ಠಾಣೆ ಮುಂದೆಯೇ ದುರಂತ: ರಸ್ತೆ ದಾಟುತ್ತಿದ್ದ ಪಾದಚಾರಿಗಳ ಮೇಲೆ ಹರಿದ ಲಾರಿ; ಬಾಲಕಿ ಸಾವು
Team Udayavani, Mar 21, 2022, 3:36 PM IST
ಬೆಂಗಳೂರು: ಬಿಬಿಎಂಪಿ ಕಸದ ಲಾರಿ ಢಿಕ್ಕಿಯಾಗಿ ಶಾಲಾ ಬಾಲಕಿಯೊಬ್ಬಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಹಬ್ಬಾಳದಲ್ಲಿ ಸೋಮವಾರ (ಮಾರ್ಚ್ 21) ಮಧ್ಯಾಹ್ನ ನಡೆದಿದೆ.
ಮೃತಳನ್ನುಅಕ್ಷಯಾ (14) ಎಂದು ಗುರುತಿಸಲಾಗಿದೆ. ರವಿವಾರ ಸುರಿದ ಮಳೆಯಿಂದ ಹೆಬ್ಬಾಳ ಠಾಣಾ ಮುಂದಿರುವ ಅಂಡರ್ ಪಾಸ್ ನಲ್ಲಿ ನೀರು ತುಂಬಿ ನಿಂತಿತ್ತು. ಹೀಗಾಗಿ ಸಾರ್ವಜನಿಕರು ಮುಖ್ಯ ರಸ್ತೆಯಿಂದಲೇ ರಸ್ತೆ ದಾಟಬೇಕಿತ್ತು.
ಅಕ್ಷಯಾ ರಸ್ತೆ ದಾಟಲು ಇತರರೊಂದಿಗೆ ನಡೆದುಕೊಂಡು ಹೋಗುತ್ತಿದ್ದಾಗ ವೇಗವಾಗಿ ಬಂದ ಬಿಬಿಎಂಪಿ ಕಸದ ಲಾರಿ ಪಾದಚಾರಿಗಳ ಮೇಲೆ ಹರಿದಿದೆ. ಪರಿಣಾಮ ಬಾಲಕಿ ಅಕ್ಷಯಾ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಘಟನೆಯಲ್ಲಿ ಇತರ 8 ಮಂದಿಗೆ ಗಾಯವಾಗಿದ್ದು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಚಾಲಕನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಆರ್ ಟಿ ನಗರ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pendrive Case; ನಿರೀಕ್ಷಣಾ ಜಾಮೀನು ಅರ್ಜಿ ವಾಪಾಸ್ ಪಡೆದ ರೇವಣ್ಣ
Lok Sabha Polls: ಕಾಗೆ ಮಾತು ಕಾಂಗ್ರೆಸ್ನ ಮನಸ್ಥಿತಿ: ಬಿ.ವೈ.ರಾಘವೇಂದ್ರ
Haveri; ಯುವತಿಯ ಅಪಹರಣ ಆರೋಪ; ಯುವಕನ ತಾಯಿಯನ್ನು ಕಂಬಕ್ಕೆ ಕಟ್ಟಿ ಥಳಿತ
Lok Sabha Polls: ದಾವಣಗೆರೆ ಮಾದರಿ ಕ್ಷೇತ್ರವನ್ನಾಗಿಸುವ ಕನಸಿದೆ: ಗಾಯತ್ರಿ ಸಿದ್ದೇಶ್ವರ
Prajwal Revanna ಲೈಂಗಿಕ ದೌರ್ಜನ್ಯ ಪ್ರಕರಣ: ಪೊಲೀಸರ ಕಾರ್ಯವೈಖರಿ ಬಗ್ಗೆ ವಕೀಲರ ಸಂಶಯ
MUST WATCH
ಹೊಸ ಸೇರ್ಪಡೆ
ಕೇಂದ್ರದಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ದನಿ ಎತ್ತಲು ಕಾಂಗ್ರೆಸ್ ಗೆಲ್ಲಿಸಿ: ರಾಮಲಿಂಗಾರೆಡ್ಡಿ
ಲೇಸರ್ ಸಂವಹನ: ಭೂಮಿಗೆ 14 ಕೋಟಿ ಮೈಲು ದೂರದಿಂದ ಸಂದೇಶ ರವಾನೆ
Boeing aircraft: ಬೋಯಿಂಗ್ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್ ಸಾವು
Borewell: ಬರದ ಮಧ್ಯೆ ಜಲಮಂಡಳಿ ಕೊರೆಸಿದ ಶೇ.90 ಬೋರ್ಗಳು ಸಕ್ಸಸ್
Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್