ಸಂಚಾರ ಪೊಲೀಸರ ಸ್ವಚ್ಛತಾ ಕಾರ್ಯ


Team Udayavani, Jan 7, 2019, 6:56 AM IST

sanchara.jpg

ಬೆಂಗಳೂರು: ಇಷ್ಟು ದಿನ ವಾಹನ ದಟ್ಟಣೆ ನಿಯಂತ್ರಿಸುತ್ತಿದ್ದ ನಗರದ ಸಂಚಾರ ಪೊಲೀಸರು ಭಾನುವಾರ ಪೊರಕೆ, ಗುದ್ದಲಿ, ಹಳೇ ಬಟ್ಟೆಗಳನ್ನು ಹಿಡಿದು ಸ್ವಚ್ಛತಾ ಕಾರ್ಯದಲ್ಲಿ ನಿರತರಾಗಿದ್ದರು. “ಜನಸ್ನೇಹಿ’ ಪೊಲೀಸ್‌ ಆಗುವ ನಿಟ್ಟಿನಲ್ಲಿ ಸಂಚಾರ ವಿಭಾಗದ ಹೆಚ್ಚುವರಿ ಪೊಲೀಸ್‌ ಆಯುಕ್ತ ಪಿ.ಹರಿಶೇಖರನ್‌ ಸೂಚನೆ ಮೇರೆಗೆ ನಗರದ 44 ಸಂಚಾರ ಪೊಲೀಸ್‌ ಠಾಣೆ ಸಿಬ್ಬಂದಿ ಭಾನುವಾರ ತಮ್ಮ ಠಾಣೆ ಒಳ ಮತ್ತು ಹೊರ ಆವರಣಗಳನ್ನು ಸ್ವಚ್ಛಗೊಳಿಸಿದರು.

ಅಲ್ಲದೆ, ರಸ್ತೆಗಳಲ್ಲಿರುವ ಸೂಚನಾ ಫ‌ಲಕಗಳ ಸ್ವಚ್ಛತೆ, ಗುಂಡಿ ಮುಚ್ಚುವುದು, ಡಿವೈಡರ್‌ನಲ್ಲಿ ಬೆಳೇದ ಗಿಡ ತೆರವು,  ಸೂಚನಾ ಫ‌ಲಕಗಳ ದುರಸ್ತಿ, ಸಿಗ್ನಲ್‌ ಲೈಟ್‌ಗಳ ಪರಿಶೀಲನೆ ಮಾಡಿದರಲ್ಲದೆ, ಠಾಣೆಗಳ ಆವರಣ ಹಾಗೂ ಮೇಲ್ಚಾವಣಿ ಮೇಲೆ ಬಹಳ ವರ್ಷಗಳಿಂದ ಬಿದ್ದಿದ್ದ ಅನಗತ್ಯ ವಸ್ತುಗಳನ್ನು ವಿಲೇವಾರಿ ಮಾಡಿದರು. ಠಾಣೆಗಳಲ್ಲಿರುವ ಶೌಚಾಲಯಗಳನ್ನು ತಾವೇ ಶುಚಿಗೊಳಿಸಿದರು.

ವಾಹನಗಳ ವಿಲೇವಾರಿಗೆ ಕ್ರಮ: ನಗರದ ಎಲ್ಲ 44 ಸಂಚಾರ ಠಾಣೆಗಳ ಆವರಣದಲ್ಲಿರುವ ಅಪರಾಧ ಪ್ರಕರಣಗಳಲ್ಲಿ ಪತ್ತೆಯಾದ ನೂರಾರು ವಾಹನಗಳ ವಿಲೇವಾರಿಗೆ ಶೀಘ್ರವೇ ಕ್ರಮಕೈಗೊಳ್ಳಲಾಗುವುದು. ಅಪರಾಧ ಕೃತ್ಯಗಳಲ್ಲಿ ಬಳಕೆಯಾದ ವಾಹನಗಳನ್ನು ಪ್ರಕರಣ ವಿಚಾರಣೆ ಮುಗಿದ ಬಳಿಕ ವಾರಸುದಾರರಿಗೆ ಹಿಂದಿರುಗಿಸುವ ಬಗ್ಗೆ ಆಯಾ ಠಾಣೆ ಇನ್‌ಸ್ಪೆಕ್ಟ್ರ್‌ಗಳಿಗೆ ಸೂಚಿಸಲಾಗಿದೆ.

ಜತೆಗೆ ಬಹಳ ವರ್ಷಗಳಿಂದ ಇರುವ ವಾಹನಗಳನ್ನು ಕೋರ್ಟ್‌ ಸೂಚನೆ ಮೇರೆಗೆ ಹರಾಜು ಹಾಕಲಾಗುವುದು ಎಂದು ಸಂಚಾರ ವಿಭಾಗದ ಹಿರಿಯ ಅಧಿಕಾರಿಯೊಬ್ಬರು ಹೇಳಿದರು. ಸ್ವಚ್ಛತಾ ಕಾರ್ಯದ ಬಗ್ಗೆ ಮಾಹಿತಿ ನೀಡಿದ ಸಂಚಾರ ವಿಭಾಗದ ಹೆಚ್ಚುವರಿ ಪೊಲೀಸ್‌ ಆಯುಕ್ತ ಪಿ.ಹರಿಶೇಖರನ್‌, ಕೆಲ ದಿನಗಳ ಹಿಂದೆ ನಗರದ ಎಲ್ಲಾ ಸಂಚಾರ ಠಾಣೆಗಳಿಗೆ ಭೇಟಿ ನೀಡಿದಾಗ, ಆವರಣದಲ್ಲಿ ಅನೈರ್ಮಲ್ಯ ಕಂಡು ಬಂದಿತ್ತು.

ಈ ಹಿನ್ನೆಲೆಯಲ್ಲಿ ಹೊಸವರ್ಷದ ಮೊದಲ ಭಾನುವಾರ ಎಲ್ಲಾ ಠಾಣೆಗಳ ಒಳ ಮತ್ತು ಹೊರ ಆವರಣ ಸ್ವಚ್ಛಗೊಳಿಸುವಂತೆ ಸೂಚಿಸಲಾಗಿತ್ತು. ಪೊಲೀಸರ ಬಗ್ಗೆ ಸಾರ್ವಜನಿಕರಲ್ಲಿ ಉತ್ತಮ ಅಭಿಪ್ರಾಯ ಮೂಡಿಸುವ ನಿಟ್ಟಿನಲ್ಲಿ ಈ ಯೋಜನೆ ಕೈಗೊಳ್ಳಲಾಗಿದೆ ಎಂದರು.

ಟಾಪ್ ನ್ಯೂಸ್

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.