ಸಂಚಾರ ನಿಯಮ ಮೀರಿದರೆ ಮನೆಗೆ ಬಂದು ದಂಡ 


Team Udayavani, Sep 12, 2022, 12:36 PM IST

ಸಂಚಾರ ನಿಯಮ ಮೀರಿದರೆ ಮನೆಗೆ ಬಂದು ದಂಡ 

ಬೆಂಗಳೂರು: ರಾಜಧಾನಿಯಲ್ಲಿ ಪದೇ-ಪದೆ ಸಂಚಾರ ನಿಯಮ ಉಲ್ಲಂಘಿಸುವ ವಾಹನ ಸವಾರರಿಂದ ದಂಡ ವಸೂಲಿ ಮಾಡುವುದೇ ಸಂಚಾರ ಪೊಲೀಸರಿಗೆ ದೊಡ್ಡ ತಲೆನೋವಾಗಿತ್ತು. ಇದಕ್ಕೆ ಪರ್ಯಾಯ ಮಾರ್ಗ ಕಂಡುಕೊಂಡಿರುವ ಬೆಂಗಳೂರು ಸಂಚಾರ ವಿಭಾಗದ ಪೊಲೀಸರು ನಿಯಮ ಉಲ್ಲಂಘಿಸುವ ವ್ಯಕ್ತಿಗಳ ಮನೆಗೆ ತೆರಳಿ ನೋಟಿಸ್‌ ಕೊಟ್ಟು ದಂಡ ವಸೂಲಿಗೆ ಮುಂದಾಗಿದ್ದಾರೆ.

ಬೆಂಗಳೂರು ಸಂಚಾರ ವಿಭಾಗದ ಪೊಲೀಸರು ಇಂತಹದ್ದೊಂದು ಹೊಸ ಕಾರ್ಯಕ್ಕೆ ಕೈ ಹಾಕಿದ್ದು, ಪದೇ-ಪದೆ ಸಂಚಾರ ನಿಯಮ ಉಲ್ಲಂಘಿಸುವವರನ್ನು ಪತ್ತೆಹಚ್ಚಿ ಅವರ ಮನೆಗೆ ತೆರಳಿ ನೋಟಿಸ್‌ ಕೊಟ್ಟು ದಂಡ ಪಾವತಿಸುವಂತೆ ಸೂಚಿಸುತ್ತಿದ್ದಾರೆ.

ಸಾರಿಗೆ ಇಲಾಖೆ ಅಧಿಕಾರಿಗಳ ಸಹಕಾರ ಪಡೆದಿರುವ ಟ್ರಾಫಿಕ್‌ ಪೊಲೀಸರು, ವಾಹನಗಳ ನೋಂದಣಿ ಸಂಖ್ಯೆ ಮೂಲಕ ಮಾಲೀಕರ ಮನೆಯ ವಿಳಾಸ ಪತ್ತೆ ಹಚ್ಚುತ್ತಿದ್ದಾರೆ. ಈ ಕ್ರಮ ಬೆಂಗಳೂರಿನಲ್ಲಿ ಯಶಸ್ವಿಯಾದರೆ ಮುಂದೆ ರಾಜ್ಯಾದ್ಯಂತ ವಿಸ್ತರಿಸಲು ಚಿಂತನೆ ನಡೆಸಲಾಗಿದೆ ಎಂದು ಸಂಚಾರ ವಿಭಾಗದ ಹಿರಿಯ ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದರು.

