುವಂತೆ ಸೂಚಿಸಿದರು. ಮದ್ಯ ನಿಷೇಧ ಮುಂದಿನ ಹೋರಾಟದ ಬಗ್ಗೆ ಎರಡು ದಿನಗಳಲ್ಲಿ ಸಭೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು.
 ●ರವಿಕೃಷ್ಣಾರೆಡ್ಡಿ, ಲಂಚಮುಕ್ತ ಕರ್ನಾಟಕ ನಿರ್ಮಾಣ ವೇದಿಕೆ

ಮದ್ಯಪಾನ ನಿಷೇಧ ಹೋರಾಟಕ್ಕೆ ಬಂದ ಎಲ್ಲ ಮಹಿಳೆಯರನ್ನು ವಾಪಸ್‌ ಕಳುಹಿಸಲಾಗಿದೆ. ಬಂಧಿಸಿದ ಮುಖಂಡರೆಲ್ಲರನ್ನೂ ಬಿಡುಗಡೆ ಮಾಡಿದ್ದು ಪ್ರತಿಭಟನೆ ಸರ್ಕಾರಕ್ಕೆ ಬಿಸಿಮುಟ್ಟಿಸಿದೆ. ಲೋಕಸಭಾ ಚುನಾವಣೆ ವೇಳೆ ನಮ್ಮ ನಡೆ ಏನು ಎಂಬುದನ್ನು ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು.
 ●ಸ್ವರ್ಣಾ ಭಟ್‌, ರಾಜ್ಯ ಸಂಚಾಲಕಿ, ಮದ್ಯಪಾನ ನಿಷೇಧ ಆಂದೋಲನಾ ಸಮಿತಿ

ಟಾಪ್ ನ್ಯೂಸ್

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.