ಹೇಗೆ ಕಾರ್ಯ ನಿರ್ವಹಿಸಲಿದೆ ?: ಸಿಗ್ನಲ್‌ ಜಂಪ್‌, ಅತೀ ವೇಗದ ಚಾಲನೆ, ರಾಂಗ್‌ ಸೈಡ್‌ನ‌ಲ್ಲಿ ಚಲಾಯಿಸುವುದು, ಹೆಲ್ಮೆಟ್‌ ಹಾಗೂ ಸೀಟ್‌ ಬೆಲ್ಟ್ ಧರಿಸದಿರುವುದು ಸೇರಿ ಇನ್ನಿತರ ಸಂಚಾರ ನಿಯಮ ಉಲ್ಲಂಘಿಸಿದರೆ ಸಿಗ್ನಲ್‌ಗ‌ಳಲ್ಲಿ ಅಳವಡಿಸಿರುವ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗುತ್ತದೆ. ಇನ್ನು ಕೆಲವೊಂದು ಬಾರಿ ಸಂಚಾರ ಪೊಲೀಸರೇ ನಿಯಮ ಉಲ್ಲಂ ಸುವ ವಾಹನದ ನಂಬರ್‌ ಅನ್ನು ಮೊಬೈಲ್‌ ಕ್ಯಾಮೆರಾದಲ್ಲಿ ಸೆರೆಹಿಡಿಯುತ್ತಾರೆ.

ಈ ಪೈಕಿ ನಿರಂತರ ಸಂಚಾರ ನಿಯಮ ಉಲ್ಲಂಘಿಸುವ ವಾಹನ ನೋಂದಣಿ ಸಂಖ್ಯೆಯನ್ನುಟ್ರಾಫಿಕ್‌ ಮ್ಯಾನೇಜ್‌ಮೆಂಟ್‌ ಸೆಂಟರ್‌ (ಟಿಎಂಸಿ) ಸಿಬ್ಬಂದಿ ಪತ್ತೆಹಚ್ಚುತ್ತಾರೆ. ನಂತರ ಸಾರಿಗೆ ಇಲಾಖೆಅಧಿಕಾರಿಗಳಿಂದ ಮಾಲೀಕರ ಮನೆಯ ವಿಳಾಸಪಡೆದು ಆಯಾ ವ್ಯಾಪ್ತಿಯ ಸಂಚಾರ ಪೊಲೀಸ್‌ ಠಾಣಾ ಸಿಬ್ಬಂದಿಗೆ ವಾಹನ ಮಾಲೀಕರ ಮನೆಯ ವಿಳಾಸದ ಕುರಿತು ಮಾಹಿತಿ ನೀಡುತ್ತಾರೆ. ಈ ಮಾಹಿತಿ ಆಧರಿಸಿ ಠಾಣೆಯ ಬೀಟ್‌ ಪೊಲೀಸರು ತಮ್ಮ ಕರ್ತವ್ಯದ ಅವಧಿಯಲ್ಲಿ ವಾಹನ ಮಾಲೀಕರ ಮನೆಗೆ ತೆರಳಿ ನೋಟಿಸ್‌ ಕೊಡುತ್ತಾರೆ. ಮಾಲೀಕರಿಗೆ ದಂಡ ಪಾವತಿಸುವಂತೆ ಸೂಚಿಸಲಾಗುತ್ತದೆ. ಜತೆಗೆ ಸಂಚಾರ ನಿಯಮ ಉಲ್ಲಂಘನೆಯಿಂದ ಸಂಭವಿಸಬಹುದಾದ ಅಪಘಾತಗಳ ಬಗ್ಗೆ ಮಾಹಿತಿ ನೀಡಿ ಎಚ್ಚರಿಕೆ ಕೊಡುವ ಕೆಲಸವನ್ನೂ ಸಂಚಾರ ಪೊಲೀಸರು ಮಾಡುತ್ತಿದ್ದಾರೆ.

ಸಾರ್ವಜನಿಕರಿಂದ ಆಕ್ಷೇಪ: ಸಾರ್ವಜನಿಕ ವಲಯದಲ್ಲಿ ಪೊಲೀಸರ ಈ ಕ್ರಮಕ್ಕೆ ಆಕ್ಷೇಪ ವ್ಯಕ್ತವಾಗುತ್ತಿದೆ. ಪೊಲೀಸರು ಮನೆಗೇ ಬಂದು ದಂಡ ಸಂಗ್ರಹಿಸುವುದರಿಂದ ಅಕ್ಕ-ಪಕ್ಕದ ಮನೆಯವರಿಗೆ ಗೊತ್ತಾಗಿ ಮುಜುಗರ ಉಂಟಾಗುತ್ತದೆ. ಅದರ ಬದಲು ಸಂಚಾರ ನಿಯಮ ಉಲ್ಲಂಘನೆಗಳ ಬಗ್ಗೆ ವಾಹನ ಮಾಲೀಕರ ಮೊಬೈಲ್‌ಗೆ ಸಂದೇಶ ಕಳುಹಿಸಿದರೆ ಸಾಕು ಎಂಬ ಮಾತು ಸಾರ್ವಜನಿಕ ವಲಯಗಳಲ್ಲಿ ಕೇಳಿ ಬಂದಿದೆ. ಕಾನ್‌ಸ್ಟೆàಬಲ್‌, ಹೆಡ್‌ ಕಾನ್‌ಸ್ಟೇಬಲ್‌, ಎಎಸ್‌ಐ, ಪಿಎಸ್‌ಐ ಹುದ್ದೆಯ ಸಿಬ್ಬಂದಿಯೇ ವಾಹನ ಮಾಲೀಕರ ಮನೆಗೆ ತೆರಳಬೇಕಾಗಿದ್ದು, ಪ್ರತಿ ಬಾರಿ ಸಾರ್ವಜನಿಕರ ಬೈಗುಳ ಕೇಳಿ ಪೊಲೀಸ್‌ ಸಿಬ್ಬಂದಿ ರೋಸಿ ಹೋಗಿದ್ದಾರೆ ಎಂದು ಸಂಚಾರ ಠಾಣೆಯೊಂದರ ಇನ್‌ಸ್ಪೆಕ್ಟರ್‌ “ಉದಯವಾಣಿ’ಗೆ ತಿಳಿಸಿದ್ದಾರೆ.

7 ತಿಂಗಳಲ್ಲಿ 105 ಕೋಟಿ ದಂಡ ಸಂಗ್ರಹ :

ಟ್ರಾಫಿಕ್‌ ಪೊಲೀಸರ ಈ ಹೊಸ ಕ್ರಮದಿಂದ ದಂಡ ಸಂಗ್ರಹದಲ್ಲೂ ಏರಿಕೆ ಕಂಡು ಬಂದಿದೆ. 2019ರಲ್ಲಿ ಸಂಗ್ರಹಿಸಿದ್ದ 89.18 ಕೋಟಿ ರೂ. 2022ಕ್ಕೆ ಕೇವಲ 7 ತಿಂಗಳಲ್ಲಿ 105.7 ಕೋಟಿ ರೂ.ಗೆ ಏರಿಕೆಯಾಗಿದೆ. ಜತೆಗೆ ಆನ್‌ಲೈನ್‌ನಲ್ಲೇ ದಂಡ ಪಾವತಿಸುವವರ ಸಂಖ್ಯೆ ಹೆಚ್ಚಾಗಿದೆ.2019ರಲ್ಲಿ 39,45,831 ವಾಹನ ಸವಾರರುಆನ್‌ಲೈನ್‌ನಲ್ಲಿ ದಂಡ ಪಾವತಿಸಿದ್ದರೆ, 2022ರಲ್ಲಿ7 ತಿಂಗಳಲ್ಲಿ (ಜುಲೈ) ಇದರ ಪ್ರಮಾಣ 49,81,677ಕ್ಕೆ ಹೆಚ್ಚಳವಾಗಿದೆ.

 -ಅವಿನಾಶ್‌ ಮೂಡಂಬಿಕಾನ

ಟಾಪ್ ನ್ಯೂಸ್

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.